ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

 

ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿರುವ ‘ರಾಮಾಯಣ’ ಟ್ರೇಲರ್ ಭಾರಿ ಧೂಳೆಬ್ಬಿಸುತ್ತಿದೆ. ರಾವಣನಾಗಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರದ ಎಂಟ್ರಿಗೆ ಪ್ರೇಕ್ಷಕರು ಥಿಯೇಟರ್‌ನಲ್ಲಿ ಹುಚ್ಚೆದ್ದು ಕುಣಿದಿದ್ದು, ಇಡೀ ಟ್ರೇಲರ್ ಯಶ್ ಅವರ ಅಪ್ರತಿಮ ಡಾಮಿನೇಷನ್‌ನಿಂದ ಕೂಡಿದೆ ಎಂದು ಫ್ಯಾನ್ಸ್ ಕೊಂಡಾಡುತ್ತಿದ್ದಾರೆ.
‘ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ; ಯಶ್ ರೌದ್ರಾವತಾರ

ಕಿರುತೆರೆ ಮೂಲಕ ಜರ್ನಿ ಆರಂಭಿಸಿ, ನಂತರ ಸಿನಿಮಾ ರಂಗಕ್ಕೆ ಕಾಲಿಟ್ಟರು. ಏನಾದರೂ ಮಾಡಿಯೇ ಮಾಡುತ್ತೇನೆ ಎಂದು ಅವರು ಬಲವಾಗಿ ಅಂದುಕೊಂಡಿದ್ದರು. ‘ಕೆಜಿಎಫ್’ ಚಿತ್ರದ ಮೂಲ ಅದನ್ನು ಸಾಧಿಸಿದರು. ಅಲ್ಲಿಗೆ ಅವರು ನಿಲ್ಲಿಸಲಿಲ್ಲ. ‘ಕೆಜಿಎಫ್ 2’ ಮಾಡಿದರು. ಈಗ ‘ಟಾಕ್ಸಿಕ್’ ರಿಲೀಸ್​​ಗೆ ರೆಡಿ ಆಗುತ್ತಿದ್ದಾರೆ. ಇದರ ಜೊತೆಗೆ ‘ರಾಮಾಯಣ’ ಟ್ರೇಲರ್ ಮೂಲಕ ಧೂಳೆಬ್ಬಿಸಿದ್ದಾರೆ.

‘ರಾಮಾಯಣ’ ಸಿನಿಮಾದ ಟ್ರೇಲರ್ ಇಂದು ರಿಲೀಸ್ ಆಗಿದೆ. ಈ ಟ್ರೇಲರ್ ಹಾಲಿವುಡ್‌ನ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಚಿತ್ರದ ಜೊತೆಗೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಟ್ರೇಲರ್ ನೋಡಿದವರು ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಭರ್ಜರಿ ಪ್ರತಿಕ್ರಿಯೆಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇಡೀ ಟ್ರೇಲರ್‌ನಲ್ಲಿ ಲಂಕೇಶ್ವರ ರಾವಣನಾಗಿ ನಟಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರದ್ದೇ ಸಂಪೂರ್ಣ ಅಧಿಪತ್ಯ ಎದ್ದು ಕಾಣುತ್ತಿದೆ ಎಂದು ಅನೇಕರು ಬಣ್ಣಿಸುತ್ತಿದ್ದಾರೆ.

ಟ್ರೇಲರ್ ವೀಕ್ಷಿಸಿದ ಪ್ರೇಕ್ಷಕರು ಯಶ್ ಅವರ ನಟನೆಗೆ ಫುಲ್ ಫಿದಾ ಆಗಿದ್ದಾರೆ. ‘ಇಡೀ ರಾಮಾಯಣ ಟ್ರೇಲರ್‌ನಲ್ಲಿ ಅತ್ಯಂತ ರೋಮಾಂಚನ ನೀಡಿದ ಕ್ಷಣ ಎಂದರೆ ಅದು ಯಶ್ ಅವರ ರಾವಣನ ಅವತಾರ. ಅವರ ಕಣ್ಣುಗಳಲ್ಲಿನ ತೀವ್ರತೆ, ಗಾಂಭೀರ್ಯದ ವ್ಯಕ್ತಿತ್ವ ಮತ್ತು ಪರದೆಯ ಮೇಲಿನ ಅವರ ಅಪ್ರತಿಮ ಕ್ರೌರ್ಯದ ನಟನೆ ಎಂದಿಗೂ ಮರೆಯಲಾಗದ ಮೊದಲ ಆಕರ್ಷಣೆ’ ಎಂದು ಅಭಿಮಾನಿಗಳು ಕೊಂಡಾಡುತ್ತಿದ್ದಾರೆ.

ಚಿತ್ರಮಂದಿರಗಳಲ್ಲಿ ಟ್ರೇಲರ್ ಪ್ರದರ್ಶನವಾಗುವಾಗ ರಾವಣನ ಎಂಟ್ರಿ ದೃಶ್ಯಕ್ಕೆ ಪ್ರೇಕ್ಷಕರಿಂದ ಹುಚ್ಚೆದ್ದು ಕೂಗಿದ್ದಾರೆ. ‘ಯಶ್ ಅವರು ಇಡೀ ಟ್ರೇಲರ್ ಅನ್ನು ಅತ್ಯಂತ ಸುಲಭವಾಗಿ ಡಾಮಿನೇಟ್ ಮಾಡಿದ್ದಾರೆ’ ಎಂದು ನೆಟ್ಟಿಗರು ಶ್ಲಾಘಿಸುತ್ತಿದ್ದಾರೆ. ಈ ಭವ್ಯ ವಿಶ್ಯುಯಲ್ ವೈಭವ ಹಾಗೂ ಯಶ್ ಅವರ ರೌದ್ರಾವತಾರವನ್ನು ನೋಡುತ್ತಿದ್ದರೆ, ‘ರಾಮಾಯಣ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿ, ಸುನಾಮಿ ಎಬ್ಬಿಸುವುದು ಖಚಿತ ಎಂದು ಸಿನಿವಿಶ್ಲೇಷಕರು ಹಾಗೂ ಪ್ರೇಕ್ಷಕರು ಜಂಟಿಯಾಗಿ ಭವಿಷ್ಯ ನುಡಿಯುತ್ತಿದ್ದಾರೆ.

Related Posts

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

  E20 ಜನತಾ ಪಕ್ಷವು ಶೇ.20 ಎಥೆನಾಲ್ ಮಿಶ್ರಿತ ಪೆಟ್ರೋಲ್ ಬದಲಿಗೆ ಶೇ. 100 ಶುದ್ಧ ಪೆಟ್ರೋಲ್ ನೀಡಲು ಆಗ್ರಹಿಸುತ್ತಿದೆ. E20 ಇಂಧನದಿಂದ ವಾಹನಗಳ ಮೈಲೇಜ್ ಕಡಿಮೆಯಾಗಿ, ಎಂಜಿನ್ ಸಮಸ್ಯೆಗಳು ಹೆಚ್ಚುತ್ತಿವೆ ಎಂಬುದು ಅವರ ಆರೋಪ. ಸಚಿವ ನಿತಿನ್ ಗಡ್ಕರಿ ರಾಜೀನಾಮೆಗೆ…

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

You Missed

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

ರಾಮಾಯಣ’ ಟ್ರೇಲರ್ ಉದ್ದಕ್ಕೂ ರಾವಣನದ್ದೇ ಅಬ್ಬರ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

100 ಪರ್ಸೆಂಟ್ ಶುದ್ಧ ಪೆಟ್ರೋಲ್‌ಗೆ ಆಗ್ರಹಿಸಿ ಆಗಸ್ಟ್ 4ಕ್ಕೆ ಸಂಸತ್ ಚಲೋ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ನೀಟ್ ಪತ್ರಿಕೆ ಸೋರಿಕೆ : ದೇಶ ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯೇ ನಮಗೆ ಮುಖ್ಯ ಎಂದ ಅಮಿತ್ ಶಾ !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ