ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ?

ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ ಆಗಸ್ಟ್​ 10ರಂದು (ನಾಳೆ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲದೇ ಮೂರು ವಂದೇ ಭಾರತ್ ರೈಲುಗಳಿಗೂ ಮೋದಿ ಅಂದು ಚಾಲನೆ ನೀಡಲಿದ್ದಾರೆ. ಬೆಂಗಳೂರು-ಬೆಳಗಾವಿ, ಅಮೃತಸರ-ಮಾತಾ ವೈಷ್ಣೋದೇವಿ, ನಾಗಪುರ-ಪುಣೆ ಮಾರ್ಗದ ವಂದೇ ಭಾರತ್ ರೈಲುಗಳನ್ನ ಮೋದಿ ಉದ್ಘಾಟಿಲಿದ್ದಾರೆ.. ಇದೇ ವೇಳೆ ನಮ್ಮ ಮೆಟ್ರೋದ 3ನೇ ಹಂತದ 2 ಕಾರಿಡಾರ್‌ಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜಧಾನಿಗೆ ನಮೋ! ನಾಳೆ ಪ್ರಧಾನಿ ವೇಳಾಪಟ್ಟಿ ಏನು ?

    • ನಾಳೆ ಬೆಳಗ್ಗೆ 7.50ಕ್ಕೆ ದೆಹಲಿಯಿಂದ ಹೊರಡಲಿರುವ ಮೋದಿ
    • ಬೆ.10.30ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣಕ್ಕೆ ಮೋದಿ ಆಗಮನ
    • ಬೆ.10.50ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮನ
    • ಬೆ.11ಕ್ಕೆ ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ಸಿಟಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ
    • ಬೆ.11.15ಕ್ಕೆ ರೈಲ್ವೆ ನಿಲ್ದಾಣದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ
    • ಬೆ.11.45ಕ್ಕೆ ರಸ್ತೆ ಮಾರ್ಗವಾಗಿ ರಾಗಿಗುಡ್ಡದ ಮೆಟ್ರೋ ನಿಲ್ದಾಣಕ್ಕೆ ಆಗಮನ
    • ಬೆ.11.50 ರಿಂದ ಮ.12.50ವರೆಗೂ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
    • ಮೆಟ್ರೋ ರೈಲಿನಲ್ಲಿಯೇ ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ
    • ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಮ್ಮ ಮೆಟ್ರೋದ 3ನೇ ಹಂತಕ್ಕೆ ಶಂಕುಸ್ಥಾಪನೆ
    • ಮ.1 ರಿಂದ 2 ಗಂಟೆವರೆಗೂ IIIT ಆಡಿಟೋರಿಯಂನಲ್ಲಿ ಕಾರ್ಯಕ್ರಮ
    • ಮ.2.05ಕ್ಕೆ ಹೆಲಿಕಾಪ್ಟರ್‌ನಲ್ಲಿ HAL ವಿಮಾನ ನಿಲ್ದಾಣಕ್ಕೆ ನಮೋ ವಾಪಸ್
    • ಮ.2.40ಕ್ಕೆ HAL ವಿಮಾನ ನಿಲ್ದಾಣದಿಂದ ದೆಹಲಿಗೆ ಮೋದಿಯ ಪ್ರಯಾಣ

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!