Pushpa Archives - Good News 24x7 https://www.goodnews24x7.com/tag/pushpa/ Kannada Sat, 23 Aug 2025 06:31:43 +0000 en-US hourly 1 https://wordpress.org/?v=6.9.4 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Pushpa Archives - Good News 24x7 https://www.goodnews24x7.com/tag/pushpa/ 32 32 ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್. https://www.goodnews24x7.com/pushpas-statement-that-angered-deepika-deepika-das-warned-pushpa/ Sat, 23 Aug 2025 06:31:43 +0000 https://www.goodnews24x7.com/?p=6507 ಪುಷ್ಪಾ ಅವರು ದೀಪಿಕಾ ದಾಸ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿದೆ. ದೀಪಿಕಾ ಅವರು ಪುಷ್ಪಾ ಅವರ ಕುಟುಂಬದವರೇ ಆದರೂ, ಪುಷ್ಪಾ ಅವರ ಟೀಕೆಗಳಿಗೆ ದೀಪಿಕಾ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪುಷ್ಪಾ ಅವರು ದೀಪಿಕಾ ಹೇಳಿಕೆಗೆ ಯಾವ ರೀತಿಯಲ್ಲಿ…

The post ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್. appeared first on Good News 24x7.

]]>

ಪುಷ್ಪಾ ಅವರು ದೀಪಿಕಾ ದಾಸ್ ಬಗ್ಗೆ ನೀಡಿದ ವಿವಾದಾತ್ಮಕ ಹೇಳಿಕೆಗಳು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಸುದ್ದಿಯಾಗಿದೆ. ದೀಪಿಕಾ ಅವರು ಪುಷ್ಪಾ ಅವರ ಕುಟುಂಬದವರೇ ಆದರೂ, ಪುಷ್ಪಾ ಅವರ ಟೀಕೆಗಳಿಗೆ ದೀಪಿಕಾ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಪುಷ್ಪಾ ಅವರು ದೀಪಿಕಾ ಹೇಳಿಕೆಗೆ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಯಶ್ ತಾಯಿ, ನಿರ್ಮಾಪಕಿ ಪುಷ್ಪಾ ಅವರು ‘ಕೊತ್ತಲವಾಡಿ’ ಸಿನಿಮಾ ರಿಲೀಸ್​ಗೂ ಮೊದಲು ಹಾಗೂ ಆ ಬಳಿಕ ನಿರಂತರವಾಗಿ ಸಂದರ್ಶನಗಳನ್ನು ನೀಡುತ್ತಲೇ ಬರುತ್ತಿದ್ದಾರೆ. ಅವರು ಈ ವೇಳೆ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಅವರು ಯಶ್ ಬಗ್ಗೆಯೇ ನಾನಾ ರೀತಿಯ ಹೇಳಿಕೆ ನೀಡಿದ್ದಾರೆ. ಅದೇ ರೀತಿ ಪುಷ್ಪಾ ಅವರು ನಟಿ ದೀಪಿಕಾ ದಾಸ್ ಬಗ್ಗೆ ಟೀಕೆ ಮಾಡಿದ್ದರು. ಇದು ದೀಪಿಕಾ ಅವರನ್ನು ಕೆರಳಿಸಿದೆ. ದೀಪಿಕಾ ಈ ಬಗ್ಗೆ ಓಪನ್ ಆಗಿ ಪೋಸ್ಟ್ ಹಾಕಿದ್ದಾರೆ. ದೀಪಿಕಾ ದಾಸ್​ಗೆ ಪುಷ್ಪಾ ಅವರು ದೊಡ್ಡಮ್ಮ ಆಗಬೇಕು. ಪುಷ್ಪಾ ಹಾಗೂ ದೀಪಿಕಾ ದಾಸ್ ತಾಯಿ ಸೋದರಿಯರು. ಹೀಗಾಗಿ, ಸಂಬಂಧದಲ್ಲಿ ಯಶ್ ಹಾಗೂ ದೀಪಿಕಾ ಅಣ್ಣ-ತಂಗಿ. ದೀಪಿಕಾ ಮಾತ್ರ ಎಲ್ಲಿಯೂ ಯಶ್ ನನ್ನ ಅಣ್ಣ ಎಂದು ಹೇಳಿಕೊಂಡು ಓಡಾಡಿಲ್ಲ.

ಪುಷ್ಪಾ ಹೇಳಿದ್ದೇನು? ಇತ್ತೀಚೆಗೆ ಅಶ್ವವೇಗ ಯೂಟ್ಯೂಬ್ ಚಾನೆಲ್​ನಲ್ಲಿ ಮಾತನಾಡುವಾಗ, ದೀಪಿಕಾಗೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಪುಷ್ಪಾ, ಅವರನ್ನು ಹೀಯಾಳಿಸಿದ್ದರು. ‘ದೀಪಿಕಾ ದಾಸ್ ಹಾಗೂ ನಮಗೆ ಆಗಿ ಬರಲ್ಲ. ಅವಳು ಯಾವ ಹೀರೋಯಿನ್ ಅಂತ ಆಯ್ಕೆ ಮಾಡಿಕೊಳ್ಳಬೇಕು? ಅವಳು ಏನು ಸಾಧನೆ ಮಾಡಿದ್ದಾಳೆ? ಅವರನ್ನು ನಾವು ದೂರದಲ್ಲೇ ಇಟ್ಟಿದ್ದೇವೆ’ ಎಂದು ಪುಷ್ಪಾ ಹೇಳಿದ್ದರು. ಟಿವಿ9 ಕನ್ನಡದ ಜೊತೆ ಮಾತನಾಡುವಾಗ, ‘ದೀಪಿಕಾಗೆ ನನ್ನ ಕಂಡರೆ ಭಯ. ಅವಳು ನನ್ನ ಹತ್ತಿರ ಹೆಚ್ಚು ಮಾತನಾಡಲ್ಲ’ ಎಂದಿದ್ದರು.

 

ದೀಪಿಕಾ ದಾಸ್ ಪ್ರತಿಕ್ರಿಯೆ ;ದೀಪಿಕಾ ದಾಸ್ ಅವರು ಕನ್ನಡ ಕಿರುತೆರೆ ನಟಿಯಾಗಿ ಗಮನ ಸೆಳೆದಿದ್ದಾರೆ. ಅವರು ‘ನಾಗಿಣಿ’ ಧಾರಾವಾಹಿಯಲ್ಲಿ ಕಾಣಿಸಿಕೊಂಡು ಸಾಕಷ್ಟು ಗಮನ ಸೆಳೆದರು. ಅಲ್ಲದೆ, ಬಿಗ್ ಬಾಸ್ ​ಶೋಗೆ ಅವರು ಎರಡು ಬಾರಿ ಆಗಮಿಸಿದ್ದರು. ಈ ಮೂಲಕ ದೊಡ್ಡ ಹೆಸರು ಮಾಡಿದ್ದಾರೆ. ಅವರು ಈಗ ವಿವಾಹ ಆಗಿ ಸಂಸಾರದ ಕಡೆ ಗಮನ ಹರಿಸಿದ್ದಾರೆ. ಹೀಗಿರುವಾಗಲೇ ದೀಪಿಕಾ ಬಗ್ಗೆ ಪುಷ್ಪಾ ಈ ರೀತಿಯ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರೋ ದೀಪಿಕಾ ದಾಸ್, ‘ಹೊಸ ಕಲಾವಿದರನ್ನು ಬೆಳೆಸೋ ಜನರು ಕಲಾವಿದರಿಗೆ ಬೆಲೆ ಕೊಡೋದ್ದನ್ನು ಕಲಿತಿರಬೇಕು. ಇಲ್ಲಿವರೆಗೂ ಯಾರ ಹೆಸರನ್ನು ಹೇಳಿಕೊಂಡು ಬಂದಿಲ್ಲ ಮುಂದೇನೂ ಬರಲ್ಲ. ಕೆಲವರಿಗೆ ಬೆಲೆಕೊಟ್ಟ ಮಾತ್ರಕ್ಕೆ ಯಾರಿಗೂ ಯಾರ ಮೇಲೂ ಭಯ ಇದೆ ಅಂತ ಅಲ್ಲ. ಅದು ಅಮ್ಮ ಆದರೂ ಸರಿ, ದೊಡ್ಡಮ್ಮ ಆದರೂ ಸರಿ ಅಥವಾ ಪುಷ್ಪಮ್ಮ ಆದರೂ ಸರಿ. ವಿಥ್‌ ಡ್ಯೂ ರೆಸ್ಪೆಕ್ಟ್ ಸ್ಟಾ‌ರ್ ಆಫ್ ಅವರ್ ಇಂಡಸ್ಟ್ರಿ. ನಾನು ಯಾವ ದೊಡ್ಡ ನಟಿ ಅಲ್ಲದಿದ್ದರೂ, ಏನು ಸಾಧನೆ ಮಾಡದಿದ್ದರೂ ನನ್ನ ಬಗ್ಗೆ ಹೀನಾಯವಾಗಿ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ’ ಎಂದು ದೀಪಿಕಾ ಎಚ್ಚರಿಸಿದ್ದಾರೆ.

The post ಪುಷ್ಪಾಗೆ ಎಚ್ಚರಿಸಿದ ದೀಪಿಕಾ ದಾಸ್. appeared first on Good News 24x7.

]]>
ಯಶ್ ತಾಯಿ ಪುಷ್ಪಾ ಎಚ್ಚರಿಕೆ ? ಮುಖ್ಯಮಂತ್ರಿ ಎದುರು ಹೋಗ್ತೀನಿ ದೂರು ಸ್ವೀಕರಿಸದ್ದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ! https://www.goodnews24x7.com/yashs-mother-pushpa-warns-will-go-to-the-chief-minister-if-the-complaint-is-not-accepted-we-will-fight-fiercely/ Tue, 12 Aug 2025 11:57:31 +0000 https://www.goodnews24x7.com/?p=5955 ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರ ಆಗಸ್ಟ್ 1ರಂದು ಬಿಡುಗಡೆಯಾಯಿತು. ಸಿನಿಮಾವನ್ನು ನೋಡದೆ ನೆಗೆಟಿವ್ ವಿಮರ್ಶೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿನ ಈ ರೀತಿಯ ನಕಾರಾತ್ಮಕ ಪ್ರಚಾರದಿಂದ ಕನ್ನಡ ಚಿತ್ರರಂಗಕ್ಕೆ ಆಗುತ್ತಿರುವ ಹಾನಿಯ…

The post ಯಶ್ ತಾಯಿ ಪುಷ್ಪಾ ಎಚ್ಚರಿಕೆ ? ಮುಖ್ಯಮಂತ್ರಿ ಎದುರು ಹೋಗ್ತೀನಿ ದೂರು ಸ್ವೀಕರಿಸದ್ದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ! appeared first on Good News 24x7.

]]>

ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಚಿತ್ರ ಆಗಸ್ಟ್ 1ರಂದು ಬಿಡುಗಡೆಯಾಯಿತು. ಸಿನಿಮಾವನ್ನು ನೋಡದೆ ನೆಗೆಟಿವ್ ವಿಮರ್ಶೆಗಳನ್ನು ಹಂಚಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಕೋರಿದ್ದಾರೆ. ಅವರು ಸಾಮಾಜಿಕ ಜಾಲತಾಣಗಳಲ್ಲಿನ ಈ ರೀತಿಯ ನಕಾರಾತ್ಮಕ ಪ್ರಚಾರದಿಂದ ಕನ್ನಡ ಚಿತ್ರರಂಗಕ್ಕೆ ಆಗುತ್ತಿರುವ ಹಾನಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ‘ಕೊತ್ತಲವಾಡಿ’ ಸಿನಿಮಾ ಆಗಸ್ಟ್ 1ರಂದು ರಿಲೀಸ್ ಆಯಿತು. ಈ ಸಿನಿಮಾಗೆ ಪೃಥ್ವಿ ಅಂಬರ್ ಹೀರೋ. ಗೋಪಾಲ್ ದೇಶಪಾಂಡೆ, ರಾಜೇಶ್ ನಟರಂಗ ಸೇರಿದಂತೆ ಅನೇಕರು ಈ ಚಿತ್ರದ ಭಾಗ ಆಗಿದ್ದಾರೆ. ಈ ಸಿನಿಮಾ ರಿಲೀಸ್​ಗೂ ಮೊದಲೇ ಪುಷ್ಪಾ ಅವರು ಸಾಕಷ್ಟು ಸಂದರ್ಶನ ನೀಡಿದ್ದರು. ಸಿನಿಮಾ ರಿಲೀಸ್ ಬಳಿಕವೂ ಇದನ್ನು ಮುಂದುವರಿಸಿದ್ದಾರೆ. ಅನೇಕ ಕಡೆಗಳಲ್ಲಿ ಪುಷ್ಪಾ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಅವರು ಸರ್ಕಾರಕ್ಕೆ ಪ್ರತಿಭಟನೆಯ ಎಚ್ಚರಿಕೆ ನೀಡಿದ್ದಾರೆ.

ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧೆ ಹಾಗೂ ವೈರತ್ವ ಇದ್ದೇ ಇದೆ. ಸಿನಿಮಾ ರಂಗ ಕೂಡ ಇದಕ್ಕೆ ಹೊರತಾಗಿಲ್ಲ. ಚಿತ್ರವನ್ನು ನೋಡದೇ ಕೆಲವರು ಸೋಶಿಯಲ್ ಮೀಡಿಯಾದಲ್ಲಿ ನೆಗೆಟಿವ್ ವಿಮರ್ಶೆ ಹಂಚುವ ಕೆಲಸ ಮಾಡುತ್ತಿದ್ದಾರಂತೆ. ಈ ರೀತಿಯ ಆರೋಪವನ್ನು ಪುಷ್ಪಾ ಮಾಡಿದ್ದಾರೆ. ಜೊತೆಗೆ ಇಂಥವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದು ಪುಷ್ಪಾ ಕೋರಿಕೆ.

‘ಟಾಕಿಂಗ್ ಪ್ಯಾರಟ್’ ಹೆಸರಿನ ಯೂಟ್ಯೂಬ್ ಚಾನೆಲ್​ಗೆ ಪುಷ್ಪಾ ಸಂದರ್ಶನ ನೀಡಿದ್ದಾರೆ. ‘ನಮ್ಮ ಸಿನಿಮಾದ ಪ್ರಚಾರ ನೋಡಿ ಕೆಲವರು ನೆಗೆಟಿವ್ ಟಾಕ್​ ಹಬ್ಬಿಸಿದ್ದರು. ಸಿನಿಮಾ ಮಾಡುವವರಿಗೆ ನಿಜಕ್ಕೂ ಕಷ್ಟ ಇದೆ. ಇಲ್ಲಿ ನೂರು ತೊಂದರೆ ಇದೆ. ಮುಖ್ಯಮಂತ್ರಿ ಎದುರು ಹೋಗ್ತೀನಿ. ಇದನ್ನು ತಡೆಯಿರಿ ಎಂದು ಕೇಳುತ್ತೇನೆ. ಇದು ಸರ್ಕಾರದ ಕೆಲಸ’ ಎಂದು ಪುಷ್ಪಾ ಹೇಳಿದ್ದಾರೆ.

‘ಸಿನಿಮಾ ನೋಡಿ ಬಂದರೆ ತೊಂದರೆ ಇಲ್ಲ. ಆದರೆ, ಸುಮಾರು ಜನರು ಸಿನಿಮಾ ನೋಡದೇ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಳ್ಳುತ್ತಿದ್ದಾರೆ. ಇದರಿಂದ ಅನೇಕರಿಗೆ ತೊಂದರೆ ಆಗುತ್ತಿದೆ. ನಾವು ದೂರು ತೆಗೆದುಕೊಂಡು ಬಂದಾಗ ಇದನ್ನು ಸ್ವೀಕರಿಸಬೇಕು. ಇಲ್ಲವಾದಲ್ಲಿ ರಾಕ್​ಲೈನ್​ ವೆಂಕಟೇಶ್​ಗೆ ಹೇಳಿ ಉಗ್ರ ಹೋರಾಟ ಮಾಡುತ್ತೇವೆ’ ಎಂದು ಪುಷ್ಪಾ ಅವರು ಹೇಳಿದ್ದಾರೆ.

‘ಕನ್ನಡ ಚಿತ್ರರಂಗದಲ್ಲಿ ಸಿನಿಮಾಗಳು ಏಕೆ ಓಡುತ್ತಿಲ್ಲ ಎಂಬುದಕ್ಕೆ ಈ ರೀತಿಯ ಕುತಂತ್ರಗಳೇ ಕಾರಣ. ನನ್ನ ದುಡ್ಡು ನಾನು ತಡೆದುಕೊಳ್ಳುತ್ತೇನೆ. ಆದರೆ, ಇನ್ನೊಬ್ಬರಿಗೆ ಕಷ್ಟ ಆಗಬಹುದು. ನಾವು ಒಂದು ನಿರ್ಧಾರಕ್ಕೆ ಬರಲೇಬೇಕು. ಮುಂದಿನ ದಿನಗಳಲ್ಲಿ ಅದನ್ನು ಮಾಡಿಯೇ ಮಾಡುತ್ತೇನೆ’ ಎಂದು ಅವರು ಹೇಳಿದ್ದಾರೆ.

The post ಯಶ್ ತಾಯಿ ಪುಷ್ಪಾ ಎಚ್ಚರಿಕೆ ? ಮುಖ್ಯಮಂತ್ರಿ ಎದುರು ಹೋಗ್ತೀನಿ ದೂರು ಸ್ವೀಕರಿಸದ್ದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ! appeared first on Good News 24x7.

]]>