ಬಿಟ್ಟು ಬಿಡದೇ ಸುರಿಯುತ್ತಿರೋ ಮಳೆ.. ಜೀವ ಕೈಯಲ್ಲಿಡಿದು ದಿನ ಕಳೆಯುತ್ತಿರೋ ಜನ!

ಮಳೆಯ ರೌದ್ರರೂಪಕ್ಕೆ ಬಿಹಾರದಲ್ಲಿ ಲೋಕೈನ್ ನದಿ ಉಕ್ಕಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ, ನಳಂದದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನೋಡ ನೋಡುತ್ತಲೇ ಮನೆಗಳು ಕುಸಿದು ಹೋಗುತ್ತಿವೆ. ಉತ್ತರ ಭಾರತದಲ್ಲಿ ಸದ್ಯ ಮಳೆರಾಯನ ಅಬ್ಬರ ಜೋರಾಗಿದೆ. ಮಳೆಯ ರೌದ್ರ ನರ್ತನಕ್ಕೆ ಅಕ್ಷರಶಃ ತತ್ತರಿಸಿರುವ ರಾಜಸ್ಥಾನ, ಬಿಹಾರ, ಒಡಿಶಾಗಳಲ್ಲಿ ಜನ ಜೀವ ಕೈಯಲ್ಲಿ ಹಿಡಿದು ದಿನದೂಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆ, ಬೆಳೆ, ರಸ್ತೆ ಎಲ್ಲವೂ ನೀರಿನಲ್ಲಿ ಕೊಚ್ಚಿ ಹೋಗ್ತಿವೆ. ಮಳೆ, ತನ್ನ ರೌದ್ರ ಪ್ರತಾಪದಿಂದ ಉತ್ತರ ಭಾರತವನ್ನ ಹಿಂಡಿ ಹಿಪ್ಪೆ ಮಾಡ್ತಿದೆ. ವರುಣ ಅಬ್ಬರಕ್ಕೆ ಉತ್ತರ ಭಾರತ ನಲುಗಿ ಹೋಗ್ತಿದ್ದು, ರಾಜಸ್ತಾನ, ಒಡಿಶಾ ಹಾಗೂ ಬಿಹಾರದಲ್ಲಿ ಜನರ ಕಣ್ಣ ಮುಂದೆಯೇ ಆಸ್ತಿ-ಪಾಸ್ತಿಗಳು ನಾಶ ಆಗುತ್ತಿವೆ. ನಿರಂತರ ಮಳೆಯಿಂದಾಗಿ ರಾಜಸ್ಥಾನದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೋಟಾ, ಬುಂಡಿ, ಬರಾನ್ ಮತ್ತು ಸವಾಯಿ ಮಾಧೋಪುರ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಸವಾಯಿ ಮಾಧೋಪುರ ಸಂಪೂರ್ಣ ಜಲಾವೃತವಾಗಿದ್ದು, ರಸ್ತೆಯಲ್ಲಿ ಬಸ್ ವಾಲಿಕೊಂಡು ನಿಂತಿದ್ದು, ಪ್ರಯಾಣಿಕರನ್ನು ರಕ್ಷಣೆ ಮಾಡಲಾಗಿದೆ. ಮತ್ತೊಂದೆಡೆ ಪ್ರವಾಹದಲ್ಲಿ ಸಿಲುಕಿದ್ದವರ ರಕ್ಷಣೆ ತೆರಳಿದ್ದ ಎನ್​ಡಿಆರ್​ಎಫ್​ ಸಿಬ್ಬಂದಿ ಇದ್ದ ಟ್ರ್ಯಾಕ್ಟರ್​ ಪಲ್ಟಿಯಾಗಿದೆ.

 

ಇನ್ನು ಭಾರೀ ಮಳೆಗೆ ಬುಂಡಿ ಪ್ರದೇಶ ಜಲಾವೃತವಾಗಿದ್ದು, ಜೈಪುರದ ಅಮೇರ್ ಕೋಟೆಯಲ್ಲಿ 200 ಅಡಿ ಉದ್ದದ ಗೋಡೆ ಕುಸಿತವಾಗಿದೆ. ಬಿಹಾರದಲ್ಲೂ ವರುಣನ ಅಬ್ಬರ.. ಉಕ್ಕಿ ಹರಿದ ಲೋಕೈನ್ ರಿವರ್ ಮಳೆಯ ರೌದ್ರರೂಪಕ್ಕೆ ಬಿಹಾರದಲ್ಲಿ ಲೋಕೈನ್ ನದಿ ಉಕ್ಕಿ ಹರಿಯುತ್ತಿದೆ. ನದಿ ಉಕ್ಕಿ ಹರಿದ ಪರಿಣಾಮ, ನಳಂದದಲ್ಲಿನ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, ನೋಡ ನೋಡುತ್ತಲೇ ಮನೆಗಳು ಕುಸಿದು ಹೋಗ್ತಿವೆ. ನಗರದ ಪ್ರಮುಖ ರಸ್ತೆಗಳು ಕೊಚ್ಚಿಹೋಗಿ ಬೆಳೆಗಳು ನಾಶವಾಗಿವೆ. ಓಡಿಶಾದಲ್ಲೂ ವರುಣ ತನ್ನ ರೌದ್ರ ರೂಪ ಪ್ರದರ್ಶಿಸ್ತಿದ್ದಾನೆ. ಧಾರಾಕಾರ ಮಳೆಗೆ ಸಮಕೋಯ್​ ನದಿ ಪಾಯ ಮಟ್ಟ ಮೀರಿದೆ. ಇದ್ರಿಂದ ಸೇತುವೆ ಮೇಲೆ ನೀರು ರಭಸವಾಗಿ ಹರಿಯುತ್ತಿದ್ದು, 13 ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ಉತ್ತರ ಭಾರರತ ಅಕ್ಷರಶಃ ತತ್ತರಿಸಿ ಹೋಗಿದೆ. ಪ್ರವಾಹದ ಭೀತಿ ಮಧ್ಯೆಯೇ ಜನರು ಬದುಕು ನಡೆಸುವಂತಾಗಿದೆ. ಇನ್ನೂ ಮಳೆ ಮುಂದುವರಿದ್ರೆ ಉತ್ತರ ಭಾರತದಲ್ಲಿ ಪ್ರವಾಹ ಅಪ್ಪಳಿಸಿದ್ರೂ ಅಚ್ಚರಿಯೇನಿಲ್ಲ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!