ಮೈಸೂರು ಗ್ರೇಡ್‌ 1 ಪಾಲಿಕೆಗೆ ಮಾರ್ಗಸೂಚಿ ಬದಲಾವಣೆಮಾಡಿದ ಕೇಂದ್ರ.

ಮೈಸೂರು : ಹುಬ್ಬಳ್ಳಿ-ಧಾರವಾಡ ಮಾದರಿಯಂತೆ ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯನ್ನಾಗಿಸಲು ರಾಜ್ಯ ಸರಕಾರ ಮುಂದಾಗಿದೆ.

ಬಿಬಿಎಂಪಿ ಮಾದರಿಯಲ್ಲಿ ಬೃಹತ್ ಮೈಸೂರು ಮಹಾನಗರ ಪಾಲಿಕೆ ಮಾಡಬೇಕೆಂಬ ಪ್ರಸ್ತಾವನೆಯನ್ನು ರಾಜ್ಯ ಸರಕಾರ ಕೈ ಬಿಟ್ಟಿರುವುದರಿಂದ ಗ್ರೇಡ್-1 ಪಾಲಿಕೆಯನ್ನಾಗಿಸಬೇಕೆಂದು ಪಾಲಿಕೆ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ. ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ನಿರೀಕ್ಷೆ ಇದೆ. ಜತೆಗೆ ಪಾಲಿಕೆ ಸುತ್ತಲಿನ ಸ್ಥಳೀಯ ಸಂಸ್ಥೆಗಳು ಕೂಡ ಸೇರ್ಪಡೆಯಾಗಲಿವೆ.

ಬೆಂಗಳೂರು-ಮೈಸೂರು ದಶಪಥ ರಸ್ತೆ , ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಅಂತಾರಾಷ್ಟ್ರೀಯ ಕ್ರೀಡಾಂಗಣ ಸೇರಿದಂತೆ ನಾನಾ ಯೋಜನೆಗಳ ಅನುಷ್ಠಾನದಿಂದ ಮೈಸೂರು ಪಾಲಿಕೆಯನ್ನು ಬೃಹತ್ ಪಾಲಿಕೆ ಮಾಡಬೇಕೆಂಬ ಚರ್ಚೆ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಮೈಸೂರಿನ ಹೊರವಲಯದ ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಬೋಗಾದಿ, ಕಡಕೊಳ ಪಟ್ಟಣ ಪಂಚಾಯಿತಿಯೊಂದಿಗೆ ಎಂಟು ಗ್ರಾಪಂಗಳನ್ನು ಸೇರಿಸಿಕೊಂಡು ಬೃಹತ್ ಪಾಲಿಕೆಯನ್ನಾಗಿ ರಚನೆ ಮಾಡಲು ಪ್ರಸ್ತಾವನೆ ತಯಾರಿಸಲಾಗಿತ್ತು.

ನಂತರ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಅವರ ಅಧ್ಯಕ್ಷತೆಯಲ್ಲಿ ಕರೆದಿದ್ದ ಸಭೆಯಲ್ಲಿಪಾಲಿಕೆ ಅಕಾರಿಗಳು ವಿಷಯ ಮಂಡಿಸಲು ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಕಾಂಗ್ರೆಸ್ನ ಕೆಲ ನಾಯಕರು ಸಿಎಂ ಅವರಿಗೆ ಬೃಹತ್ ಪಾಲಿಕೆಯನ್ನಾಗಿ ಮಾಡದಂತೆ ಒತ್ತಡ ಹೇರಿದ್ದರು. ಇದರಿಂದ ಸಿಎಂ ಕೂಡ ಸಭೆ ನಡೆಸಲು ನಿರಾಸಕ್ತಿ ತೋರಿಸಿದ್ದರು. ಬಳಿಕ ಸಿಎಂ ಸೂಚನೆ ಮೇರೆಗೆ ಗ್ರೇಡ್-1 ಪಾಲಿಕೆ ಮಾಡುವ ಸಂಬಂಧ ಪಾಲಿಕೆ ಅಕಾರಿಗಳು ಪ್ರಸ್ತಾವನೆ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದಾರೆ.

ಗ್ರೇಡ್ 1 ಪಾಲಿಕೆಯನ್ನಾಗಿಸಲು ಅಗತ್ಯವಿರುವ 15 ಲಕ್ಷ ಜನಸಂಖ್ಯೆಯನ್ನು ಮೈಸೂರು ಹೊಂದಿದೆ. ಪಾಲಿಕೆ ಸುತ್ತಲಿನ ನಗರ ಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳನ್ನು ಸೇರ್ಪಡೆ ಮಾಡಿಕೊಂಡರೆ 16 ಲಕ್ಷ ಜನಸಂಖ್ಯೆಯಾಗಲಿದೆ.

 

ಸದ್ಯಕ್ಕಿಲ್ಲ ಚುನಾವಣೆ:
2023 ರ ನ. 14 ರಂದು ಜನಪ್ರತಿನಿಗಳ ಆಡಳಿತ ಮುಗಿದಿದ್ದು, ಸದ್ಯಕ್ಕೆ ಚುನಾವಣೆ ನಡೆಯುವುದು ಅನುಮಾನವಾಗಿದೆ. ಗ್ರೇಡ್-1 ಪಾಲಿಕೆ ರಚನೆಯಾದ ನಂತರ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲು ಅಂದಾಜು ಒಂದು ವರ್ಷವಾದರೂ ಸಮಯ ಬೇಕಾಗುವ ಕಾರಣ ಅಲ್ಲಿಯವರೆಗೆ ಆಕಾಂಕ್ಷಿಗಳು ಕಾಯಬೇಕಿದೆ.

ಜನಸಂಖ್ಯೆ ಕೊರತೆಯಿಂದಾಗಿ ಮೈಸೂರು ಮಹಾ ನಗರ ಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿಗ್ರೇಡ್ 1 ಪಾಲಿಕೆಯನ್ನಾಗಿಸಲು ಮುಂದಾಗಿರುವುದು ಒಳ್ಳೆಯ ಬೆಳವಣಿಗೆ. ಆದಷ್ಟು ಬೇಗ ಪಾಲಿಕೆಯ ಪ್ರಸ್ತಾವನೆಗೆ ಸರಕಾರ ಅನುಮೋದನೆ ನೀಡಿ ಸ್ಥಳೀಯ ಸಂಸ್ಥೆಯ ಚುನಾವಣೆ ನಡೆಸಲಿ -ಜಿ.ಟಿ.ದೇವೇಗೌಡ, ಶಾಸಕ.

ವಿಶೇಷ ಅನುದಾನ:
ಮೈಸೂರು ನಗರ ಪಾಲಿಕೆಯನ್ನು ಗ್ರೇಡ್-1 ಪಾಲಿಕೆಯಾಗಿ ಮೇಲ್ದರ್ಜೆಗೇರಿಸಿದರೆ ಕೇಂದ್ರ ಮತ್ತು ರಾಜ್ಯ ಸರಕಾರದಿಂದ ಹೆಚ್ಚಿನ ಅನುದಾನ ಸಿಗುವ ಅವಕಾಶವಿರುತ್ತದೆ. ಗ್ರೇಡ್- 1 ಸಿಟಿಗಳಿಗೆ ಸಿಗುವ ವಿಶೇಷ ಸವಲತ್ತುಗಳು ಕೇಂದ್ರದಿಂದ ಸಿಗಲಿದೆ. ಜತೆಗೆ ಪಾಲಿಕೆಯ ವ್ಯಾಪ್ತಿಯ ಪ್ರದೇಶಗಳೊಂದಿಗೆ ಸುತ್ತಲಿನ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ಸೇರ್ಪಡೆಗೊಳಿಸಲು ಅವಕಾಶವಾಗಲಿದೆ ಎನ್ನುತ್ತಾರೆ ಪಾಲಿಕೆ ಅಧಿಕಾರಿಗಳು.

 

ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್ 1 ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರದಲ್ಲಿಯೇ ಅನುಮೋದನೆ ದೊರೆಯುವ ನಿರೀಕ್ಷೆ ಇದೆ -ದಾಸೇಗೌಡ, ಉಪ ಆಯುಕ್ತ(ಅಭಿವೃದ್ಧಿ), ಮೈಸೂರು ಮಹಾ ನಗರ ಪಾಲಿಕೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!