PratapSimha Archives - Good News 24x7 https://www.goodnews24x7.com/tag/pratapsimha/ Kannada Wed, 11 Mar 2026 11:22:52 +0000 en-US hourly 1 https://wordpress.org/?v=7.0.2 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg PratapSimha Archives - Good News 24x7 https://www.goodnews24x7.com/tag/pratapsimha/ 32 32 ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ. https://www.goodnews24x7.com/former-mp-pratap-simha-reveals-the-story-of-the-behind-the-scenes-struggle-mysore-silk-heritage/ Wed, 11 Mar 2026 11:11:50 +0000 https://www.goodnews24x7.com/?p=8853 ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ…

The post ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ. appeared first on Good News 24x7.

]]>

ಟಿ. ನರಸೀಪುರದಲ್ಲಿರುವ ಕೆಎಸ್ಐಸಿ ರೇಷ್ಮೆ ನೂಲು ಘಟಕದ ಜಾಗದಲ್ಲಿ ಸ್ಟೇಡಿಯಂ ನಿರ್ಮಿಸುವ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿತ್ತು. ವಿರೋಧ ಪಕ್ಷದ ನಾಯಕರು ಮತ್ತು ನೌಕರರ ಹೋರಾಟದ ಫಲವಾಗಿ, ಸರ್ಕಾರ ಈ ಯೋಜನೆಯನ್ನು ಕೈಬಿಟ್ಟು, ಲಾಭದಾಯಕ ಘಟಕವನ್ನು ಉಳಿಸಿ ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದೆ. ಈ ಬೆಳವಣಿಗೆಯು ಮೈಸೂರು ಸಿಲ್ಕ್ ಉದ್ಯಮಕ್ಕೆ ನಿಟ್ಟುಸಿರು ತಂದಿದೆ.

ಬೆಂಗಳೂರು ವಿಧಾನಸೌಧದಲ್ಲಿ ಕರ್ನಾಟಕ ಸಿಲ್ಕ್ ಇಂಡಸ್ಟ್ರಿ ಕಾರ್ಪೊರೇಷನ್ ಸಂಬಂಧಿಸಿದಂತೆ ನಡೆದ ಬೆಳವಣಿಗೆಗಳ ಕುರಿತು ರಾಜಕೀಯ ನಾಯಕರು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಟಿ. ನರಸೀಪುರದಲ್ಲಿರುವ ರೇಷ್ಮೆ ನೂಲು ಉತ್ಪಾದನಾ ಘಟಕವನ್ನು ಉಳಿಸುವ ಹೋರಾಟದಲ್ಲಿ ಬೆಂಬಲ ನೀಡಿದ ನಾಯಕರಿಗೆ ಕೃತಜ್ಞತೆ ಸಲ್ಲಿಸಲು ಕೆಎಸ್ಐಸಿ ನೌಕರರು ವಿಧಾನಸೌಧಕ್ಕೆ ಆಗಮಿಸಿದ್ದರು.

1912ರಲ್ಲಿ ಮೈಸೂರು ಮಹಾರಾಜರು ಆರಂಭಿಸಿದ ಮೈಸೂರು ಸಿಲ್ಕ್ ಉದ್ಯಮ
ಈ ವೇಳೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮಾತನಾಡಿ, 1912ರಲ್ಲಿ ಮೈಸೂರು ಮಹಾರಾಜರು ಆರಂಭಿಸಿದ ಮೈಸೂರು ಸಿಲ್ಕ್ ಉದ್ಯಮವು ಇಂದು ಜಾಗತಿಕ ಖ್ಯಾತಿ ಗಳಿಸಿದೆ. ಈ ಸಂಸ್ಥೆಗೆ ಅಗತ್ಯವಾದ ರೇಷ್ಮೆ ನೂಲು ಉತ್ಪಾದಿಸುವ ಪ್ರಮುಖ ಘಟಕವು ಟಿ. ನರಸೀಪುರ ಪಟ್ಟಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸುಮಾರು 12 ಎಕರೆ ಪ್ರದೇಶದಲ್ಲಿ ಈ ಫ್ಯಾಕ್ಟರಿ ಸ್ಥಾಪಿಸಲಾಗಿದೆ. ಆದರೆ ಈ ಜಾಗದಲ್ಲಿ ಸುಮಾರು 6 ಎಕರೆ ಭೂಮಿಯನ್ನು ತೆಗೆದುಕೊಂಡು ಸ್ಟೇಡಿಯಂ ನಿರ್ಮಿಸಲು ಸರ್ಕಾರ ಮುಂದಾಗಿತ್ತು ಎಂಬ ಆರೋಪವೂ ಕೇಳಿಬಂದಿತ್ತು.

ಆ ಜಾಗ ಎಲ್‌ ಆಕಾರದಲ್ಲಿರುವುದರಿಂದ ಅಲ್ಲಿ ಸ್ಟೇಡಿಯಂ ನಿರ್ಮಾಣ ಸಾಧ್ಯವಿಲ್ಲ. ವೃತ್ತಾಕಾರದ ಭೂಮಿಯಲ್ಲಿ ಮಾತ್ರ ಸೂಕ್ತವಾಗಿ ಸ್ಟೇಡಿಯಂ ನಿರ್ಮಾಣ ಸಾಧ್ಯವಾಗುತ್ತದೆ. ಆದರೂ ಅವೈಜ್ಞಾನಿಕವಾಗಿ ಆ ಸಂಸ್ಥೆಯನ್ನು ಮುಚ್ಚುವ ಯತ್ನ ನಡೆದಿದೆ ಎಂದು ಸಿಂಹ ಆರೋಪಿಸಿದರು. ಈ ವಿಷಯದಲ್ಲಿ ಉದ್ಯೋಗಿಗಳು ತಮ್ಮ ಧ್ವನಿಯನ್ನು ಎತ್ತಿದರೂ, ಸರ್ಕಾರ ಅದನ್ನು ಗಮನಿಸಿಲ್ಲ . ಆದರೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮತ್ತು ಶಾಸಕ ಶ್ರೀವತ್ಸ ಅವರು ನೌಕರರ ಪರ ನಿಂತು ಹೋರಾಟ ನಡೆಸಿದ ಪರಿಣಾಮ ಆ ಜಾಗ ಉಳಿಯುವಂತಾಯಿತು ಎಂದು ಕೃತಜ್ಞತೆ ಸಲ್ಲಿಸಿದರು.

98 ಕೋಟಿ ರೂಪಾಯಿ ಲಾಭ
ಇನ್ನು ಇದೇ ವೇಳೆ ಮಾತನಾಡಿದ ಆರ್. ಅಶೋಕ್ ಅವರು, ರೇಷ್ಮೆ ಕಾರ್ಖಾನೆಯನ್ನು ಉಳಿಸಲು ತಮ್ಮ ಪಕ್ಷದ ಶಾಸಕರು ಮತ್ತು ಮಾಜಿ ಸಂಸದರು ಒಟ್ಟಾಗಿ ಹೋರಾಟ ನಡೆಸಿದ್ದಾರೆ ಎಂದು ಹೇಳಿದರು. ಜಿಐ ಗುರುತು ಹೊಂದಿರುವ ಈ ಸಂಸ್ಥೆ ಪ್ರತಿವರ್ಷ ಸುಮಾರು 98 ಕೋಟಿ ರೂಪಾಯಿ ಲಾಭ ಗಳಿಸುತ್ತಿದೆ. ಇಂತಹ ಲಾಭದಾಯಕ ಸಂಸ್ಥೆಯನ್ನು ಖಾಸಗಿ ಒತ್ತಡಗಳಿಗೆ ಮಣಿದು ಮುಚ್ಚುವ ಪ್ರಯತ್ನ ನಡೆದಿದೆ ಎಂಬ ಆರೋಪವೂ ಮಾಡಿದರು. ಈ ಕಾರ್ಖಾನೆ ಮುಚ್ಚಿದರೆ ಚೀನಾದಿಂದ ರೇಷ್ಮೆ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಉಂಟಾಗಬಹುದು ಎಂದು ಅವರು ಎಚ್ಚರಿಸಿದರು.

ಇದಲ್ಲದೆ, ಈ ಘಟಕದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿದ್ದು, ಅವರ ಜೀವನೋಪಾಯಕ್ಕೂ ಇದು ಪ್ರಮುಖ ಆಧಾರವಾಗಿದೆ ಎಂದು ಅಶೋಕ್ ಹೇಳಿದರು. ಈ ಹಿನ್ನೆಲೆಯಲ್ಲಿ ಕಾರ್ಖಾನೆಯನ್ನು ಮುಚ್ಚುವ ಯತ್ನ ಮಾಡಿದರೆ ದೊಡ್ಡ ಮಟ್ಟದ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಮುಂಚೆಯೇ ಎಚ್ಚರಿಕೆ ನೀಡಿದ್ದೆ ಎಂದರು. ಅದರ ಪರಿಣಾಮವಾಗಿ ಸರ್ಕಾರ ಈ ಜಾಗವನ್ನು ಮುಟ್ಟುವುದಿಲ್ಲ ಹಾಗೂ ಘಟಕವನ್ನು ಅಭಿವೃದ್ಧಿಪಡಿಸುವುದಾಗಿ ಭರವಸೆ ನೀಡಿದೆ. ಭವಿಷ್ಯದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಈ ಸಂಸ್ಥೆಯನ್ನು ಇನ್ನಷ್ಟು ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಇನ್ನು ಮಾರ್ಚ್ 9ರಂದು ನಡೆದ ವಿಧಾನಸಭಾ ಅಧಿವೇಶನದಲ್ಲಿಯೂ ಈ ವಿಷಯ ಪ್ರಸ್ತಾಪವಾಗಿತ್ತು. ಟಿ. ನರಸೀಪುರ ರೇಷ್ಮೆ ನೂಲು ತಯಾರಿಕಾ ಘಟಕವನ್ನು ಮುಚ್ಚುವ ವಿಚಾರವಾಗಿ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸರ್ಕಾರವನ್ನು ಪ್ರಶ್ನಿಸಿದ್ದರು. ಈ ಸ್ಥಳದಲ್ಲಿ ಸ್ಟೇಡಿಯಂ ನಿರ್ಮಿಸಲು ಸರ್ಕಾರ ಮುಂದಾಗಿರುವುದು ಸರಿಯಲ್ಲ ಎಂದು ಅವರು ಹೇಳಿ, ಈ ನಿರ್ಧಾರವನ್ನು ಕೈಬಿಡಬೇಕು ಎಂದು ಆಗ್ರಹಿಸಿದ್ದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಪಶುಸಂಗೋಪನಾ ಸಚಿವ K. ವೆಂಕಟೇಶ್, ಸ್ಟೇಡಿಯಂ ನಿರ್ಮಾಣಕ್ಕೆ ಆ ಜಾಗ ಸೂಕ್ತವೆಂದು ಯಾರೋ ತಪ್ಪು ಮಾಹಿತಿ ನೀಡಿದ್ದರು ಎಂದು ಹೇಳಿದರು. ಇದೀಗ ಸರ್ಕಾರ ಆ ಯೋಜನೆಯನ್ನು ಕೈಬಿಟ್ಟಿದ್ದು, ಟಿ. ನರಸೀಪುರದಲ್ಲಿರುವ ಕೆಎಸ್‌ಐಸಿ ಘಟಕ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು. ಅಲ್ಲಿಗೆ ಸ್ಟೇಡಿಯಂ ನಿರ್ಮಿಸುವ ಯೋಜನೆ ಇಲ್ಲ ಎಂದು ಸಚಿವರು ಹೇಳಿದರು. ಈ ನಿರ್ಧಾರವನ್ನು ವಿರೋಧ ಪಕ್ಷದ ನಾಯಕ ಅಶೋಕ್ ಸ್ವಾಗತಿಸಿದರು.

ಅದೇ ದಿನ ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಶ್ರೀವತ್ಸ ಮೈಸೂರು ಸಿಲ್ಕ್ ಸೀರೆಯ ಬೇಡಿಕೆ ಕುರಿತು ಪ್ರಶ್ನೆ ಎತ್ತಿದ್ದರು. ಮೈಸೂರು ಸಿಲ್ಕ್ ಸೀರೆಗಳಿಗೆ ಅಪಾರ ಬೇಡಿಕೆ ಇರುವುದರಿಂದ ಜನರು ಬೆಳಗಿನ ಜಾವವೇ ಅಂಗಡಿಗಳ ಮುಂದೆ ಸಾಲಿನಲ್ಲಿ ನಿಲ್ಲುವ ಪರಿಸ್ಥಿತಿ ಉಂಟಾಗಿದೆ ಎಂದು ಅವರು ಗಮನ ಸೆಳೆದರು. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಒತ್ತಾಯಿಸಿದರು.

ಆನ್‌ಲೈನ್ ಮಾರಾಟ ತಾತ್ಕಾಲಿಕ ನಿಲ್ಲಿಸುವಂತೆ ಚಿಂತನೆ
ಇದಕ್ಕೆ ಉತ್ತರಿಸಿದ ಸಚಿವ ಕೆ. ವೆಂಕಟೇಶ್ ಅವರು, ಮೈಸೂರು ಸಿಲ್ಕ್ ಸೀರೆಗಳಿಗೆ ಅಪಾರ ಬೇಡಿಕೆ ಇರುವುದನ್ನು ಒಪ್ಪಿಕೊಂಡರು. ಸ್ವಲ್ಪ ಹಾನಿಯಾಗಿದ್ದರೂ ಮಹಿಳೆಯರು ಆ ಸೀರೆಗಳನ್ನು ಖರೀದಿಸಲು ಹಿಂದೇಟು ಹಾಕುವುದಿಲ್ಲ ಎಂದರು. ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರ ಪ್ರಯತ್ನಿಸುತ್ತಿದೆ. ಬೆಳಿಗ್ಗೆ ಮೂರು ಗಂಟೆಗೆ ಜನರು ಸಾಲಿನಲ್ಲಿ ನಿಲ್ಲುತ್ತಾರೆ ಎಂಬ ಮಾಹಿತಿ ಸರಿಯಲ್ಲ. ಕೆಲವೊಮ್ಮೆ ‘ಸೆಕೆಂಡ್ ಸೇಲ್’ ಸಂದರ್ಭದಲ್ಲಿ ಜನರು ಸ್ವಲ್ಪ ಬೇಗ ಬರುತ್ತಾರೆ ಎಂದರು

ಇದಲ್ಲದೆ, ಮೈಸೂರು ಸಿಲ್ಕ್ ಸೀರೆಗಳ ಮಾರಾಟದಲ್ಲಿ ಸ್ಥಳೀಯರಿಗೆ ಆದ್ಯತೆ ನೀಡುವ ಉದ್ದೇಶದಿಂದ ಕೆಲವು ಸಂದರ್ಭಗಳಲ್ಲಿ ಆನ್‌ಲೈನ್ ಮಾರಾಟವನ್ನು ತಾತ್ಕಾಲಿಕವಾಗಿ ನಿಲ್ಲಿಸುವ ಬಗ್ಗೆ ಕೂಡ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಸಚಿವರು ಹೇಳಿದರು. ಒಟ್ಟಿನಲ್ಲಿ, ಟಿ. ನರಸೀಪುರದ ಕೆಎಸ್ಐಸಿ ಘಟಕವನ್ನು ಉಳಿಸುವ ಬಗ್ಗೆ ಸರ್ಕಾರದ ಸ್ಪಷ್ಟನೆ ಮತ್ತು ಅದನ್ನು ಸ್ವಾಗತಿಸಿರುವ ವಿರೋಧ ಪಕ್ಷದ ನಾಯಕರು ರಾಜ್ಯದ ರೇಷ್ಮೆ ಉದ್ಯಮಕ್ಕೆ ಸ್ವಲ್ಪ ಮಟ್ಟಿನ ನಿಟ್ಟುಸಿರು ತಂದಂತಾಗಿದೆ.

The post ತೆರೆಮರೆಯ ಹೋರಾಟದ ಕಥೆಯನ್ನ ಬಿಚ್ಚಿಟ್ಟ ಮಾಜಿ ಸಂಸದ ಪ್ರತಾಪ್ ಸಿಂಹ – ಮೈಸೂರು ಸಿಲ್ಕ್ ಪರಂಪರೆ. appeared first on Good News 24x7.

]]>
ಕಾಂತಾರ-1 ಸಿನಿಮಾ ನೋಡೋಕೆ ಇಡೀ ಥಿಯೇಟರ್ ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ! https://www.goodnews24x7.com/kantara-1-sinima-no%e1%b8%8doke-i%e1%b8%8di-thiye%e1%b9%adar-%e1%b9%adike%e1%b9%ad-kharidisida-pratap-sinha-pratapsimharishabshettyrukminivasanthpragathishettykantarachapter1sapthamigowdakant/ Sat, 04 Oct 2025 08:35:35 +0000 https://www.goodnews24x7.com/?p=7656 ಬಿಗ್ ಬಜೆಟ್​​ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಗುರುವಾರ ಕೂಡ…

The post ಕಾಂತಾರ-1 ಸಿನಿಮಾ ನೋಡೋಕೆ ಇಡೀ ಥಿಯೇಟರ್ ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ! appeared first on Good News 24x7.

]]>

ಬಿಗ್ ಬಜೆಟ್​​ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು. ಗುರುವಾರ ಕೂಡ ಎಲ್ಲ ಕಡೆಗಳಲ್ಲಿ ಹೌಸ್​ಫುಲ್ ಪ್ರದರ್ಶನ ಕಂಡಿದೆ. ಈಗ ವೀಕೆಂಡ್​​ನಲ್ಲಿ ಕೂಡ ಸಿನಿಮಾ ಅಬ್ಬರಿಸಲಿದೆ. ಜನಸಾಮಾನ್ಯರು ಮಾತ್ರವಲ್ಲದೇ ರಾಜಕೀಯ ಕ್ಷೇತ್ರದವರು ಕೂಡ ‘ಕಾಂತಾರ: ಚಾಪ್ಟರ್ 1’ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಪ್ರತಾಪ್ ಸಿಂಹ ಅವರು ಸಿನಿಮಾ ನೋಡಲು ಇಡೀ ಚಿತ್ರಮಂದಿರದ ಟಿಕೆಟ್ ಬುಕ್ ಮಾಡಿದ್ದಾರೆ.

 

 

 

 

 

 

 

 

ಈ ಬಗ್ಗೆ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾಳೆ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ 2 ನೋಡೋಣ. DRCಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ’ ಎಂದು ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿದ್ದಾರೆ. ಅಂದರೆ, ಶನಿವಾರ ಸಂಜೆ ಅವರು ಸಿನಿಮಾ ವೀಕ್ಷಿಸಲಿದ್ದಾರೆ.

ಟಿಕೆಟ್ ಬುಕಿಂಗ್ ವಿವರವನ್ನು ಕೂಡ ಪ್ರತಾಪ್ ಸಿಂಹ ಅವರು ಹಂಚಿಕೊಂಡಿದ್ದಾರೆ. DRCಯಲ್ಲಿ 2ನೇ ಸ್ಕ್ರೀನ್​​ನಲ್ಲಿ ಒಟ್ಟು 197 ಟಿಕೆಟ್​​ಗಳನ್ನು ಅವರು ಬುಕ್ ಮಾಡಿದ್ದಾರೆ. ಇದಕ್ಕಾಗಿ ಅವರು ಒಟ್ಟು 68,920 ರೂಪಾಯಿ ಖರ್ಚು ಮಾಡಿದ್ದಾರೆ. ಸಿನಿಮಾ ನೋಡಿದ ಬಳಿಕ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.

 

https://www.instagram.com/reel/DPX3_dnAY60/?utm_source=ig_web_copy_link&igsh=MzRlODBiNWFlZA==

 

ಹೊಂಬಾಳೆ ಫಿಲ್ಮ್ಸ್ ಮೂಲಕ ‘ಕಾಂತಾರ: ಚಾಪ್ಟರ್ 1’ ಸಿನಿಮಾ ನಿರ್ಮಾಣ ಆಗಿದೆ. ನಿರ್ಮಾಪಕ ವಿಜಯ್ ಕಿರಗಂದೂರು ಅವರಿಗೆ ಪ್ರತಾಪ್ ಸಿಂಹ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ. ‘ಕರ್ನಾಟಕದ ಹೆಮ್ಮೆಯ ಸಿನಿಮಾ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್‌ನ ಸ್ಥಾಪಕರಾದ ಶ್ರೀ ವಿಜಯ್ ಕಿರಗಂದೂರು ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ತಾಯಿ ಚಾಮುಂಡೇಶ್ವರಿಯು ತಮಗೆ ಆರೋಗ್ಯ, ಆಯಸ್ಸು, ಸುಖ-ಶಾಂತಿ, ನೆಮ್ಮದಿ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಸಿನಿಮಾಗೆ ನಿರ್ದೇಶನ ಮಾಡಿ, ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ರಿಷಬ್ ಶೆಟ್ಟಿ ಜೊತೆ ರುಕ್ಮಿಣಿ ವಸಂತ್, ಗುಲ್ಶನ್ ದೇವಯ್ಯ, ಜಯರಾಮ್, ಪ್ರಕಾಶ್ ತುಮಿನಾಡು ಮುಂತಾದವರು ಈ ಸಿನಿಮಾದಲ್ಲಿ ನಟಿಸಿದ್ದಾರೆ. 7 ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆ ಆಗಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಹುಕೋಟಿ ರೂಪಾಯಿ ಕಲೆಕ್ಷನ್ ಮಾಡುತ್ತಿದೆ.

The post ಕಾಂತಾರ-1 ಸಿನಿಮಾ ನೋಡೋಕೆ ಇಡೀ ಥಿಯೇಟರ್ ಟಿಕೆಟ್ ಖರೀದಿಸಿದ ಪ್ರತಾಪ್ ಸಿಂಹ! appeared first on Good News 24x7.

]]>
ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ವಜಾಗೊಳಿಸಿದೆ https://www.goodnews24x7.com/supreme-court-dismisses-petition-filed-by-banu-mushtaq-opposing-mysore-dasara-inauguration/ Fri, 19 Sep 2025 10:23:07 +0000 https://www.goodnews24x7.com/?p=7578 ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿ ಆದೇಶ ಹೊರಡಿಸಿದೆ.…

The post ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ವಜಾಗೊಳಿಸಿದೆ appeared first on Good News 24x7.

]]>

ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನ ರಾಜ್ಯ ಸರ್ಕಾರ ಆಯ್ಕೆ ಮಾಡಿರುವುದನ್ನು ಪ್ರಶ್ನಿಸಿ ಇತ್ತೀಚೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದೀಗ ಬೆಂಗಳೂರು ನಿವಾಸಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿ ಆದೇಶ ಹೊರಡಿಸಿದೆ.

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ (mysuru dasara) ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ (Banu Mushtaq)​​ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.

ಬೆಂಗಳೂರು ನಿವಾಸಿ ಹೆಚ್.ಎಸ್.ಗೌರವ್ ಅವರು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರವಾಗಿ ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದ್ದು, ಹಿಂದೂಯೇತರ ವ್ಯಕ್ತಿಗೆ ಪೂಜೆ ಮಾಡಲು ಅವಕಾಶ ನೀಡಲಾಗುವುದಿಲ್ಲ ಎಂದಿದ್ದಾರೆ.

ದೇವಸ್ಥಾನದ ಒಳಗೆ ಪೂಜೆ ನಡೆಸುವುದನ್ನು ಜಾತ್ಯತೀತ ಕ್ರಿಯೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಸಂಪೂರ್ಣವಾಗಿ ಇದೊಂದು ರಾಜಕೀಯವಾಗಿದ್ದು, ಧಾರ್ಮಿಕ ಕಾರ್ಯಗಳಿಗಾಗಿ ಅವರನ್ನು ಆಹ್ವಾನಿಸಬಾರದು ಎಂಬುದಕ್ಕೆ ಯಾವುದೇ ಕಾರಣವಿಲ್ಲ ಎಂದು ಹಿರಿಯ ವಕೀಲ ಪಿ.ಬಿ. ಸುರೇಶ್​ ವಾದ ಮಂಡಿಸಿದರು. ವಾದ-ಪ್ರತಿವಾದ ಆಲಿಸಿದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಹೈಕೋರ್ಟ್​ನಲ್ಲೂ ವಜಾ
ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ ಇತ್ತೀಚೆಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ್ದ ಹೈಕೋರ್ಟ್, ದಸರಾ ಉದ್ಘಾಟನೆ ವಿಚಾರದಲ್ಲಿ ಯಾವುದೇ ಹಕ್ಕು ಉಲ್ಲಂಘನೆ ಆಗಿರುವುದು ಕಂಡುಬಂದಿಲ್ಲ ಎಂದು ಅರ್ಜಿಯನ್ನು ತಿರಸ್ಕರಿಸಿತ್ತು. ಹೈಕೋರ್ಟಿನಲ್ಲಾದರೂ ನ್ಯಾಯ ಸಿಗಬಹುದು ಎಂಬ ಭರವಸೆ ಇತ್ತು. ಆದರೆ ಅದು ಕೂಡ ಇಲ್ಲವಾಯಿತು ಎಂದು ತೀರ್ಪಿನ ನಂತರ ಪ್ರತಾಪ್ ಸಿಂಹ ನಿರಾಶೆ ವ್ಯಕ್ತಪಡಿಸಿದ್ದರು.

ಬಾನು ಮುಷ್ತಾಕ್​​ ಅವರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಸರ್ಕಾರದ ನಿರ್ಧಾರದ ವಿರುದ್ಧ ಬಿಜೆಪಿಯ ಅನೇಕ ನಾಯಕರು ಟೀಕೆ ಮಾಡಿದ್ದಾರೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಪುಟ ಸಚಿವರು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

The post ಬಾನು ಮುಷ್ತಾಕ್ ಮೈಸೂರು ದಸರಾ ಉದ್ಘಾಟನೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ವಜಾಗೊಳಿಸಿದೆ appeared first on Good News 24x7.

]]>
ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೇ: ಪ್ರತಾಪ್ ಸಿಂಹ ಆಕ್ಷೇಪ https://www.goodnews24x7.com/she-who-did-not-accept-kannada-as-bhuvaneshwari-accepted-and-offered-flowers-to-her-mother-chamundeshwari-pratap-simha-objection/ Mon, 25 Aug 2025 08:58:35 +0000 https://www.goodnews24x7.com/?p=6723 ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಕಾಡಿನಿಂದ ನಾಡಿಗೆ ಬಂದ ಗಜಪಡೆಗಳು ತಾಲೀಮು ಆರಂಭಿಸಿವೆ. ದಸರಾ ಉದ್ಘಾಟಕರ ಹೆಸರು ಸಹ ಅಂತಿಮವಾಗಿದೆ. ಸರ್ಕಾರ ಅದ್ದೂರಿಯಾಗಿ ದಸರಾ ನಡೆಸಲು ತೀರ್ಮಾನಿಸಿದೆ. ಈ ನಡುವೆ ದಸರಾ ಉದ್ಘಾಟಕರ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ.…

The post ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೇ: ಪ್ರತಾಪ್ ಸಿಂಹ ಆಕ್ಷೇಪ appeared first on Good News 24x7.

]]>

ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆಗಳು ಭರ್ಜರಿಯಾಗಿ ನಡೆದಿವೆ. ಕಾಡಿನಿಂದ ನಾಡಿಗೆ ಬಂದ ಗಜಪಡೆಗಳು ತಾಲೀಮು ಆರಂಭಿಸಿವೆ. ದಸರಾ ಉದ್ಘಾಟಕರ ಹೆಸರು ಸಹ ಅಂತಿಮವಾಗಿದೆ. ಸರ್ಕಾರ ಅದ್ದೂರಿಯಾಗಿ ದಸರಾ ನಡೆಸಲು ತೀರ್ಮಾನಿಸಿದೆ. ಈ ನಡುವೆ ದಸರಾ ಉದ್ಘಾಟಕರ ವಿಚಾರ ಈಗ ಚರ್ಚೆಗೆ ಕಾರಣವಾಗಿದೆ. ಯಾಕೆ? ವಿವರಗಳು ಇಲ್ಲಿವೆ.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಎಂದರೆ ರಾಜ ಪರಂಪರೆ, ಗತಕಾಲದ ವೈಭವ. ಅಷ್ಟೇ ಅಲ್ಲ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಉತ್ಸವ. ಈ ಬಾರಿ ಸೆಪ್ಟೆಂಬರ್ 22ರಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ಚಾಲನೆ ಸಿಗುತ್ತಿದೆ. ಅಂದಿನಿಂದ ಅಕ್ಟೋಬರ್ 2ರ ವರೆಗೆ, ಅಂದರೆ 11 ದಿನಗಳ ಕಾಲ ದಸರಾ ಕಲರವ ಜೋರಾಗಿರಲಿದೆ. ಸರ್ಕಾರ ಈ ಬಾರಿ ದಸರಾ ಉದ್ಘಾಟನೆಗೆ ಅಂತರರಾಷ್ಟ್ರೀಯ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಕನ್ನಡತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಇದು ಈಗ ಚರ್ಚೆಗೆ ಕಾರಣವಾಗಿದೆ.

ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಪುಷ್ಪಾರ್ಚನೆ ಮಾಡಿ ನಾಡಹಬ್ಬಕ್ಕೆ ಪ್ರತಿ ವರ್ಷ ಚಾಲನೆ ನೀಡಲಾಗುತ್ತದೆ. ಇದು ಧಾರ್ಮಿಕ ಹಬ್ಬ, ಹಿಂದುಗಳ ಹಬ್ಬ. ತಾಯಿ ಚಾಮುಂಡೇಶ್ವರಿ ಬಗ್ಗೆ ನಂಬಿಕೆ ಇಟ್ಟವರು ಆಕೆಗೆ ಪೂಜೆ ಸಲ್ಲಿಸಿ ದಸರಾ ಉದ್ಘಾಟಿಸುವುದು ಪರಂಪರೆ. ಆದರೆ ಸಿಎಂ ಸಿದ್ದರಾಮಯ್ಯ ಉದ್ದೇಶಪೂರ್ವಕವಾಗಿ ಮುಸ್ಲಿಂ ಒಬ್ಬರನ್ನು ದಸರಾ ಉದ್ಘಾಟನೆಗೆ ಆಯ್ಕೆ ಮಾಡಿದ್ದಾರೆ ಎಂಬುದು ಮಾಜಿ ಸಂಸ್ ಪ್ರತಾಪ್ ಸಿಂಹ ಆರೋಪ. ಬೂಕರ್ ಪ್ರಶಸ್ತಿಯನ್ನು ಪಡೆದಿರುವ ಬಾನು ಮುಷ್ತಾಕ್ ಅವರನ್ನು ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆ ಮಾಡಿ, ಆದರೆ ಧಾರ್ಮಿಕ ನಂಬಿಕೆ ಮತ್ತು ಆಚರಣೆಯ ಪ್ರತೀಕವಾಗಿರುವ ದಸರಾ ಉದ್ಘಾಟನೆಗೆ ಕರೆಯುವುದು ಸೂಕ್ತವೇ ಎಂದು ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. 2023ರ ಜನ ಸಾಹಿತ್ಯ ಸಮ್ಮೇಳನದಲ್ಲಿ ಬಾನು ಮುಷ್ತಾಕ್ ರವರು ಮಾಡಿದ ಭಾಷಣದ ವಿಡಿಯೋ ತುಣುಕನ್ನು ಎಕ್ಸ್​​ ತಾಣದಲ್ಲಿ ಪೋಸ್ಟ್ ಮಾಡಿರುವ ಪ್ರತಾಪ್ ಸಿಂಹ, ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ನಾಡದೇವತೆಯಾಗಿ ಒಪ್ಪಿಕೊಂಡು ಪುಷ್ಪಾರ್ಚನೆ ಮಾಡಿಯಾರೆ ಮುಷ್ತಾಕ್ ಬಾನು ಎಂದು ಪ್ರಶ್ನಿಸಿದ್ದಾರೆ.

ಈ ಹಿಂದೆ 2017ರಲ್ಲಿ ನಿಸಾರ್ ಅಹಮದ್ ಸಹ ದಸರಾ ಉದ್ಘಾಟನೆ ಮಾಡಿದ್ದರು. ಅವರು ತಾಯಿ ಚಾಮುಂಡೇಶ್ವರಿಯ ದೇಗುಲದ ಒಳಗೆ ಹೋಗದೆ ನೇರವಾಗಿ ವೇದಿಕೆ ಕಾರ್ಯಕ್ರಮಕ್ಕೆ ಬಂದು ದಸರಾ ಉದ್ಘಾಟನೆ ಮಾಡಿದ್ದರು. ಅಷ್ಟೇ ಅಲ್ಲ, ಮೊದಲ ಅವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ನಾಸ್ತಿಕರಾಗಿದ್ದ ಗಿರೀಶ್ ಕಾರ್ನಾಡ್ ಅವರಿಗೆ ದಸರಾ ಉದ್ಘಾಟಿಸಲು ಆಯ್ಕೆ ಮಾಡಿದ್ದರು. ಎರಡು ವರ್ಷಗಳ ಹಿಂದೆ ಹಂಸಲೇಖ ಅವರಿಗೂ ಅವಕಾಶ ನೀಡಿದರು. ಆಗಲೂ ಸಹ ಉದ್ಘಾಟಕರ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಸದ್ಯ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರನ್ನಾಗಿ‌ ಮುಸ್ಲಿಂ ಸಮುದಾಯದ ಮಹಿಳೆಯ ಆಯ್ಕೆ ವಿಚಾರವಾಗಿ ಮಾಜಿ ಸಂಸದ ಪ್ರತಾಪ ಸಿಂಹ ಸಾಂಸ್ಕೃತಿಕ ನಗರಿ ಮೈಸೂರಿನಲ್ಲೇ ಕಿಡಿ ಹಚ್ಚಿದ್ದಾರೆ. ಇದು ಮುಂದೆ ರಾಜ್ಯಾದ್ಯಂತ ಯಾವ ರೀತಿಯಾದ ಚರ್ಚೆಗೆ ಕಾರಣವಾಗುತ್ತದೆ ಎಂಬುದನ್ನು ಕಾದುನೋಡಬೇಕಿದೆ.

The post ಕನ್ನಡವನ್ನು ಭುವನೇಶ್ವರಿಯಾಗಿ ಒಪ್ಪದ ಈಕೆ, ತಾಯಿ ಚಾಮುಂಡೇಶ್ವರಿಯನ್ನು ಒಪ್ಪಿ ಪುಷ್ಪಾರ್ಚನೆ ಮಾಡಿಯಾರೇ: ಪ್ರತಾಪ್ ಸಿಂಹ ಆಕ್ಷೇಪ appeared first on Good News 24x7.

]]>
ಕಾಂಗ್ರೆಸ್ ನ ಮುಠಾಳ ವಕ್ತಾರ, ಮೂರು ಕಾಸಿಗೂ ಬೆಲೆ ಇಲ್ಲದ ವ್ಯಕ್ತಿ: ಕಾಂಗ್ರೆಸ್ ವಕ್ತಾರ ಎಂ.‌ ಲಕ್ಷ್ಮಣ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ https://www.goodnews24x7.com/congresss-muthal-spokesperson-a-person-worthless-pratap-simha-launched-a-one-word-attack-on-congress-spokesperson-m-laxman/ Fri, 08 Aug 2025 11:35:13 +0000 https://www.goodnews24x7.com/?p=5585 ಮೈಸೂರು:ಕಾಂಗ್ರೆಸ್ ವಕ್ತಾರ ಎಂ.‌ ಲಕ್ಷ್ಮಣ್ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಏಕ ವಚನದಲ್ಲಿ ವಾಗ್ದಾಳಿ “ಕಾಂಗ್ರೆಸ್ ನ ಮುಠಾಳ ವಕ್ತಾರ, ಕೆಪಿಸಿಸಿ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ಹಾಗೂ ಚಿಕ್ಕಬಳ್ಳಾಪುರ ಕೂಗುಮಾರಿ ಎಲ್ಲರ ಮೇಲೆ ನ್ಯಾಯಾಲಯದಲ್ಲಿ ಕೇಸ್…

The post ಕಾಂಗ್ರೆಸ್ ನ ಮುಠಾಳ ವಕ್ತಾರ, ಮೂರು ಕಾಸಿಗೂ ಬೆಲೆ ಇಲ್ಲದ ವ್ಯಕ್ತಿ: ಕಾಂಗ್ರೆಸ್ ವಕ್ತಾರ ಎಂ.‌ ಲಕ್ಷ್ಮಣ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ appeared first on Good News 24x7.

]]>

ಮೈಸೂರು:ಕಾಂಗ್ರೆಸ್ ವಕ್ತಾರ ಎಂ.‌ ಲಕ್ಷ್ಮಣ್ ವಿರುದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಏಕ ವಚನದಲ್ಲಿ ವಾಗ್ದಾಳಿ “ಕಾಂಗ್ರೆಸ್ ನ ಮುಠಾಳ ವಕ್ತಾರ, ಕೆಪಿಸಿಸಿ ಮಹಿಳಾ ವಿಭಾಗದ ಮಾಜಿ ಅಧ್ಯಕ್ಷೆ ಪುಷ್ಪ ಅಮರನಾಥ್ ಹಾಗೂ ಚಿಕ್ಕಬಳ್ಳಾಪುರ ಕೂಗುಮಾರಿ ಎಲ್ಲರ ಮೇಲೆ ನ್ಯಾಯಾಲಯದಲ್ಲಿ ಕೇಸ್ ಹಾಕಿದ್ದೇನೆ. ನನ್ನ ಬಗ್ಗೆ ವೈಯಕ್ತಿಕವಾಗಿ ಅವರು ಮಾತಾಡುವಂತಿಲ್ಲ. ಮಾತಾಡಿದರೆ ಅದು ನ್ಯಾಯಾಂಗ ನಿಂದನೆ ಆಗುತ್ತೆ. ಮುಠಾಳ‌ ವಕ್ತಾರ ನ ಬಳಿ ನನ್ನ ಬಗ್ಗೆ ಸಾಕ್ಷಿ ಇದ್ದರೆ ನ್ಯಾಯಾಲಯಕ್ಕೆ ಕೊಡಲಿ ಇಲ್ಲ ಮಾಧ್ಯಮಕ್ಕೆ ನೀಡಲಿ. ಸಾಕ್ಷಿ ಯಾಕೆ ಜೇಬಿನಲ್ಲಿ ಇಟ್ಟು ಕೊಂಡು ಓಡಾಡುತ್ತೀರಾ? ಅದರಲ್ಲಿ ನಿಮ್ಮ ಮನೆಯವರು ಏನಾದರೂ ಇದಾರ ? ಜೀವನದಲ್ಲಿ ಒಂದು ಆರೋಪಕ್ಕೂ ಉತ್ತರ ಕೊಡದ ಕಾಂಗ್ರೆಸ್ ವಕ್ತಾರ ಒಬ್ಬ ಮೂರು ಕಾಸಿಗೂ ಬೆಲೆ ಇಲ್ಲದ ವ್ಯಕ್ತಿ. ಕಾಂಗ್ರೆಸ್ ವಕ್ತಾರ ಪಾಲಿಕೆ ಚುನಾವಣೆ ಗೆ ನಿಂತರು ಸೋಲುತ್ತಾನೆ. ಕಾಂಗ್ರೆಸ್ ವಕ್ತಾರ ಸೀತಾರಾಮ್ ಒಕ್ಕಲಿಗರ ಬಗ್ಗೆ ಮಾತನಾಡಿದ ವಿಚಾರ ಒಕ್ಕಲಿಗರ ಬಗ್ಗೆ ಅವಹೇಳನ ಕಾರಿ ಆಗಿ ಮಾತಾಡಿದ ಸೀತಾರಾಮ್ ಬಗ್ಗೆ ಯಾಕೆ ಕಾಂಗ್ರೆಸ್ ಕ್ರಮ‌ ಕೈಗೊಂಡಿಲ್ಲ”

“ಒಕ್ಕಲಿಗರನ್ನು ಬೈಯಲು ಸಿಎಂ ಸಿದ್ದರಾಮಯ್ಯ ತಮ್ಮ ಶಿಷ್ಯನನ್ನು ಇಟ್ಟು ಕೊಂಡಿದ್ದಾರಾ?
ಸಿಎಂ ಸಿದ್ದರಾಮಯ್ಯ ನಾಲ್ವಡಿ ಅವರ ನಿಂದ‌ನೆಗೆ ಮಗನನ್ನು ಇಟ್ಟು ಕೊಂಡಿದ್ದಾರೆ. ಒಕ್ಕಲಿಗರ ನಿಂದನೆಗೆ ಸೀತಾರಾಮ್ ನನ್ನು ಬೆಳೆಸಿದ್ದಾರೆ” ಎಂದಿದ್ದಾರೆ .

The post ಕಾಂಗ್ರೆಸ್ ನ ಮುಠಾಳ ವಕ್ತಾರ, ಮೂರು ಕಾಸಿಗೂ ಬೆಲೆ ಇಲ್ಲದ ವ್ಯಕ್ತಿ: ಕಾಂಗ್ರೆಸ್ ವಕ್ತಾರ ಎಂ.‌ ಲಕ್ಷ್ಮಣ್ ವಿರುದ್ದ ಏಕ ವಚನದಲ್ಲಿ ವಾಗ್ದಾಳಿ ನಡೆಸಿದ ಪ್ರತಾಪ್ ಸಿಂಹ appeared first on Good News 24x7.

]]>
ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ !ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ. https://www.goodnews24x7.com/the-government-has-started-this-effort-to-grab-dharmasthala-former-mp-pratap-simha-responds/ Fri, 08 Aug 2025 11:20:11 +0000 https://www.goodnews24x7.com/?p=5580 ಮೈಸೂರು: ಮೈಸೂರಿನಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ . “ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ. ಮೂರು ತನಿಖಾ ಸಂಸ್ಥೆ ಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ…

The post ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ !ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ. appeared first on Good News 24x7.

]]>

ಮೈಸೂರು: ಮೈಸೂರಿನಲ್ಲಿ ಧರ್ಮಸ್ಥಳ ಪ್ರಕರಣ ಕುರಿತು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ . “ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ನೋವಿದೆ. ನಾವೆಲ್ಲಾ ಸೌಜನ್ಯ ಪರ.
ಮೂರು ತನಿಖಾ ಸಂಸ್ಥೆ ಯಿಂದ ತನಿಖೆ ಆಗಿದೆ. ಬೇರೆ ಇನ್ನೂ ಯಾವುದಾದರೂ ಮೂಲಕ ತನಿಖೆ ಆಗಬೇಕಿದ್ದರೆ ಸೌಜನ್ಯ ತಾಯಿ ಹೇಳಲಿ. ನಾವೇ ಅವರ ಪರ ನ್ಯಾಯಾಲಯಕ್ಕೆ ಅರ್ಜಿ ಹಾಕುತ್ತೇವೆ. ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಅಂತಾರೆ. ಇದು ವಾಸ್ತವದಲ್ಲಿ ಸಾಧ್ಯನೂ? ಧರ್ಮಸ್ಥಳ ಟಾರ್ಗೆಟ್ ಮಾಡಿರುವುದು ಹಿಂದೂ ಸಮಾಜಕ್ಕೆ ಅರ್ಥವಾಗುತ್ತಿಲ್ಲ.
ಧರ್ಮಸ್ಥಳದ ಬಗ್ಗೆ ಅಪನಂಬಿಕೆ ಮೂಡಿಸುವ ಕೆಲಸವನ್ನು ಇಸ್ಲಾಂ ಧರ್ಮದ ಯಾವನೋ ಒಬ್ಬ ಮಾಡುತ್ತಾನೆ.
ಅದನ್ನು ಹಿಂದೂಗಳು ನಂಬುತ್ತಿದ್ದಾರೆ.

ವಿರೇಂದ್ರ ಹೆಗ್ಡೆ ಕುರಿತು ಮಾತನಾಡಿದ ಅವರು “ಒಂದೇ ಒಂದು ಸಾಕ್ಷಿ ಇಲ್ಲದೆ ಯಾಕೆ ವಿರೇಂದ್ರ ಹೆಗ್ಡೆ ಅವರನ್ನು ಆರೋಪಿ ಸ್ಥಾನಕ್ಕೆ ತರಲಾಗಿದೆ? ಹಿಂದೂ ಸಮಾಜ ಪ್ರಜಾವಂತಿಕೆ ಕಳೆದು ಕೊಂಡಿದೆ.ರಾಜ್ಯ ಸರ್ಕಾರ ಧರ್ಮಸ್ಥಳದ ಧರ್ಮಾಧಿಕಾರಿ ಅವರನ್ನು ಅರೋಪಿ ಅಂತಾ ತೀರ್ಮಾನ ಮಾಡಿ ಅದಕ್ಕೆ ಬೇಕಾದ ಸಾಕ್ಷಿ ಈಗ ಹುಡುಕುತ್ತಿದೆ. ನೂರಾರು ಕೊಲೆ ಮಾಡಿಸಲು ಧರ್ಮಸ್ಥಳದ ಧರ್ಮಾಧಿಕಾರಿ ದಾವುದ್ ಇಬ್ರಾಹಿಂ ಥರ ದೊಡ್ಡ ಡಾನ್ ನಾ? ಧರ್ಮಸ್ಥಳವನ್ನು ಟಾರ್ಗೆಟ್ ಮಾಡಲಾಗಿದೆ. ಇದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ.”
ಆರೋಪಿಯನ್ನು ಮೊದಲೆ ನಿರ್ಧರಿಸಿ ಅದಕ್ಕೆ ಬೇಕಾದ ಸಾಕ್ಷಿ ಹುಡುಕುತ್ತಿರುವ ಮೊದಲ ಪ್ರಕರಣ ಇದು. ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿ ಜನರ ಭಾವನೆಗೆ ಧಕ್ಕೆ ತಂದವರು ಈಗ ಅಲ್ಲಿನ ನಂಬಿಕೆ ಮಾಡಲು ತನಿಖೆ ಮಾಡಿಸುತ್ತಿದ್ದಾರೆ. ಸೌಜನ್ಯ ಪ್ರಕರಣಕ್ಕೂ ಈಗ ನಡೆಯುತ್ತಿರುವ ಹುಡುಕಾಟಕ್ಕೂ ಸಂಬಂಧವೆ ಇಲ್ಲ. ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ. ಟೆಸ್ಟ್ ಮ್ಯಾಚ್ ಗಿಂತಾಲೂ ಹೆಚ್ಚಾಗಿ ಧರ್ಮಸ್ಥಳದ ವಿಚಾರ ದಿನ‌ ನಡೆಯುತ್ತಿದೆ . ನಮ್ಮ ಧರ್ಮಾಧಿಕಾರಿ ಹೆಗ್ಡೆ ಅವರು ಯಾಕೆ ನಿಮಗೆ ಟಾರ್ಗೆಟ್?
ಅನಾಮಿಕನ ಪೂರ್ವಪರ ಮೊದಲು ಬಹಿರಂಗ ಆಗಲಿ.” ಎಂದಿದ್ದಾರೆ .

The post ಸರ್ಕಾರ ಧರ್ಮಸ್ಥಳವನ್ನು ಕಬಳಿಸಲು ಈ ಪ್ರಯತ್ನ ಆರಂಭ ಮಾಡಿದೆ !ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ. appeared first on Good News 24x7.

]]>
ರಾಹುಲ್ ಗಾಂಧಿ ಮತಗಳ್ಳತನ ವಿಚಾರ : ಮೈಸೂರಿನಲ್ಲಿ ಗುಡುಗಿದ ಪ್ರತಾಪ್ ಸಿಂಹ . https://www.goodnews24x7.com/rahul-gandhis-vote-rigging-issue-pratap-simha-thundered-in-mysore/ Fri, 08 Aug 2025 10:58:15 +0000 https://www.goodnews24x7.com/?p=5576 ಮೈಸೂರು: ರಾಹುಲ್ ಗಾಂಧಿ ಹೋರಾಟ ವಿಚಾರವಾಗಿ ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.”ಸೋತು ಕಂಗೆಟ್ಟಿರುವ ಕಾಂಗ್ರೆಸ್ ತರಾವರಿ ಆರೋಪ ಮಾಡುತ್ತಿದೆ. ಇವಿಎಂ ಹಠಾವೋ ಚಳವಳಿಯನ್ನು ಕಾಂಗ್ರೆಸ್ ಶುರು ಮಾಡಿದೆ. ರಾಹುಲ್ ಗಾಂಧಿ ಮಾಡುವ ಆರೋಪಕ್ಕೆ ಸಾಕ್ಷಿ ಏನಿದೆ ? ಹೆಸರನ್ನೆ…

The post ರಾಹುಲ್ ಗಾಂಧಿ ಮತಗಳ್ಳತನ ವಿಚಾರ : ಮೈಸೂರಿನಲ್ಲಿ ಗುಡುಗಿದ ಪ್ರತಾಪ್ ಸಿಂಹ . appeared first on Good News 24x7.

]]>

ಮೈಸೂರು: ರಾಹುಲ್ ಗಾಂಧಿ ಹೋರಾಟ ವಿಚಾರವಾಗಿ
ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ.”ಸೋತು ಕಂಗೆಟ್ಟಿರುವ ಕಾಂಗ್ರೆಸ್ ತರಾವರಿ ಆರೋಪ ಮಾಡುತ್ತಿದೆ.
ಇವಿಎಂ ಹಠಾವೋ ಚಳವಳಿಯನ್ನು ಕಾಂಗ್ರೆಸ್ ಶುರು ಮಾಡಿದೆ. ರಾಹುಲ್ ಗಾಂಧಿ ಮಾಡುವ ಆರೋಪಕ್ಕೆ ಸಾಕ್ಷಿ ಏನಿದೆ ? ಹೆಸರನ್ನೆ ಫ್ರಾಂಡ್ ಮಾಡಿದ ವಂಶ ನಿಮ್ಮದು.
ಫಿರೋಜ್ ಗಾಂಧಿ ಅನ್ನೋ ಹೆಸರನ್ನು ಫ್ಹಿರೋಜ್ ಗಾಂಧಿ ಅಂತಾ ಬದಲಾಯಿಸಿದ ವಂಶ ನಿಮ್ಮದು. ಫ್ರಾಂಡ್ ಮಾಡಿಕೊಂಡು ಗಾಂಧಿ ಅಂತಾ ಸರ್ ನೇಮ್ ಇಟ್ಟು ಕೊಂಡು ವಂಶ ನಿಮ್ಮದು.”

ಮತಗಳ್ಳತನ ವಿಚಾರ ಕುರಿತು ” ನೀವು ಗೆದ್ದ ಕಡೆಯಲೆಲ್ಲಾ ಮತಗಳ್ಳತನ ಆಗಿಲ್ವಾ? ಜನಕ್ಕಿಂತಾ ಜಾಸ್ತಿ ಮತದಾರರು ಇದ್ದಾರೆ ಅಂತಾ ಹೇಳುವ ನಿಮ್ಮ ಆರೋಪಕ್ಕೆ ಸಾಕ್ಷಿಯೆ ಇಲ್ಲ.
ವಿಧಾನಸಭೆಗೆ ಒಂದು ರೀತಿ ಮತ ಹಾಕುತ್ತಾರೆ. ಲೋಕಸಭೆಗೆ ಒಂದು ರೀತಿ ಮತ ಹಾಕುತ್ತಾರೆ. ಚಾಮುಂಡೇಶ್ವರಿ ಉಪ ಚುನಾವಣೆಯಲ್ಲಿ ಸತ್ತವರು ಬಂದು ನನಗೆ ಮತ ಹಾಕಿದ್ದಾರೆ ಎಂದು ಈ ಹಿಂದೆ ಸಿದ್ದರಾಮಯ್ಯ ಹೇಳಿದ್ದರು. ಚಾಮುಂಡೇಶ್ವರಿ ಉಪ ಚುನಾವಣೆ ಗೆ ಫಿಟರ್ ಅಂತಾ ಚುನಾವಣಾ ಅಧಿಕಾರಿ ಹಾಕಿಸಿ ಕೊಂಡು ಬಂದು ನೀವು ಹೇಗೆ ಗೆದ್ದಿರಿ ಗೊತ್ತಿದೆ. ಟಿ. ನರಸೀಪುರದಲ್ಲಿ ಡಿಕ್ಲೇರ್ ಆದ ಫಲಿತಾಂಶ ಉಲ್ಟಾ ಮಾಡಿ ಗೆದ್ದಿದ್ದು ಮಹದೇವಪ್ಪ. ಅಕ್ರಮ ಎನ್ನುವುದು ಕಾಂಗ್ರೆಸ್ ಗೆ ಜನ್ಮತಾ ಬಂದಿದೆ. ಚನ್ನಪಟ್ಟಣ, ಸಂಡೂರು, ರಾಮನಗರ ಉಪ ಚುನಾವಣೆ ಗೆದ್ದಾಗ ಅದು ನ್ಯಾಯ ಸಮ್ಮತ ಚುನಾವಣೆ ನಾ? ಸಿಎಂ ಕೂಡ ರಾಹುಲ್ ಗಾಂಧಿ ಥರ ಮಾತನಾಡಿದರೆ ನಾವು ಏನೂ ಹೇಳಬೇಕು. ಪ್ರಿಯಾಂಕ ಖರ್ಗೆ ಮೊದಲು ತನ್ನ ಕ್ಷೇತ್ರದ ಬಗ್ಗೆ ಮಾತಾಡಲಿ. ಪ್ರಿಯಾಂಕ ಖರ್ಗೆ ಅಂತೂ ಕಾಲೇಜ್ ಓದಲಿಲ್ಲ.‌ ತಮ್ಮ ಕ್ಷೇತ್ರದ ಮಕ್ಕಳಾದರೂ ಓದೋಕೆ ಕಾಲೇಜ್ ಕಟ್ಟಿಸಲಿ‌ ” ಎಂದು ಮೈಸೂರಿನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಗುಡುಗಿದ್ದಾರೆ

The post ರಾಹುಲ್ ಗಾಂಧಿ ಮತಗಳ್ಳತನ ವಿಚಾರ : ಮೈಸೂರಿನಲ್ಲಿ ಗುಡುಗಿದ ಪ್ರತಾಪ್ ಸಿಂಹ . appeared first on Good News 24x7.

]]>