‘Thalapathy 69’ ವಿಜಯ್ ಕೊನೆಯ ಸಿನಿಮಾ

ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘Thalapathy 69’ ಚಿತ್ರ ಸಿದ್ಧವಾಗಲಿದೆ. ಈ ಚಿತ್ರದ ಬಗ್ಗೆ ಇಂದು (ಸೆಪ್ಟೆಂಬ್ 14) ಸಂಜೆ 5 ಗಂಟೆಗೆ ಅಪ್​ಡೇಟ್ ಕೊಡೋದಾಗಿ ಕೆವಿಎನ್ ಸಂಸ್ಥೆ ತಿಳಿಸಿದೆ.

ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ಇತ್ತೀಚೆಗಷ್ಟೇ ರಿಲೀಸ್ ಆದ ‘ಉಔಂಖಿ’ ಸಿನಿಮಾ ಫ್ಲಾಪ್ ಆಗಿದೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದು ‘ಕೆವಿಎನ್ ಪ್ರೊಡಕ್ಷನ್ಸ್’ ಖಚಿತಪಡಿಸಿದೆ.

 

 

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಕಾರಣಕ್ಕೆ ‘Thalapathy 69’ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕವೂ ಅವರು ಕೆಲವು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರೋ ವಿಡಿಯೋದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ‘Thalapathy 69’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಅಪ್​​ಡೇಟ್ ಇಂದು (ಸೆಪ್ಟೆಂಬರ್ 14) ಸಿಗಲಿದೆ. ಈ ಮೊದಲು ವಿಜಯ್ ಸಿನಿಮಾ ರಿಲೀಸ್ ಆದಾಗ ಫ್ಯಾನ್ಸ್ ಹೇಗೆ ಸಂಭ್ರಮಿಸಿದ್ದರು ಎನ್ನುವುದರ ಫೋಟೋ ಹಂಚಿಕೊಳ್ಳಲಾಗಿದೆ. ವಿಡಿಯೋದ ಕೊನೆಯಲ್ಲಿ ‘ಕೊನೆಯ ಬಾರಿ ಖಿhಚಿಟಚಿಠಿಚಿಣhಥಿ 69’ ಎಂದು ಬರೆಯಲಾಗಿದೆ. ಈ ಮೂಲಕ ಇದು ವಿಜಯ್ ಕೊನೆಯ ಸಿನಿಮಾ ಎಂಬುದನ್ನು ಖಚಿತಪಡಿಸಿದ್ದಾರೆ.

‘ತಮಿಳಗ ವೆಟ್ರಿ ಕಳಗಂ’ ಅನ್ನೋದು ವಿಜಯ್ ಪಕ್ಷದ ಹೆಸರು. ಅವರು ಮುಂದಿನ ದಿನಗಳಲ್ಲಿ ಪಕ್ಷ ಕಟ್ಟು ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

  • Related Posts

    ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣ !

    ಮೈಸೂರಿನ ಗದ್ದಿಗೆ ರಸ್ತೆಗೆ ‘ಎಸ್. ಜಾನಕಿ ರಸ್ತೆ’ ನಾಮಕರಣಕ್ಕೆ ಶಾಸಕ ಜಿ.ಟಿ. ದೇವೇಗೌಡ ಭರವಸೆ. ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ತಮ್ಮ ಅಮೋಘ ಗಾಯನದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿದ್ದ ಗಾನಕೋಗಿಲೆ ಎಸ್. ಜಾನಕಿ ಅವರ ಸ್ಮರಣಾರ್ಥ…

    ಚಿತ್ರರಂಗಕ್ಕೆ ಕಾಲಿಟ್ಟ ಲಂಕೇಶ್ ಮೊಮ್ಮಗಳು ಇಶಾ ಲಂಕೇಶ್

      ಕೆಲವು ಸಿನಿಮಾಗಳನ್ನು ನಿರ್ದೇಶಿಸಿ, ನಟನೆ ಸಹ ಮಾಡಿದ್ದರು ಪಿ ಲಂಕೇಶ್. ಇದೀಗ ಅವರ ಮೂರನೇ ತಲೆಮಾರು ಅಂದರೆ ಮೊಮ್ಮಕ್ಕಳು ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಲಂಕೇಶ್ ಅವರ ಪುತ್ರ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರ ಮಗ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಇದೀಗ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!