‘ಕರಿಯ 2’ ಚಿತ್ರದ ನಾಯಕ ನಟ ಅನಾರೋಗ್ಯದಿಂದ ನಿಧನ.

‘ಕರಿಯ 2’, ‘ಗಣಪ’, ‘ಕೆಂಪ’ ಇನ್ನೂ ಕೆಲ ಸಿನಿಮಾಗಳಲ್ಲಿ ನಟಿಸಿರುವ ನಟ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದಲೂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಜಾಂಡೀಸ್ ಆಗಿತ್ತು. ಬನಶಂಕರಿಯ ಸಾಗರ್ ಅಪೊಲೊ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು.

ಅವರಿಗೆ 38 ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಕೆಲ ದಿನಗಳ ಹಿಂದಷ್ಟೆ ಬನಶಂಕರಿಯ ಸಾಗರ್ ಅಪೋಲೊ ಆಸ್ಪತ್ರೆಗೆ ಅವರು ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದ ಕಾರಣ, ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸಂತೋಷ್ ಬಾಲರಾಜ್ ನಿಧನ ಹೊಂದಿದ್ದಾರೆ.

https://youtu.be/CX6-oIcxgPQ?si=zZtsHbWQ_ujIhHD3ಅನಿಲ್ ಚಿಕ್ಕಮಾದು ನಾನ್ ಕಾಂಟ್ರವರ್ಸಿಯಲ್ ಲೀಡರ್… ಅವರ ಹೆಸರಿಗೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ

ಸಂತೋಷ್ ಬಾಲರಾಜ್ ಅವರಿಗೆ ಜಾಂಡೀಸ್ ಆಗಿತ್ತು. ಜಾಂಡೀಸ್ ಖಾಯಿಲೆ ಬಾಲರಾಜ್ ಅವರ ದೇಹವನ್ನೆಲ್ಲ ಆವರಿಸಿತ್ತು. ಕಳೆದ ಎರಡು ದಿನದಿಂದಲೂ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿತ್ತು. ಯಕೃತ್ತು ಮತ್ತು ಕಿಡ್ನಿಯ ಸಮಸ್ಯೆಯಿಂದಾಗಿ ಅವರಿಗೆ ಜಾಂಡೀಸ್ ತಗುಲಿತ್ತು. ಈ ಮೊದಲೂ ಸಹ ಸಂತೋಷ್ ಬಾಲರಾಜ್ ಅವರು ಜಾಂಡೀಸ್​ನಿಂದ ಬಳಲಿದ್ದರು. ಆಗ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೆ ಈ ಬಾರಿ ಪರಿಸ್ಥಿತಿ ಕೈ ಮೀರಿ ಹೋಗಿತ್ತು. ಸಂತೋಷ್ ಅವರಿಗೆ ಮದುವೆ ಆಗಿರಲಿಲ್ಲ. ತಾಯಿ ಮತ್ತು ಸಹೋದರಿ ಇದ್ದರು.

‘ಕೆಂಪ’ ಸಿನಿಮಾ ಮೂಲಕ ಸಂತೋಷ್ ಬಾಲರಾಜ್ ಚಿತ್ರರಂಗ ಪ್ರವೇಶಿಸಿದ್ದರು. ಆ ಬಳಿಕ ಅವರು ‘ಕರಿಯ 2’, ‘ಜನ್ಮ’ ಮತ್ತು ‘ಗಣಪ’ ಸಿನಿಮಾಗಳಲ್ಲಿ ನಟಿಸಿದರು. ದರ್ಶನ್ ನಟನೆಯ ‘ಕರಿಯ’ ಸಿನಿಮಾದ ನಿರ್ಮಾಪಕ ಅನೆಕಲ್ ಬಾಲರಾಜ್ ಅವರ ಪುತ್ರ ಸಂತೋಷ್ ಬಾಲರಾಜ್, ಆನೆಕಲ್ ಬಾಲರಾಜ್ ಅವರು ಕಳೆದ ವರ್ಷವಷ್ಟೆ ನಿಧನ ಹೊಂದಿದರು. ಈಗ ಸಂತೋಷ್ ಸಹ ಇಹಲೋಕ ತ್ಯಜಿಸಿದ್ದಾರೆ. ಸಂತೋಷ್ ನಟನೆಯ ‘ಬರ್ಕ್ಲಿ’ ಮತ್ತು ‘ಸತ್ಯಂ’ ಸಿನಿಮಾಗಳು ಬಿಡುಗಡೆ ಆಗಬೇಕಿವೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!