ಕೆಟ್ಟ ಸ್ಥಿತಿಯಲ್ಲಿ ಇವತ್ತು ದೇಶ ಇದೆ ; ಸಚಿವ ಸಂತೋಷ್ ಲಾಡ್.

ಧಾರವಾಡ: “ತುರ್ತು ಪರಿಸ್ಥಿತಿಗಿಂತ ಕೆಟ್ಟ ಪರಿಸ್ಥಿತಿಯಲ್ಲಿ ಇವತ್ತು ದೇಶವಿದೆ. ಆ ಬಗ್ಗೆ ಬಿಜೆಪಿಯವರು ಚರ್ಚೆ ಮಾಡ್ತಾರಾ?. ಪಹಲ್ಗಾಮ್, ಪುಲ್ವಾಮಾ ದಾಳಿ ಕುರಿತು ಕೇಳಬಾರದು ಎಂದು ಅವರು ಇಂಥ ಅಭಿಯಾನಗಳನ್ನು ತರುತ್ತಿದ್ದಾರೆ. ವಿಷಯಾಧಾರಿತ ಸಮಸ್ಯೆಗಳು ಜನರಿಗೆ ಗೊತ್ತಾಗಬಾರದೆಂಬುದು ಇವರ ಉದ್ದೇಶ” ಎಂದು ಸಚಿವ ಸಂತೋಷ್ ಲಾಡ್ ಟೀಕಿಸಿದರು.

“ಇವರ ಪ್ರಕಾರ ನಮ್ಮನ್ನು ಯಾವುದೇ ಬೇರೆ ದೇಶಕ್ಕೆ ಹೋಲಿಸಿ ನೋಡುವಂತಿಲ್ಲ. ಬೇರೆ ರಾಜ್ಯಕ್ಕೂ ಹೋಲಿಸಿ ನೋಡುವಂತಿಲ್ಲ. ನಮ್ಮ ದೇಶವೇ ಗ್ರೇಟ್, ನಮ್ಮ ಪ್ರಧಾನಿಯೇ ಗ್ರೇಟ್. ತುರ್ತು ಪರಿಸ್ಥಿತಿ ಈಗ ಪ್ರಸ್ತುತವೇ? ಚರ್ಚಿಸುವ ವಿಷಯವೇ? ಎಂದು ಅವರು ಕೇಳಿದರು. ಇದೇ ವೇಳೆ, ಈ ಬಾರಿಯ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡಲಿದ್ದಾರೆ ಎಂಬ ಆರ್.ಅಶೋಕ್ ಹೇಳಿಕೆಗೆ, “ಯಾರು ಸಿಎಂ ಆಗ್ತಾರೆ ಅಂತ ಅಶೋಕ್ ಅವರನ್ನೇ ಕೇಳಬೇಕು” ಎಂದರು.

“ಡಿಕ್ಟೇಟರ್ಶಿಪ್ ಕಾಂಗ್ರೆಸ್ ಪಕ್ಷದ ರಕ್ತ, ಡಿಎನ್ಎಯಲ್ಲೇ ಇದೆ” ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಶನಿವಾರ ವಾಗ್ದಾಳಿ ನಡೆಸಿದರು. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ತುರ್ತು ಪರಿಸ್ಥಿತಿ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಕಮ್ಯೂನಿಸ್ಟ್ ಪಾರ್ಟಿಯ ಸರ್ಕಾರ ಕಿತ್ತೊಗೆದರು. ಅಂಬೇಡ್ಕರ್ ಅವರನ್ನು ರಾಜಕೀಯವಾಗಿ ತುಳಿದ ಪಕ್ಷ ಕಾಂಗ್ರೆಸ್. ಕರುಣಾನಿಧಿಯವರನ್ನು ಒಳಗೆ ಹಾಕಿಸಿದರು. ಇಂದಿರಾ ಗಾಂಧಿ ಹಿಟ್ಲರ್ ಅವರಂತೆ ವರ್ತಿಸಿದರು. 50 ವರ್ಷಗಳ ಹಿಂದೆ ಕಾಂಗ್ರೆಸ್ ಪಾರ್ಟಿ ಹೇಗೆ ನಡೆದುಕೊಂಡಿತ್ತು ಎಂನ್ನುವುದನ್ನು ತಿಳಿಸುವುದೇ ಈ ಕಾರ್ಯಕ್ರಮದ ಉದ್ದೇಶ. ಜಾತ್ಯತೀತತೆ ನಮ್ಮ ರಕ್ತದಲ್ಲಿದೆ. ಬಸವಣ್ಣನವರ ಕಾಲದಲ್ಲೇ ಜಾತ್ಯತೀತತೆ ಇತ್ತು. ನಾವು ಕಾಂಗ್ರೆಸ್ ಪಕ್ಷದಿಂದ ಕಲಿಯಬೇಕಿಲ್ಲ” ಎಂದು ವಾಕ್ಸಮರ ನಡೆಸಿದರು.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು