ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ ‘ದಿ ಕೇರಳ ಸ್ಟೋರಿ 2’ ಸಿನಿಮಾ

‘ದಿ ಕೇರಳ ಸ್ಟೋರಿ 2’ ಸಿನಿಮಾ ಪ್ರತಿ ದಿನ ಬಾಕ್ಸ್ ಆಫೀಸ್​​ನಲ್ಲಿ ಕೇವಲ ಒಂದಂಕಿ ಕಲೆಕ್ಷನ್ ಮಾಡುತ್ತಿದೆ. ನಿರೀಕ್ಷಿತ ಪ್ರಮಾಣದಲ್ಲಿ ಕಲೆಕ್ಷನ್ ಮಾಡಲು ಈ ಚಿತ್ರಕ್ಕೆ ಸಾಧ್ಯವಾಗಿಲ್ಲ. ವೀಕೆಂಡ್​​ನಲ್ಲೂ ಚೇತರಿಕೆ ಕಂಡಿಲ್ಲ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ಚಿತ್ರಮಂದಿರಗಳ ಕೊರತೆ ಆಗಲಿದೆ.

ಭಾರಿ ವಿವಾದದ ಮೂಲಕ ಸುದ್ದಿ ಆಗಿದ್ದ ‘ದಿ ಕೇರಳ ಸ್ಟೋರಿ 2’ ಸಿನಿಮಾ ದೊಡ್ಡ ಕಲೆಕ್ಷನ್ ಮಾಡುವ ನಿರೀಕ್ಷೆ ಇತ್ತು. ಆದರೆ ನಿರೀಕ್ಷಿತ ಮಟ್ಟದಲ್ಲಿ ಕಲೆಕ್ಷನ್ ಆಗಿಲ್ಲ. ಫೆಬ್ರವರಿ 27ರಂದು ಬಿಡುಗಡೆ ಆದ ಈ ಸಿನಿಮಾಗೆ ಹೇಳಿಕೊಳ್ಳುವಂತಹ ಓಪನಿಂಗ್ ಸಿಗಲಿಲ್ಲ. ಬಿಡುಗಡೆಯಾಗಿ 9 ದಿನಗಳು ಕಳೆದಿವೆ. ಮಾಡಿದ ವಿವಾದಕ್ಕೆ ಹೋಲಿಸಿದರೆ ಈವರೆಗೂ ಆಗಿರುವ ಕಲೆಕ್ಷನ್ ಕಡಿಮೆ. 9 ದಿನಗಳಲ್ಲಿ ಈ ಚಿತ್ರಕ್ಕೆ 30 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ. ಮುಂದಿನ ದಿನಗಳಲ್ಲಿ ಕಲೆಕ್ಷನ್ ಕುಸಿಯುವ ಸೂಚನೆ ಸಿಕ್ಕಿದೆ.

2023ರಲ್ಲಿ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಅದರ ಮುಂದುವರಿದ ಭಾಗವಾಗಿ ‘ದಿ ಕೇರಳ ಸ್ಟೋರಿ 2’ ಈಗ ರಿಲೀಸ್ ಆಗಿದೆ. ಈ ಚಿತ್ರಕ್ಕೆ ವಿಪುಲ್ ಅಮೃತ್​ಲಾಲ್ ಶಾ ಅವರು ಬಂಡವಾಳ ಹೂಡಿದ್ದಾರೆ. ಕಾಮ್ಯಾಕ್ಯ ನಾರಾಯಣ್ ಸಿಂಗ್ ಅವರು ನಿರ್ದೇಶನ ಮಾಡಿದ್ದಾರೆ. ಟ್ರೇಲರ್ ರಿಲೀಸ್ ಆದಾಗ ವಿವಾದ ಶುರುವಾಗಿತ್ತು. ಚಿತ್ರದ ವಿರುದ್ಧ ಅನೇಕರು ಕೋರ್ಟ್​ ಮೆಟ್ಟಿಲು ಏರಿದ್ದರು.

ಮೊದಲ ದಿನ ಕೆಲವೇ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿದ್ದರಿಂದ ‘ದಿ ಕೇರಳ ಸ್ಟೋರಿ’ ಚಿತ್ರಕ್ಕೆ ಅಂದು ಕೇವಲ 75 ಲಕ್ಷ ರೂಪಾಯಿ ಕಲೆಕ್ಷನ್ ಆಗಿತ್ತು. ಎರಡನೇ ದಿನ 4.65 ಕೋಟಿ ರೂಪಾಯಿ ಆದಾಯ ಬಂತು. ಮೂರನೇ ದಿನ 4.74 ಕೋಟಿ ರೂಪಾಯಿ ಆಯಿತು. ಆದರೆ ಮೊದಲ ಸೋಮವಾರ ಬರುತ್ತಿದ್ದಂತೆಯೇ ಈ ಸಿನಿಮಾದ ಕಲೆಕ್ಷನ್ ಮತ್ತೆ ಕುಸಿಯುತು.

2ನೇ ವೀಕೆಂಡ್​​ನಲ್ಲಿ ಕಲೆಕ್ಷನ್ ಹೆಚ್ಚಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಕೂಡ ಸಾಧ್ಯವಾಗಿಲ್ಲ. 2ನೇ ಶನಿವಾರ ಅಂದಾಜು 3.75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಎಷ್ಟೇ ಪ್ರಚಾರ ಸಿಕ್ಕಿದ್ದರೂ ಒಂದು ದಿನ ಕೂಡ ಈ ಸಿನಿಮಾದ ಕಲೆಕ್ಷನ್ 5 ಕೋಟಿ ರೂಪಾಯಿ ದಾಟಲು ಸಾಧ್ಯವಾಗಿಲ್ಲ. ತೆವಳುತ್ತಾ ಸಾಗುತ್ತಿರುವ ಈ ಸಿನಿಮಾಗೆ ಈವರೆಗೂ ಒಟ್ಟು 30 ಕೋಟಿ ರೂಪಾಯಿ ಆದಾಯ ಬಂದಿದೆ.

ಈ ಸಿನಿಮಾದಿಂದ ಕೇರಳದ ಪ್ರತಿಷ್ಠೆಗೆ ಧಕ್ಕೆ ಆಗಿದೆ ಎಂಬ ಕಾರಣಕ್ಕೆ ಶೀರ್ಷಿಕೆಯನ್ನು ವಿರೋಧಿಸಲಾಗಿದೆ. ಕೇರಳದಲ್ಲಿ ಈ ಚಿತ್ರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ‘ಧುರಂಧರ್ 2’ ಸಿನಿಮಾ ರಿಲೀಸ್ ಆಗಲಿದೆ. ಅದಕ್ಕಾಗಿ ಜನರು ಕಾದಿದ್ದಾರೆ. ‘ಧುರಂಧರ್ 2’ ಬಿಡುಗಡೆ ಆದರೆ ‘ದಿ ಕೇರಳ ಸ್ಟೋರಿ 2’ ಸಿನಿಮಾ ಹೇಳ ಹೆಸರಿಲ್ಲದಂತೆ ಅಖಾಡದಿಂದ ಹೊರಬೀಳುವುದು ಖಚಿತ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!