ಗಣತಿ ಒತ್ತಡದಿಂದ ಶಿಕ್ಷಕಿ ಆ*ಹ* ! ಕೆರೆಯಲ್ಲಿ ಶ * ಪತ್ತೆ.

ಕೋಲಾರ :- ಬೇತಮಂಗಲ ರಾಜ್ಯ ಸರ್ಕಾರದ ಜಾತಿ ಗಣತಿಗೆ ತೆರಳಿದ್ದ ಕೋಲಾರ ಜಿಲ್ಲೆಯ ಶಿಕ್ಷಕಿ ಕೆರೆ ಯಲ್ಲಿ ಶವವಾಗಿ ಪತ್ತೆಯಾ ಗಿದ್ದು, ಗಣತಿಯಲ್ಲಿ ಹಿರಿಯ ಅಧಿಕಾರಿಗಳು ಕೊಟ್ಟ ಒತ್ತಡದಿಂ ದಾಗಿ ಆತ್ಮಹತ್ಯೆ ಮಾಡಿಕೊಂಡಿ ರಬಹುದು ಎನ್ನಲಾಗಿದೆ.

ಅಕ್ತರ್ ಬೇಗಂ (50) ಶಿಕ್ಷಕಿ ಯಾಗಿದ್ದರು, ಅವರು ಸೋಮವಾರ ಸಮೀ ಕೈಗೆ ತೆರಳಿದ್ದರು. ಇವರು ಕಾಣೆಯಾಗಿದ್ದಾರೆ ಎಂದು ಮನೆಯವರು ದೂರು ನೀಡಿದ್ದರು. ಬುಧವಾರ ಬೇತಮಂಗಲ ಹೋಬಳಿಯ ಅಮಾನಿಕೆರೆಯಲ್ಲಿ ಬ್ಯಾಗ್ ತೇಲುತ್ತಿದ್ದನ್ನು ಕಂಡ ಸಳೀಯರು, ಶವ ಕಂಡು ಪೊಲೀಸರ ಗಮನಕ್ಕೆ ತಂದಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಶವ ಮೇಲೆತ್ತಿದ್ದಾರೆ.

ಅಕ್ತರ್ ಅವರು ಕಳೆದ 15 ದಿನಗಳಿಂದ ಜಾತಿ ಗಣತಿಯಲ್ಲಿದ್ದರು. ಸಮೀಕ್ಷೆಯಲ್ಲಿ ಜನರು ಸರಿ ಯಾಗಿ ಸ್ಪಂದಿಸದ ಕಾರಣ, ಗಣತಿ ಮುಂದೆ ಸಾಗದೆ ಮಾನ ಸಿಕ ಹಿಂಸೆಗೆ ಒಳಗಾಗಿದ್ದರು. ಇದಿಷ್ಟೇ ಅಲ್ಲದೇ ಹಿರಿಯ ಅಧಿ ಕಾರಿಗಳ ಒತ್ತಡವೂ ಸಹ ಶಿಕ್ಷಕಿ ಖಿನ್ನತೆಗೆ ಒಳಗಾಗುವಂತೆ ಮಾಡಿತ್ತು ಎನ್ನಲಾಗಿದೆ. ಸೋಮವಾರ ಸಮೀಕ್ಷೆ ಮುಗಿಸಿ ಮನೆಗೆ ಬರದ್ದನ್ನು ಕಂಡು ಬೇಗಂ ಅವರ ಪತಿ ಪೊಲೀಸರಿಗೆ ದೂರಿತ್ತಿ ದ್ದರು. ಬುಧವಾರ ಶವ ಪತ್ತೆಯಾಗಿದ್ದು, ಕೆಜಿಎಫ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಸಾವಿಗೆ ಹಿರಿಯ ಅಧಿಕಾರಿಗಳ ಮಾನಸಿಕ ಹಿಂಸೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಕೋಲಾರದ ಮಹಾಲಕ್ಷ್ಮಿ ಬಡವಾಣೆಯ ನಿವಾಸಿಯಾಗಿದ್ದ ಅಖ್ತರ್ ಬೇಗಂ ಶವ ಕೆಜಿಎಫ್‌ನ ಬೇತಮಂಗಲ ಹೋಬಳಿ ಅಯ್ಯಪಲ್ಲಿ ಅಮಾನಿ ಕೆರೆಯಲ್ಲಿ ಪತ್ತೆಯಾಗಿದೆ. ಈ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೂರು ದಿನದಿಂದ ನಾಪತ್ತೆಯಾಗಿದ್ದ ಅಖ್ತರ್ ಬೇಗಂ ಶವ ಪತ್ತೆಯಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಟೀ ಕೊಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅಯ್ಯಪಲ್ಲಿ ಅಮಾನಿ ಕೆರೆಯ ದಡದಲ್ಲಿ ಅಖ್ತರ್ ಬೇಗಂಗೆ ಗಣತಿಗೆ ನೀಡಿದ್ದ ಕಿಟ್ ಪತ್ತೆಯಾಗಿದೆ. ಇದನ್ನು ನೋಡಿ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪೊಲೀಸರು, ಅಗ್ನಿಶಾಮಕ ದಳದ ಜೊತೆ ಹುಡುಕಾಟ ನಡೆಸಿ ಕೆರೆಯಲ್ಲಿ ಶವ ಪತ್ತೆ ಮಾಡಿ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ ಮಗನ ಬೈಕ್‌ನಲ್ಲಿ ಡ್ರಾಪ್ ತೆಗೆದುಕೊಂಡು ಮೂರು ದಿನದ ಹಿಂದೆ ಗಣತಿಗೆ ತೆರಳಿದ್ದರು. ಅವರ ಮೊಬೈಲ್ ಮನೆಯಲ್ಲಿಯೇ ಬಿಟ್ಟು ಹೋಗಿದ್ದರು. ಅವರು ಹಲವು ದಿನದಿಂದ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರು ಎಂಬ ಮಾಹಿತಿಯೂ ಇದೆ. ಸೋಮವಾರ ರಾತ್ರಿ ಅಖ್ತರ್ ಬೇಗಂ ಮನೆಗೆ ವಾಪಸ್ ಆಗದೇ ಇದ್ದಾಗ ಕೋಲಾರ ನಗರ ಠಾಣೆಗೆ ದೂರು ನೀಡಲಾಗಿತ್ತು.

ಅಖ್ತರ್ ಬೇಗಂ ಮಾನಸಿಕ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ? ಅಥವ ಅವರನ್ನು ಕೊಲೆ ಮಾಡಿ ಶವವನ್ನು ಕೆರೆಗೆ ಎಸೆಯಲಾಗಿದೆಯೇ? ಎಂಬ ಕುರಿತು ತನಿಖೆ ಬಳಿಕ ಮಾಹಿತಿ ತಿಳಿಯಬೇಕಿದೆ.

ಕೆಲವು ದಿನಗಳ ಹಿಂದೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಕುರಿತ ವೀಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದ್ದರು. ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದ್ದರು. ಈಗಾಗಲೇ ಗಣತಿಯಲ್ಲಿ ತೊಡಗಿದ್ದ ಇಬ್ಬರು ಸಿಬ್ಬಂದಿ ಮೃತಪಟ್ಟಿದ್ದರು ಅವರು ಅವಲಂಬಿತರಿಗೆ ತಲಾ 20 ಲಕ್ಷ ಪರಿಹಾರ ನೀಡಲು ಹಣವನ್ನು ಜಿಲ್ಲಾಧಿಕಾರಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!