TamilNadu Archives - Good News 24x7 https://www.goodnews24x7.com/tag/tamilnadu/ Kannada Wed, 01 Jul 2026 07:42:35 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg TamilNadu Archives - Good News 24x7 https://www.goodnews24x7.com/tag/tamilnadu/ 32 32 ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ https://www.goodnews24x7.com/tamil-nadu-government-moves-supreme-court/ Wed, 01 Jul 2026 07:39:35 +0000 https://www.goodnews24x7.com/?p=9717 ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ…

The post ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ appeared first on Good News 24x7.

]]>

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.

 

ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಈ ಆದೇಶವು 1958ರ ಪ್ರಾಣಿ ಸಂರಕ್ಷಣಾ ಕಾಯ್ದೆಯ ವ್ಯಾಪ್ತಿಯನ್ನು ಮೀರಿದೆ ಎಂದು ಸರ್ಕಾರ ವಾದಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿ, ಅದನ್ನು ತಡೆಯುವಂತೆ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹ*ತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್​​ ಹೇಳಿತ್ತು.
ಮದ್ರಾಸ್ ಹೈಕೋರ್ಟ್​​ನ ಗೋಹ*ತ್ಯೆ ನಿಷೇಧ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ

ಜುಲೈ 01 ನವದೆಹಲಿ : ರಾಜ್ಯದಲ್ಲಿ ಗೋಹ*ತ್ಯೆಗೆ ಸಂಪೂರ್ಣ ನಿಷೇಧ ಹೇರಿದ್ದ ಮದ್ರಾಸ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ. ಹೈಕೋರ್ಟ್ ಆದೇಶವು ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ವ್ಯಾಪ್ತಿಯನ್ನು ಮೀರಿ ನೀಡಲಾಗಿದೆ ಎಂದು ಸರ್ಕಾರ ತನ್ನ ಅರ್ಜಿಯಲ್ಲಿ ವಾದಿಸಿದೆ. ಮೇ 27ರಂದು ನ್ಯಾಯಮೂರ್ತಿಗಳಾದ ಜಿ.ಆರ್. ಸ್ವಾಮಿನಾಥನ್ ಮತ್ತು ವಿ. ಲಕ್ಷ್ಮೀನಾರಾಯಣ್ ಅವರ ವಿಭಾಗೀಯ ಪೀಠವು, ಕಾಯ್ದೆಯಡಿ ಅನುಮತಿಸಲಾದ ಸಂದರ್ಭಗಳನ್ನು ಹೊರತುಪಡಿಸಿ, ಬಕ್ರೀದ್ ಸೇರಿದಂತೆ ಯಾವುದೇ ದಿನ ಹಸು ಅಥವಾ ಕರುವಿನ ಹ*ತ್ಯೆ ನಡೆಯದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿತ್ತು.

ಸರ್ಕಾರದ ವಾದವೇನು?
ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆ–1958ರ ಸೆಕ್ಷನ್ 4ರ ಪ್ರಕಾರ, 10 ವರ್ಷ ಮೇಲ್ಪಟ್ಟ, ಕೆಲಸಕ್ಕೆ ಅಥವಾ ಸಂತಾನೋತ್ಪತ್ತಿಗೆ ಅಯೋಗ್ಯವೆಂದು ಸಂಬಂಧಪಟ್ಟ ಪ್ರಾಧಿಕಾರದಿಂದ ಪ್ರಮಾಣೀಕರಿಸಲ್ಪಟ್ಟ ಹಸುವನ್ನು ಮಾತ್ರ ವ*ಧೆ ಮಾಡಲು ಅವಕಾಶವಿದೆ. ಆದರೆ ಹೈಕೋರ್ಟ್ ಈ ಕಾನೂನು ಚೌಕಟ್ಟನ್ನು ಮೀರಿ ಸಂಪೂರ್ಣ ನಿಷೇಧ ಹೇರಿರುವುದು ಕಾನೂನು ವ್ಯಾಪ್ತಿಯನ್ನು ಮೀರಿದ ಕ್ರಮ ಎಂದು ಸರ್ಕಾರ ಹೇಳಿದೆ.

ಹೈಕೋರ್ಟ್​​ ಆದೇಶ ಏನು?
ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗೋಹ*ತ್ಯೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಮಕ್ಕಳ್ ಕಚ್ಚಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸೂರ್ಯ, ಅದನ್ನು ತಡೆಯುವಂತೆ ಹೈಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ವೇಳೆ ಭಾರತ ಸಂವಿಧಾನದ ವಿಧಿ 48ನ್ನು ಉಲ್ಲೇಖಿಸಿದ್ದ ಹೈಕೋರ್ಟ್, ಹಸು, ಕರು ಹಾಗೂ ಹಾಲು ಮತ್ತು ಕೃಷಿಗೆ ಉಪಯುಕ್ತ ಜಾನುವಾರುಗಳ ಹತ್ಯೆಯನ್ನು ತಡೆಯಲು ರಾಜ್ಯ ಕ್ರಮ ಕೈಗೊಳ್ಳಬೇಕು ಎಂದು ಹೇಳಿತ್ತು. ಬಕ್ರೀದ್ ಸಂದರ್ಭದಲ್ಲಿ ಗೋಹ*ತ್ಯೆ ಮಾಡುವುದು ಇಸ್ಲಾಂ ಧರ್ಮದ ಕಡ್ಡಾಯ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ನೀಡಿದ್ದ ತೀರ್ಪುಗಳನ್ನೂ ಉಲ್ಲೇಖಿಸಿತ್ತು.

ಬಹಳಷ್ಟು ಮುಸ್ಲಿಮರು ಬಕ್ರೀದ್ ದಿನ ಗೋವನ್ನು ಬ*ಲಿ ನೀಡುವುದಿಲ್ಲ. ಗೋವನ್ನು ಬ*ಲಿ ನೀಡುವುದು ಇಸ್ಲಾಂ ಧರ್ಮದ ಕಡ್ಡಾಯ ಆಚರಣೆಯಲ್ಲ. ಬಕ್ರೀದ್ ಸಂದರ್ಭದಲ್ಲಿ ಯಾವುದೇ ಪ್ರಾಣಿಯನ್ನು ಬ*ಲಿ ನೀಡಬಹುದು; ಅದಕ್ಕೆ ಗೋಹತ್ಯೆಯೇ ಏಕೈಕ ಮಾರ್ಗವಲ್ಲ ಎಂದು ಸುಪ್ರೀಂ ಕೋರ್ಟ್ ಹಿಂದಿನ ತೀರ್ಪಿನಲ್ಲಿ ಹೇಳಿರುವುದನ್ನು ಹೈಕೋರ್ಟ್ ತಿಳಿಸಿತ್ತು. ಆದರೀಗ ಹೈಕೋರ್ಟ್​​ ಆದೇಶವನ್ನು ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ

 

 

The post ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ತಮಿಳುನಾಡು ಸರ್ಕಾರ appeared first on Good News 24x7.

]]>
ತಮಿಳುನಾಡಲ್ಲಿ 717 ಬಾರ್ ಗಳಿಗೆ ಬೀಗ CM ವಿಜಯ್ ಖಡಕ್ ಆರ್ಡರ್ ! https://www.goodnews24x7.com/cm-vijay-orders-closure-of-717-bars-in-tamil-nadu/ Tue, 12 May 2026 08:59:21 +0000 https://www.goodnews24x7.com/?p=9504 ತಮಿಳುನಾಡಿನಾದ್ಯಂತ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಮದ್ಯದಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಲು ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಆದೇಶಿಸಿದ್ದಾರೆ. ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಂಗಳವಾರ ತಮ್ಮ ಮೊದಲ…

The post ತಮಿಳುನಾಡಲ್ಲಿ 717 ಬಾರ್ ಗಳಿಗೆ ಬೀಗ CM ವಿಜಯ್ ಖಡಕ್ ಆರ್ಡರ್ ! appeared first on Good News 24x7.

]]>

ತಮಿಳುನಾಡಿನಾದ್ಯಂತ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ವ್ಯಾಪ್ತಿಯಲ್ಲಿರುವ 717 ಮದ್ಯದಂಗಡಿಗಳನ್ನು ಎರಡು ವಾರಗಳಲ್ಲಿ ಮುಚ್ಚಲು ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಆದೇಶಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಮಂಗಳವಾರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ಧಾರದಲ್ಲಿ, ಜೋಸೆಫ್ ವಿಜಯ್ ಈ ಆದೇಶವನ್ನು ಹೊರಡಿಸಿದ್ದಾರೆ.

ದೇವಾಲಯಗಳು, ಮಸೀದಿಗಳು, ಚರ್ಚ್‌ಗಳು, ಶಾಲೆಗಳು, ಕಾಲೇಜುಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ತಮಿಳುನಾಡು ರಾಜ್ಯ ಮಾರುಕಟ್ಟೆ ನಿಗಮ (ಟ್ಯಾಸ್ಮ್ಯಾಕ್) ಮಳಿಗೆಗಳನ್ನು ಮುಂದಿನ ಎರಡು ವಾರಗಳಲ್ಲಿ ಮುಚ್ಚಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ.ತಮಿಳುನಾಡು ಸರ್ಕಾರದ ಪ್ರಕಾರ, ರಾಜ್ಯದಲ್ಲಿ ಪ್ರಸ್ತುತ ಒಟ್ಟು 4,765 ಮದ್ಯದಂಗಡಿಗಳಿವೆ. ಮುಚ್ಚಲು ಗುರುತಿಸಲಾದ 717 ರಲ್ಲಿ 276 ಪೂಜಾ ಸ್ಥಳಗಳ ಬಳಿ, 186 ಶಿಕ್ಷಣ ಸಂಸ್ಥೆಗಳ ಬಳಿ ಮತ್ತು 255 ಬಸ್ ನಿಲ್ದಾಣಗಳ ಬಳಿ ಇವೆ.

ಇದನ್ನೂ ನೋಡಿ : https://www.instagram.com/reel/DYL_4HpET3c/?utm_source=ig_web_copy_link&igsh=MzRlODBiNWFlZA==

ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳಲ್ಲಿ ವಿಜಯ್ ಅವರ ಈ ಕ್ರಮವು ಮೊದಲ ಪ್ರಮುಖ ನೀತಿ ಹಸ್ತಕ್ಷೇಪವಾಗಿದೆ ಮತ್ತು ಸೂಕ್ಷ್ಮ ಸಾರ್ವಜನಿಕ ಪ್ರದೇಶಗಳಲ್ಲಿ ಮದ್ಯದ ಲಭ್ಯತೆಯ ಕುರಿತಾದ ಕಳವಳಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ಪ್ರಮುಖ ಸಾಮಾಜಿಕ ಸುಧಾರಣಾ ಕ್ರಮವಾಗಿ ಹೊಸ ಸರ್ಕಾರವು ಇದನ್ನು ಬಿಂಬಿಸುತ್ತಿದೆ.

ಆದಾಗ್ಯೂ, ಟಾಸ್ಮ್ಯಾಕ್ ರಾಜ್ಯದ ಅತಿದೊಡ್ಡ ಆದಾಯ ಗಳಿಸುವ ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಒಂದಾಗಿದೆ ಮತ್ತು ಅದರ ಮಳಿಗೆಗಳನ್ನು ಮುಚ್ಚುವ ನಿರ್ಧಾರವು ತಮಿಳುನಾಡು ಸರ್ಕಾರಕ್ಕೆ ಅದರ ಆರ್ಥಿಕ ಪರಿಣಾಮಗಳು ಮತ್ತು ಕಲ್ಯಾಣ ಭರವಸೆಗಳನ್ನು ಪೂರೈಸುವ ಸಾಮರ್ಥ್ಯದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕುವ ಸಾಧ್ಯತೆಯಿದೆ.ರಾಜಕೀಯ ಪಕ್ಷಗಳು ಮತ್ತು ನಾಯಕರು ಈ ನಿರ್ಧಾರವನ್ನು ಸ್ವಾಗತಿಸಿದ್ದು, ಇದು ದೀರ್ಘಕಾಲದ ಬೇಡಿಕೆಯನ್ನು ಪರಿಹರಿಸುವ ಮತ್ತು ಮದ್ಯ ನಿಯಂತ್ರಣವನ್ನು ಬಲಪಡಿಸುವತ್ತ ಒಂದು ಹೆಜ್ಜೆ ಎಂದು ಬಣ್ಣಿಸಿದ್ದಾರೆ.

The post ತಮಿಳುನಾಡಲ್ಲಿ 717 ಬಾರ್ ಗಳಿಗೆ ಬೀಗ CM ವಿಜಯ್ ಖಡಕ್ ಆರ್ಡರ್ ! appeared first on Good News 24x7.

]]>
11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ* https://www.goodnews24x7.com/11-children-die-after-consuming-cough-syrup/ Sat, 04 Oct 2025 08:49:47 +0000 https://www.goodnews24x7.com/?p=7661 ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ…

The post 11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ* appeared first on Good News 24x7.

]]>

ನವದೆಹಲಿ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚೆಗೆ 11 ಮಕ್ಕಳು ಸಾವನ್ನಪ್ಪಿದ ಘಟನೆಗೆ ಕೆಮ್ಮಿನ ಔಷಧ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಆದರೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಔಷಧದ ಮಾದರಿಯನ್ನು ಪರೀಕ್ಷಿಸಿ ಕ್ಲೀನ್‌ ಚಿಟ್ ನೀಡಿವೆ. ಮಕ್ಕಳ ಸಾವಿಗೆ ಔಷಧ ಕಾರಣವಲ್ಲ ಎಂದು ಸಷ್ಟಪಡಿಸಿವೆ.

ಮಧ್ಯಪ್ರದೇಶದಲ್ಲಿ 9 ಮಕ್ಕಳು ಸಾವು: ಕಳೆದ 15 ದಿನದಲ್ಲಿ ಮಧ್ಯ ಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ 9 ಮಕ್ಕಳು ಮೃತಪಟ್ಟಿವೆ. ಈ ಮಕ್ಕಳ ಸಾವಿಗೆ ಕೋಲ್ಟಿಫ್ ಮತ್ತು ನೆಕ್‌ಸ್ಟೋ-ಡಿಎಸ್ ಕೆಮ್ಮಿನ ಔಷಧ ಸೇವನೆಯಿಂದ ಉಂಟಾದ ಕಿಡ್ನಿ ವೈಫಲ್ಯ ಕಾರಣ ಎಂದು ಪೋಷಕರು ಮತ್ತು ಸ್ಥಳೀಯರು ಆರೋಪಿಸಿದ್ದಾರೆ. ಆದರೆ ಮಧ್ಯ ಪ್ರದೇಶದ ಆರೋಗ್ಯ ಇಲಾಖೆಯು ಔಷಧದ ಪರೀಕ್ಷೆ ವೇಳೆ ಯಾವುದೇ ವಿಷಪೂರಿತ ಅಂಶ ಪತ್ತೆಯಾಗಿಲ್ಲ. ಔಷಧದ ನಿಷೇಧದ ಪ್ರಶ್ನೆಯೇ ಇಲ್ಲ. ಮಕ್ಕಳ ಸಾವಿಗೆ ಸಮಿತಿ ರಚಿಸಲಾಗಿದ್ದು, ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.
ರಾಜಸ್ಥಾನದಲ್ಲಿ 2 ಮಕ್ಕಳ ಸಾವು: ರಾಜ ಸ್ಥಾನದ ಸಿಕಾರ್ ಮತ್ತು ಭರತ್‌ ಪುರ ಜಿಲ್ಲೆಗಳಲ್ಲಿ ತಲಾ ಒಂದೊಂದು ಸಾವಾಗಿದ್ದು, ಇಲ್ಲಿಯೂ ಸಹ ಔಷಧವೇ ಕಾರಣ ಎಂಬ ಆರೋಪವಿದೆ.

 

 

 

 

 

 

ತಮಿಳುನಾಡಿನಲ್ಲಿ ನಿಷೇಧ
ಮಕ್ಕಳ ಸಾವಿನ ಬೆನ್ನಲ್ಲೇ ತಮಿಳುನಾಡು ಸರ್ಕರ ಕೋಲ್ಟಿಫ್ ಸಿರಪ್ ಮೇಲೆ ನಿಷೇಧ ಹೇರಿದೆ. ತಮಿಳುನಾಡು ಔಷಧ ನಿಯಂತ್ರಣಾ ಮಂಡಳಿ ಈ ಕ್ರಮ ಕೈಗೊಂಡಿದೆ. ಘಟನೆ ಕುರಿತು ತನಿಖೆ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.

ಆರೋಪವಿದೆ. ಆದರೆ ಅಲ್ಲಿನ ಸರ್ಕಾರವು ವೈದ್ಯರಿಗೆ ಕ್ಲೀನ್‌ ಚಿಟ್ ನೀಡಿದೆ. ರಾಜಸ್ಥಾನ ಔಷಧ ನಿಯಂತ್ರಣ ಮಂಡಳಿಯು ಔಷಧಗಳ ಪೂರೈಕೆಗೆ ತಾತ್ಕಾಲಿಕ ತಡೆ ನೀಡಿದೆ. ಎರಡೂ ಪ್ರಕರಣಗಳಲ್ಲಿಯೂ ಪೋಷಕರು ವೈದ್ಯರ ಸೂಚನೆಯಿಲ್ಲದೆಯೇ ಔಷಧ ನೀಡಿದ್ದೇ ಕಾರಣ ಎಂದು ಆರೋಗ್ಯ ಇಲಾಖೆ ಹೇಳಿದೆ.

2 ವರ್ಷದ ಮಕ್ಕಳಿಗೆ ಕೆಮ್ಮಿನೌಷಧ ಬೇಡ: ಕೇಂದ್ರದ ಎಚ್ಚರಿಕೆ
ಅತ್ತ ಕೇಂದ್ರ ಸರ್ಕಾರ ಕಫ್‌ಸಿರಪ್‌ನಿಂದ ಮಕ್ಕಳ ಸಾವು ಸಂಭವಿಸಿದೆ ಎಂಬ ಆರೋಪವನ್ನು ತಿರಸ್ಕರಿಸಿದೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ತನಿಖೆ ಆರಂಭವಾಗಿದೆ ಎಂದು ಸ್ಪಷ್ಟಪಡಿಸಿದೆ.

ಜತೆಗೆ 2 ವರ್ಷದ ಒಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡಬಾರದೆಂದು ಆದೇಶಿಸಿದೆ. ಜೊತೆಗೆ ಕೆಮ್ಮಿನ ಔಷಧದ ಪರಿಣಾಮ ಎಂಬ ಯಾವುದೇ ಪ್ರಕರಣ ಬಂದಲ್ಲಿ ಖಾಸಗಿ ವೈದ್ಯರು ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಬೇಕು ಎಂದು ಆದೇಶ ಹೊರಡಿಸಿದೆ.

The post 11 ಮಕ್ಕಳು ಕೆಮ್ಮಿನ ಸಿರಪ್ ಸೇವಿಸಿ ಸಾ* appeared first on Good News 24x7.

]]>
ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್! https://www.goodnews24x7.com/anamika-vyaktiya-nijaba%e1%b9%87%e1%b9%87a-bayalagide-nanu-patradhari-matra-sutradhariga%e1%b8%b7u-berene-iddare-enda-mask-myan-dharmasthala-maskedmanchinnaiahmandyasittamilnadupolice-dharm/ Sat, 23 Aug 2025 06:59:49 +0000 https://www.goodnews24x7.com/?p=6518 ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು…

The post ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್! appeared first on Good News 24x7.

]]>

ಧರ್ಮಸ್ಥಳದ ಮಾಸ್ಕ್ ಮ್ಯಾನ್ ನಿಜ ಹೆಸರು, ನಿಜಮುಖ, ನಿಜಬಣ್ಣ ಬಯಲಾಗಿದೆ. ಮಾಸ್ಕ್ ಮ್ಯಾನ್ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೇ ಇದ್ದಾರೆ ಎಂದು ಎಸ್‌ಐಟಿ ಅಧಿಕಾರಿಗಳಿಗೆ ಚಿನ್ನಯ್ಯ ಹೇಳಿದ್ದಾನೆ. ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿದ್ದ ಅನಾಮಿಕ ವ್ಯಕ್ತಿಯ ನಿಜಬಣ್ಣ ಈಗ ಬಯಲಾಗಿದೆ. ಅನಾಮಿಕ ಮೊದಲಿಗೆ ಬುರುಡೆಯೊಂದನ್ನು ತೆಗೆದುಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದ. ಇದೇ ರೀತಿ ನೂರಾರು ಶವಗಳನ್ನು ಧರ್ಮಸ್ಥಳದ ವಿವಿಧೆಡೆ ಹೂತಿರುವುದಾಗಿ ಹೇಳಿದ್ದ. ಆದರೇ, ಈ ಮಾಸ್ಕ್ ಮ್ಯಾನ್ ಹೇಳಿಕೆಯೇ ಸುಳ್ಳು ಎಂದು ಗೊತ್ತಾದ ಮೇಲೆ ಎಸ್‌ಐಟಿ ಸುಳ್ಳು ದೂರು ನೀಡಿ ಪೊಲೀಸರನ್ನು ದಿಕ್ಕು ತಪ್ಪಿಸಿದ ಹಾಗೂ ಮೊದಲ ಬುರುಡೆಯನ್ನು ಎಲ್ಲಿಂದ ತಂದಿದ್ದ ಎಂಬುದನ್ನು ಬಾಯಿ ಬಿಡದ ಕಾರಣದಿಂದ ಬಂಧಿಸಿದ್ದಾರೆ.
ಈಗ ಅನಾಮಿಕ ವ್ಯಕ್ತಿಯ ನಿಜ ಬಣ್ಣ ಬಯಲಾಗಿದೆ. ಈತನ ನಿಜವಾದ ಹೆಸರು ಚಿನ್ನಯ್ಯ ಅಲಿಯಾಸ್ ಚೆನ್ನ. ಈತ ಮಂಡ್ಯ ಜಿಲ್ಲೆಯ ಮಂಡ್ಯ ತಾಲ್ಲೂಕಿನ ಚಿಕ್ಕಬಳ್ಳಿ ಗ್ರಾಮದವನು. ಈತನಿಗೆ ಮೂವರು ಹೆಂಡತಿಯರು. ಈ ಹಿಂದೆ ಧರ್ಮಸ್ಥಳದಲ್ಲಿ ಸಫಾಯಿ ಕರ್ಮಚಾರಿ ಕೆಲಸ ಮಾಡಿದ್ದ. ಬಳಿಕ ಅಲ್ಲಿಂದ ತಮಿಳುನಾಡಿನ ಈರೋಡ್‌ಗೆ ಹೋಗಿ ಅಲ್ಲಿ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈಗ ಈತ ಇದ್ದಕ್ಕಿದ್ದಂತೆ ಬಂದು ಧರ್ಮಸ್ಥಳದ ಬಗ್ಗೆ ಯಾವುದೇ ಆಧಾರ, ಸಾಕ್ಷಿ ಇಲ್ಲದೇ ಸುಳ್ಳು ದೂರು ಕೊಟ್ಟಿದ್ದೇಕೆ ? ಎಂಬ ಪ್ರಶ್ನೆ ಉದ್ಭವವಾಗಿದೆ.

ಆಮಿಷಕ್ಕೆ ಒಳಗಾಗಿ ಸುಳ್ಳು ದೂರು ಕೊಟ್ಟ ಚಿನ್ನಯ್ಯ ಅಲಿಯಾಸ್ ಚಿನ್ನ ಅಮೀಷಗಳಿಗೆ ಒಳಗಾಗಿ ಸುಳ್ಳು ಹೇಳಿದ್ದಾನೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದು ಚಿನ್ನಯ್ಯ ಅಲಿಯಾಸ್ ಚೆನ್ನ ಸ್ಪೋಟಕ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳಿಗೆ ನೀಡಿದ್ದಾನೆ. ನನಗೆ ಈ ರೀತಿ ಹೇಳಲು ಹೇಳಿದರು. ನಾನು ಆ ರೀತಿ ಹೇಳಿದೆ. ಬುರುಡೆ ತೆಗೆದುಕೊಂಡು ಕೋರ್ಟ್ ಗೆ ಒಪ್ಪಿಸು ಅಂತ ಹೇಳಿದ್ರು, ಅದರಂತೆ ನಾನು ಬುರುಡೆಯನ್ನು ಕೋರ್ಟ್ ಗೆ ಒಪ್ಪಿಸಿದೆ. ಕೋರ್ಟ್ ಗೆ ಹಾಜರುಪಡಿಸಿದ ಬುರುಡೆ ಎಲ್ಲಿಂದ ಬಂತು ಎಂಬುದು ನನಗೆ ಗೊತ್ತಿಲ್ಲ ಎಂದು ಚಿನ್ನಯ್ಯ ಅಲಿಯಾಸ್ ಚೆನ್ನ ಎಸ್‌ಐಟಿ ಅಧಿಕಾರಿಗಳಿಗೆ ಹೇಳಿದ್ದಾನೆ. ತಾನು ತಂದಿದ್ದ ಬುರುಡೆ ಕುರಿತು ಎಷ್ಟೇ ವಿಚಾರಣೆ ನಡೆಸಿದರೂ ಅದರ ಮೂಲದ ಬಗ್ಗೆ ಬಾಯಿ ಬಿಡುತ್ತಿಲ್ಲ. ಮೊದಲು ನಾನು ತೋರಿಸಿದ ಜಾಗದಲ್ಲಿ ಸ್ಥಳ ಪರಿಶೋಧನೆ ನಡೆಸಿ ಎಂದು ಪಟ್ಟು ಹಿಡಿದಿದ್ದ. ಅನುಮಾನಕ್ಕೊಳಗಾದ ಎಸ್ ಐ ಟಿ ಯಿಂದ ಚಿನ್ನಯ್ಯನನ್ನು ತೀವ್ರ ವಿಚಾರಣೆ ನಡೆಸಲಾಗಿದೆ. ಈ ವೇಳೆ ಎಲ್ಲಾ ಮಾಹಿತಿಯನ್ನು ದೂರುದಾರ ಹಾಗೂ ಸಾಕ್ಷಿಯಾಗಿದ್ದ ಚಿನ್ನಯ್ಯ ಅಲಿಯಾಸ್ ಚೆನ್ನ ಬಿಚ್ಚಿಟ್ಟಿದ್ದಾನೆ. ಇನ್ನೂ ಮಾಸ್ಕ್ ಮ್ಯಾನ್ ಇಷ್ಟು ದಿನ ನೂರಾರು ಶವ ಹೂತ್ತಿದ್ದೆ ಎಂದು ಪೊಲೀಸರಿಗೆ ದೂರು ನೀಡಿದ್ದರಿಂದ ದೂರುದಾರ ಹಾಗೂ ಕೇಸ್ ಸಾಕ್ಷಿದಾರನಾಗಿದ್ದ. ಆದರೇ, ಈಗ ಸಾಕ್ಷಿ, ದೂರುದಾರನೇ ಆರೋಪಿಯಾಗಿದ್ದಾನೆ. ಪೊಲೀಸರಿಗೆ ಸುಳ್ಳು ದೂರು ಕೊಡುವುದು ಕೂಡ ಅಪರಾಧ. ಹೀಗಾಗಿ ಚಿನ್ನಯ್ಯ ಅಲಿಯಾಸ್ ಚಿನ್ನನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಈಗ ಆರೋಪಿಯಾಗಿರುವ ಚಿನ್ನಯ್ಯ ಅಲಿಯಾಸ್ ಚಿನ್ನನಿಗೆ ಸಾಕ್ಷಿ ಸಂರಕ್ಷಣಾ ಕಾಯಿದೆಯಡಿ ರಕ್ಷಣೆ ಸಿಗಲ್ಲ. ಚೆನ್ನಯ್ಯ ಅಲಿಯಾಸ್ ಚೆನ್ನನಿಗೆ SIT ಅಧಿಕಾರಿಗಳು ಈಗ ಗುನ್ನಾ ಇಟ್ಟಿದ್ದಾರೆ.

The post ಅನಾಮಿಕ ವ್ಯಕ್ತಿಯ ನಿಜಬಣ್ಣ ಬಯಲಾಗಿದೆ. ನಾನು ಪಾತ್ರಧಾರಿ ಮಾತ್ರ, ಸೂತ್ರಧಾರಿಗಳು ಬೇರೆನೆ ಇದ್ದಾರೆ ಎಂದ ಮಾಸ್ಕ್ ಮ್ಯಾನ್! appeared first on Good News 24x7.

]]>
ದಳಪತಿ ವಿಜಯ್ ಸಮಾವೇಶಕ್ಕೆ ಸೇರಿರುವ ಜನಸಂಖ್ಯೆ ಅಚ್ಚರಿ ಮೂಡಿಸುವಂತೆ ಇದೆ. https://www.goodnews24x7.com/da%e1%b8%b7apati-vijay-samavesakke-seriruva-janasa%e1%b9%85khye-accari-mu%e1%b8%8disuvante-ide-thalapathy-tamilnaduelectionsmaduraitvkmadurai-da%e1%b8%b7apati-vijay-avaru-tammade-svanta-pak/ Fri, 22 Aug 2025 07:03:11 +0000 https://www.goodnews24x7.com/?p=6458 ದಳಪತಿ ವಿಜಯ್ ಅವರು ತಮ್ಮದೇ ಸ್ವಂತ ಪಕ್ಷ ಕಟ್ಟಿದ್ದು, ಟಿವಿಕೆ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷ 2026ರ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲಿದೆ. ದಳಪತಿ ವಿಜಯ್ ಅವರ ಅಭಿಮಾನಿ ಬಳಗ ದೊಡ್ದದಿದೆ. ಹೀರೋ ಆಗಿ ಅವರು ಸಾಕಷ್ಟು ದೊಡ್ಡ ಅಭಿಮಾನಿ…

The post ದಳಪತಿ ವಿಜಯ್ ಸಮಾವೇಶಕ್ಕೆ ಸೇರಿರುವ ಜನಸಂಖ್ಯೆ ಅಚ್ಚರಿ ಮೂಡಿಸುವಂತೆ ಇದೆ. appeared first on Good News 24x7.

]]>

ದಳಪತಿ ವಿಜಯ್ ಅವರು ತಮ್ಮದೇ ಸ್ವಂತ ಪಕ್ಷ ಕಟ್ಟಿದ್ದು, ಟಿವಿಕೆ ಎಂದು ಹೆಸರು ಇಟ್ಟಿದ್ದಾರೆ. ಈ ಪಕ್ಷ 2026ರ ತಮಿಳುನಾಡು ವಿಧಾನಸಭೆಯಲ್ಲಿ ಸ್ಪರ್ಧೆ ಮಾಡಲಿದೆ. ದಳಪತಿ ವಿಜಯ್ ಅವರ ಅಭಿಮಾನಿ ಬಳಗ ದೊಡ್ದದಿದೆ. ಹೀರೋ ಆಗಿ ಅವರು ಸಾಕಷ್ಟು ದೊಡ್ಡ ಅಭಿಮಾನಿ ಬಳಗವನ್ನು ಸಂಪಾದಿಸಿದ್ದಾರೆ. ಅದು ಮತ್ತೊಮ್ಮೆ ಸಾಬೀತಾಗಿದೆ. ಮಧುರೈನ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಪಕ್ಷ ಘೋಷಣೆ ವೇಳೆ ವಿಜಯ್ ಅವರು ದೊಡ್ಡ ಸಮಾವೇಶ ಆಯೋಜನೆ ಮಾಡಿದ್ದರು. ಇದಾದ ಬಳಿಕ ನಡೆದ ಮತ್ತೊಂದು ದೊಡ್ಡ ಸಮಾವೇಶ ಇದಾಗಿದೆ. ಮಧುರೈ ಸಮಾವೇಶದಲ್ಲಿ ಲಕ್ಷಾಂತರ ಸಂಖ್ಯೆಯ ಜನರು ನೆರೆದಿದ್ದರು. ಆ ಫೋಟೋಗಳು ವೈರಲ್ ಆಗಿವೆ.

 

ಅಭಿಮಾನಿಗಳನ್ನು ನೋಡಿ ದಳಪತಿ ವಿಜಯ್ ಅವರು ಭಾವುಕರಾದರು. ಅವರು ವೇದಿಕೆ ಮೇಲೆ ಕಣ್ಣೀರು ಹಾಕಿದ್ದಾರೆ. ಅವರು ತಮಿಳುನಾಡಿನ ಎಲ್ಲಾ 234 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡೋದಾಗಿ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷದ ಜೊತೆ ಮೈತ್ರಿ ಇಲ್ಲ ಎಂದಿದ್ದಾರೆ.ವಿಜಯ್ ಅವರು ಸಮಾವೇಶದಲ್ಲಿ ಇಷ್ಟು ದೊಡ್ಡ ಸಂಖ್ಯೆಯ ಜನರನ್ನು ಸೇರಿಸಿದ್ದಾರೆ ನಿಜ. ಆದರೆ, ಇದನ್ನು ಅವರು ಮತವಾಗಿ ಬದಲಾಯಿಸಲು ಸಾಧ್ಯವೇ ಎನ್ನುವ ಪ್ರಶ್ನೆ ಮೂಡಿದೆ. ಒಂದೊಮ್ಮೆ ಬಂದವರೆಲ್ಲರೂ ಟಿವಿಕೆಗೆ ಮತ ಹಾಕಿದರೆ ಅವರ ಪಕ್ಷ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ವಿಜಯ್ ಅವರು ಮಧುರೈನ ಪೂರ್ವ ಕ್ಷೇತ್ರದಿಂದ ಸ್ಪರ್ಧಿಸೋದಾಗಿ ಹೇಳಿದ್ದಾರೆ. ಚುನಾವಣೆಗೆ ಒಂದು ವರ್ಷ ಇರುವಾಗಲೇ ಅವರು ಈ ರೀತಿಯ ಘೋಷಣೆ ಮಾಡಿದ್ದಾರೆ ಅನ್ನೋದು ವಿಶೇಷ. ಪಕ್ಷ ಗೆದ್ದರೆ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

The post ದಳಪತಿ ವಿಜಯ್ ಸಮಾವೇಶಕ್ಕೆ ಸೇರಿರುವ ಜನಸಂಖ್ಯೆ ಅಚ್ಚರಿ ಮೂಡಿಸುವಂತೆ ಇದೆ. appeared first on Good News 24x7.

]]>
ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು. https://www.goodnews24x7.com/fire-in-goods-train-carrying-diesel-5-coaches-gutted/ Sun, 13 Jul 2025 06:42:04 +0000 https://www.goodnews24x7.com/?p=5070 ತಿರುವಳ್ಳೂರು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳ್ಳಿ ತಪ್ಪಿದ ಪರಿಣಾಮ, ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ. ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ…

The post ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು. appeared first on Good News 24x7.

]]>

ತಿರುವಳ್ಳೂರು : ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲು ಹಳ್ಳಿ ತಪ್ಪಿದ ಪರಿಣಾಮ, ಭಾರಿ ಪ್ರಮಾಣದಲ್ಲಿ ಬೆಂಕಿ ಹೊತ್ತಿ ಉರಿದ ಘಟನೆ ಇಂದು ಬೆಳಗ್ಗೆ ತಮಿಳುನಾಡಿನ ತಿರುವಳ್ಳೂರು ಬಳಿ ಸಂಭವಿಸಿದೆ.

ಚೆನ್ನೈ ಬಂದರಿನಿಂದ ಡೀಸೆಲ್ ಸಾಗಿಸುತ್ತಿದ್ದ ಸರಕು ಸಾಗಣೆ ರೈಲು ತಿರುವಳ್ಳೂರು ಬಳಿ ಇದ್ದಕ್ಕಿದ್ದಂತೆ ಹಳಿತಪ್ಪಿದೆ. ಈ ವೇಳೆ ರೈಲಿನಲ್ಲಿದ್ದ ಡೀಸೆಲ್ ಟ್ಯಾಂಕರ್ನಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಧಗಧಗಿಸುತ್ತಿರುವ ಬೆಂಕಿಯ ಜ್ವಾಲೆಯ ಹಿನ್ನೆಲೆಯಲ್ಲಿ ಸುತ್ತಲೂ ದಟ್ಟ ಹೊಗೆ ಆವರಿಸಿಕೊಂಡಿತ್ತು.

ಟ್ಯಾಂಕರ್ಗಳಲ್ಲಿ ಅಪಾರ ಪ್ರಮಾಣದ ಇಂಧನ ಇರುವುದರಿಂದ ಬೆಂಕಿಯ ವ್ಯಾಪ್ತಿ ಮತ್ತಷ್ಟು ಹರಡಬಹುದು ಎಂದು ಅಧಿಕಾರಿಗಳು ಆಂತಕ ವ್ಯಕ್ತಪಡಿಸಿದ್ದಾರೆ. ಘಟನೆಯಿಂದ ಇದುವರೆಗೆ ಒಟ್ಟು ಐದು ಬೋಗಿಗಳು ಸಂಪೂರ್ಣವಾಗಿ ಬೆಂಕಿಯಲ್ಲಿ ಸುಟ್ಟುಕರಕಲಾಗಿವೆ.

10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಕಾರ್ಯಾಚರಣೆ ನಡೆಸುತ್ತಿದ್ದರೂ ಬೆಂಕಿಯನ್ನು ನಂದಿಸಲು ಸಾಧ್ಯವಾಗುತ್ತಿಲ್ಲ. ಹತ್ತಿರದ ವಸತಿ ಪ್ರದೇಶಗಳಲ್ಲಿ ವಾಸಿಸುವ ಜನರನ್ನು ಪೊಲೀಸರು ಸ್ಥಳಾಂತರಿಸಿದ್ದಾರೆ. ಸುರಕ್ಷತಾ ಕಾರಣಗಳಿಗಾಗಿ ವಿದ್ಯುತ್ ಸರಬರಾಜು ಕೂಡ ಕಡಿತಗೊಳಿಸಲಾಗಿದೆ.

ಘಟನೆ ನಡೆದ ಸ್ಥಳದ ಸಮೀಪವಿರುವ ಮನೆಗಳಲ್ಲಿನ ಎಲ್ಪಿಜಿ ಗ್ಯಾಸ್ ಸಿಲಿಂಡರ್ಗಳನ್ನು ಮುಂಜಾಗ್ರತಾ ಕ್ರಮವಾಗಿ ಸ್ಥಳಾಂತರ ಮಾಡಲಾಗಿದೆ.
ಇಲ್ಲಿನ ಜಿಲ್ಲಾಧಿಕಾರಿ ಎಂ.ಪ್ರತಾಪ್ ಅವರು ಅಗ್ನಿಶಾಮಕ ಕಾರ್ಯಾಚರಣೆಯನ್ನು ತೀವ್ರಗೊಳಿಸಲು ಆದೇಶಿಸಿದ್ದಾರೆ. ಅಪಘಾತದಲ್ಲಿ ಇಲ್ಲಿಯವರೆಗೆ ಯಾವುದೇ ಜೀವಹಾನಿ ಸಂಭವಿಸಿದ ವರದಿಯಾಗಿಲ್ಲ. ರಕ್ಷಣಾ ಕಾರ್ಯಾಚರಣೆಗಾಗಿ ಅರಕ್ಕೋಣಂನಿಂದ ವಿಪತ್ತು ಪರಿಹಾರ ತಂಡಗಳು ಘಟನಾ ಸ್ಥಳಕ್ಕೆ ತಲುಪಿವೆ.


ರೈಲು ಸೇವೆಗಳಲ್ಲಿ ವ್ಯತ್ಯಯ: ಘಟನೆಯಿಂದ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದ್ದು, ಕೆಲ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ. ಈ ಬಗ್ಗೆ ದಕ್ಷಿಣ ರೈಲ್ವೆ ಇಲಾಖೆಯು ಎಕ್ಸ್ ಪೋಸ್ಟ್ ಮೂಲಕ ಮಾಹಿತಿ ನೀಡಿದೆ. “ತಿರುವಳ್ಳೂರು ಬಳಿ ಸಂಭವಿಸಿದ ಘಟನೆಯಿಂದ ಮುಂಜಾಗೃತವಾಗಿ ವಿದ್ಯುತ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ. ಬೆಂಕಿ ನಂದಿಸಲು ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಆದ್ದರಿಂದ ರೈಲು ಸೇವೆಗಳಲ್ಲಿ ಈ ಕೆಳಗಿನ ಬದಲಾವಣೆಗಳನ್ನು ಮಾಡಲಾಗಿದೆ” ಎಂದು ರೈಲುಗಳ ಪಟ್ಟಿಯನ್ನು ಹಂಚಿಕೊಂಡಿದೆ. ತುರ್ತು ಸಹಾಯಕ್ಕಾಗಿ ಸಹಾಯವಾಣಿ: 044-25354151, 044-24354995 ತೆರೆಯಲಾಗಿದೆ.

ಘಟನಾ ಸ್ಥಳಕ್ಕೆ NDRF ತಂಡ ಆಗಮನ: ತಿರುವಳ್ಳೂರು ಜಿಲ್ಲಾಡಳಿತದ ಮನವಿ ಮೇರೆಗೆ ರಕ್ಷಣಾ ಮತ್ತು ಬೆಂಬಲ ಕಾರ್ಯಾಚರಣೆಗಾಗಿ 50 ರಕ್ಷಣಾ ಸಿಬ್ಬಂದಿಯನ್ನು ಒಳಗೊಂಡ ಎರಡು ಎನ್ಡಿಆರ್ಎಫ್ ತಂಡಗಳನ್ನು ಘಟನಾ ಸ್ಥಳಕ್ಕೆ ಕರೆಯಿಸಲಾಗಿದೆ.

ಬೆಂಕಿ ನಂದಿಸಲು ಇನ್ನೂ ಕೆಲ ಗಂಟೆಗಳ ಅಗತ್ಯ: ತಮಿಳುನಾಡು ಸಚಿವ ಎಸ್.ಎಂ. ನಾಸರ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸುವಂತೆ ಕರೆ ನೀಡಿದ್ದಾರೆ. ಬೆಂಕಿ ನಿಯಂತ್ರಿಸಲು ಇನ್ನೂ ಕೆಲ ಗಂಟೆಗಳು ಅಗತ್ಯವಿದೆ ಎಂದು ಜಿಲ್ಲಾಡಳಿತ ಹೇಳಿದೆ.

The post ಡೀಸೆಲ್ ಸಾಗಿಸುತ್ತಿದ್ದ ಗೂಡ್ಸ್ ರೈಲಿನಲ್ಲಿ ಬೆಂಕಿ ; 5 ಬೋಗಿಗಳು ಸುಟ್ಟು ಕರಕಲು. appeared first on Good News 24x7.

]]>
ಕೋಟಿ ಕೊಟ್ರೂ ಸಾಕಾಗಲಿಲ್ಲ.. ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಕ್ರಿಮಿನಾಶಕ ಸೇವಿಸಿ ಸಾ*ವು. https://www.goodnews24x7.com/even-crores-of-rupees-were-not-enough-newlywed-woman-dies-after-consuming-pesticide-due-to-dowry-harassment/ Mon, 30 Jun 2025 08:11:36 +0000 https://www.goodnews24x7.com/?p=4845 ತಮಿಳುನಾಡು : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಜೀವಕಳೆದುಕೊಂಡಿದ್ದಾಳೆ. ರಿಧಾನ್ಯಾ ಎಂಬ 27 ವರ್ಷದ ನವವಿವಾಹಿತೆ ಕಾರ್ ನಲ್ಲಿ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುತ್ತೇನೆಂದು ಗಂಡನ ಮನೆಯಿಂದ ಕಾರ್ನಲ್ಲಿ ಹೊರಟ ರಿಧಾನ್ಯಾ ಕಾರ್ನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ.…

The post ಕೋಟಿ ಕೊಟ್ರೂ ಸಾಕಾಗಲಿಲ್ಲ.. ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಕ್ರಿಮಿನಾಶಕ ಸೇವಿಸಿ ಸಾ*ವು. appeared first on Good News 24x7.

]]>

ತಮಿಳುನಾಡು : ತಮಿಳುನಾಡಿನ ತಿರುಪ್ಪೂರು ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಜೀವಕಳೆದುಕೊಂಡಿದ್ದಾಳೆ. ರಿಧಾನ್ಯಾ ಎಂಬ 27 ವರ್ಷದ ನವವಿವಾಹಿತೆ ಕಾರ್ ನಲ್ಲಿ ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುತ್ತೇನೆಂದು ಗಂಡನ ಮನೆಯಿಂದ ಕಾರ್ನಲ್ಲಿ ಹೊರಟ ರಿಧಾನ್ಯಾ ಕಾರ್ನಲ್ಲೇ ಕ್ರಿಮಿನಾಶಕ ಸೇವಿಸಿದ್ದಾರೆ.

ಈ ವರ್ಷದ ಏಪ್ರಿಲ್ನಲ್ಲಿ ಕವಿನ್ ಕುಮಾರ್ ಜೊತೆಗೆ ರಿಧಾನ್ಯಾ ವಿವಾಹ ನಡೆದಿತ್ತು. ಮದುವೆ ವೇಳೆ 70 ಲಕ್ಷ ರೂಪಾಯಿ ಮೌಲ್ಯದ ವೋಲ್ವೋ ಕಾರು, 800 ಗ್ರಾಂ ಚಿನ್ನವನ್ನು ವರದಕ್ಷಿಣೆ ಆಗಿ ರಿಧಾನ್ಯಾ ತಂದೆ ಅಣ್ಣಾದೊರೈ ಗಂಡನ ಮನೆಯವರಿಗೆ ನೀಡಿದ್ದರು. ಆದರೂ ಗಂಡನ ಮನೆಯಲ್ಲಿ ಇನ್ನೂ ಹೆಚ್ಚಿನ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಈ ಮಾನಸಿಕ ಕಿರುಕುಳ ತಾಳಲಾಗದೇ ನವವಿವಾಹಿತೆ ಜೀವ ಕಳೆದುಕೊಂಡಿದ್ದಾರೆ.

ಜೀವ ತೆಗೆದುಕೊಳ್ಳುವುದಕ್ಕೂ ಮೊದಲು ರಿಧಾನ್ಯ ತನ್ನ ತಂದೆ ಅಣ್ಣಾದೊರೈಗೆ 8 ವಾಯ್ಸ್ ಮೆಸೇಜ್ ಕಳಿಸಿದ್ದರು. ಈ ವಾಯ್ಸ್ ಮೇಸೇಜ್ನಲ್ಲಿ ಗಂಡ ಹಾಗೂ ಅತ್ತೆ, ಮಾವ ಕೊಡುತ್ತಿದ್ದ ಕಿರುಕುಳನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ಜೀವ ಬಿಡುತ್ತಿರುವುದಕ್ಕೆ ಮಾಡಿಕೊಳ್ಳುತ್ತಿರುವುದಕ್ಕೆ ನನ್ನನ್ನು ಕ್ಷಮಿಸಿ. ಇದರ ಬಗ್ಗೆ ಯಾರಿಗೆ ಹೇಳಬೇಕೆಂದು ಗೊತ್ತಾಗುತ್ತಿಲ್ಲ. ನನ್ನ ಮಾತು ಕೇಳಿದವರು, ಜೀವನ ಇದೇ ರೀತಿ ಇರುತ್ತೆ, ಜೀವನದಲ್ಲಿ ಇವುಗಳ ಬಗ್ಗೆ ರಾಜೀ ಮಾಡಿಕೊಳ್ಳಬೇಕು ಎಂದು ಹೇಳುತ್ತಾರೆ.

ಅವರಿಗೆ ನನ್ನ ನೋವು ಅರ್ಥವಾಗಲ್ಲ. ನೀವು ನನ್ನ ಬಗ್ಗೆ ಅನುಮಾನ ಪಡಬಹುದು. ಆದರೇ, ನಾನು ಸುಳ್ಳು ಹೇಳುತ್ತಿಲ್ಲ. ನನ್ನ ಸುತ್ತ ಇರುವವರು ನಟಿಸುತ್ತಿದ್ದಾರೆ. ನಾನೇಕೆ ಮೌನವಾಗಿದ್ದೇನೆ ಎಂದು ನನಗೆ ಅರ್ಥವಾಗುತ್ತಿಲ್ಲ ಅಥವಾ ನಾನೇಕೆ ಈ ರೀತಿ ಇದ್ದೇನೆ. ನನ್ನ ಜೀವನ ಪೂರ್ತಿ ನಾನು ನಿಮಗೆ ಹೊರೆಯಾಗಲ್ಲ. ನಾನು ಈ ಭಾರಿ ಯಾವುದೇ ತಪ್ಪು ಮಾಡಲ್ಲ. ಈ ಜೀವನವನ್ನು ನಾನು ಇಷ್ಟಪಡಲ್ಲ. ಗಂಡ ಕವಿನ್ ಕುಮಾರ್ ದೈಹಿಕವಾಗಿ, ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಾರೆ ಎಂದು ತಂದೆ ಅಣ್ಣಾದೊರೆೈಗೆ ಕಳಿಸಿದ ವಾಯ್ಸ್ ಮೇಸೇಜ್ಗಳಲ್ಲಿ ಇದೆ ಎಂದು ಹೇಳಲಾಗಿದೆ.

ಮಂಡಿಪಾಳ್ಯ ಬಳಿಯ ದೇವಸ್ಥಾನಕ್ಕೆ ಹೋಗುತ್ತೇನೆಂದು ಕಾರ್ನಲ್ಲಿ ರಿಧಾನ್ಯಾ ಹೊರಟಿದ್ದರು. ಬಳಿಕ ರಸ್ತೆ ಪಕ್ಕದಲ್ಲೇ ಕಾರ್ ನಿಲ್ಲಿಸಿ, ಕಾರ್ನಲ್ಲಿ ಕ್ರಿಮಿನಾಶಕ ಸೇವಿಸಿ ಜೀವ ಬಿಟ್ಟಿದ್ದಾರೆ. ಸ್ಥಳೀಯರು ರಸ್ತೆ ಪಕ್ಕ ಕಾರ್ ಬಹಳ ಹೊತ್ತು ನಿಂತಿರುವುದನ್ನು ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಆಗ ಪೊಲೀಸರು ಬಂದು ಕಾರ್ ಅನ್ನು ಪರಿಶೀಲಿಸಿದಾಗ, ರಿಧಾನ್ಯಾ ಕ್ರಿಮಿನಾಶಕ ಸೇವಿಸಿರುವುದು ಬೆಳಕಿಗೆ ಬಂದಿದೆ.

ರಿಧಾನ್ಯಾ ಬಾಯಿಯಿಂದ ನೊರೆ ಬಂದಿದೆ. ಪೊಲೀಸರು ದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈಗ ಪತಿ, ಅತ್ತೆ, ಮಾವನ ವಿರುದ್ಧ ವರದಕ್ಷಿಣೆ ಕಿರುಕುಳ ನೀಡಿದ ಆರೋಪದಡಿ ಬಿಎನ್ಎಸ್ ಕಾಯಿದೆಯ ಸೆಕ್ಷನ್ 85ರಡಿ ದೂರು ದಾಖಲಾಗಿದೆ. ದೂರಿನ ಆಧಾರದ ಮೇಲೆ ಪತಿ ಕವಿನ್ ಕುಮಾರ್, ಮಾವ ಈಶ್ವರ ಮೂರ್ತಿ, ಅತ್ತೆ ಚಿತ್ರಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ. ರಿಧಾನ್ಯಾ ತಂದೆ ಅಣ್ಣಾದೊರೈ ಗಾರ್ಮೆಂಟ್ಸ್ ಫ್ಯಾಕ್ಟರಿಯ ಮಾಲೀಕರು ಆಗಿದ್ದಾರೆ.

The post ಕೋಟಿ ಕೊಟ್ರೂ ಸಾಕಾಗಲಿಲ್ಲ.. ವರದಕ್ಷಿಣೆ ಕಿರುಕುಳದಿಂದ ನವ ವಿವಾಹಿತೆ ಕ್ರಿಮಿನಾಶಕ ಸೇವಿಸಿ ಸಾ*ವು. appeared first on Good News 24x7.

]]>