ಭಾರತದ ಎಲ್ಲ ಆಮದುಗಳ ಮೇಲೆ 24 ಗಂಟೆಗಳಲ್ಲಿ ಸುಂಕ ಗಣನೀಯ ಏರಿಕೆ – ಟ್ರಂಪ್‌ ಬೆದರಿಕೆ!

ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ ಎಂದ ಯುಎಸ್‌ ಅಧ್ಯಕ್ಷ
ವಾಷಿಂಗ್ಟನ್: ರಷ್ಯಾದಿಂದ (Russia) ಕಚ್ಚಾ ತೈಲ ಖರೀದಿ ವಿಚಾರದಲ್ಲಿ ಭಾರತ ಮತ್ತು ಅಮೆರಿಕ ನಡುವಿನ ವಾಕ್ಸಮರ ತೀವ್ರ ಜೋರಾಗುತ್ತಿದೆ. ಈ ನಡುವೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮತ್ತೊಮ್ಮೆ ಭಾರತದ ಆಮದುಗಳ ಮೇಲೆ ಹೆಚ್ಚುವರಿ ಸುಂಕ ವಿಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದು ಕಳೆದ 2 ದಿನಗಳಲ್ಲಿ 2ನೇ ಬಾರಿಗೆ ಟ್ರಂಪ್‌ ನೀಡಿದ ಬೆದರಿಕೆಯಾಗಿದೆ.

ಭಾರತ ಉತ್ತಮ ಪಾಲುದಾರನಲ್ಲ
ಹೌದು. ಭಾರತವು ನಮ್ಮ ಉತ್ತಮ ವ್ಯಾಪಾರ ಪಾಲುದಾರನಲ್ಲ. ಏಕೆಂದರೆ ಭಾರತ ನಮ್ಮೊಂದಿಗೆ ಬಹಳಷ್ಟು ವ್ಯವಹಾರ ಮಾಡುತ್ತಾರೆ. ಆದ್ರೆ ನಾವು ಅವರೊಂದಿಗೆ ವ್ಯಾಪಾರ ಮಾಡಲ್ಲ. ಆದ್ದರಿಂದ ನಾವು 25 ಪ್ರತಿಶತದಷ್ಟು ಇತ್ಯರ್ಥಪಡಿಸಿಕೊಂಡಿದ್ದೇವೆ. ಆದ್ರೆ ನಾವು ಹೇಳಿದ ಮೇಲೂ ರಷ್ಯಾದಿಂದ ನಿರಂತರವಾಗಿ ತೈಲ ಖರೀದಿ ಮಾಡಲಾಗುತ್ತಿದೆ. ಈ ಮೂಲಕ ಭಾರತ ಯುದ್ಧದ ಯಂತ್ರಕ್ಕೆ ಇಂಧನ ತುಂಬುತ್ತಿದೆ. ಹಾಗಾಗಿ ಮುಂದಿನ 24 ಗಂಟೆಗಳಲ್ಲಿ ಆಮದುಗಳ ಮೇಲೆ ಸುಂಕವನ್ನು (Tariff Threat) ಗಣನೀಯವಾಗಿ ಏರಿಕೆ ಮಾಡುವುದಾಗಿ ಟ್ರಂಪ್‌ ಬೆದರಿಕೆಯೊಡ್ಡಿದ್ದಾರೆ.

ಭಾರತ ಲಾಭ ಮಾಡಿಕೊಳ್ಳುತ್ತಿದೆ
ಒಂದು ದಿನದ ಹಿಂದಷ್ಟೇ ಸುಂಕ ಗಣನೀಯ ಏರಿಕೆ ಕುರಿತು ಟ್ರಂಪ್‌ ಮಾತನಾಡಿದ್ದರು, ಭಾರತ ರಷ್ಯಾದಿಂದ (India-Russia) ದೊಡ್ಡ ಪ್ರಮಾಣದಲ್ಲಿ ಕಚ್ಚಾ ತೈಲ ಆಮದು ಮಾಡಿಕೊಳ್ಳುತ್ತಿದೆ. ಈ ಮೂಲಕ ದೊಡ್ಡ ಪ್ರಮಾಣದಲ್ಲಿ ಲಾಭ ಮಾಡಿಕೊಳ್ಳುತ್ತಿದೆ. ಭಾರತವು ದೊಡ್ಡ ಪ್ರಮಾಣದಲ್ಲಿ ರಷ್ಯಾದ ತೈಲ (Russian Oil) ಮಾತ್ರ ಖರೀದಿಸುತ್ತಿಲ್ಲ, ಖರೀದಿಸಿದ ತೈಲವನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಿ, ದೊಡ್ಡ ಪ್ರಮಾಣದ ಲಾಭ ಮಾಡಿಕೊಳ್ಳುತ್ತಿದೆ. ರಷ್ಯಾದ ಯುದ್ಧ ಟ್ಯಾಂಕರ್‌ಗಳಿಂದ ಉಕ್ರೇನ್‌ನಲ್ಲಿ ಹಲವು ಜನ ಸಾಯುತ್ತಿದ್ದರೂ ಅವರು ಹೆದರುತ್ತಿಲ್ಲ. ಈ ಕಾರಣದಿಂದಲೇ, ಭಾರತದಿಂದ ಖರೀದಿಸುವ ಎಲ್ಲ ಸರಕುಗಳಿಗೂ ಸುಂಕವನ್ನ ಗಣನೀಯವಾಗಿ ಏರಿಕೆ ಮಾಡಲಾಗುವುದು ಎಂದು ಟ್ರಂಪ್‌ ಎಚ್ಚರಿಕೆ ನೀಡಿದ್ದರು.

ಭಾರತಕ್ಕಿಂತ ಪಾಕ್‌ಗೆ ಕಡಿಮೆ ಸುಂಕ
ಈಗಾಗಲೇ ಆಗಸ್ಟ್‌ 7ರಿಂದ ಅನ್ವಯವಾಗುವಂತೆ `ಭಾರತದಿಂದ ಆಮದು ಮಾಡಿಕೊಳ್ಳುವ ಎಲ್ಲ ಸರಕುಗಳಿಗೂ ಶೇ.25ರಷ್ಟು ಸುಂಕ ವಿಧಿಸುವ ಆದೇಶಕ್ಕೆ ಟ್ರಂಪ್‌ ಸಹಿ ಹಾಕಿದ್ದಾರೆ. ಆದ್ರೆ ಪಾಕಿಸ್ತಾನಕ್ಕೆ 19% ಸುಂಕ ವಿಧಿಸಿದ್ದಾರೆ. ಬೃಹತ್‌ ಪ್ರಮಾಣದಲ್ಲಿ ರಷ್ಯಾದ ಸೇನಾ ಉಪಕರಣಗಳು, ಕಚ್ಚಾ ತೈಲ ಖರೀದಿಸುತ್ತಿರುವ ಭಾರತದ ಮೇಲೆ ದಂಡ ವಿಧಿಸಲಾಗುವುದು ಎಂದು ಹೇಳಿದ್ದರು. ಆದ್ರೆ, ಯಾವ ದಿನಾಂಕದಿಂದ ಈ ನಿರ್ಧಾರ ಜಾರಿಗೆ ಬರಲಿದೆ ಎಂದು ತಿಳಿಸಿರಲಿಲ್ಲ.

2ನೇ ಅತೀ ದೊಡ್ಡ ಖರೀದಿದಾರ
ಭಾರತವು ರಷ್ಯಾದಿಂದ ದೇಶದ ಅಗತ್ಯವಿರುವ ಕಚ್ಚಾತೈಲದ ಪೈಕಿ ಶೇ.35ರಿಂದ 40ರಷ್ಟು ಖರೀದಿಸುತ್ತಿದೆ. ಉಕ್ರೇನ್ ಜೊತೆಗಿನ ಯುದ್ಧ ಆರಂಭಕ್ಕೂ ಮುನ್ನ ಹೋಲಿಸಿದ್ರೆ, ಆಮದು ಪ್ರಮಾಣವು ಶೇ.0.2ರಷ್ಟು ಏರಿಕೆಯಾಗಿದೆ. ರಷ್ಯಾದಿಂದ ಗರಿಷ್ಠ ಪ್ರಮಾಣದ ಕಚ್ಚಾತೈಲ ಖರೀದಿಯಲ್ಲಿ ಚೀನಾ ಮೊದಲ ಸ್ಥಾನದಲ್ಲಿದ್ದರೆ, ಭಾರತವು ನಂತರದ ಸ್ಥಾನದಲ್ಲಿದೆ ಎಂದು ವರದಿಗಳು ತಿಳಿಸಿವೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು