ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.

ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ.

ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ.

@INCKarnataka
ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ @siddaramaiahಹಾಗು ಗೃಹ ಸಚಿವ
@DrParameshwara ಅವರನ್ನ ಒತ್ತಾಯಿಸುತ್ತೇನೆ ಎಂದು ಆರ್ ಅಶೋಕ್ ಟ್ವೀಟ್​ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!