ಸರ್ಪ ದೋಷ ನಿವಾರಣೆಗೆಂದು ತನ್ನ ಮಗಳನ್ನೇ ನರಬ*ಲಿ ನೀಡಿದ ಕ್ರೂರ ತಾಯಿ…..

ಹೌದು ವೀಕ್ಷಕರೇ ಇಂತಹದೊಂದು ಕ್ರೂರ ಘಟನೆ ಭಾರತದಲ್ಲಿ ನಡೆದಿದೆ ಎಂಬುವುದನ್ನು ನಂಬಲಾಗದಿದ್ದರೂ ಇದೇ ಸತ್ಯ. ತಾಯಿ ಎಂಬ ಪದಕ್ಕೆ ತದ್ವಿರುದ್ಧವಾದ ಆಕೆಯ ಹೆಸರು ಭಾರತಿ. ಯಾವುದೇ ಒಂದು ವಿಚಾರದ ಮೇಲೆ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು, ಮೂಢನಂಬಿಕೆಯಿಂದ ಒಂದು ಜೀವವನ್ನು ಬಲಿ ಪಡೆಯುತ್ತದೆ ಎಂದರೆ ಏನ್ ಅರ್ಥ? ಜಗತ್ತು ವೇಗವಾಗಿ ತಂತ್ರಜ್ಞಾನದ ಹಿಂದೆ ಓಡುತ್ತಿದೆ. ಆದರೆ ಕೆಲವೊಂದು ಕಡೆ ಮೂಢನಂಬಿಕೆ ಕೊನೆಯಾಗಿಲ್ಲ ನೋಡಿ. ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ಮಹಿಳೆಯೊಬ್ಬರು ತನ್ನ ಮಗಳನೇ ನರಬಲಿ ನೀಡಿರುವ ಘಟನೆ ನಡೆದಿದೆ.ಆದರೆ ಆಕೆ ತನ್ನ ಮಗಳನ್ನು ನರ ಬಲಿ ಕೊಟ್ಟಿದ್ದಾದರೂ ಯಾಕೆ ಅಂತೀರಾ? ಅದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಒಂದು ನಂಬಿಕೆ ಎನ್ನುವುದು ನಮ್ಮ ಜೀವನವನ್ನು ರೂಪಿಸುತ್ತದೆ, ಅದೇ ಒಂದು ಮೂಢನಂಬಿಕೆ ನಮ್ಮ ಜೀವನವನ್ನೇ ಕೊನೆ ಮಾಡುತ್ತದೆ. ಪದಗಳ ವ್ಯತ್ಯಾಸದಷ್ಟೇ, ಅವುಗಳ ಆಚರಣೆಯಲ್ಲೂ ವ್ಯತ್ಯಾಸ ಇದೆ. ಒಬ್ಬ ಮನುಷ್ಯನಿಗೆ ನಂಬಿಕೆ ಇರಬೇಕು, ಆದರೆ ಮೂಢನಂಬಿಕೆ ಇರಬಾರದು, ಅದು ಈ ಆಧುನಿಕ ಜಗತ್ತಿನಲ್ಲಿ, ಇಡೀ ಜಗತ್ತು ತಂತ್ರಜ್ಞಾನದ ಹಿಂದೆ ಓಡುತ್ತಿದೆ. ಎಐ ಅಂತಹ ವಿಚಾರಗಳ ಮುಂದೆ ಈ ಮೂಢನಂಬಿಕೆ ಎಂಬ ಭೂತ ಇನ್ನು ಹೋಗಿಲ್ಲ ನೋಡಿ. ಹೌದು ಇಲ್ಲೊಂದು ಘಟನೆ ಇಡೀ ಮನುಷ್ಯ ಕುಲಕ್ಕೆ ಅವಮಾನ. ಅದರಲ್ಲೂ ತಾಯಿ ಎನ್ನುವ ಪದಕ್ಕೆ ಕಳಂಕ ತಂದಿದೆ. ತನ್ನ ಅತಿಯಾದ ಮೂಢನಂಬಿಕೆಯಿಂದ ಸ್ವಂತ ಮಗಳನ್ನೇ ತಾಯಿಯೊಬ್ಬಳು ಬಲಿ ನೀಡಿದ್ದಾಳೆ. ಈ ಘಟನೆ ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯ ಮೋತೆ ಮಂಡಲದ ಮೇಕಲ ತಾಂಡಾದಲ್ಲಿ ನಡೆದಿದೆ. ಕೃಷ್ಣ ಮತ್ತು ಭಾರತಿ ಎಂಬ ದಂಪತಿಗಳು ಇಲ್ಲಿ ವಾಸವಾಗಿದ್ದರು. ಭಾರತಿ ಮತ್ತು ಕೃಷ್ಣ ಅವರ ಮದುವೆಗೆ ಭಾರತಿ ಮನೆಯವರ ಒಪ್ಪಿಗೆ ಇರಲಿಲ್ಲ. ಬಲವಂತವಾಗಿ ಭಾರತಿಗೆ ಬೇರೊಬ್ಬ ವ್ಯಕ್ತಿಯೊಂದಿಗೆ ಮದುವೆ ಮಾಡಿದ್ದಾರೆ. ಆದರೆ ಆಕೆ ಆತನ ಜತೆ ಸಂಸಾರ ನಡೆಸದೆ. ಕೃಷ್ಣನ ಜತೆಗೆ ಓಡಿ ಹೋಗಿ 2019ರಲ್ಲಿ ಕೃಷ್ಣ ಅವರನ್ನು ವಿವಾಹವಾದರು. ಹೀಗೆ ಅವರ ಪ್ರೀತಿಯ ಸಂಕೇತವಾಗಿ ಒಬ್ಬಳು ಮಗಳು ಜನಿಸಿದಳು.

ಭಾರತಿಗೆ ಮೊದಲಿನಿಂದಲ್ಲೂ ದೇವರ ಬಗ್ಗೆ ಅಥವಾ ಜ್ಯೋತಿಷ್ಯದ ಬಗ್ಗೆ ಅಪಾರ ನಂಬಿಕೆ, ಆ ಕಾರಣಕ್ಕೆ ಆಕೆಗೆ ಒಬ್ಬ ಜ್ಯೋತಿಷ್ಯರು ಸರ್ಪ ದೋಷ ಇದೆ ಎಂದು ಹೇಳಿದರು. ಅಂದಿನಿಂದ ಆಕೆ ಎಲ್ಲ ಕಡೆ ಸರ್ಪ ದೋಷ ನಿವಾರಣೆ ಪೂಜೆ, ಆ ಪೂಜೆ, ಈ ಪೂಜೆ ಎಲ್ಲ ಮಾಡುತ್ತಿದ್ದಳು. ಆದರೆ ತಾಯಿಯ ಈ ಮೂಢನಂಬಿಕೆ ಬಗ್ಗೆ ಆಕೆಯ ಮಗಳು ಅಸಡ್ಡೆ ತೋರುತ್ತಿದ್ದಳು. ಈಕೆಯ ಈ ವರ್ತನೆ ನೋಡಿ ಗಂಡ ಕೃಷ್ಣ ಹಾಗೂ ಆಕೆಯ ಅತ್ತೆ-ಮಾವ ಮನೋವೈದ್ಯರ ಬಳಿಗೆ ಕರೆದೊಯ್ಯಲು ನಿರ್ಧಾರಿಸಿದರು. ಆದರೆ ಆಕೆ ಈ ಮೂಢನಂಬಿಕೆಗೆ ಒಳಗಾಗಿ, ನಾನು ಮಂತ್ರ ಶಕ್ತಿಯಿಂದ ಸರಿಯಾಗುತ್ತೇನೆ ಎಂದು ಚಿಕಿತ್ಸೆಯನ್ನು ವಿರೋಧಿಸಿದಳು.

ಸ್ವಲ್ಪ ದಿನಗಳ ನಂತರ ಭಾರತಿ ಈ ಸರ್ಪ ದೋಷದಿಂದ ಮುಕ್ತಿ ಪಡೆಯಲು ನರಬಲಿ ಪೂಜೆ ಮಾಡಬೇಕು ಎಂದು ನಿರ್ಧಾರಿಸಿದಳು. ಇದಕ್ಕೆ ಏಪ್ರಿಲ್ 15, 2021 ರಂದು, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿ, ಸರ್ಪ ದೋಷದಿಂದ ಮುಕ್ತಿಗೆ ಈ ದಾರಿ ಸರಿ ಎಂದು ಭಾರತಿ ತನ್ನ ಏಳು ವರ್ಷ ಮಗಳ ನಾಲಿಗೆ ಮತ್ತು ಗಂಟಲನ್ನು ಕತ್ತರಿಸಿ ಕ್ರೂರವಾಗಿ ಕೊಂದು ಹಾಕಿದ್ದಾಳೆ. ನಂತರ ಸ್ಥಳದಿಂದ ಭಾರತಿ ಪರಾರಿಯಾಗಿದ್ದಾಳೆ. ಕೃಷ್ಣ ಮನೆಗೆ ಬಂದು ನೋಡಿದ್ರೆ, ತನ್ನ ಮಗುವು ರಕ್ತ ಮಡುವಿನಲ್ಲಿ ಬಿದ್ದಿರುವುದು ಕಂಡು ಅಘಾತಕ್ಕೆ ಒಳಗಾಗಿದ್ದ, ನಂತರ ಈ ವಿಷಯನ್ನು ಪೋಲಿಸರಿಗೆ ತಿಳಿಸಿದ್ದಾನೆ.ಪೊಲೀಸರು ತನಿಖೆಯನ್ನು ನಡೆಸಿ, ತಾಯಿ ಭಾರತಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ತನಿಖೆ ನಡೆಸಿದ ಪೊಲೀಸರು, ಆಕೆಯನ್ನು ಕೋರ್ಟ್ ಮುಂದೆ ಹಾಜರು ಪಡಿಸಿದ್ದಾರೆ. ಪೊಲೀಸ್ ಇಲಾಖೆ ನಡೆಸಿದ ಎಲ್ಲ ತನಿಖೆಗಳ ವರದಿಯನ್ನು ಕೋರ್ಟ್ ಮುಂದೆ ಇಟ್ಟಿದ್ದಾರೆ. ಆಕೆ ತಪ್ಪಿಗೆ ಬಲವಾದ ಸಾಕ್ಷಿಗಳಿದ್ದು, ಕೋರ್ಟ್ ಆಕೆಗೆ ಮರಣದಂಡನೆ ನೀಡಿದೆ. ಸೂರ್ಯಪೇಟೆ ಜಿಲ್ಲಾ ನ್ಯಾಯಾಲಯದ ಮೊದಲ ಹೆಚ್ಚುವರಿ ನ್ಯಾಯಾಧೀಶ ಎಂ. ಶ್ಯಾಮ್ ಶ್ರೀ ತೀರ್ಪು ನೀಡಿದ್ದಾರೆ. ಹಾಗೂ ಆಕೆಗೆ 5 ಸಾವಿರ ದಂಡ ವಿಧಿಸಲಾಯಿತು. ಒಂದು ವೇಳೆ ದಂಡ ಪಾವತಿಸದಿದ್ದಾರೆ. 3 ತಿಂಗಳು ಹೆಚ್ಚುವರಿ ಜೈಲು ಶಿಕ್ಷೆಯನ್ನು ವಿಧಿಸುತ್ತದೆ ಎಂದು ಹೇಳಿದೆ.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನಮ್ಮ ಸಮಾಜದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಕೊಲೆ, ಆಸ್ತಿ ಕಲಹ ಹಾಗೂ ದಾಂಪತ್ಯ ಕಲಹಗಳಂತಹ ಜಟಿಲ ಪ್ರಕರಣಗಳು ನ್ಯಾಯಾಲಯದ ಕಟಕಟೆಯಲ್ಲಿ ವರ್ಷಗಟ್ಟಲೆ ಧೂಳು ಹಿಡಿಯುತ್ತಿವೆ. ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಲಕ್ಷಾಂತರ ಪ್ರಕರಣಗಳು ಇಂದಿಗೂ ವಿಲೇವಾರಿಯಾಗದೆ ಬಾಕಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು