RTI Archives - Good News 24x7 https://www.goodnews24x7.com/tag/rti/ Kannada Tue, 26 May 2026 09:32:45 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg RTI Archives - Good News 24x7 https://www.goodnews24x7.com/tag/rti/ 32 32 RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ. https://www.goodnews24x7.com/rti-activist-gangarajus-bail-application-postponed-to-tomorrow/ Tue, 26 May 2026 09:32:45 +0000 https://www.goodnews24x7.com/?p=9535 ಮೈಸೂರು : RTI ಕಾರ್ಯಕರ್ತ ಗಂಗರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ…

The post RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ. appeared first on Good News 24x7.

]]>

ಮೈಸೂರು : RTI ಕಾರ್ಯಕರ್ತ ಗಂಗರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಅರ್ಜಿ ವಿಚಾರಣೆ ನಡೆಯಿತು.

ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡುವಂತೆ ಸರ್ಕಾರಿ ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದರು. ಈ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಜಾಮೀನು ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿತು.

RTI ಕಾರ್ಯಕರ್ತ ಗಂಗರಾಜು ವಿರುದ್ಧ ಹಣಕಾಸು ವ್ಯವಹಾರ ಸಂಬಂಧ ವ್ಯಕ್ತಿಯೊಬ್ಬರನ್ನು ಅಪಾಯಕಾರಿ ರೀತಿಯಲ್ಲಿ ಕಾರಿನ ಬ್ಯಾನೆಟ್ ಮೇಲೆ ಕೂರಿಸಿಕೊಂಡು ಕಾರು ಚಲಾಯಿಸಿದ ಆರೋಪ ಕೇಳಿಬಂದಿದೆ. ಈ ಸಂಬಂಧ ಮೈಸೂರಿನ ಕುವೆಂಪು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಪ್ರಕರಣದಲ್ಲಿ ಆರೋಪಿ ಪರವಾಗಿ ಹಿರಿಯ ವಕೀಲ ಎಸ್. ಲೋಕೇಶ್ ವಕಾಲತ್ತು ವಹಿಸಿಕೊಂಡಿದ್ದಾರೆ. ನಾಳೆಯ ವಿಚಾರಣೆಯಲ್ಲಿ ಸರ್ಕಾರದ ಪರದಿಂದ ಆಕ್ಷೇಪಣೆ ಸಲ್ಲಿಕೆಯಾಗುವ ಸಾಧ್ಯತೆ ಇದ್ದು, ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಿರೀಕ್ಷಿಸಲಾಗಿದೆ.

The post RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ. appeared first on Good News 24x7.

]]>
ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ https://www.goodnews24x7.com/mud-special-tahsildar-k-v-rajashekar-suspended-allegedly-issued-purchase-order-illegally/ Tue, 28 Oct 2025 09:35:49 +0000 https://www.goodnews24x7.com/?p=7899 ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ…

The post ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ appeared first on Good News 24x7.

]]>

ಕ್ರಮಬದ್ದವಲ್ಲದ ವ್ಯಕ್ತಿಗಳಿಗೆ ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ ಸಾಬೀತಾದ ಹಿನ್ನಲೆ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ(MDA) ದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಲಾಗಿದೆ.ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತಾಲಯದ ಆಯುಕ್ತರಾದ ಲತಾ ರವರ ಆದೇಶದ ಮೇರೆಗೆ ಮುಡಾ ಆಯುಕ್ತರು ಸಸ್ಪೆಂಡ್ ಆರ್ಡರ್ ಹೊರಡಿಸಿದ್ದಾರೆ.ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ರವರು ನೀಡಿದ ದೂರಿನ ಅನ್ವಯದಂತೆ ದಾಖಲೆಗಳನ್ನ ಪರಿಶೀಲಿಸಿ ಕ್ರಮ ಕೈಗೊಂಡಿದ್ದಾರೆ.

ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್…ಕರ್ತವ್ಯ ಲೋಪ ಸಾಬೀತಾದ ಹಿನ್ನಲೆ ಸರ್ಕಾರದ ಆದೇಶ…RTI ಕಾರ್ಯಕರ್ತ ನಾಗೇಂದ್ರ ನೀಡಿದ ದೂರು…

ಮೈಸೂರಿನ ಗೋಕುಲಂ ಬಡಾವಣೆ 3 ನೇ ಹಂತ ಮನೆ ಸಂಖ್ಯೆ 867 ಕ್ಕೆ 02-04-1982 ರಂದು ಲಿಲಿಯನ್ ಶಾರದಾ ಜೋಸೆಫ್ w/o ಅನ್ನಿ ಜೋಸೆಫ್ ಎಂಬುವರಿಗೆ ಮುಡಾ ದಿಂದ 30*40 ವಿಸ್ತೀರ್ಣ ನಿವೇಶನ ಮಂಜೂರಾಗಿದೆ.ಇದಕ್ಕೆ ಕರಾರು ಪತ್ರ ಸಹ ನೀಡಲಾಗಿದೆ.03-09-1983 ರಲ್ಲಿ ಲಿಲಿಯನ್ ಜೋಸೆಫ್ ಮರಣ ಹೊಂದಿರುತ್ತಾರೆ.06-04-2024 ರ ವರೆಗೂ ಸದರಿ ಸ್ವತ್ತು ಯಾರಿಗೂ ವರ್ಗಾವಣೆ ಆಗಿರುವುದಿಲ್ಲ.ಆದರೆ 26-03-2024 ರಂದು ಕ್ರಮಬದ್ದ ವಾರಸುದಾರರಲ್ಲದವರಿಗೆ ಅಂದರೆ ನೆವಿಲ್ ಮಾರ್ಕಸ್ ಜೋಸೆಫ್ ರವರ ಹೆಸರಿಗೆ ಕ್ರಮಬದ್ದ ವಂಶವೃಕ್ಷ ಪಡೆಯದೆ ಪೌತಿಖಾತೆ ವರ್ಗಾವಣೆ ಮಾಡಿ ಜೊತೆಗೆ ತುಂಡು ಜಾಗವನ್ನೂ ಸಹ ಮಂಜೂರು ಮಾಡಿ ಹಕ್ಕುಪತ್ರ ನೀಡಲಾಗಿದೆ.ಈ ಅಕ್ರಮದ ಬಗ್ಗೆ ಆರ್.ಟಿ.ಐ.ಕಾರ್ಯಕರ್ತರಾದ ಬಿ.ಎನ್.ನಾಗೇಂದ್ರ ರವರು ದಾಖಲೆಗಳನ್ನ ಪಡೆದು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಮನವಿ ಮಾಡಿ ದೂರು ನೀಡಿದ್ದರು.

ಈ ಸಂಬಂಧ ಪರಿಶೀಲನೆ ನಡೆಸಿದಾಗ ಮುಡಾದ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಹಾಗೂ ವ್ಯವಸ್ಥಾಪಕ ಸೋಮಸುಂದ್ರು ರವರ ಕೈವಾಡ ಇರುವುದು ಬೆಳಕಿಗೆ ಬಂದಿದೆ.ಮುಡಾದಲ್ಲಿ ಯಾವುದೇ ಕ್ರಯಪತ್ರ ನೀಡುವ ಹಾಗೂ ಅನುಮೋದಿಸುವ ಅಧಿಕಾರ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿ ಆದೇಶವಾಗಿರುತ್ತದೆ.ಆದರೆ ಈ ಇಬ್ಬರು ಅಧಿಕಾರಿಗಳು ಕಾರ್ಯದರ್ಶಿಯವರಿಂದ ಅನುಮೋದನೆ ಪಡೆಯಲು ಕಡತಗಳನ್ನು ಮಂಡಿಸದೆ ಆಯುಕ್ತರ ಆದೇಶ ಮೀರಿ ತಮ್ಮ ಹಂತದಲ್ಲಿಯೇ ತಿದ್ದುಪಡಿ ಕ್ರಯಪತ್ರ ಮಾಡಿ ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡಿರುವುದು ಬೆಳಕಿಗೆ ಬಂದಿದೆ.ಈ ಅಕ್ರಮದ ಹಿನ್ನಲೆ ಈಗಾಗಲೇ ವ್ಯವಸ್ಥಾಪಕರಾದ ಸೋಮಸುಂದ್ರ ಅಮಾನತು ಶಿಕ್ಷೆ ಅನುಭವಿಸುತ್ತಿದ್ದಾರೆ.ವಿಶೇಷ ತಹಸೀಲ್ದಾರ್ ವಿರುದ್ದವೂ ಕ್ರಮ ಕೈಗೊಳ್ಳಬೇಕೆಂದು ಆರ್.ಟಿ.ಐ.ಕಾರ್ಯಕರ್ತ ಬಿ.ಎನ್.ನಾಗೇಂದ್ರ ಸರ್ಕಾರಕ್ಕೆ ಮಾಡಿದ ಮನವಿಗೆ ಸ್ಪಂದನೆ ದೊರೆತಿದೆ.ಮುಡಾ ಕಾರ್ಯದರ್ಶಿಗಳು ಅಕ್ರಮ ನಡೆದಿರುವುದಾಗಿ ವರದಿಯನ್ನೂ ಸಹ ನೀಡಿದ್ದಾರೆ.

ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿಗಳ ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯುಕ್ತರ ಆದೇಶದಂತೆ ಮುಡಾ (MDA) ಆಯುಕ್ತರು ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ರವರನ್ನ ಅಮಾನತ್ತಿನಲ್ಲಿ ಇಡುವಂತೆ ಆದೇಶ ಹೊರಡಿಸಿದ್ದಾರೆ…

The post ಮುಡಾ ವಿಶೇಷ ತಹಸೀಲ್ದಾರ್ ಕೆ.ವಿ.ರಾಜಶೇಖರ್ ಸಸ್ಪೆಂಡ್… ಅಕ್ರಮವಾಗಿ ಕ್ರಯಪತ್ರ ನೀಡಿದ ಆರೋಪ appeared first on Good News 24x7.

]]>