ಸರ್ಪ ದೋಷ ನಿವಾರಣೆಗೆಂದು ತನ್ನ ಮಗಳನ್ನೇ ನರಬ*ಲಿ ನೀಡಿದ ಕ್ರೂರ ತಾಯಿ…..

ಹೌದು ವೀಕ್ಷಕರೇ ಇಂತಹದೊಂದು ಕ್ರೂರ ಘಟನೆ ಭಾರತದಲ್ಲಿ ನಡೆದಿದೆ ಎಂಬುವುದನ್ನು ನಂಬಲಾಗದಿದ್ದರೂ ಇದೇ ಸತ್ಯ. ತಾಯಿ ಎಂಬ ಪದಕ್ಕೆ ತದ್ವಿರುದ್ಧವಾದ ಆಕೆಯ ಹೆಸರು ಭಾರತಿ. ಯಾವುದೇ ಒಂದು ವಿಚಾರದ ಮೇಲೆ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು, ಮೂಢನಂಬಿಕೆಯಿಂದ ಒಂದು ಜೀವವನ್ನು ಬಲಿ ಪಡೆಯುತ್ತದೆ ಎಂದರೆ ಏನ್ ಅರ್ಥ? ಜಗತ್ತು ವೇಗವಾಗಿ ತಂತ್ರಜ್ಞಾನದ ಹಿಂದೆ ಓಡುತ್ತಿದೆ. ಆದರೆ ಕೆಲವೊಂದು ಕಡೆ ಮೂಢನಂಬಿಕೆ ಕೊನೆಯಾಗಿಲ್ಲ ನೋಡಿ. ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ಮಹಿಳೆಯೊಬ್ಬರು ತನ್ನ ಮಗಳನೇ ನರಬಲಿ ನೀಡಿರುವ ಘಟನೆ ನಡೆದಿದೆ.ಆದರೆ ಆಕೆ ತನ್ನ ಮಗಳನ್ನು ನರ ಬಲಿ ಕೊಟ್ಟಿದ್ದಾದರೂ ಯಾಕೆ ಅಂತೀರಾ? ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಒಂದು ನಂಬಿಕೆ ಎನ್ನುವುದು ನಮ್ಮ ಜೀವನವನ್ನು ರೂಪಿಸುತ್ತದೆ, ಅದೇ ಒಂದು ಮೂಢನಂಬಿಕೆ ನಮ್ಮ ಜೀವನವನ್ನೇ ಕೊನೆ ಮಾಡುತ್ತದೆ. ಪದಗಳ ವ್ಯತ್ಯಾಸದಷ್ಟೇ, ಅವುಗಳ ಆಚರಣೆಯಲ್ಲೂ ವ್ಯತ್ಯಾಸ ಇದೆ. ಒಬ್ಬ ಮನುಷ್ಯನಿಗೆ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು, ಅದು ಈ ಆಧುನಿಕ ಜಗತ್ತಿನಲ್ಲಿ, ಇಡೀ ಜಗತ್ತು ತಂತ್ರಜ್ಞಾನದ ಹಿಂದೆ ಓಡುತ್ತಿದೆ. ಎಐ ಅಂತಹ ವಿಚಾರಗಳ ಮುಂದೆ ಈ ಮೂಢನಂಬಿಕೆ ಎಂಬ ಭೂತ ಇನ್ನು ಹೋಗಿಲ್ಲ ನೋಡಿ. ಹೌದು ಇಲ್ಲೊಂದು ಘಟನೆ ಇಡೀ ಮನುಷ್ಯ ಕುಲಕ್ಕೆ ಅವಮಾನ. ಅದರಲ್ಲೂ ತಾಯಿ ಎನ್ನುವ ಪದಕ್ಕೆ ಕಳಂಕ ತಂದಿದೆ. ತನ್ನ ಅತಿಯಾದ ಮೂಢನಂಬಿಕೆಯಿಂದ ಸ್ವಂತ ಮಗಳನ್ನೇ ತಾಯಿಯೊಬ್ಬಳು ಬಲಿ ನೀಡಿದ್ದಾಳೆ. ಈ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ನಡೆದಿದೆ. ಕೃಷ್ಣ ಮತ್ತು ಭಾರತಿ ಎಂಬ ದಂಪತಿಗಳು ಇಲ್ಲಿ ವಾಸವಾಗಿದ್ದರು. ಭಾರತಿ ಮತ್ತು ಕೃಷ್ಣ ಅವರ ಮದುವೆಗೆ ಭಾರತಿ ಮನೆಯವರ ಒಪ್ಪಿಗೆ ಇರಲಿಲ್ಲ. ಬಲವಂತವಾಗಿ ಭಾರತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದಾರೆ. ಆದರೆ ಆಕೆ ಆತನ ಜತೆ ಸಂಸಾರ ನಡೆಸದೆ. ಕೃಷ್ಣನ ಜತೆಗೆ ಓಡಿ ಹೋಗಿ 2019ರಲ್ಲಿ ಕೃಷ್ಣ ಅವರನ್ನು ವಿವಾಹವಾದರು. ಹೀಗೆ ಅವರ ಪ್ರೀತಿಯ ಸಂಕೇತವಾಗಿ ಒಬ್ಬಳು ಮಗಳು ಜನಿಸಿದಳು.

ಭಾರತಿಗೆ ಮೊದಲಿನಿಂದಲ್ಲೂ ದೇವರ ಬಗ್ಗೆ ಅಥವಾ ಜ್ಯೋತಿಷ್ಯದ ಬಗ್ಗೆ ಅಪಾರ ನಂಬಿಕೆ, ಆ ಕಾರಣಕ್ಕೆ ಆಕೆಗೆ ಒಬ್ಬ ಜ್ಯೋತಿಷ್ಯರು ಸರ್ಪ ದೋಷ ಇದೆ ಎಂದು ಹೇಳಿದರು. ಅಂದಿನಿಂದ ಆಕೆ ಎಲ್ಲ ಕಡೆ ಸರ್ಪ ದೋಷ ನಿವಾರಣೆ ಪೂಜೆ, ಆ ಪೂಜೆ, ಈ ಪೂಜೆ ಎಲ್ಲ ಮಾಡುತ್ತಿದ್ದಳು. ಆದರೆ ತಾಯಿಯ ಈ ಮೂಢನಂಬಿಕೆ ಬಗ್ಗೆ ಆಕೆಯ ಮಗಳು ಅಸಡ್ಡೆ ತೋರುತ್ತಿದ್ದಳು. ಈಕೆಯ ಈ ವರ್ತನೆ ನೋಡಿ ಗಂಡ ಕೃಷ್ಣ ಹಾಗೂ ಆಕೆಯ ಅತ್ತೆ-ಮಾವ ಮನೋವೈದ್ಯರ ಬಳಿಗೆ ಕರೆದೊಯ್ಯಲು ನಿರ್ಧಾರಿಸಿದರು. ಆದರೆ ಆಕೆ ಈ ಮೂಢನಂಬಿಕೆಗೆ ಒಳಗಾಗಿ, ನಾನು ಮಂತ್ರ ಶಕ್ತಿಯಿಂದ ಸರಿಯಾಗುತ್ತೇನೆ ಎಂದು ಚಿಕಿತ್ಸೆಯನ್ನು ವಿರೋಧಿಸಿದಳು.

ಸ್ವಲ್ಪ ದಿನಗಳ ನಂತರ ಭಾರತಿ ಈ ಸರ್ಪ ದೋಷದಿಂದ ಮುಕ್ತಿ ಪಡೆಯಲು ನರಬಲಿ ಪೂಜೆ ಮಾಡಬೇಕು ಎಂದು ನಿರ್ಧಾರಿಸಿದಳು. ಇದಕ್ಕೆ ಏಪ್ರಿಲ್ 15, 2021 ರಂದು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ಸರ್ಪ ದೋಷದಿಂದ ಮುಕ್ತಿಗೆ ಈ ದಾರಿ ಸರಿ ಎಂದು ಭಾರತಿ ತನ್ನ ಏಳು ವರ್ಷ ಮಗಳ ನಾಲಿಗೆ ಮತ್ತು ಗಂಟಲನ್ನು ಕತ್ತರಿಸಿ ಕ್ರೂರವಾಗಿ ಕೊಂದು ಹಾಕಿದ್ದಾಳೆ. ನಂತರ ಸ್ಥಳದಿಂದ ಭಾರತಿ ಪರಾರಿಯಾಗಿದ್ದಾಳೆ. ಕೃಷ್ಣ ಮನೆಗೆ ಬಂದು ನೋಡಿದ್ರೆ, ತನ್ನ ಮಗುವು ರಕ್ತ ಮಡುವಿನಲ್ಲಿ ಬಿದ್ದಿರುವುದು ಕಂಡು ಅಘಾತಕ್ಕೆ ಒಳಗಾಗಿದ್ದ, ನಂತರ ಈ ವಿಷಯನ್ನು ಪೋಲಿಸರಿಗೆ ತಿಳಿಸಿದ್ದಾನೆ.ಪೊಲೀಸರು ತನಿಖೆಯನ್ನು ನಡೆಸಿ, ತಾಯಿ ಭಾರತಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ತನಿಖೆ ನಡೆಸಿದ ಪೊಲೀಸರು, ಆಕೆಯನ್ನು ಕೋರ್ಟ್ ಮುಂದೆ ಹಾಜರು ಪಡಿಸಿದ್ದಾರೆ. ಪೊಲೀಸ್ ಇಲಾಖೆ ನಡೆಸಿದ ಎಲ್ಲ ತನಿಖೆಗಳ ವರದಿಯನ್ನು ಕೋರ್ಟ್ ಮುಂದೆ ಇಟ್ಟಿದ್ದಾರೆ. ಆಕೆ ತಪ್ಪಿಗೆ ಬಲವಾದ ಸಾಕ್ಷಿಗಳಿದ್ದು, ಕೋರ್ಟ್ ಆಕೆಗೆ ಮರಣದಂಡನೆ ನೀಡಿದೆ. ಸೂರ್ಯಪೇಟೆ ಜಿಲ್ಲಾ ನ್ಯಾಯಾಲಯದ ಮೊದಲ ಹೆಚ್ಚುವರಿ ನ್ಯಾಯಾಧೀಶ ಎಂ. ಶ್ಯಾಮ್ ಶ್ರೀ ತೀರ್ಪು ನೀಡಿದ್ದಾರೆ. ಹಾಗೂ ಆಕೆಗೆ 5 ಸಾವಿರ ದಂಡ ವಿಧಿಸಲಾಯಿತು. ಒಂದು ವೇಳೆ ದಂಡ ಪಾವತಿಸದಿದ್ದಾರೆ. 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸುತ್ತದೆ ಎಂದು ಹೇಳಿದೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!