ಬಿಡಿಎನಲ್ಲಿ ಬದಲಾವಣೆ ಪರ್ವ ಶುರು.. ಮಾಸ್ಟರ್​ ಪ್ಲಾನ್-2041!

ಬಿಡಿಎನಲ್ಲಿ ಬದಲಾವಣೆ ಪರ್ವ ಶುರುವಾಗಿದೆ.. ಹಿಂದಿನ ನ್ಯೂನತೆ ಸರಿಪಡಿಸಿ ನಗರಕ್ಕೆ ಭದ್ರ ಬುನಾದಿ ಹಾಕಲು ಬಿಡಿಎ ಸಜ್ಜಾಗಿದೆ.. RMP-2041 ಪ್ಲಾನ್​ ಹಿಡಿದು ಬಿಡಿಎ ಬದಲಾವಣೆ ಪರ್ವಕ್ಕೆ ನಾಂದಿಹಾಡಿದೆ.

ಉದ್ದೇಶವೇನು?
ಬಿಡಿಎನಲ್ಲಿ ಪ್ರಸ್ತುತ ಪರಿಷ್ಕೃತ ಮಾಸ್ಟರ್​​​ ಪ್ಲಾನ್​​-2015 ಬಳಕೆ
ವಿಸ್ತರಣೆ, ಹೆಚ್ಚುತ್ತಿರುವ ಜನಸಂಖ್ಯೆ, ವಾಹನ ದಟ್ಟಣೆ ನಿಯಂತ್ರಣ
ಉತ್ತಮ ಜೀವನ ಗುಣಮಟ್ಟಕ್ಕೆ ಮೂಲ ಸೌಕರ್ಯಗಳ ಅಭಿವೃದ್ಧಿ
ಅನಧಿಕೃತ ಲೇಔಟ್​ಗಳು & ಕಟ್ಟಡಗಳಿಗೆ ಕಡಿವಾಣ ಹಾಕುವುದು
ನಗರಕ್ಕೆ ಅಗತ್ಯವಾದ ಫ್ಲೈಓವರ್​​ಗಳನ್ನು ನಿರ್ಮಾಣ ಮಾಡುವುದು
ಎಲ್ಲಾ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವುದು
ವಿಶೇಷವಾಗಿ ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನ ರೂಪಿಸುವುದು
ಕೃಷಿ, ವಸತಿ, ವಾಣಿಜ್ಯ, ಸರ್ಕಾರಿ ಉದ್ದೇಶದ ಜಮೀನಿನ ಮಾಹಿತಿ

BDAಯಿಂದ ಟೆಂಡ‌ರ್ ಅಡಿ ಹೈಟೆಕ್ ತ್ರಿಡಿ ಡೋನ್ ಸಮೀಕ್ಷೆ ನಡೆಸಲಾಗುತ್ತೆ.. ಆಧುನಿಕ ತಂತ್ರಜ್ಞಾನದ ಮೂಲಕ ಸಮೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ.. 1,240 ಚದರ ಕಿ.ಮೀ. ವಿಸ್ತೀರ್ಣ ಒಳಗೊಂಡ ಬೆಂಗಳೂರು ನಗರದ ಮೂಲ ನಕ್ಷೆ, ಭೂ ಬಳಕೆಯ ನಕ್ಷೆ, ಡಿಜಿಟಲ್ ಎಲಿವೇಶನ್​​ ಬಳಕೆ ಮಾಡಲಾಗುತ್ತೆ.. ಭೌಗೋಳಿಕ ಮಾಹಿತಿ ವ್ಯವಸ್ಥೆ ವಿಧಾನದ ಮೂಲಕ ಸಮೀಕ್ಷೆ ನಡೆಸಲಾಗುತ್ತೆ.. ಕರಡು ಸಿದ್ಧವಾದ ನಂತರ ಈ ಬಗ್ಗೆ ಗೆಜೆಟ್‌ನಲ್ಲಿ ಪ್ರಕಟಣೆ ಮಾಡುವ ಸಾಧ್ಯತೆ ಇದೆ.. ಬಳಿಕ ಸಾರ್ವಜನಿಕರಿಗೆ ಸಲಹೆ, ಆಕ್ಷೇಪಣೆಗೆ 60 ದಿನ ಕಾಲಾವಕಾಶ ಇರುತ್ತೆ.. 2026ರ ಮಧ್ಯಭಾಗದ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಇದಾಗಿದೆ.. ಸದ್ಯ ಪರಿಷ್ಕೃತ ಮಾಸ್ಟರ್​​​ ಸಿದ್ಧಪಡಿಸಲು BDA ಟೆಂಡರ್​ ಕರೆದಿದೆ.. ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಏಜೆನ್ಸಿ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30ಕ್ಕೆ ಬಿಡಿಎ ಡೆಡ್​ಲೈನ್​ ನೀಡಿದೆ.

ಮಾಸ್ಟರ್ ಪ್ಲಾನ್-2041ನ್ನು ಪರಿಷ್ಕರಣೆಗೆ BDAಗೆ ಅಧಿಕಾರ ಇಲ್ಲ ಎಂಬ ವಾದದಿಂದ ಸದ್ಯ ಹೈಕೋರ್ಟ್​​ನಲ್ಲಿ ಹಿನ್ನಡೆಯಾಗಿದೆ.. ಸದ್ಯ ಹೈಕೊರ್ಟ್​ ಹಸಿರು ನಿಶಾನೆ ತೋರಿದ್ರೆ ಬಿಡಿಎನಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ.. ಒಟ್ನಲ್ಲಿ ಮಾಸ್ಟರ್ ಪ್ಲಾನ್-2041 ಮೂಲಕ ಬಿಡಿಎ ಇಂಥದ್ದೊಂದು ಪ್ಲಾನ್​ ಮಾಡಿರೋದು ರಾಜಧಾನಿಗೆ ವರವಾಗೋದು ನಿಶ್ಚಿತ.

Related Posts

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ರಾಜ್ಯದಲ್ಲಿ ಈ ತಿಂಗಳಿನಿಂದ ಆರಂಭವಾಗಲಿರುವ ಎಸ್‌ಐಆರ್ (ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಕೇರಳದ ಮಾದರಿಯಲ್ಲಿ ನಮ್ಮಲ್ಲೂ ಈ…

ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಶಾಸಕ ಯತ್ನಾಳ್ !

  ಬಾಗಲಕೋಟೆ ಉಪಚುನಾವಣೆ ಅಖಾಡದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ವೀರಣ್ಣ ಚರಂತಿಮಠ ಅವರ ಪರವಾಗಿ ಪ್ರಚಾರ ಭಾಷಣ ಮಾಡಿದರು. ಈ ಸಂದರ್ಭದಲ್ಲಿ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಹಿಂದೂ ಸಮಾಜದ ಐಕ್ಯತೆಯನ್ನು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!