ನಾಳೆ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲಿರುವ ಪ್ರಧಾನಿ. ನಾಳಿನ ವೇಳಾಪಟ್ಟಿ ಹೀಗಿದೆ ?

ಹಲವು ವರ್ಷಗಳ ಬಳಿಕ ನನಸಾಗಿರೋ ನಮ್ಮ ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಆರಂಭಕ್ಕೆ ಕೌಂಟ್​ ಡೌನ್ ಆರಂಭವಾಗಿದೆ. ನಾಳೆ ಹಳದಿ ಮಾರ್ಗಕ್ಕೆ ದೇಶದ ಪ್ರಧಾನಿ ಹಸಿರು ನಿಶಾನೆ ತೋರಲಿದ್ದಾರೆ. ರಾಜ್ಯರಾಜಧಾನಿಯಲ್ಲಿ ಸಂಚಾರಕ್ಕೆ ಸಿದ್ದಗೊಂಡಿರೋ ಹಳದಿ ಲೈನ್ ಮೆಟ್ರೋಗೆ ಹಸಿರು ನಿಶಾನೆ ತೋರಲು ಪ್ರಧಾನಿ ಮೋದಿ ಆಗಸ್ಟ್​ 10ರಂದು (ನಾಳೆ) ಬೆಂಗಳೂರಿಗೆ ಆಗಮಿಸಲಿದ್ದಾರೆ. ಅಲ್ಲದೇ ಮೂರು ವಂದೇ ಭಾರತ್ ರೈಲುಗಳಿಗೂ ಮೋದಿ ಅಂದು ಚಾಲನೆ ನೀಡಲಿದ್ದಾರೆ. ಬೆಂಗಳೂರು-ಬೆಳಗಾವಿ, ಅಮೃತಸರ-ಮಾತಾ ವೈಷ್ಣೋದೇವಿ, ನಾಗಪುರ-ಪುಣೆ ಮಾರ್ಗದ ವಂದೇ ಭಾರತ್ ರೈಲುಗಳನ್ನ ಮೋದಿ ಉದ್ಘಾಟಿಲಿದ್ದಾರೆ.. ಇದೇ ವೇಳೆ ನಮ್ಮ ಮೆಟ್ರೋದ 3ನೇ ಹಂತದ 2 ಕಾರಿಡಾರ್‌ಗಳಿಗೂ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ರಾಜಧಾನಿಗೆ ನಮೋ! ನಾಳೆ ಪ್ರಧಾನಿ ವೇಳಾಪಟ್ಟಿ ಏನು ?

    • ನಾಳೆ ಬೆಳಗ್ಗೆ 7.50ಕ್ಕೆ ದೆಹಲಿಯಿಂದ ಹೊರಡಲಿರುವ ಮೋದಿ
    • ಬೆ.10.30ಕ್ಕೆ ಬೆಂಗಳೂರು HAL ವಿಮಾನ ನಿಲ್ದಾಣಕ್ಕೆ ಮೋದಿ ಆಗಮನ
    • ಬೆ.10.50ಕ್ಕೆ ಹೆಲಿಕಾಪ್ಟರ್‌ನಲ್ಲಿ ಹೆಚ್‌ಕ್ಯೂಟಿಸಿ ಹೆಲಿಪ್ಯಾಡ್‌ಗೆ ಆಗಮನ
    • ಬೆ.11ಕ್ಕೆ ರಸ್ತೆ ಮೂಲಕ ಸಂಗೊಳ್ಳಿ ರಾಯಣ್ಣ ಸಿಟಿ ರೈಲ್ವೆ ನಿಲ್ದಾಣಕ್ಕೆ ಎಂಟ್ರಿ
    • ಬೆ.11.15ಕ್ಕೆ ರೈಲ್ವೆ ನಿಲ್ದಾಣದಲ್ಲಿ 3 ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ
    • ಬೆ.11.45ಕ್ಕೆ ರಸ್ತೆ ಮಾರ್ಗವಾಗಿ ರಾಗಿಗುಡ್ಡದ ಮೆಟ್ರೋ ನಿಲ್ದಾಣಕ್ಕೆ ಆಗಮನ
    • ಬೆ.11.50 ರಿಂದ ಮ.12.50ವರೆಗೂ ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ
    • ಮೆಟ್ರೋ ರೈಲಿನಲ್ಲಿಯೇ ಎಲೆಕ್ಟ್ರಾನಿಕ್‌ ಸಿಟಿ ಮೆಟ್ರೋ ನಿಲ್ದಾಣಕ್ಕೆ ಪ್ರಯಾಣ
    • ಎಲೆಕ್ಟ್ರಾನಿಕ್‌ ಸಿಟಿಯಲ್ಲಿ ನಮ್ಮ ಮೆಟ್ರೋದ 3ನೇ ಹಂತಕ್ಕೆ ಶಂಕುಸ್ಥಾಪನೆ
    • ಮ.1 ರಿಂದ 2 ಗಂಟೆವರೆಗೂ IIIT ಆಡಿಟೋರಿಯಂನಲ್ಲಿ ಕಾರ್ಯಕ್ರಮ
    • ಮ.2.05ಕ್ಕೆ ಹೆಲಿಕಾಪ್ಟರ್‌ನಲ್ಲಿ HAL ವಿಮಾನ ನಿಲ್ದಾಣಕ್ಕೆ ನಮೋ ವಾಪಸ್
    • ಮ.2.40ಕ್ಕೆ HAL ವಿಮಾನ ನಿಲ್ದಾಣದಿಂದ ದೆಹಲಿಗೆ ಮೋದಿಯ ಪ್ರಯಾಣ

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!