ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಬೆನ್ನಿಗೆ ಗುಂಡು ಹಾರಿಸಿ ಕೊಂ*ದ ತಂದೆ!

ನವದೆಹಲಿ : ತನ್ನದೇ ಸ್ವಂತ ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಆಕೆಯ ಪ್ರಮುಖ ಅಂಗಗಳಿಗೆ ಗಾಯಗಳಾಗಿ ಅವರು ತಕ್ಷಣವೇ ಸಾವನ್ನಪ್ಪಿದ್ದಾರೆ.


ಕೊಲೆ ಆರೋಪಿ ಹಾಗೂ ಮೃತ ಯುವತಿಯ ತಂದೆ ದೀಪಕ್ ಯಾದವ್ ಅವರನ್ನು ಬಂಧಿಸಲಾಗಿದೆ. ಅವರ ಬಳಿಯಿದ್ದ ಲೈಸೆನ್ಸ್ ಪಡೆದ ರಿವಾಲ್ವರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಈ ಘಟನೆಯ ಪ್ರಾಥಮಿಕ ತನಿಖೆಯಲ್ಲಿ ರಾಧಿಕಾ ಯಾದವ್ ಅವರ 51 ವರ್ಷದ ತಂದೆ ತಮ್ಮ ಮಗಳು ಸ್ವಂತ ಟೆನಿಸ್ ಅಕಾಡೆಮಿ ನಡೆಸುತ್ತಿದ್ದುದಕ್ಕೆ ಅಸಮಾಧಾನಗೊಂಡಿದ್ದರು ಎಂದು ತಿಳಿದುಬಂದಿದೆ.


ಪೊಲೀಸರ ಪ್ರಕಾರ, ದೀಪಕ್ ಯಾದವ್ ಅವರ ಊರಾದ ವಜೀರಾಬಾದ್ನಲ್ಲಿ ಗ್ರಾಮಸ್ಥರು ಮತ್ತು ಗೆಳೆಯರಿಂದ ಬಂದ ನಿಂದನೆಗಳಿಂದ ಕೋಪಗೊಂಡಿದ್ದರು. ಅವರ ಗೆಳೆಯರು, ಸಂಬಂಧಿಕರು ದೀಪಕ್ ತಮ್ಮ ಮಗಳ ಟೆನಿಸ್ ಅಕಾಡೆಮಿಯಿಂದ ಪಡೆಯುವ ಆದಾಯದಿಂದ ಬದುಕುತ್ತಿದ್ದಕ್ಕಾಗಿ ಅಪಹಾಸ್ಯ ಮಾಡಿದ್ದರು. ಇದರಿಂದ ದೀಪಕ್ ಯಾದವ್ ಮಗಳ ಮೇಲೆ ಕೋಪಗೊಂಡಿದ್ದರು. ಮಗಳಿಗೆ ಟೆನಿಸ್ ಅಕಾಡೆಮಿ ಮುಚ್ಚುವಂತೆ ಅನೇಕ ಬಾರಿ ಹೇಳಿದ್ದರು. ಆದರೆ, ಆಕೆ ಒಪ್ಪಿರಲಿಲ್ಲ. ಇದೇ ವಿಷಯದ ಜಗಳದಿಂದ ಗುಂಡು ಹಾರಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಪೊಲೀಸರ ಪ್ರಕಾರ, ತಂದೆ ತನ್ನ ಮಗಳ ವೃತ್ತಿಜೀವನ ಮತ್ತು ಗಳಿಕೆಯ ಬಗ್ಗೆ ಸಾಮಾಜಿಕ ಟೀಕೆಗಳಿಂದಾಗಿ ಕಳೆದ 15 ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದೆ ಎಂದು ಹೇಳಿಕೊಂಡಿದ್ದಾರೆ. ತಂದೆ ಮತ್ತು ಮಗಳ ನಡುವಿನ ಇತ್ತೀಚಿನ ವಾಗ್ವಾದವು ರಾಧಿಕಾ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ವೀಡಿಯೊದಿಂದ ಹುಟ್ಟಿಕೊಂಡಿರಬಹುದು ಎಂದು ತನಿಖಾಧಿಕಾರಿಯೊಬ್ಬರು ಹೇಳಿದ್ದಾರೆ.

ರಾಧಿಕಾ ಯಾದವ್ ಯಾರು?


ರಾಧಿಕಾ ಒಬ್ಬ ಪ್ರತಿಭಾನ್ವಿತ ಮತ್ತು ಭರವಸೆಯ ಟೆನಿಸ್ ಕ್ರೀಡಾಪಟು. ಸ್ಕಾಟಿಷ್ ಹೈ ಇಂಟರ್ನ್ಯಾಷನಲ್ ಶಾಲೆಯ ಪದವೀಧರೆ. ಆಕೆ 2018ರಲ್ಲಿ ವಾಣಿಜ್ಯ ವಿಭಾಗದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಶಾಲೆಯಲ್ಲಿ ಓದುವಾಗಲೇ ಆಕೆ ಟೆನಿಸ್ಗೆ ಕಾಲಿಟ್ಟರು. ರಾಧಿಕಾ ಅಂತಾರಾಷ್ಟ್ರೀಯ ಟೆನಿಸ್ ಫೆಡರೇಶನ್ (ಐಟಿಎಫ್) ನಲ್ಲಿ ಡಬಲ್ಸ್ ಟೆನಿಸ್ ಆಟಗಾರ್ತಿಯಾಗಿ 113ನೇ ಸ್ಥಾನ ಪಡೆದಿದ್ದರು. ಐಟಿಎಫ್ ಡಬಲ್ಸ್ನಲ್ಲಿ ಅವರು ಅಗ್ರ 200ರೊಳಗೆ ಸ್ಥಾನ ಪಡೆದಿದ್ದರು. ಆಕೆ ಇತ್ತೀಚೆಗೆ ಭುಜದ ಗಾಯದಿಂದ ಬಳಲುತ್ತಿದ್ದರು ಮತ್ತು ಚಿಕಿತ್ಸೆಗೂ ಒಳಗಾಗಿದ್ದರು. ಆದರೂ ಅಕಾಡೆಮಿಯನ್ನು ನಡೆಸುವುದನ್ನು ನಿಲ್ಲಿಸಲಿಲ್ಲ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು