ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ ‘ದಿ ಕೇರಳ ಸ್ಟೋರಿ 2’ ಸಿನಿಮಾ

‘ದಿ ಕೇರಳ ಸ್ಟೋರಿ 2’ ಸಿನಿಮಾ ಪ್ರತಿ ದಿನ ಬಾಕ್ಸ್ ಆಫೀಸ್​​ನಲ್ಲಿ ಕೇವಲ ಒಂದಂಕಿ ಕಲೆಕ್ಷನ್ ಮಾಡುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ. ವೀಕೆಂಡ್​​ನಲ್ಲೂ ಚೇತರಿಕೆ ಕಂಡಿಲ್ಲ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಚಿತ್ರಮಂದಿರಗಳ ಕೊರತೆ ಆಗಲಿದೆ.

ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಕುಸಿಯುವ ಸೂಚನೆ ಸಿಕ್ಕಿದೆ.

2023ರಲ್ಲಿ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಅದರ ಮುಂದುವರಿದ ಭಾಗವಾಗಿ ‘ದಿ ಕೇರಳ ಸ್ಟೋರಿ 2’ ಈಗ ರಿಲೀಸ್ ಆಗಿದೆ. ಈ ಚಿತ್ರಕ್ಕೆ ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಆದಾಗ ವಿವಾದ ಶುರುವಾಗಿತ್ತು. ಚಿತ್ರದ ವಿರುದ್ಧ ಅನೇಕರು ಕೋರ್ಟ್​ ಮೆಟ್ಟಿಲು ಏರಿದ್ದರು.

ಮೊದಲ ದಿನ ಕೆಲವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದರಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಅಂದು ಕೇವಲ 75 ಲಕ್ಷ ರೂಪಾಯಿ ಕಲೆಕ್ಷನ್ ಆಗಿತ್ತು. ಎರಡನೇ ದಿನ 4.65 ಕೋಟಿ ರೂಪಾಯಿ ಆದಾಯ ಬಂತು. ಮೂರನೇ ದಿನ 4.74 ಕೋಟಿ ರೂಪಾಯಿ ಆಯಿತು. ಆದರೆ ಮೊದಲ ಸೋಮವಾರ ಬರುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್ ಮತ್ತೆ ಕುಸಿಯುತು.

2ನೇ ವೀಕೆಂಡ್​​ನಲ್ಲಿ ಕಲೆಕ್ಷನ್ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಿಲ್ಲ. 2ನೇ ಶನಿವಾರ ಅಂದಾಜು 3.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಎಷ್ಟೇ ಪ್ರಚಾರ ಸಿಕ್ಕಿದ್ದರೂ ಒಂದು ದಿನ ಕೂಡ ಈ ಸಿನಿಮಾದ ಕಲೆಕ್ಷನ್ 5 ಕೋಟಿ ರೂಪಾಯಿ ದಾಟಲು ಸಾಧ್ಯವಾಗಿಲ್ಲ. ತೆವಳುತ್ತಾ ಸಾಗುತ್ತಿರುವ ಈ ಸಿನಿಮಾಗೆ ಈವರೆಗೂ ಒಟ್ಟು 30 ಕೋಟಿ ರೂಪಾಯಿ ಆದಾಯ ಬಂದಿದೆ.

ಈ ಸಿನಿಮಾದಿಂದ ಕೇರಳದ ಪ್ರತಿಷ್ಠೆಗೆ ಧಕ್ಕೆ ಆಗಿದೆ ಎಂಬ ಕಾರಣಕ್ಕೆ ಶೀರ್ಷಿಕೆಯನ್ನು ವಿರೋಧಿಸಲಾಗಿದೆ. ಕೇರಳದಲ್ಲಿ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕಾಗಿ ಜನರು ಕಾದಿದ್ದಾರೆ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾ ಹೇಳ ಹೆಸರಿಲ್ಲದಂತೆ ಅಖಾಡದಿಂದ ಹೊರಬೀಳುವುದು ಖಚಿತ.

 

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು