‘Thalapathy 69’ ವಿಜಯ್ ಕೊನೆಯ ಸಿನಿಮಾ

ಕೆವಿಎನ್ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘Thalapathy 69’ ಚಿತ್ರ ಸಿದ್ಧವಾಗಲಿದೆ. ಈ ಚಿತ್ರದ ಬಗ್ಗೆ ಇಂದು (ಸೆಪ್ಟೆಂಬ್ 14) ಸಂಜೆ 5 ಗಂಟೆಗೆ ಅಪ್​ಡೇಟ್ ಕೊಡೋದಾಗಿ ಕೆವಿಎನ್ ಸಂಸ್ಥೆ ತಿಳಿಸಿದೆ.

ದಳಪತಿ ವಿಜಯ್ ಅವರು ತಮ್ಮ 69ನೇ ಸಿನಿಮಾಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದು ವಿಜಯ್ ಅವರ ಕೊನೆಯ ಸಿನಿಮಾ ಆಗಿರಲಿದೆ. ಇತ್ತೀಚೆಗಷ್ಟೇ ರಿಲೀಸ್ ಆದ ‘ಉಔಂಖಿ’ ಸಿನಿಮಾ ಫ್ಲಾಪ್ ಆಗಿದೆ. ಈ ಕಾರಣಕ್ಕೆ ಅವರ ಮುಂದಿನ ಚಿತ್ರದ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾ ದಳಪತಿ ವಿಜಯ್ ಅವರ ಕೊನೆಯ ಸಿನಿಮಾ ಎಂದು ‘ಕೆವಿಎನ್ ಪ್ರೊಡಕ್ಷನ್ಸ್’ ಖಚಿತಪಡಿಸಿದೆ.

 

 

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಬ್ಯುಸಿ ಆಗುತ್ತಿದ್ದಾರೆ. ಈ ಕಾರಣಕ್ಕೆ ‘Thalapathy 69’ ಅವರ ಕೊನೆಯ ಸಿನಿಮಾ ಆಗಲಿದೆ ಎಂದು ಹೇಳಲಾಗಿತ್ತು. ಇದಾದ ಬಳಿಕವೂ ಅವರು ಕೆಲವು ಸಿನಿಮಾ ಒಪ್ಪಿಕೊಳ್ಳುತ್ತಾರೆ ಎಂದು ವರದಿ ಆಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈಗ ರಿಲೀಸ್ ಆಗಿರೋ ವಿಡಿಯೋದಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದೆ.

ಕನ್ನಡದ ಕೆವಿಎನ್ ಪ್ರೊಡಕ್ಷನ್ಸ್ ಸಂಸ್ಥೆ ‘Thalapathy 69’ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಚಿತ್ರದ ಅಪ್​​ಡೇಟ್ ಇಂದು (ಸೆಪ್ಟೆಂಬರ್ 14) ಸಿಗಲಿದೆ. ಈ ಮೊದಲು ವಿಜಯ್ ಸಿನಿಮಾ ರಿಲೀಸ್ ಆದಾಗ ಫ್ಯಾನ್ಸ್ ಹೇಗೆ ಸಂಭ್ರಮಿಸಿದ್ದರು ಎನ್ನುವುದರ ಫೋಟೋ ಹಂಚಿಕೊಳ್ಳಲಾಗಿದೆ. ವಿಡಿಯೋದ ಕೊನೆಯಲ್ಲಿ ‘ಕೊನೆಯ ಬಾರಿ ಖಿhಚಿಟಚಿಠಿಚಿಣhಥಿ 69’ ಎಂದು ಬರೆಯಲಾಗಿದೆ. ಈ ಮೂಲಕ ಇದು ವಿಜಯ್ ಕೊನೆಯ ಸಿನಿಮಾ ಎಂಬುದನ್ನು ಖಚಿತಪಡಿಸಿದ್ದಾರೆ.

‘ತಮಿಳಗ ವೆಟ್ರಿ ಕಳಗಂ’ ಅನ್ನೋದು ವಿಜಯ್ ಪಕ್ಷದ ಹೆಸರು. ಅವರು ಮುಂದಿನ ದಿನಗಳಲ್ಲಿ ಪಕ್ಷ ಕಟ್ಟು ಕೆಲಸದಲ್ಲಿ ಬ್ಯುಸಿ ಆಗಲಿದ್ದಾರೆ. 2026ರ ವಿಧಾನಸಭೆ ಚುನಾವಣೆಯಲ್ಲಿ ಅವರು ಸ್ಪರ್ಧೆ ಮಾಡಲಿದ್ದಾರೆ. ಇದಕ್ಕಾಗಿ ಫ್ಯಾನ್ಸ್ ಕಾದಿದ್ದಾರೆ.

  • Related Posts

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    Yash: ಮುಂಬೈನಲ್ಲಿ ಪತ್ನಿ ರಾಧಿಕಾ ಪಂಡಿತ್ ಜೊತೆ ಕಾಣಿಸಿಕೊಂಡ ಯಶ್ ಅವರ ಹೊಸ ಅವತಾರ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗ್ತಿದೆ. ಯಶ್ ಭಾರತೀಯ ಸಿನೆಮಾ ಲೋಕವೇ ಹಿಂತಿರುಗಿ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಕೆಜಿಎಫ್ ಸಿನಿಮಾದ ಬಳಿಕ…

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

    You Missed

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

    ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!