voters Archives - Good News 24x7 https://www.goodnews24x7.com/tag/voters/ Kannada Thu, 02 Jul 2026 11:43:42 +0000 en-US hourly 1 https://wordpress.org/?v=7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg voters Archives - Good News 24x7 https://www.goodnews24x7.com/tag/voters/ 32 32 ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು? https://www.goodnews24x7.com/kumaraswamy-makes-seriokumaraswamy-makes-serious-allegations-what-happenedus-allegations-what-happened/ Thu, 02 Jul 2026 11:43:42 +0000 https://www.goodnews24x7.com/?p=9735 ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ…

The post ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು? appeared first on Good News 24x7.

]]>

ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ ಕಂಡುಬಂದಿರುವ ಆರೋಪಗಳು ಕೇಳಿಬಂದಿವೆ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕೂಡ ಮಾತನಾಡಿದ್ದು, ಕಳ್ಳ ಮತದಾರರನ್ನ ಒಂದೆಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಪತ್ರ ಬರೆಯುವುದಾಗಿ ಹೇಳಿದ್ದಾರೆ.

ರಾಮನಗರದಲ್ಲಿ SIR ಪ್ರಕ್ರಿಯೆ ಬಗ್ಗೆ ಆಕ್ಷೇಪ
ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ
ಸಮುದಾಯ ಭವನದಲ್ಲಿ ಕೂತು ಗಣತಿ ನಮೂನೆ ವಿತರಣೆ
ರಾಮನಗರ, ಜುಲೈ 02: ರಾಜ್ಯದಲ್ಲಿ ಜೂನ್​​ 30ರಿಂದ ಮತ ಪಟ್ಟಿ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಮತದಾರರು ಸ್ವಯಂಪ್ರೇರಿತರಾಗಿ ಪ್ರಕ್ರಿಯೆಯಲ್ಲಿ ಭಾಗಿಯಾಗುತ್ತಿದ್ದಾರೆ. ಆದರೆ ಇತ್ತ ರಾಮನಗರದಲ್ಲಿ SIR ಪ್ರಕ್ರಿಯೆ ಬಗ್ಗೆ ಆಕ್ಷೇಪಗಳು ಕೇಳಿಬಂದಿವೆ. ಬಿಎಲ್‌ಒಗಳ ಕರ್ತವ್ಯ ಲೋಪದ ಗಂಭೀರ ಆರೋಪಗಳು ಕೇಳಿಬಂದಿವೆ. ಹೀಗಾಗಿ ರಾಮನಗರ ಕ್ಷೇತ್ರದ ಪ್ರಸ್ತುತ SIR ಪ್ರಕ್ರಿಯೆ ತಕ್ಷಣ ಸ್ಥಗಿತಗೊಳಿಸುವಂತೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪ
ರಾಮನಗರದಲ್ಲಿ ಮತಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಲೋಪಗಳು ಕಂಡುಬಂದಿರುವ ಗಂಭೀರ ಆರೋಪಗಳು ಕೇಳಿಬಂದಿವೆ. ಬಿಎಲ್​ಒಗಳು ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಆಯೋಗದ ಗಣತಿ ನಮೂನೆಗಳನ್ನು ವಿತರಿಸುವ ಬದಲಿಗೆ, ಸಮುದಾಯ ಭವನದಲ್ಲೇ ಕುಳಿತು ವಿತರಣೆ ಮಾಡುತ್ತಿದ್ದಾರೆ. ಇದು ಮನೆ ಮನೆ ಪರಿಶೀಲನೆಯ ಮೂಲ ಉದ್ದೇಶವನ್ನೇ ಬುಡಮೇಲು ಮಾಡುತ್ತದೆ ಎಂಬ ಆರೋಪಗಳು ಕೇಳಿಬಂದಿವೆ.

ಕಳ್ಳ ಮತದಾರರನ್ನ ಒಂದು ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ
ಇನ್ನು ರಾಮನಗರದಲ್ಲಿ SIR ಪ್ರಕ್ರಿಯೆ ಲೋಪ ಕಂಡುಬಂದ ಬಗ್ಗೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಟ್ವೀಟ್ ಕೂಡ ಮಾಡಿದ್ದಾರೆ. ಈ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಮನಗರದಲ್ಲಿ ಬಿಎಲ್‌ಒಗಳು ಸಾವಿರಾರು ಜನರನ್ನ ಸಮುದಾಯ ಭವನದಲ್ಲೇ ಕರೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಕಳ್ಳ ಮತದಾರರನ್ನ ಒಂದೇ ಕಡೆ ಕೂರಿಸಿ ಎಸ್​ಐಆರ್​ ಮಾಡುತ್ತಿದ್ದಾರೆ. ನಮ್ಮನ್ನ ರಾಮನಗರದಿಂದ ಹೊರಹಾಕುವ ಬಗ್ಗೆ ಮಾತಾಡಿದ್ದಾರೆ. ನಮ್ಮನ್ನ ಹೊರಹಾಕುವುದಕ್ಕೆ ಆಗಲ್ಲ. ಬೇರೆ ರಾಜ್ಯದ ಬಗ್ಗೆ ಮಾತಾಡುತ್ತಾರೆ. ಇದು ಅಧಿಕಾರಿಗಳ ವೈಪಲ್ಯ. ಸಿಎಂ ಪ್ರಭಾವ ಬೀರಿ ಕೆಲಸ ಮಾಡುತ್ತಿದ್ದಾರೆ. ಇದರ ಬಗ್ಗೆ ಚುನಾವಣಾ ಆಯೋಗ ಕೂಡ ಗಮನ ಹರಿಸಬೇಕು. ಚುನಾವಣಾ ಆಯೋಗಕ್ಕೆ ಪತ್ರ ಬರೆಯುತ್ತೇನೆ, ಗೃಹ ಸಚಿವರ ಗಮನಕ್ಕೂ ತರುತ್ತೇನೆ ಎಂದಿದ್ದಾರೆ.

ಕಳ್ಳಮತದಾನ ಸೃಷ್ಟಿ ಮಾಡುವವರ ವಿರುದ್ಧ ಕಠಿಣ ಕ್ರಮ‌ಕ್ಕೆ ಒತ್ತಾಯ
ರಾಮನಗರದ ಬಿಡದಿ ಹೋಬಳಿಯ ಕೇತಗನಹಳ್ಳಿಯಲ್ಲಿ ನಮ್ಮ ಕುಟುಂಬದ ಮತ ಇದೆ. ಮುಖ್ಯಮಂತ್ರಿಗಳೇ ಕಳ್ಳಮತದಾನ ಸೃಷ್ಟಿ ಮಾಡುತ್ತಿದ್ದಾರೆ. ಇಂತವರ ವಿರುದ್ಧ ಕಠಿಣ ಕ್ರಮ‌ ತೆಗೆದಕೊಳ್ಳಬೇಕು. ಇದು ಸರ್ಕಾರದ ದುರ್ಬಳಕೆ. ಈ ಕೆಲಸ ನಿರ್ವಹಣೆ ಮಾಡುತ್ತಿರುವುದು ರಾಜ್ಯ ಸರ್ಕಾರ, ಸಿಎಂ ಇದಕ್ಕೆ ಪ್ರೇರೆಪಣೆ. ಚುನಾವಣೆ ಆಯೋಗ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಪ್ರಾಮಾಣಿಕವಾಗಿ ಎಸ್​ಐಆರ್​ ಮಾಡಬೇಕು ಎಂದು ಒತ್ತಾಯಿಸಿದರು.

ಮುತುವರ್ಜಿ ವಹಿಸಿ ಎಸ್​ಐಆರ್​ನಲ್ಲಿ ಸರಿಯಾಗಿ ಮಾಹಿತಿ ಕೊಡಿ ಅಂತ ಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ಮತದಾರರ ಲಿಸ್ಟ್​ನಿಂದ ಹೊರ ಹೋದರೆ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಿಂದ ವಂಚಿತರಾಗುತ್ತೀರಿ. ಈ ದೊಡ್ಡ ಜಾಹೀರಾತಿನ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಕಾಂಗ್ರೆಸ್ ಮುಖಂಡರು ಎಸ್​ಐಆರ್​ ಬಗ್ಗೆ ಕಟುವಾಗಿ ಮಾತಾಡುತ್ತಿದ್ದಾರೆ. ಇದು ಸಿಎಂ ಪ್ರೇರಣೆ ಇರಬೇಕು ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಕಿಡಿಕಾರಿದರು.

The post ಕುಮಾರಸ್ವಾಮಿ ಗಂಭೀರ ಆರೋಪ, ಆಗಿದ್ದೇನು? appeared first on Good News 24x7.

]]>
ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ https://www.goodnews24x7.com/sdpi-urges-government-to-drop-bus-fare-hike-proposal/ Fri, 26 Jun 2026 12:37:53 +0000 https://www.goodnews24x7.com/?p=9678 ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ…

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>

ಮೈಸೂರು, ಜೂನ್ 26: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ರಾಜ್ಯ ಸರ್ಕಾರ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಬೇಕು. ಅದೇ ರೀತಿ ರಾಜ್ಯದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸುವ ಯಾವುದೇ ಪ್ರಯತ್ನವನ್ನು ಕೈಬಿಡಬೇಕು ಹಾಗೂ ಸಾರಿಗೆ ನಿಗಮಗಳ ನಷ್ಟದ ನೆಪದಲ್ಲಿ ಮತ್ತೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರ ತಕ್ಷಣವೇ ತಿರಸ್ಕರಿಸಬೇಕು ಎಂದು ಎಸ್‌ಡಿಪಿಐ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಆಗ್ರಹಿಸಿದರು.
ಇಂದು ಮೈಸೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದ ಜನಹಿತಕ್ಕೆ ಸಂಬಂಧಿಸಿದ ಮೂರು ಮಹತ್ವದ ವಿಷಯಗಳ ಕುರಿತು ಎಸ್‌ಡಿಪಿಐ ಪಕ್ಷದ ನಿಲುವನ್ನು ವಿವರಿಸಿದರು.
1. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮತದಾರರ ಹಕ್ಕು ರಕ್ಷಣೆ ಸರ್ಕಾರದ ಹೊಣೆ
ಭಾರತದ ಚುನಾವಣಾ ಆಯೋಗವು ದೇಶಾದ್ಯಂತ ವಿಶೇಷ ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯನ್ನು ನಡೆಸುತ್ತಿದ್ದು, ಅದರ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸಿಬ್ಬಂದಿಯೇ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಹೀಗಾಗಿ ಯಾವುದೇ ಅರ್ಹ ಮತದಾರರ ಹೆಸರು ಅನಗತ್ಯವಾಗಿ ಮತದಾರರ ಪಟ್ಟಿಯಿಂದ ಕೈಬಿಡದಂತೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಾಬ್ದಾರಿಯೂ ಆಗಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಪಶ್ಚಿಮ ಬಂಗಾಳದಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಪರಿಶೀಲನೆ ವೇಳೆ “Logical Discrepancy” ಎಂಬ ಕಾರಣವನ್ನು ಉಲ್ಲೇಖಿಸಿ ಲಕ್ಷಾಂತರ ಮತದಾರರ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂಬ ವರದಿಗಳು ಆತಂಕಕಾರಿ ಬೆಳವಣಿಗೆಯಾಗಿದೆ. ಭಾರತದಂತಹ ಬಹುಭಾಷಾ, ಬಹುಸಂಸ್ಕೃತಿಯ ದೇಶದಲ್ಲಿ ಹೆಸರುಗಳ ಕಾಗುಣಿತ ಅಥವಾ ದಾಖಲೆಗಳಲ್ಲಿನ ಸಣ್ಣಪುಟ್ಟ ವ್ಯತ್ಯಾಸಗಳನ್ನು ಆಧಾರವಾಗಿಸಿಕೊಂಡು ಮತದಾರರನ್ನು ಹೊರಗಿಡುವುದು ಪ್ರಜಾಪ್ರಭುತ್ವದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದರು.
ಕೃತಕ ಬುದ್ಧಿಮತ್ತೆಯ ತಾಂತ್ರಿಕ ದೋಷ ಅಥವಾ ಆಡಳಿತಾತ್ಮಕ ಲೋಪದಿಂದ ಒಬ್ಬ ಅರ್ಹ ನಾಗರಿಕನೂ ಮತದಾನದ ಹಕ್ಕು ಕಳೆದುಕೊಳ್ಳಬಾರದು. ಆದ್ದರಿಂದ ರಾಜ್ಯ ಸರ್ಕಾರ ಚುನಾವಣಾ ಆಯೋಗದೊಂದಿಗೆ ಚರ್ಚಿಸಿ, “Logical Discrepancy”ಯನ್ನು ಮತದಾರರನ್ನು ಕೈಬಿಡುವ ಮಾನದಂಡವಾಗಿ ಬಳಸಬಾರದು ಎಂದು ಒತ್ತಾಯಿಸಬೇಕು. ಯಾವುದೇ ಹೆಸರನ್ನು ಪಟ್ಟಿಯಿಂದ ತೆಗೆದುಹಾಕುವ ಮೊದಲು ಮನೆ-ಮನೆಗೆ ಪರಿಶೀಲನೆ, ನೇರ ಭೇಟಿ ಹಾಗೂ ಸಂಬಂಧಪಟ್ಟ ವ್ಯಕ್ತಿಗೆ ಪೂರ್ವ ನೋಟಿಸ್ ನೀಡುವಂತಹ ಮಾನವೀಯ ಮತ್ತು ಪಾರದರ್ಶಕ ಕ್ರಮಗಳನ್ನು ಕಡ್ಡಾಯಗೊಳಿಸಬೇಕು ಎಂದು ಅವರು ಆಗ್ರಹಿಸಿದರು.
2. ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣ ಜನವಿರೋಧಿ ಕ್ರಮ
ರಾಜ್ಯ ಸರ್ಕಾರ ವಿದ್ಯುತ್ ವಿತರಣಾ ಸಂಸ್ಥೆಗಳ (ESCOMs) ಕಾರ್ಯಾಚರಣೆಯನ್ನು ಹಂತ ಹಂತವಾಗಿ ಖಾಸಗಿ ಕಂಪನಿಗಳಿಗೆ ಒಪ್ಪಿಸುವ ಪ್ರಯತ್ನ ನಡೆಸುತ್ತಿರುವ ವರದಿಗಳು ಸಾರ್ವಜನಿಕರಲ್ಲಿ ತೀವ್ರ ಆತಂಕವನ್ನು ಉಂಟುಮಾಡಿವೆ ಎಂದು ಅಬ್ದುಲ್ ಮಜೀದ್ ಹೇಳಿದರು.
ವಿದ್ಯುತ್ ಎಂಬುದು ಸಾಮಾನ್ಯ ವಾಣಿಜ್ಯ ವಸ್ತುವಲ್ಲ; ಅದು ಜನಜೀವನ, ಕೃಷಿ, ಶಿಕ್ಷಣ, ಆರೋಗ್ಯ ಮತ್ತು ಕೈಗಾರಿಕಾ ಅಭಿವೃದ್ಧಿಯ ಬೆನ್ನೆಲುಬಾಗಿದೆ. ಈ ಸೇವೆಯನ್ನು ಖಾಸಗಿ ಕಂಪನಿಗಳ ಲಾಭದ ಉದ್ದೇಶಕ್ಕೆ ಒಪ್ಪಿಸಿದರೆ ವಿದ್ಯುತ್ ದರ ಏರಿಕೆ, ಗ್ರಾಮೀಣ ಪ್ರದೇಶಗಳ ನಿರ್ಲಕ್ಷ್ಯ ಹಾಗೂ ಸೇವೆಯ ಗುಣಮಟ್ಟ ಕುಸಿಯುವ ಅಪಾಯವಿದೆ.
ಸರ್ಕಾರ ಖಾಸಗೀಕರಣದ ಮೂಲಕ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯುವ ಬದಲು, ಎಸ್ಕಾಂಗಳನ್ನು ಆರ್ಥಿಕವಾಗಿ ಸದೃಢಗೊಳಿಸಿ, ತಾಂತ್ರಿಕ ಸುಧಾರಣೆಗಳನ್ನು ಜಾರಿಗೆ ತಂದು, ಸಾರ್ವಜನಿಕ ಸ್ವಾಮ್ಯದಲ್ಲಿಯೇ ಉತ್ತಮ ಗುಣಮಟ್ಟದ ವಿದ್ಯುತ್ ಸೇವೆ ಒದಗಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದರು.
3. ಬಸ್ ದರ ಏರಿಕೆ ಪ್ರಸ್ತಾವವನ್ನು ಸರ್ಕಾರ ತಕ್ಷಣ ತಿರಸ್ಕರಿಸಲಿ
ರಾಜ್ಯದ ರಸ್ತೆ ಸಾರಿಗೆ ನಿಗಮಗಳು ಮತ್ತೊಮ್ಮೆ ಬಸ್ ಪ್ರಯಾಣ ದರ ಹೆಚ್ಚಿಸುವ ಪ್ರಸ್ತಾವವನ್ನು ಸರ್ಕಾರಕ್ಕೆ ಸಲ್ಲಿಸಿರುವುದು ಜನಸಾಮಾನ್ಯರಲ್ಲಿ ಆತಂಕ ಮೂಡಿಸಿದೆ ಎಂದು ಅಬ್ದುಲ್ ಮಜೀದ್ ಹೇಳಿದರು.
ಈಗಾಗಲೇ 2025ರ ಜನವರಿ 5ರಿಂದ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಲಾಗಿದೆ. ಇದೀಗ ಬಿಎಂಟಿಸಿ ಶೇ.44, ಕೆಎಸ್‌ಆರ್‌ಟಿಸಿ ಶೇ.33 ಹಾಗೂ ಕೆಕೆಆರ್‌ಟಿಸಿ ಮತ್ತು ಎನ್‌ಡಬ್ಲ್ಯೂಕೆಆರ್‌ಟಿಸಿಗಳೂ ದರ ಏರಿಕೆಗೆ ಪ್ರಸ್ತಾವ ಸಲ್ಲಿಸಿರುವುದು ಸಾಮಾನ್ಯ ಜನರ ಬದುಕಿನ ಮೇಲೆ ಮತ್ತಷ್ಟು ಹೊರೆ ಹೊರಿಸುವ ಕ್ರಮವಾಗಿದೆ.
ಬೆಲೆ ಏರಿಕೆ, ನಿರುದ್ಯೋಗ ಹಾಗೂ ಜೀವನೋಪಾಯದ ಸಂಕಷ್ಟದಿಂದ ಜನರು ತತ್ತರಿಸಿರುವ ಸಂದರ್ಭದಲ್ಲಿ ಮತ್ತೆ ಬಸ್ ದರ ಹೆಚ್ಚಿಸುವುದು ವಿದ್ಯಾರ್ಥಿಗಳು, ಕಾರ್ಮಿಕರು, ರೈತರು, ಮಹಿಳೆಯರು, ಉದ್ಯೋಗಿಗಳು ಹಾಗೂ ಪ್ರತಿದಿನ ಸಾರ್ವಜನಿಕ ಸಾರಿಗೆಯನ್ನು ಅವಲಂಬಿಸಿರುವ ಲಕ್ಷಾಂತರ ಜನರಿಗೆ ದೊಡ್ಡ ಹೊಡೆತವಾಗಲಿದೆ.
ಸಾರಿಗೆ ನಿಗಮಗಳ ಆರ್ಥಿಕ ಸಂಕಷ್ಟಕ್ಕೆ ಪ್ರಯಾಣಿಕರು ಕಾರಣರಲ್ಲ. ಸರ್ಕಾರದ ನೀತಿ ವೈಫಲ್ಯ, ಸಮರ್ಪಕ ಅನುದಾನದ ಕೊರತೆ ಮತ್ತು ಆಡಳಿತಾತ್ಮಕ ದೌರ್ಬಲ್ಯವೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಈ ವೈಫಲ್ಯದ ಹೊರೆ ಜನರ ಮೇಲೆ ಹಾಕುವುದು ಸರಿಯಲ್ಲ. ಸರ್ಕಾರ ದರ ಏರಿಕೆಯನ್ನು ಸುಲಭ ಪರಿಹಾರವಾಗಿ ಪರಿಗಣಿಸದೆ, ನಿಗಮಗಳ ಆರ್ಥಿಕ ಪುನಶ್ಚೇತನಕ್ಕಾಗಿ ಸಮಗ್ರ ಕಾರ್ಯಯೋಜನೆ ರೂಪಿಸಬೇಕು. ಬಸ್ ದರ ಏರಿಕೆ ಪ್ರಸ್ತಾವವನ್ನು ತಕ್ಷಣವೇ ತಿರಸ್ಕರಿಸಿ ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಅವರು ಒತ್ತಾಯಿಸಿದರು.
ಅಂತಿಮವಾಗಿ, ಪ್ರಜಾಪ್ರಭುತ್ವದಲ್ಲಿ ಮತದಾನದ ಹಕ್ಕು, ಸಾರ್ವಜನಿಕ ವಿದ್ಯುತ್ ಸೇವೆ ಹಾಗೂ ಕೈಗೆಟುಕುವ ಸಾರ್ವಜನಿಕ ಸಾರಿಗೆ ಇವು ಜನರ ಮೂಲಭೂತ ಹಕ್ಕುಗಳಿಗೆ ಸಂಬಂಧಿಸಿದ ವಿಷಯಗಳಾಗಿದ್ದು, ಸರ್ಕಾರವು ಜನವಿರೋಧಿ ನೀತಿಗಳನ್ನು ಕೈಬಿಟ್ಟು ಜನಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅಬ್ದುಲ್ ಮಜೀದ್ ಕರೆ ನೀಡಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಎಸ್‌ಡಿಪಿಐ ರಾಜ್ಯ ಉಪಾಧ್ಯಕ್ಷರಾದ ದೇವನೂರು ಪುಟ್ಟನಂಜಯ್ಯ, ರಾಜ್ಯ ಕಾರ್ಯದರ್ಶಿ ಮೌಲಾನಾ ಅಕ್ರಮ್, ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್, ಮೈಸೂರು ಜಿಲ್ಲಾ ಕಾರ್ಯಾಧ್ಯಕ್ಷ ಶಫಿವುಲ್ಲಾ ಹಾಗೂ ಜಿಲ್ಲಾ ಉಪಾಧ್ಯಕ್ಷ ಎಸ್. ಸ್ವಾಮಿ ಉಪಸ್ಥಿತರಿದ್ದರು.
ಅಬ್ದುಲ್ ಮಜೀದ್
ರಾಜ್ಯಾಧ್ಯಕ್ಷರು
ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಕರ್ನಾಟಕ

The post ಬಸ್ ದರ ಏರಿಕೆ ಪ್ರಸ್ತಾವ ಕೈಬಿಡುವಂತೆ ಸರ್ಕಾರಕ್ಕೆ ಎಸ್‌ಡಿಪಿಐ ಆಗ್ರಹ appeared first on Good News 24x7.

]]>
ಬಂಗಾಳದ ಮತಬೇಟೆ: ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ₹3,000 ಘೋಷಿಸಿದ ಬಿಜೆಪಿ! https://www.goodnews24x7.com/bengal-vote-campaign-bjp-announces-monthly-%e2%82%b93000-for-women-and-youth/ Fri, 10 Apr 2026 11:16:57 +0000 https://www.goodnews24x7.com/?p=9174 ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಕಣಕ್ಕೆ ಬಿಜೆಪಿ ತನ್ನ ‘ಸಂಕಲ್ಪ ಪತ್ರ’ದ ಮೂಲಕ ಭರ್ಜರಿ ಎಂಟ್ರಿ ಕೊಟ್ಟಿದೆ. ಕೋಲ್ಕತ್ತಾದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವನ್ನು ಕಿತ್ತೊಗೆಯಲು 15…

The post ಬಂಗಾಳದ ಮತಬೇಟೆ: ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ₹3,000 ಘೋಷಿಸಿದ ಬಿಜೆಪಿ! appeared first on Good News 24x7.

]]>

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಕಣಕ್ಕೆ ಬಿಜೆಪಿ ತನ್ನ ‘ಸಂಕಲ್ಪ ಪತ್ರ’ದ ಮೂಲಕ ಭರ್ಜರಿ ಎಂಟ್ರಿ ಕೊಟ್ಟಿದೆ. ಕೋಲ್ಕತ್ತಾದಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸರ್ಕಾರವನ್ನು ಕಿತ್ತೊಗೆಯಲು 15 ಪ್ರಮುಖ ಭರವಸೆಗಳ ಮಾಸ್ಟರ್ ಪ್ಲಾನ್ ಮುಂದಿಟ್ಟಿದ್ದಾರೆ. ಈ ಪ್ರಣಾಳಿಕೆಯಲ್ಲಿ ಆರ್ಥಿಕ ಸಬಲೀಕರಣ, ಉದ್ಯೋಗ ಮತ್ತು ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಮತದಾರರನ್ನು ಸೆಳೆಯಲು ಬಿಜೆಪಿ ಭರಪೂರ ಕೊಡುಗೆಗಳನ್ನು ಘೋಷಿಸಿದೆ.

ಮಹಿಳಾ ಮತ್ತು ಯುವ ಸಮುದಾಯಕ್ಕೆ ಬಂಪರ್ ಆಫರ್
ಬಿಜೆಪಿಯ ಈ ಬಾರಿಯ ಪ್ರಣಾಳಿಕೆಯ ಹೈಲೈಟ್ ಎಂದರೆ ಮಹಿಳೆಯರು ಮತ್ತು ಯುವಕರಿಗೆ ನೀಡಲಾಗಿರುವ ಆರ್ಥಿಕ ನೆರವು. ರಾಜ್ಯದ ಪ್ರತಿಯೊಬ್ಬ ಮಹಿಳೆಗೆ ಪ್ರತಿ ತಿಂಗಳು 3,000 ರೂಪಾಯಿ ಸಹಾಯಧನ ನೀಡುವುದಾಗಿ ಘೋಷಿಸಲಾಗಿದೆ. ಅದೇ ರೀತಿ, ನಿರುದ್ಯೋಗಿ ಯುವಕರಿಗೆ ಆಸರೆಯಾಗಲು ತಿಂಗಳಿಗೆ 3,000 ರೂಪಾಯಿ ಪ್ರೋತ್ಸಾಹ ಧನ ನೀಡುವ ಭರವಸೆ ನೀಡಲಾಗಿದೆ. ಇದರೊಂದಿಗೆ ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ ಕಲ್ಪಿಸುವ ಮೂಲಕ ಮಹಿಳಾ ಮತಬ್ಯಾಂಕ್ ಮೇಲೆ ಕಣ್ಣಿಟ್ಟಿದೆ. ಆರೋಗ್ಯ ಕ್ಷೇತ್ರದಲ್ಲಿ ಆಯುಷ್ಮಾನ್ ಭಾರತ್ ವಿಸ್ತರಣೆ ಹಾಗೂ ಮಹಿಳೆಯರಿಗೆ ಉಚಿತ ಕ್ಯಾನ್ಸರ್ ತಪಾಸಣೆ ಮತ್ತು HPV ಲಸಿಕೆ ನೀಡುವುದಾಗಿ ಬಿಜೆಪಿ ಹೇಳಿದೆ.

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ಮತ್ತು ಉದ್ಯೋಗದ ವಾಗ್ದಾನ
ರಾಜ್ಯ ಸರ್ಕಾರಿ ನೌಕರರ ದಶಕಗಳ ಬೇಡಿಕೆಯಾದ 7ನೇ ವೇತನ ಆಯೋಗವನ್ನು ಬಿಜೆಪಿ ಸರ್ಕಾರ ಬಂದ 45 ದಿನಗಳೊಳಗೆ ಜಾರಿಗೊಳಿಸುವುದಾಗಿ ಅಮಿತ್ ಶಾ ಭರವಸೆ ನೀಡಿದ್ದಾರೆ. ಅಲ್ಲದೆ, ಮುಂದಿನ ಐದು ವರ್ಷಗಳಲ್ಲಿ ಬರೋಬ್ಬರಿ 1 ಕೋಟಿ ಹೊಸ ಉದ್ಯೋಗ ಮತ್ತು ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಪ್ರಣಾಳಿಕೆಯಲ್ಲಿ ಉಲ್ಲೇಖಿಸಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲು ಉತ್ತರ ಬಂಗಾಳದಲ್ಲಿ ಹೊಸದಾಗಿ AIIMS, IIT ಮತ್ತು IIM ಸಂಸ್ಥೆಗಳನ್ನು ಸ್ಥಾಪಿಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಬಿಜೆಪಿ ಪ್ರಕಟಿಸಿದೆ.

ಆಡಳಿತ ಸುಧಾರಣೆ ಮತ್ತು ಹಿಂದುತ್ವದ ಅಜೆಂಡಾ
ಕಾನೂನು ಸುವ್ಯವಸ್ಥೆ ಮತ್ತು ರಾಷ್ಟ್ರೀಯ ಭದ್ರತೆಯ ವಿಷಯದಲ್ಲೂ ಬಿಜೆಪಿ ಕಠಿಣ ನಿಲುವು ತಳೆದಿದೆ. ಅಧಿಕಾರಕ್ಕೆ ಬಂದ ಕೇವಲ 6 ತಿಂಗಳೊಳಗೆ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸುವುದಾಗಿ ಘೋಷಿಸಿದೆ. ಅಕ್ರಮ ನುಸುಳುವಿಕೆಯನ್ನು ಸಂಪೂರ್ಣವಾಗಿ ತಡೆಗಟ್ಟಿ, ನುಸುಳುಕೋರರನ್ನು ಗಡಿಪಾರು ಮಾಡುವ ಭರವಸೆ ನೀಡಲಾಗಿದೆ. ಜೊತೆಗೆ, ಟಿಎಂಸಿ ಅವಧಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ‘ಕಟ್ ಮನಿ’ ಸಂಸ್ಕೃತಿಯ ವಿರುದ್ಧ ಸಮರ ಸಾರಿರುವ ಬಿಜೆಪಿ, ಕಳೆದ 15 ವರ್ಷಗಳ ಹಗರಣಗಳ ಮರುತನಿಖೆ ಮಾಡುವುದಾಗಿ ಎಚ್ಚರಿಸಿದೆ.

ಒಟ್ಟಾರೆಯಾಗಿ, ಸಾಂಸ್ಕೃತಿಕ ಪುನರುತ್ಥಾನ, ಸಿಂಗೂರಿನಲ್ಲಿ ಕೈಗಾರಿಕಾ ಪಾರ್ಕ್ ಮತ್ತು ಕೃಷಿ ರಫ್ತು ಹಬ್ ಮಾಡುವ ಮೂಲಕ ಬಂಗಾಳದ ಚಿತ್ರಣವನ್ನೇ ಬದಲಿಸುವುದಾಗಿ ಬಿಜೆಪಿ ಮತದಾರರಿಗೆ ವಾಗ್ದಾನ ಮಾಡಿದೆ.

The post ಬಂಗಾಳದ ಮತಬೇಟೆ: ಮಹಿಳೆಯರು ಮತ್ತು ಯುವಕರಿಗೆ ಮಾಸಿಕ ₹3,000 ಘೋಷಿಸಿದ ಬಿಜೆಪಿ! appeared first on Good News 24x7.

]]>