ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಹರಿದ ನೆತ್ತರು!

ಉಡುಪಿಯ ಮಲ್ಪೆ ಬೀಚ್‌ನಲ್ಲಿ ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಗಲಾಟೆ ಸಂಭವಿಸಿ, ಸ್ಥಳೀಯ ಮುಖಂಡ ಮಂಜು ಕೊಳ ಸೇರಿದಂತೆ ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಗಲಾಟೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಹ* ನಡೆಸಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲಾಗಿದ್ದು, ಮಲ್ಪೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಪ್ರೇಮ ಪ್ರಕರಣದ ರಾಜಿ ಪಂಚಾಯಿತಿ ವೇಳೆ ಸ್ಥಳೀಯ ಪ್ರಭಾವಿ ಮುಖಂಡನಿಗೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಉಡುಪಿಯ ಮಲ್ಪೆ ಬೀಚ್​​ನಲ್ಲಿ ನಡೆದಿದೆ. ಘಟನೆಯಲ್ಲಿ ಮಂಜು ಕೊಳ ಸೇರಿ ಒಟ್ಟು ಮೂವರಿಗೆ ಚಾಕುವಿನಿಂದ ಇರಿಯಲಾಗಿದೆ. ಈ ವೇಳೆ ತಡೆಯಲು ಬಂದ ಮತ್ತಿಬ್ಬರ ಮೇಲೂ ಆರೋಪಿಗಳು ಹಲ್ಲೆ ನಡೆಸಿದ್ದು, ಬೆದರಿಕೆ ಹಾಕಿ ಪರಾರಿಗೆ ಯತ್ನಿಸಿದ್ದಾರೆ. ಈ ವೇಳೆ ಅವರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

 

ಮಲ್ಪೆಯ ಯುವಕ ಮತ್ತು ಪಡುಬಿದ್ರಿ–ಪಲಿಮಾರು ಭಾಗದ ಯುವತಿಯ ನಡುವಿನ ಪ್ರೇಮ ಪ್ರಕರಣ ಸಂಬಂಧ ಎರಡೂ ಕಡೆಯವರು ಮಾತುಕತೆ ನಡೆಸಲು ಬೀಚ್‌ ಸಮೀಪ ಸೇರಿದ್ದರು. ಆರಂಭದಲ್ಲಿ ಶಾಂತವಾಗಿಯೇ ನಡೆಯುತ್ತಿದ್ದ ಮಾತುಕತೆ, ಕೆಲವೇ ಕ್ಷಣಗಳಲ್ಲಿ ಮಾತಿನ ಚಕಮಕಿಗೆ ತಿರುಗಿದೆ. ಕುಟುಂಬದ ಗೌರವ ಮತ್ತು ಸಂಬಂಧಿತ ವಿಚಾರಗಳ ಬಗ್ಗೆ ಆರೋಪ–ಪ್ರತ್ಯಾರೋಪಗಳು ನಡೆಯುತ್ತಿದ್ದಂತೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಸಾಕ್ಷಿದಾರರ ಪ್ರಕಾರ, ತೀವ್ರ ವಾಗ್ವಾದದ ಮಧ್ಯೆ ಆರೋಪಿಗಳಲ್ಲಿ ಒಬ್ಬನು ತನ್ನ ಬಳಿಯಿದ್ದ ಚಾಕುವನ್ನು ಹೊರತೆಗೆದು ಮಂಜು ಕೊಳ ಅವರ ಹೊಟ್ಟೆಯ ಎಡಭಾಗಕ್ಕೆ ಇರಿದಿದ್ದಾನೆ. ರಕ್ತಸ್ರಾವವಾಗುತ್ತಾ ಅವರು ನೆಲಕ್ಕುರುಳುತ್ತಿದ್ದಂತೆ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಇದನ್ನು ತಡೆಯಲು ಮುಂದಾದ ವರುಣ್ ಹಾಗೂ ಲತೀಶ್ ಅವರಿಗೂ ಚಾಕು ಇರಿದು ಗಾಯಗೊಳಿಸಲಾಗಿದೆ ಎನ್ನಲಾಗಿದೆ. ಸಂತೋಷ್ ಮತ್ತು ಧನುಷ್ ಮೇಲೂ ಕೈಯಿಂದ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಇನ್ನು ಪ್ರಕರಣ ಸಂಬಂಧ ಅಮೃತ್ ಭಂಡಾರಿ, ಪ್ರಜ್ಞೇಶ್, ಪುನೀತ್​ ಪೂಜಾರಿ ಹಾಗೂ ಅಭಿಜಿತ್​​ ಎಂಬ ನಾಲ್ವರನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಅಪ್ರಾಪ್ತನನ್ನು ಬಾಲ ನ್ಯಾಯ ಮಂಡಳಿಗೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಈ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ. ಘಟನೆ ಹಿನ್ನೆಲೆಯಲ್ಲಿ ಮಲ್ಪೆ ಬೀಚ್‌ ಪ್ರದೇಶದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!