MysoreUniversity Archives - Good News 24x7 https://www.goodnews24x7.com/tag/mysoreuniversity/ Kannada Fri, 10 Oct 2025 13:03:40 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg MysoreUniversity Archives - Good News 24x7 https://www.goodnews24x7.com/tag/mysoreuniversity/ 32 32 ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. https://www.goodnews24x7.com/former-prime-minister-h-d-deve-gowdas-health-improves/ Fri, 10 Oct 2025 13:03:15 +0000 https://www.goodnews24x7.com/?p=7685 ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್…

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಪ್ರಧಾನಿ ದೇವೇಗೌಡರು ಆರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ.

ಮೂತ್ರಸೋಂಕು ಸಮಸ್ಯೆಯಿಂದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ಬೆಂಗಳೂರಿನ  ಮಣಿಪಾಲ್ ಆಸ್ಪತ್ರೆಗೆ ಕೆಲ ದಿನಗಳ ಹಿಂದೆ ದಾಖಲಿಸಲಾಗಿತ್ತು. ಸದ್ಯ ಅರೋಗ್ಯದಲ್ಲಿ ಚೇತರಿಸಿಕೊಂಡಿದ್ದಾರೆ. ದೇವೇಗೌಡರು ಇನ್ನೂ ಎರಡು ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.

 

 

 

 

 

 

 

ದೇವೇಗೌಡರನ್ನು ಆದಿಚುಂಚನಗಿರಿ ಮಠಾಧೀಶರಾದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮಿಗಳು ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿಗಳಾದ ಪ್ರೋ. ಕೆ.ಎಸ್ ರಂಗಪ್ಪ ಭೇಟಿಯನ್ನ ಮಾಡಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ

ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್

 

 

 

 

 

 

ಮೊದಲು ಮಣಿಪಾಲ್ ಆಸ್ಪತ್ರೆಯ ಐಸಿಯುನಲ್ಲಿ ದೇವೇಗೌಡರಿಗೆ ಚಿಕಿತ್ಸೆ ನೀಡಲಾಗಿತ್ತು. ಖ್ಯಾತ ವೈದ್ಯ ಡಾ. ಸುದರ್ಶನ್ ಬಲ್ಲಾಳ್ ನೇತ್ವತ್ವದಲ್ಲಿ ಚಿಕಿತ್ಸೆ ನಡೆಯುತ್ತಿತ್ತು, ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಹೀಗಾಗಿ ಬಳಿಕ ಅವರನ್ನು ನಿನ್ನೆ ಐಸಿಯುನಿಂದ ಜನರಲ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು.

ಮಾಜಿ ಪ್ರಧಾನಮಂತ್ರಿಗಳು ಹಾಗೂ ವರಿಷ್ಠರಾದ ಶ್ರೀ ಹೆಚ್‌.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳು ಯಾವುದೇ ರೀತಿ ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದವರು ತಿಳಿಸಿದ್ದಾರೆ.

The post ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಆರೋಗ್ಯದಲ್ಲಿ ಚೇತರಿಕೆ. appeared first on Good News 24x7.

]]>
ಮಾನಸ ಗಂಗೋತ್ರಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್ ತೆರವು ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ. https://www.goodnews24x7.com/mysore-university-students-protest-against-removal-of-ambedkar-portrait-banner-in-manas-gangotri/ Thu, 12 Jun 2025 06:36:12 +0000 https://www.goodnews24x7.com/?p=4334 ಮೈಸೂರು : ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಸಮೀಪದ ಬಸ್ ಪ್ರಯಾಣಿಕರ ತಂಗುದಾಣದ ಎದುರಿನ ಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ಬ್ಯಾನರ್ ಅನ್ನು ದುರುದೇಶಪೂರ್ವಕವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರನ್ನು ಅಮಾನತು ಮಾಡಿ, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ವಿವಿಯ…

The post ಮಾನಸ ಗಂಗೋತ್ರಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್ ತೆರವು ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ. appeared first on Good News 24x7.

]]>

ಮೈಸೂರು : ಮಾನಸ ಗಂಗೋತ್ರಿಯ ಕ್ಲಾಕ್ ಟವರ್ ಸಮೀಪದ ಬಸ್ ಪ್ರಯಾಣಿಕರ ತಂಗುದಾಣದ ಎದುರಿನ ಫಲಕದಲ್ಲಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವುಳ್ಳ ಬ್ಯಾನರ್ ಅನ್ನು ದುರುದೇಶಪೂರ್ವಕವಾಗಿ ತೆರವುಗೊಳಿಸಲಾಗಿದೆ ಎಂದು ಆರೋಪಿಸಿ, ತಪ್ಪಿತಸ್ಥರನ್ನು ಅಮಾನತು ಮಾಡಿ, ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿ ವಿವಿಯ ವಿದ್ಯಾರ್ಥಿಗಳು ಸದರಿ ಸ್ಥಳದಲ್ಲಿ ಬುಧವಾರ ದಿಢೀರ್ ಪ್ರತಿಭಟನೆ ನಡೆಸಿದರು.

ಮೈಸೂರು ವಿವಿ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ನೇತೃತ್ವದಲ್ಲಿ ಜಮಾಯಿಸಿದ ವಿದ್ಯಾರ್ಥಿ ಗಳು, ಅಂಬೇಡ್ಕರ್ ಭಾಮುತ್ರವುಳ್ಳ ಬ್ಯಾನವನ್ನು ಏಕಾಏಕಿ ತೆರವುಗೊಳಿಸಿರುವ ಮೈಸೂರು ವಿಶ್ವವಿದ್ಯಾನಿಲಯದ ಆಡಳಿತ ವರ್ಗಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದೇ ವೇಳೆ ಮಾತನಾಡಿದ ಮೈಸೂರು ವಿವಿ ಸಂಶೋಧಕರ ಸಂಘದ ಅಧ್ಯಕ್ಷ ಶಿವಶಂಕರ್, ಕುಲಸಚಿವರು ಏಕಾಏಕಿ ಎಓಗೆ ಫೋನ್ ಮಾಡಿ ತೆರವುಗೊಳಿಸಲು ಸೂಚಿಸಿದ್ದಾರೆ. ಸಂಶೋಧಕರ ಸಂಘ ದಿಂದ ಅಂಬೇಡ್ಕರ್ ಅವರ ಜಯಂತಿಯ ಶುಭಾಶಯ ಕೋರಿದ್ದ ಬ್ಯಾನರ್ ಅದು. ಸಂಘದ ಗಮನಕ್ಕೂ ತಾರದೇ, ಏಕಾಏಕಿ ತೆರವುಗೊಳಿಸಲು ಕಾರಣರಾದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದರು.


ಸಂಶೋಧಕರ ಸಂಘದ ಉಪಾಧ್ಯಕ್ಷ ಮಹೇಶ ಮಾತನಾಡಿ, ದುರುದ್ದೇಶ ಪೂರ್ವಕವಾಗಿಯೇ ತೆರವುಗೊಳಿಸಲಾ ಗಿದೆ. ಬ್ಯಾನರ್ ಅನ್ನು ಹರಿದು ಹಾಕಿದ್ದಾರೆ. ಇದಕ್ಕೆ ಕಾರಣರಾದವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿದರು. ಸ್ಥಳಕ್ಕೆ ಭೇಟಿ ನೀಡಿದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜನಾ ರ್ಧನ್ ಅವರಿಗೆ ಘಟನೆ ಬಗ್ಗೆ ವಿವರಿಸಿದ ಸಂಶೋಧಕರ ಸಂಘದ ಅಧ್ಯಕ್ಷ ಶಿವ ಶಂಕರ್. ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿರುವುದು ವಿವಿ ಆಡಳಿತಾಧಿಕಾರಿ ಗಳು (ಎಓ) ಎಂದು ದೂರಿದರು.
ಬಳಿಕ ಮಾತನಾಡಿದ ಜನಾರ್ಥನ್, ಎಓ ಅವರೊಂದಿಗೆ ಫೋನ್ನಲ್ಲಿ ಮಾತ ನಾಡಿದ್ದು, ADಡಿಕೆಟ್ನಲ್ಲಿ ಎಲ್ಲಾ ಬ್ಯಾನರ್ ಗಳನ್ನು ಸುರಕ್ಷಿತವಾಗಿ ತೆರವು ಮಾಡಿ, ಬಳಿಕ ಎಲ್ಲೆಲ್ಲಿ ಹಾಕಲು ಅವಕಾಶ ನೀಡ ಬೇಕೆಂದು ನಿರ್ಧರಿಸುವ ತೀರ್ಮಾನ ವಾಗಿದೆ. ಹಾಗಾಗಿ ಅಂಬೇಡ್ಕರ್ ಭಾವಚಿತ್ರ ಹೊಂದಿದ್ದ ಬ್ಯಾನರ್ ಅನ್ನು ಸುರಕ್ಷಿತವಾಗಿ ತೆರವು ಮಾಡಿ. ಇಟ್ಟಿದ್ದೇವೆ. ಯಾವುದೇ ರೀತಿ ಅಪಮಾನ ಮಾಡಿಲ್ಲ ಎಂದಿದ್ದಾರೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಗಳು, ತೆರವುಗೊಳಿಸಿದವರನ್ನು ಆನಾನತು ಮಾಡಲೇಬೇಕೆಂದು ಆಗ್ರಹಿಸಿದರು .

ನಂತರ ಸ್ಥಳಕ್ಕೆ ಬಂದ ಡೀನ್ ಗುರು ಸಿದ್ದಯ್ಯ ಮಾತನಾಡಿ, ಬ್ಯಾನರ್ ಸಂಬಂಧ ವಿವಿಧ ಸಂಘಟನೆಗಳು ನಮ್ಮ ಬ್ಯಾನರ್ ಹಾಕಲು ಅವಕಾಶ ಕೊಡಿ ಎಂದು ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ಗೊಂದಲ ಆಗಬಾರದೆಂಬ ಕಾರಣಕ್ಕೆ ತೆರವು ಮಾಡಿದ್ದಾರೆ. ನಾಳೆ ಬೆಳಗ್ಗೆ ಮತ್ತೆ ಬ್ಯಾನರ್ ಹಾಕಿಸಲು ಕ್ರಮಾ ವಹಿಸುವುದು. ಪ್ರತಿಭಟನೆ ಕೈಬಿಡಿ ಎಂದು ಮನವಿ ಮಾಡಿದರು. ಇದಕ್ಕೆ ಒಪ್ಪದ ವಿದ್ಯಾರ್ಥಿಗಳು, ತೆರವುಗೊಳಿ ಸಲು ಕಾರಣರಾದವರ ವಿರುದ್ಧ ಕ್ರಮ ಆಗಬೇಕು. ಸ್ಥಳಕ್ಕೆ ಕುಲಪತಿಗಳೇ ಬರಲೇ ಬೇಕು ಎಂದು ಪಪ್ಪಿ ಹಿಡಿದರಲ್ಲದೆ, ಅಂಬೇಡ್ಕರ್ ಭಾವಚಿತ್ರ ಇಲ್ಲಿ ಇರಬಾರದು ಎಂಬ ಉದ್ದೇಶದಿಂದ ತೆರವು ಮಾಡಿಸಿದ್ದಾರೆ. ಅಲ್ಲದೆ. ಪ್ರತಿಭಟನೆ ಮಾಡುತ್ತಾರೆ ಎಂದು ವಿದ್ಯುತ್ ದೀಪಗಳನ್ನು ಆಫ್ ಮಾಡಿಸಿ ದ್ದಾರೆ ಎಂದು ದೂರಿದರು.

ವಿಸಿ ಮನವೊಲಿಕೆ ವಿಫಲ: ಆ ನಂತರ ಸ್ಥಳಕ್ಕೆ ಭೇಟಿ ನೀಡಿದ ಕುಲಪತಿ ಡಾ.ಎನ್.ಕೆ. ಲೋಕನಾಥ್, ತೆರವು ಮಾಡಿದವರಿಗೆ ನಾಳೆ ಬೆಳಗ್ಗೆಯೊಳಗೆ ಮತ್ತೆ ಬ್ಯಾನರ್ ಹಾಕುವಂತೆ ಸೂಚನೆ ನೀಡುತ್ತೇನೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ವಿದ್ಯಾರ್ಥಿಗಳು ತೆರವು ಮಾಡಿದವರನ್ನು ಈ ಕೂಡಲೇ ಅಮಾನತು ಮಾಡಲೇ ಬೇಕು ಎಂದು ಒತ್ತಾಯಿಸಿದರು.
ಯಾರು ತೆರವು ಮಾಡಿದ್ದು ಎಂಬುದು ನನಗೆ ಗೊತ್ತಿಲ್ಲ ಎಂದು ಕುಲಪತಿಗಳು ಹೇಳಿದಾಗ ವಿದ್ಯಾರ್ಥಿಗಳು ತಲಪತಿ ಅಮಗೂ ತಿಳಿಸದೇ ತೆರವು ಮಾಡಿದ್ದಾರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ವರು ರಾಷ್ಟ್ರನಾಯಕರಿಗೆ ಅಪಮಾನ ಮಾಡಲಾಗಿದೆ. ಹಾಗಾಗಿ ನೀವೇ ದೂರು ಕೊಟ್ಟು ಪ್ರಕರಣ ದಾಖಲಿಸಿ ಎಂದು ಕುಲಪತಿಗಳನ್ನು ಆಗ್ರಹಿಸಿದರು. ಸ್ಥಳದಲ್ಲಿದ್ದ ಪೊಲೀಸರು ವಿದ್ಯಾರ್ಥಿ ಗಳನ್ನು ಸಮಾಧಾನಗೊಳಿಸಿದ ಬಳಕ ಮತ್ತೆ ಮಾತನಾಡಿದ ಕುಲಪತಿಗಳು, ಎಓ ಅವರಿಗೆ ಕರೆ ಮಾಡಿದ್ದೆ, ಅವರು ಫೋನ್ ತೆಗೆಯುತ್ತಿಲ್ಲ. ಯಾರು ತೆರವು ಮಾಡಿ ದ್ದಾರೆ ಎಂದು ಪರಿಶೀಲನೆ ಮಾಡಿ, ನಾಳೆ ಅವರ ವಿರುದ್ಧ ಕ್ರಮ ವಹಿಸಲಾಗುವುದು ಎಂದರು. ಆದರೆ ವಿದ್ಯಾರ್ಥಿಗಳು ಇದಕ್ಕೆ ಒರದೇ ಪ್ರತಿಭಟನೆ ಮುಂದುವರೆಸಿದರು.

ಮೈಸೂರು ವಿವಿ ಸಿಂಡಿಕೇಟ್ ಸದಸ್ಯ ನಟರಾಜ್ ಶಿವಣ್ಣ ಮಾತನಾಡಿ, ತೆರವು ಮಾಡಿರು ವುದು ತಪ್ಪು ಸರಿಪಡಿಸಲು ಒಪ್ಪಿದ್ದಾರೆ. ಸಿಂಡಿಕೇಟ್ ಸದಸ್ಯನಾಗಿ ನಮ್ಮ ವಿವಿ ಪರವಾಗಿ ಕ್ಷಮೆ ಕೇಳುತ್ತೇನೆ. ಅಮಾನತು ಸಂಬಂಧ ಸಿಂಡಿಕೇಟ್ ನಲ್ಲಿ ಸಹ ಚರ್ಚೆ ಮಾಡಬೇಕಾಗುತ್ತದೆ. ನಾನೇ ಆ ಬಗ್ಗೆ ಮಾತನಾಡುತ್ತೇನೆ ನಿಮ್ಮ ಬೇಡಿಕೆ ಈಡೇರಿ ಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಬ್ಯಾನರ್ ತೆಗೆಯುವ ವಿಷಯ ಸಿಂಡಿ ಕೇಟ್ ಸಭೆಯಲ್ಲಿ ಯಾವುದೇ ಚರ್ಚೆಯೇ ಆಗಿಲ್ಲ ಇದು ಸುಳ್ಳು ಎಂದು ತಿಳಿಸಿದರು. ನಂತರ ಕುಲಪತಿಗಳು ದೂರು ಕೊಟ್ಟು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ಮಾಡಿಸ ಬೇಕೆಂದು ವಿದ್ಯಾರ್ಥಿಗಳು ಬೇಡಿಕೆ ಇಟ್ಟಾಗ, ಗಂಭೀರ ವಿಷಯವಾದ ಹಿನ್ನೆಲೆಯಲ್ಲಿ ಆದಷ್ಟು ಶೀಘ್ರದಲ್ಲಿ ಕ್ರಮ ವಹಿಸುತ್ತೇವೆ ಸಮಯ ಕೊಡಿ ಎಂದು ಕುಲಪತಿಗಳು ಹೇಳಿದರು. ಆದರೆ ಇದಕ್ಕೊಪ್ಪದ ವಿದ್ಯಾರ್ಥಿ ಗಳು ಪ್ರತಿಭಟನೆ ಮುಂದುವರೆಸಿದರು.

The post ಮಾನಸ ಗಂಗೋತ್ರಿಯಲ್ಲಿ ಅಂಬೇಡ್ಕರ್ ಭಾವಚಿತ್ರವುಳ್ಳ ಬ್ಯಾನರ್ ತೆರವು ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳ ಪ್ರತಿಭಟನೆ. appeared first on Good News 24x7.

]]>
ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆಯಿಂದ ಅಹೋರಾತ್ರಿ ಧರಣಿ. https://www.goodnews24x7.com/mysore-university-research-students-association-holds-overnight-protest/ Wed, 21 May 2025 07:18:44 +0000 https://www.goodnews24x7.com/?p=4014 ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿದ್ದು, ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆ ಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ ಎಂದು ಆರೋಪಿಸಿ ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧನಾ ವಿದ್ಯಾರ್ಥಿ ಗಳ ಸಂಘಟನೆಯ ವತಿಯಿಂದ ಕ್ರಾಪರ್ಡ್ ಹಾಲ್ ಮುಂಭಾಗ ಮಂಗಳವಾರದಿಂದ ಅಹೋರಾತ್ರಿ ಧರಣಿ…

The post ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆಯಿಂದ ಅಹೋರಾತ್ರಿ ಧರಣಿ. appeared first on Good News 24x7.

]]>

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಸಂಶೋಧನಾ ಮಾರ್ಗದರ್ಶಕರ ಕೊರತೆಯಿದ್ದು, ಹೊಸದಾಗಿ ಪಿಎಚ್.ಡಿ ಪ್ರವೇಶಾತಿ ಪಡೆ ಯುವ ವಿದ್ಯಾರ್ಥಿಗಳಿಗೆ ತೊಡಕಾಗಿದೆ ಎಂದು ಆರೋಪಿಸಿ ಮೈಸೂರು ವಿಶ್ವ ವಿದ್ಯಾನಿಲಯ ಸಂಶೋಧನಾ ವಿದ್ಯಾರ್ಥಿ ಗಳ ಸಂಘಟನೆಯ ವತಿಯಿಂದ ಕ್ರಾಪರ್ಡ್ ಹಾಲ್ ಮುಂಭಾಗ ಮಂಗಳವಾರದಿಂದ ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ.

ಪ್ರಾಧ್ಯಾಪಕರ ಕೊರತೆಯಿಂದ ಪಿಹೆಚ್.ಡಿ. ಕೆ-ಸೆಟ್. ನೀಟ್. ಜೆಆ‌ರ್.ಎ ಉತ್ತೀರ್ಣ ರಾದ ಅಭ್ಯರ್ಥಿಗಳಿಗೆ ವಿಶ್ವವಿದ್ಯಾನಿಲಯ ದಲ್ಲಿ ಪಿಹೆಚ್.ಡಿ ಮಾಡಲು ಅವಕಾಶ ಇಲ್ಲದಂತಾಗಿದೆ. ಆದ್ದರಿಂದ ಈಗಿರುವ ಕಾಯಂ ಪ್ರಾಧ್ಯಾಪಕರ ಬಳಿಯೇ . ಮಾರ್ಗದರ್ಶನ ಪಡೆಯಲು ಅವಕಾಶ ಕೊಡಬೇಕು. ಪಿಹೆಚ್.ಡಿ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಹೆಚ್ಚುವರಿ ಸೀಟುಗಳನ್ನು ನೀಡಿ ಸಂಶೋಧನೆ ಮಾಡಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಸಂಶೋಧನಾ ಆಕಾಂಕ್ಷಿಗಳ ಬೇಡಿಕೆಗಳು:

ಪಿಹೆಚ್.ಡಿ ಮಾರ್ಗದರ್ಶನಕ್ಕೆ ಹೆಚ್ಚುವರಿ ದಾಖಲಾತಿ ಕೊಡಬೇಕು. ವಿಶ್ವವಿದ್ಯಾನಿಲಯ ದಲ್ಲಿ ಸಾಮಾಜಿಕ ವಿಜ್ಞಾನದಲ್ಲಿ ಪಿಹೆಚ್.ಡಿ ಮಾರ್ಗದರ್ಶಕರ ಕೊರತೆ ಇರುವುದರಿಂದ ಕೇಂದ್ರದ ಯುಜಿಸಿ ಮಾರ್ಗಸೂಚಿಯ ಪ್ರಕಾರ ಇತರೆ ವಿಶ್ವವಿದ್ಯಾನಿಲಯಗಳ ಸಾಮಾಜಿಕ ಅಧ್ಯಯನ ಒಳಗೊಳ್ಳುವಿಕೆ ಅಧ್ಯಯನ ಕೇಂದ್ರದ ಪ್ರಾಧ್ಯಾಪಕರುಗಳಿಗೆ ನೀಡಿರುವಂತೆ ಇಲ್ಲಿಯೂ ನೀಡಬೇಕು  ಎಂದು ಒತ್ತಾಯಿಸಿದ್ದಾರೆ.

ಇದರಿಂದ ವಿಶ್ವವಿದ್ಯಾನಿಲಯಕ್ಕೆ ಯಾವುದೇ ಆರ್ಥಿಕ ಹೊಣೆಗಾರಿಕೆ ಇರುವುದಿಲ್ಲ ಮತ್ತು ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಸಹ ಪ್ರಾಧ್ಯಾಪಕರಿಗೆ ಸಂಶೋಧನಾ ವಿದ್ಯಾರ್ಥಿ ಗಳಿಗೆ ಮಾರ್ಗದರ್ಶನ ನೀಡಲು ಅವಕಾಶ ನೀಡಬೇಕು. ಪ್ರಾಧ್ಯಾಪಕರಾಗಿದ್ದು ಮಾರ್ಗ ದರ್ಶನ ಪಡೆಯದೆ ಇರುವ ಪ್ರಾಧ್ಯಾಪಕ ರಿಗೆ ಮಾರ್ಗದರ್ಶನ ಮಾಡುವುದಕ್ಕೆ ಸಲಹೆ ನೀಡಬೇಕು ಎಂದು ಒತ್ತಾಯಿಸಿದರು.

ಧರಣಿಯಲ್ಲಿ ಮಾಜಿ ಮೇಯರ್ ಪುರುಷೋತ್ತಮ್, ಸಂಶೋಧನಾ ಸಂಘದ ಅಧ್ಯಕ್ಷ ಶಿವಶಂಕರ್, ವಿಶ್ವ ಪ್ರಸಾದ್, ಉಪಾಧ್ಯಕ್ಷ ಮರಳಿ ಮಹೇಶ್, ಹಿರಿಯ ಹೋರಾಟಗಾರರು ಚೋರ್ನಳ್ಳಿ ಶಿವಣ್ಣ, ಯುವ ಹೋರಾಟಗಾರ ಪ್ರದೀಪ್  ಮುಮ್ಮಾಡಿ  ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ  ದಲಿತ ಸಂಶೋಧಕ ಸಂಘ ಇನ್ನಿತರರು ಪಾಲ್ಗೊಂಡಿದ್ದರು.

 

The post ಮೈಸೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಸಂಘಟನೆಯಿಂದ ಅಹೋರಾತ್ರಿ ಧರಣಿ. appeared first on Good News 24x7.

]]>