ಬಿಡಿಎನಲ್ಲಿ ಬದಲಾವಣೆ ಪರ್ವ ಶುರು.. ಮಾಸ್ಟರ್​ ಪ್ಲಾನ್-2041!

ಬಿಡಿಎನಲ್ಲಿ ಬದಲಾವಣೆ ಪರ್ವ ಶುರುವಾಗಿದೆ.. ಹಿಂದಿನ ನ್ಯೂನತೆ ಸರಿಪಡಿಸಿ ನಗರಕ್ಕೆ ಭದ್ರ ಬುನಾದಿ ಹಾಕಲು ಬಿಡಿಎ ಸಜ್ಜಾಗಿದೆ.. RMP-2041 ಪ್ಲಾನ್​ ಹಿಡಿದು ಬಿಡಿಎ ಬದಲಾವಣೆ ಪರ್ವಕ್ಕೆ ನಾಂದಿಹಾಡಿದೆ.

ಉದ್ದೇಶವೇನು?
ಬಿಡಿಎನಲ್ಲಿ ಪ್ರಸ್ತುತ ಪರಿಷ್ಕೃತ ಮಾಸ್ಟರ್​​​ ಪ್ಲಾನ್​​-2015 ಬಳಕೆ
ವಿಸ್ತರಣೆ, ಹೆಚ್ಚುತ್ತಿರುವ ಜನಸಂಖ್ಯೆ, ವಾಹನ ದಟ್ಟಣೆ ನಿಯಂತ್ರಣ
ಉತ್ತಮ ಜೀವನ ಗುಣಮಟ್ಟಕ್ಕೆ ಮೂಲ ಸೌಕರ್ಯಗಳ ಅಭಿವೃದ್ಧಿ
ಅನಧಿಕೃತ ಲೇಔಟ್​ಗಳು & ಕಟ್ಟಡಗಳಿಗೆ ಕಡಿವಾಣ ಹಾಕುವುದು
ನಗರಕ್ಕೆ ಅಗತ್ಯವಾದ ಫ್ಲೈಓವರ್​​ಗಳನ್ನು ನಿರ್ಮಾಣ ಮಾಡುವುದು
ಎಲ್ಲಾ ವಾಹನಗಳ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸುವುದು
ವಿಶೇಷವಾಗಿ ಗುಣಮಟ್ಟದ ಸಾರಿಗೆ ವ್ಯವಸ್ಥೆಯನ್ನ ರೂಪಿಸುವುದು
ಕೃಷಿ, ವಸತಿ, ವಾಣಿಜ್ಯ, ಸರ್ಕಾರಿ ಉದ್ದೇಶದ ಜಮೀನಿನ ಮಾಹಿತಿ

BDAಯಿಂದ ಟೆಂಡ‌ರ್ ಅಡಿ ಹೈಟೆಕ್ ತ್ರಿಡಿ ಡೋನ್ ಸಮೀಕ್ಷೆ ನಡೆಸಲಾಗುತ್ತೆ.. ಆಧುನಿಕ ತಂತ್ರಜ್ಞಾನದ ಮೂಲಕ ಸಮೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ.. 1,240 ಚದರ ಕಿ.ಮೀ. ವಿಸ್ತೀರ್ಣ ಒಳಗೊಂಡ ಬೆಂಗಳೂರು ನಗರದ ಮೂಲ ನಕ್ಷೆ, ಭೂ ಬಳಕೆಯ ನಕ್ಷೆ, ಡಿಜಿಟಲ್ ಎಲಿವೇಶನ್​​ ಬಳಕೆ ಮಾಡಲಾಗುತ್ತೆ.. ಭೌಗೋಳಿಕ ಮಾಹಿತಿ ವ್ಯವಸ್ಥೆ ವಿಧಾನದ ಮೂಲಕ ಸಮೀಕ್ಷೆ ನಡೆಸಲಾಗುತ್ತೆ.. ಕರಡು ಸಿದ್ಧವಾದ ನಂತರ ಈ ಬಗ್ಗೆ ಗೆಜೆಟ್‌ನಲ್ಲಿ ಪ್ರಕಟಣೆ ಮಾಡುವ ಸಾಧ್ಯತೆ ಇದೆ.. ಬಳಿಕ ಸಾರ್ವಜನಿಕರಿಗೆ ಸಲಹೆ, ಆಕ್ಷೇಪಣೆಗೆ 60 ದಿನ ಕಾಲಾವಕಾಶ ಇರುತ್ತೆ.. 2026ರ ಮಧ್ಯಭಾಗದ ವೇಳೆಗೆ ಪ್ರಕ್ರಿಯೆ ಪೂರ್ಣಗೊಳಿಸುವ ಗುರಿ ಇದಾಗಿದೆ.. ಸದ್ಯ ಪರಿಷ್ಕೃತ ಮಾಸ್ಟರ್​​​ ಸಿದ್ಧಪಡಿಸಲು BDA ಟೆಂಡರ್​ ಕರೆದಿದೆ.. ಇ-ಪ್ರೊಕ್ಯೂರ್‌ಮೆಂಟ್ ಮೂಲಕ ಏಜೆನ್ಸಿ ಆಯ್ಕೆಗೆ ಅರ್ಜಿ ಆಹ್ವಾನಿಸಲಾಗಿದೆ.. ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30ಕ್ಕೆ ಬಿಡಿಎ ಡೆಡ್​ಲೈನ್​ ನೀಡಿದೆ.

ಮಾಸ್ಟರ್ ಪ್ಲಾನ್-2041ನ್ನು ಪರಿಷ್ಕರಣೆಗೆ BDAಗೆ ಅಧಿಕಾರ ಇಲ್ಲ ಎಂಬ ವಾದದಿಂದ ಸದ್ಯ ಹೈಕೋರ್ಟ್​​ನಲ್ಲಿ ಹಿನ್ನಡೆಯಾಗಿದೆ.. ಸದ್ಯ ಹೈಕೊರ್ಟ್​ ಹಸಿರು ನಿಶಾನೆ ತೋರಿದ್ರೆ ಬಿಡಿಎನಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ.. ಒಟ್ನಲ್ಲಿ ಮಾಸ್ಟರ್ ಪ್ಲಾನ್-2041 ಮೂಲಕ ಬಿಡಿಎ ಇಂಥದ್ದೊಂದು ಪ್ಲಾನ್​ ಮಾಡಿರೋದು ರಾಜಧಾನಿಗೆ ವರವಾಗೋದು ನಿಶ್ಚಿತ.

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!