ಗಣತಿ ಒತ್ತಡದಿಂದ ಶಿಕ್ಷಕಿ ಆ*ಹ* ! ಕೆರೆಯಲ್ಲಿ ಶ * ಪತ್ತೆ.

ಕೋಲಾರ :- ಬೇತಮಂಗಲ ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿ ಕೆರೆ ಯಲ್ಲಿ ಶವವಾಗಿ ಪತ್ತೆಯಾ ಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂ ದಾಗಿ ಆತ್ಮಹತ್ಯೆ ಮಾಡಿಕೊಂಡಿ ರಬಹುದು ಎನ್ನಲಾಗಿದೆ.

ಅಕ್ತರ್ ಬೇಗಂ (50) ಶಿಕ್ಷಕಿ ಯಾಗಿದ್ದರು, ಅವರು ಸೋಮವಾರ ಸಮೀ ಕೈಗೆ ತೆರಳಿದ್ದರು. ಇವರು ಕಾಣೆಯಾಗಿದ್ದಾರೆ ಎಂದು ಮನೆಯವರು ದೂರು ನೀಡಿದ್ದರು. ಬುಧವಾರ ಬೇತಮಂಗಲ ಹೋಬಳಿಯ ಅಮಾನಿಕೆರೆಯಲ್ಲಿ ಬ್ಯಾಗ್ ತೇಲುತ್ತಿದ್ದನ್ನು ಕಂಡ ಸಳೀಯರು, ಶವ ಕಂಡು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶವ ಮೇಲೆತ್ತಿದ್ದಾರೆ.

ಅಕ್ತರ್ ಅವರು ಕಳೆದ 15 ದಿನಗಳಿಂದ ಜಾತಿ ಗಣತಿಯಲ್ಲಿದ್ದರು. ಸಮೀಕ್ಷೆಯಲ್ಲಿ ಜನರು ಸರಿ ಯಾಗಿ ಸ್ಪಂದಿಸದ ಕಾರಣ, ಗಣತಿ ಮುಂದೆ ಸಾಗದೆ ಮಾನ ಸಿಕ ಹಿಂಸೆಗೆ ಒಳಗಾಗಿದ್ದರು. ಇದಿಷ್ಟೇ ಅಲ್ಲದೇ ಹಿರಿಯ ಅಧಿ ಕಾರಿಗಳ ಒತ್ತಡವೂ ಸಹ ಶಿಕ್ಷಕಿ ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು ಎನ್ನಲಾಗಿದೆ. ಸೋಮವಾರ ಸಮೀಕ್ಷೆ ಮುಗಿಸಿ ಮನೆಗೆ ಬರದ್ದನ್ನು ಕಂಡು ಬೇಗಂ ಅವರ ಪತಿ ಪೊಲೀಸರಿಗೆ ದೂರಿತ್ತಿ ದ್ದರು. ಬುಧವಾರ ಶವ ಪತ್ತೆಯಾಗಿದ್ದು, ಕೆಜಿಎಫ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ಹಿರಿಯ ಅಧಿಕಾರಿಗಳ ಮಾನಸಿಕ ಹಿಂಸೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದ ಅಖ್ತರ್ ಬೇಗಂ ಶವ ಕೆಜಿಎಫ್‌ನ ಬೇತಮಂಗಲ ಹೋಬಳಿ ಅಯ್ಯಪಲ್ಲಿ ಅಮಾನಿ ಕೆರೆಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೂರು ದಿನದಿಂದ ನಾಪತ್ತೆಯಾಗಿದ್ದ ಅಖ್ತರ್ ಬೇಗಂ ಶವ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟೀ ಕೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಯ್ಯಪಲ್ಲಿ ಅಮಾನಿ ಕೆರೆಯ ದಡದಲ್ಲಿ ಅಖ್ತರ್ ಬೇಗಂಗೆ ಗಣತಿಗೆ ನೀಡಿದ್ದ ಕಿಟ್ ಪತ್ತೆಯಾಗಿದೆ. ಇದನ್ನು ನೋಡಿ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು, ಅಗ್ನಿಶಾಮಕ ದಳದ ಜೊತೆ ಹುಡುಕಾಟ ನಡೆಸಿ ಕೆರೆಯಲ್ಲಿ ಶವ ಪತ್ತೆ ಮಾಡಿ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಮಗನ ಬೈಕ್‌ನಲ್ಲಿ ಡ್ರಾಪ್ ತೆಗೆದುಕೊಂಡು ಮೂರು ದಿನದ ಹಿಂದೆ ಗಣತಿಗೆ ತೆರಳಿದ್ದರು. ಅವರ ಮೊಬೈಲ್ ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಅವರು ಹಲವು ದಿನದಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎಂಬ ಮಾಹಿತಿಯೂ ಇದೆ. ಸೋಮವಾರ ರಾತ್ರಿ ಅಖ್ತರ್ ಬೇಗಂ ಮನೆಗೆ ವಾಪಸ್ ಆಗದೇ ಇದ್ದಾಗ ಕೋಲಾರ ನಗರ ಠಾಣೆಗೆ ದೂರು ನೀಡಲಾಗಿತ್ತು.

ಅಖ್ತರ್ ಬೇಗಂ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವ ಅವರನ್ನು ಕೊಲೆ ಮಾಡಿ ಶವವನ್ನು ಕೆರೆಗೆ ಎಸೆಯಲಾಗಿದೆಯೇ? ಎಂಬ ಕುರಿತು ತನಿಖೆ ಬಳಿಕ ಮಾಹಿತಿ ತಿಳಿಯಬೇಕಿದೆ.

ಕೆಲವು ದಿನಗಳ ಹಿಂದೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದರು. ಈಗಾಗಲೇ ಗಣತಿಯಲ್ಲಿ ತೊಡಗಿದ್ದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದರು ಅವರು ಅವಲಂಬಿತರಿಗೆ ತಲಾ 20 ಲಕ್ಷ ಪರಿಹಾರ ನೀಡಲು ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!