ತಮಿಳುನಾಡಿನ TVK ಪಕ್ಷದ ಅಧ್ಯಕ್ಷ ವಿಜಯ್ ಆಸ್ತಿ ಗೊತ್ತಾ !

 

ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಸಂಪೂರ್ಣ ಆಸ್ತಿ ವಿವರ ನೀಡಿದ ದಳಪತಿ

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಪೆರಂಬೂರು ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಟಿವಿಕೆ ಅಧ್ಯಕ್ಷ ವಿಜಯ್, ತಮ್ಮ ಅಫಿಡವಿಟ್‌ನಲ್ಲಿ ಒಟ್ಟು 624 ಕೋಟಿಗೂ ಅಧಿಕ ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ಇದರಲ್ಲಿ 404.58 ಕೋಟಿ ಚರ ಆಸ್ತಿ ಹಾಗೂ 220.15 ಕೋಟಿ ಸ್ಥಿರ ಆಸ್ತಿ ಸೇರಿದೆ.

ವಿಶೇಷವೆಂದರೆ, ವಿಜಯ್ ಅವರು ತಮ್ಮ ಕುಟುಂಬ ಸದಸ್ಯರಿಗೆ ಸಾಲ ನೀಡಿರುವುದಾಗಿ ತಿಳಿಸಿದ್ದು, ತಂದೆ ಎಸ್.ಎ. ಚಂದ್ರಶೇಖರ್ ಅವರಿಗೆ 3.02 ಕೋಟಿ, ತಾಯಿ ಶೋಭಾಗೆ 87.12 ಲಕ್ಷ, ಪತ್ನಿ ಸಂಗೀತಾ ಅವರಿಗೆ 12.6 ಕೋಟಿ ಹಾಗೂ ತಮ್ಮ ಮಕ್ಕಳಿಗೆ ಲಕ್ಷಾಂತರ ರೂಪಾಯಿ ಸಾಲ ನೀಡಿದ್ದೇನೆ ಎಂದು ಹೇಳಿದ್ದಾರೆ.

ದಳಪತಿ ವಿಜಯ್ ಬಳಿ 883 ಗ್ರಾಂ ಚಿನ್ನ ಮತ್ತು 5 ಕಾರುಗಳಿದ್ದರೆ, ಪತ್ನಿ ಸಂಗೀತಾ ಹೆಸರಿನಲ್ಲಿ 3 ಕೆಜಿಗೂ ಅಧಿಕ ಚಿನ್ನ ಹಾಗೂ 134 ಕ್ಯಾರಟ್ ವಜ್ರಗಳಿವೆ. ತಮ್ಮನ್ನು ಸ್ವಯಂ ಉದ್ಯೋಗಿ ಎಂದು ಗುರುತಿಸಿಕೊಂಡಿರುವ ವಿಜಯ್ ಅವರಿಗೆ ಬಾಡಿಗೆ, ಬಡ್ಡಿ ಮತ್ತು ಟ್ರಸ್ಟ್‌ಗಳ ಮೂಲಕ ಆದಾಯ ಬರುತ್ತಿದ್ದು. ರಾಜಕೀಯ ಪ್ರವೇಶದ ಬೆನ್ನಲ್ಲೇ ಅವರ ಈ ಬೃಹತ್ ಆಸ್ತಿ ವಿವರ ಈಗ ಭಾರೀ ಚರ್ಚೆಗೆ ಕಾರಣವಾಗಿದೆ.

Related Posts

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

16 ದಾಖಲೆಗಳ ನೀಡಿದ್ರೂ ಸಿಗದ ಭಾರತೀಯ ಪೌರತ್ವ

ಗುವಾಹಟಿ ಹೈಕೋರ್ಟ್ ಇತ್ತೀಚೆಗೆ ವ್ಯಕ್ತಿಯೊಬ್ಬರ ಪೌರತ್ವ ಸಾಬೀತುಪಡಿಸಲು ಸಲ್ಲಿಸಿದ್ದ 16 ಪ್ರಮುಖ ದಾಖಲೆಗಳನ್ನು ತಿರಸ್ಕರಿಸಿದೆ. ಪ್ಯಾನ್, ವೋಟರ್ ಐಡಿ ಸೇರಿದಂತೆ ಹಲವು ದಾಖಲೆಗಳಲ್ಲಿನ ಲೋಪದೋಷಗಳಿಂದಾಗಿ ಅರ್ಜಿದಾರರನ್ನು ವಿದೇಶಿ ಎಂದು ಘೋಷಿಸಲಾಗಿದೆ. ಭಾರತೀಯ ಪೌರತ್ವ ಸಾಬೀತಿಗೆ ವ್ಯಕ್ತಿಯ ಮೇಲೆ ಇರುವ ಹೊಣೆಯ ಜೊತೆಗೆ,…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!