ಸರ್ಪ ದೋಷ ನಿವಾರಣೆಗೆಂದು ತನ್ನ ಮಗಳನ್ನೇ ನರಬ*ಲಿ ನೀಡಿದ ಕ್ರೂರ ತಾಯಿ…..

ಹೌದು ವೀಕ್ಷಕರೇ ಇಂತಹದೊಂದು ಕ್ರೂರ ಘಟನೆ ಭಾರತದಲ್ಲಿ ನಡೆದಿದೆ ಎಂಬುವುದನ್ನು ನಂಬಲಾಗದಿದ್ದರೂ ಇದೇ ಸತ್ಯ. ತಾಯಿ ಎಂಬ ಪದಕ್ಕೆ ತದ್ವಿರುದ್ಧವಾದ ಆಕೆಯ ಹೆಸರು ಭಾರತಿ. ಯಾವುದೇ ಒಂದು ವಿಚಾರದ ಮೇಲೆ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು, ಮೂಢನಂಬಿಕೆಯಿಂದ ಒಂದು ಜೀವವನ್ನು ಬಲಿ ಪಡೆಯುತ್ತದೆ ಎಂದರೆ ಏನ್ ಅರ್ಥ? ಜಗತ್ತು ವೇಗವಾಗಿ ತಂತ್ರಜ್ಞಾನದ ಹಿಂದೆ ಓಡುತ್ತಿದೆ. ಆದರೆ ಕೆಲವೊಂದು ಕಡೆ ಮೂಢನಂಬಿಕೆ ಕೊನೆಯಾಗಿಲ್ಲ ನೋಡಿ. ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ಮಹಿಳೆಯೊಬ್ಬರು ತನ್ನ ಮಗಳನೇ ನರಬಲಿ ನೀಡಿರುವ ಘಟನೆ ನಡೆದಿದೆ.ಆದರೆ ಆಕೆ ತನ್ನ ಮಗಳನ್ನು ನರ ಬಲಿ ಕೊಟ್ಟಿದ್ದಾದರೂ ಯಾಕೆ ಅಂತೀರಾ? ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಒಂದು ನಂಬಿಕೆ ಎನ್ನುವುದು ನಮ್ಮ ಜೀವನವನ್ನು ರೂಪಿಸುತ್ತದೆ, ಅದೇ ಒಂದು ಮೂಢನಂಬಿಕೆ ನಮ್ಮ ಜೀವನವನ್ನೇ ಕೊನೆ ಮಾಡುತ್ತದೆ. ಪದಗಳ ವ್ಯತ್ಯಾಸದಷ್ಟೇ, ಅವುಗಳ ಆಚರಣೆಯಲ್ಲೂ ವ್ಯತ್ಯಾಸ ಇದೆ. ಒಬ್ಬ ಮನುಷ್ಯನಿಗೆ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು, ಅದು ಈ ಆಧುನಿಕ ಜಗತ್ತಿನಲ್ಲಿ, ಇಡೀ ಜಗತ್ತು ತಂತ್ರಜ್ಞಾನದ ಹಿಂದೆ ಓಡುತ್ತಿದೆ. ಎಐ ಅಂತಹ ವಿಚಾರಗಳ ಮುಂದೆ ಈ ಮೂಢನಂಬಿಕೆ ಎಂಬ ಭೂತ ಇನ್ನು ಹೋಗಿಲ್ಲ ನೋಡಿ. ಹೌದು ಇಲ್ಲೊಂದು ಘಟನೆ ಇಡೀ ಮನುಷ್ಯ ಕುಲಕ್ಕೆ ಅವಮಾನ. ಅದರಲ್ಲೂ ತಾಯಿ ಎನ್ನುವ ಪದಕ್ಕೆ ಕಳಂಕ ತಂದಿದೆ. ತನ್ನ ಅತಿಯಾದ ಮೂಢನಂಬಿಕೆಯಿಂದ ಸ್ವಂತ ಮಗಳನ್ನೇ ತಾಯಿಯೊಬ್ಬಳು ಬಲಿ ನೀಡಿದ್ದಾಳೆ. ಈ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ನಡೆದಿದೆ. ಕೃಷ್ಣ ಮತ್ತು ಭಾರತಿ ಎಂಬ ದಂಪತಿಗಳು ಇಲ್ಲಿ ವಾಸವಾಗಿದ್ದರು. ಭಾರತಿ ಮತ್ತು ಕೃಷ್ಣ ಅವರ ಮದುವೆಗೆ ಭಾರತಿ ಮನೆಯವರ ಒಪ್ಪಿಗೆ ಇರಲಿಲ್ಲ. ಬಲವಂತವಾಗಿ ಭಾರತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದಾರೆ. ಆದರೆ ಆಕೆ ಆತನ ಜತೆ ಸಂಸಾರ ನಡೆಸದೆ. ಕೃಷ್ಣನ ಜತೆಗೆ ಓಡಿ ಹೋಗಿ 2019ರಲ್ಲಿ ಕೃಷ್ಣ ಅವರನ್ನು ವಿವಾಹವಾದರು. ಹೀಗೆ ಅವರ ಪ್ರೀತಿಯ ಸಂಕೇತವಾಗಿ ಒಬ್ಬಳು ಮಗಳು ಜನಿಸಿದಳು.

ಭಾರತಿಗೆ ಮೊದಲಿನಿಂದಲ್ಲೂ ದೇವರ ಬಗ್ಗೆ ಅಥವಾ ಜ್ಯೋತಿಷ್ಯದ ಬಗ್ಗೆ ಅಪಾರ ನಂಬಿಕೆ, ಆ ಕಾರಣಕ್ಕೆ ಆಕೆಗೆ ಒಬ್ಬ ಜ್ಯೋತಿಷ್ಯರು ಸರ್ಪ ದೋಷ ಇದೆ ಎಂದು ಹೇಳಿದರು. ಅಂದಿನಿಂದ ಆಕೆ ಎಲ್ಲ ಕಡೆ ಸರ್ಪ ದೋಷ ನಿವಾರಣೆ ಪೂಜೆ, ಆ ಪೂಜೆ, ಈ ಪೂಜೆ ಎಲ್ಲ ಮಾಡುತ್ತಿದ್ದಳು. ಆದರೆ ತಾಯಿಯ ಈ ಮೂಢನಂಬಿಕೆ ಬಗ್ಗೆ ಆಕೆಯ ಮಗಳು ಅಸಡ್ಡೆ ತೋರುತ್ತಿದ್ದಳು. ಈಕೆಯ ಈ ವರ್ತನೆ ನೋಡಿ ಗಂಡ ಕೃಷ್ಣ ಹಾಗೂ ಆಕೆಯ ಅತ್ತೆ-ಮಾವ ಮನೋವೈದ್ಯರ ಬಳಿಗೆ ಕರೆದೊಯ್ಯಲು ನಿರ್ಧಾರಿಸಿದರು. ಆದರೆ ಆಕೆ ಈ ಮೂಢನಂಬಿಕೆಗೆ ಒಳಗಾಗಿ, ನಾನು ಮಂತ್ರ ಶಕ್ತಿಯಿಂದ ಸರಿಯಾಗುತ್ತೇನೆ ಎಂದು ಚಿಕಿತ್ಸೆಯನ್ನು ವಿರೋಧಿಸಿದಳು.

ಸ್ವಲ್ಪ ದಿನಗಳ ನಂತರ ಭಾರತಿ ಈ ಸರ್ಪ ದೋಷದಿಂದ ಮುಕ್ತಿ ಪಡೆಯಲು ನರಬಲಿ ಪೂಜೆ ಮಾಡಬೇಕು ಎಂದು ನಿರ್ಧಾರಿಸಿದಳು. ಇದಕ್ಕೆ ಏಪ್ರಿಲ್ 15, 2021 ರಂದು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ಸರ್ಪ ದೋಷದಿಂದ ಮುಕ್ತಿಗೆ ಈ ದಾರಿ ಸರಿ ಎಂದು ಭಾರತಿ ತನ್ನ ಏಳು ವರ್ಷ ಮಗಳ ನಾಲಿಗೆ ಮತ್ತು ಗಂಟಲನ್ನು ಕತ್ತರಿಸಿ ಕ್ರೂರವಾಗಿ ಕೊಂದು ಹಾಕಿದ್ದಾಳೆ. ನಂತರ ಸ್ಥಳದಿಂದ ಭಾರತಿ ಪರಾರಿಯಾಗಿದ್ದಾಳೆ. ಕೃಷ್ಣ ಮನೆಗೆ ಬಂದು ನೋಡಿದ್ರೆ, ತನ್ನ ಮಗುವು ರಕ್ತ ಮಡುವಿನಲ್ಲಿ ಬಿದ್ದಿರುವುದು ಕಂಡು ಅಘಾತಕ್ಕೆ ಒಳಗಾಗಿದ್ದ, ನಂತರ ಈ ವಿಷಯನ್ನು ಪೋಲಿಸರಿಗೆ ತಿಳಿಸಿದ್ದಾನೆ.ಪೊಲೀಸರು ತನಿಖೆಯನ್ನು ನಡೆಸಿ, ತಾಯಿ ಭಾರತಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ತನಿಖೆ ನಡೆಸಿದ ಪೊಲೀಸರು, ಆಕೆಯನ್ನು ಕೋರ್ಟ್ ಮುಂದೆ ಹಾಜರು ಪಡಿಸಿದ್ದಾರೆ. ಪೊಲೀಸ್ ಇಲಾಖೆ ನಡೆಸಿದ ಎಲ್ಲ ತನಿಖೆಗಳ ವರದಿಯನ್ನು ಕೋರ್ಟ್ ಮುಂದೆ ಇಟ್ಟಿದ್ದಾರೆ. ಆಕೆ ತಪ್ಪಿಗೆ ಬಲವಾದ ಸಾಕ್ಷಿಗಳಿದ್ದು, ಕೋರ್ಟ್ ಆಕೆಗೆ ಮರಣದಂಡನೆ ನೀಡಿದೆ. ಸೂರ್ಯಪೇಟೆ ಜಿಲ್ಲಾ ನ್ಯಾಯಾಲಯದ ಮೊದಲ ಹೆಚ್ಚುವರಿ ನ್ಯಾಯಾಧೀಶ ಎಂ. ಶ್ಯಾಮ್ ಶ್ರೀ ತೀರ್ಪು ನೀಡಿದ್ದಾರೆ. ಹಾಗೂ ಆಕೆಗೆ 5 ಸಾವಿರ ದಂಡ ವಿಧಿಸಲಾಯಿತು. ಒಂದು ವೇಳೆ ದಂಡ ಪಾವತಿಸದಿದ್ದಾರೆ. 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸುತ್ತದೆ ಎಂದು ಹೇಳಿದೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!