ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿನಿಯ ಶಿರಚ್ಛೇದ ಮಾಡಿದ ಕ್ರೂರಿಗಳು !

 

ಹಿಮಾಚಲ ಪ್ರದೇಶ ಇಂದುನಡೆದ ಒಂದು ಪೈಶಾಚಿಕ ಕೃತ್ಯದಿಂದ ನಡುಗಿಹೋಗಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ಆರಂಭವಾಗುತ್ತಿದ್ದಂತೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ರಸ್ತೆಯ ಮಧ್ಯದಲ್ಲೇ ಏಕಾಏಕಿ ದಾಳಿ ನಡೆಸಿದ್ದಾರೆ. ಕ್ರೌರ್ಯದ ಮಿತಿಯನ್ನೇ ಮೀರಿದ ಹಂತಕರು, ಆಕೆಯ ತಲೆಯನ್ನು ಕಡಿದು ಹಾಕಿ ಪರಾರಿಯಾಗಿದ್ದಾರೆ.

ಹಿಮಾಚಲ ಪ್ರದೇಶ ಇಂದು ನಡೆದ ಒಂದು ಪೈಶಾಚಿಕ ಕೃತ್ಯ ಜನತೆಯನ್ನು ಆತಂಕಕ್ಕೆ ದೂಡಿದೆ. ಕಾಲೇಜಿಗೆ ತೆರಳಿ ಉಜ್ವಲ ಭವಿಷ್ಯದ ಕನಸು ಕಾಣುತ್ತಿದ್ದ 19 ವರ್ಷದ ಯುವತಿಯನ್ನು ನಡುರಸ್ತೆಯಲ್ಲೇ ಬರ್ಬರವಾಗಿ ಶಿರಚ್ಛೇದ ಮಾಡಿ ಹತ್ಯೆ ಮಾಡಿರುವ ಘಟನೆ ಮಂಡಿ ಜಿಲ್ಲೆಯಲ್ಲಿ ನಡೆದಿದೆ. ಸೋಮವಾರ ಬೆಳಗ್ಗೆ ಸುಮಾರು 9.15ರ ಸಮಯ. ಮಂಡಿ ಜಿಲ್ಲೆಯ ಸರ್ಕಾಘಾಟ್ ಪ್ರದೇಶದಲ್ಲಿ ಜನಜಂಗುಳಿ ನಡುವೆಯೇ ಈ ಘೋರ ದುರಂತ ಸಂಭವಿಸಿದೆ. ಎಂದಿನಂತೆ ಕಾಲೇಜಿಗೆಂದು ಮನೆಯಿಂದ ಹೊರಟಿದ್ದ ವಿದ್ಯಾರ್ಥಿನಿಯ ಮೇಲೆ ಅಪರಿಚಿತರು ರಸ್ತೆಯ ಮಧ್ಯದಲ್ಲೇ ಏಕಾಏಕಿ ದಾಳಿ ನಡೆಸಿದ್ದಾರೆ. ಕ್ರೌರ್ಯದ ಮಿತಿಯನ್ನೇ ಮೀರಿದ ಹಂತಕರು, ಆಕೆಯ ತಲೆಯನ್ನು ಕಡಿದು ಹಾಕಿ ಪರಾರಿಯಾಗಿದ್ದಾರೆ.

ರಸ್ತೆಯ ತುಂಬೆಲ್ಲಾ ರಕ್ತದ ಮಡುವಿನಲ್ಲಿ ಬಿದ್ದಿದ್ದ ವಿದ್ಯಾರ್ಥಿನಿಯ ದೇಹವನ್ನು ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿಯನ್ನು ಕಂಡು ದಬಾಬಾಜಿ ಹೋಗಿದ್ದಾರೆ.

ಘಟನಾ ಸ್ಥಳಕ್ಕೆ ಮಂಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿನೋದ್ ಕುಮಾರ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ, ಬೈಕ್‌ನಲ್ಲಿ ಬಂದಿದ್ದ ಇಬ್ಬರು ವ್ಯಕ್ತಿಗಳು ಈ ಕೃತ್ಯ ಎಸಗಿದ್ದಾರೆ ಎಂದು ಶಂಕಿಸಲಾಗಿದೆ.

 

ಘಟನೆಯ ಹಿಂದಿನ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಹಂತಕರನ್ನು ಪತ್ತೆಹಚ್ಚಲು ಈಗಾಗಲೇ ಹಲವು ತಂಡಗಳನ್ನು ರಚಿಸಲಾಗಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಎಂದು ಎಸ್‌ಪಿ ವಿನೋದ್ ಕುಮಾರ್ ತಿಳಿಸಿದ್ದಾರೆ.

ನಡುರಸ್ತೆಯಲ್ಲಿ, ಅದೂ ಹಗಲು ಹೊತ್ತಿನಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಇಷ್ಟು ಭೀಕರವಾಗಿ ಹತ್ಯೆ ಮಾಡಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಮತ್ತು ಆಕ್ರೋಶವನ್ನು ಮೂಡಿಸಿದೆ. ಇದು ವೈಯಕ್ತಿಕ ದ್ವೇಷದ ಹಿನ್ನೆಲೆಯೇ ಅಥವಾ ಪ್ರೀತಿಯ ವಿಷಯಕ್ಕೆ ಸಂಬಂಧಿಸಿದ್ದೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪ್ರಸ್ತುತ, ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಈ ಘಟನೆಯಿಂದಾಗಿ ಇಡೀ ಸರ್ಕಾಘಾಟ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಜನರು ಭೀತಿಯಲ್ಲಿ ದಿನ ದೂಡುವಂತಾಗಿದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!