ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಯುವ ಜನತೆ ಸಾಯುತ್ತಿರುವುದಕ್ಕೆ ಕಾರಣ ಕೋವಿಡ್ ಲಸಿಕೆ ಅಲ್ವವೇ ಅಲ್ಲ; ಅಸಲಿ ಸತ್ಯ ಬಿಚ್ಚಿಟ್ಟ ಡಾಕ್ಟರ್!

ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ಮರಣಗಳಿಗೆ ಕೋವಿಡ್-19 ಲಸಿಕೆ ಕಾರಣವಾಗಿರಬಹುದೇ? ಎಂಬ ಊಹಾಪೋಹಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡಿವೆ. ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಎಸ್.ಡಿ.ಎಂ ಕ್ಷೇಮವನದ ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ. ಹಾಗಾದರೆ ಕೋವಿಡ್ ಲಸಿಕೆಗೂ ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಸಾವಿಗೂ ಸಂಬಂಧವಿದೆಯೇ? ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತವಾಗುವುದಕ್ಕೆ ಕಾರಣವೇನು? ಎಂಬುದನ್ನು ತಿಳಿದುಕೊಳ್ಳಿ.

ಇತ್ತೀಚಿಗೆ ಭಾರತದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪುವ ಯುವ ಜನರ ಸಂಖ್ಯೆ ಹೆಚ್ಚುತ್ತಿರುವುದು ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ಈ ರೀತಿಯ ಮರಣಗಳಿಗೆ ಕೋವಿಡ್- 19 ಲಸಿಕೆ ಕಾರಣವಾಗಿರಬಹುದೇ ಎಂಬ ಪ್ರಶ್ನೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಏನೂ ಅರಿಯದ ಜನ ಇದನ್ನು ಸತ್ಯ ಎಂದು ನಂಬಿದ್ದಾರೆ. ಆದರೆ ವೈಜ್ಞಾನಿಕ ಅಧ್ಯಯನಗಳು ಈ ಊಹಾಪೋಹಗಳಿಗೆ ಸ್ಪಷ್ಟ ಉತ್ತರ ನೀಡಿದೆ. ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಮತ್ತು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಸಂಯುಕ್ತವಾಗಿ ನಡೆಸಿದ ಅಧ್ಯಯನದ ಪ್ರಾಥಮಿಕ ಫಲಿತಾಂಶಗಳು ಇದಕ್ಕೆ ಸ್ಪಷ್ಟ ಉತ್ತರ ನೀಡಿದೆ. ಈ ಬಗ್ಗೆ ಹೆಚ್ಚಿನ ವಿವರವನ್ನು ಎಸ್.ಡಿ.ಎಂ ಕ್ಷೇಮವನದ ಮುಖ್ಯ ಸ್ವಾಸ್ಥ್ಯ ಅಧಿಕಾರಿ ಡಾ. ನರೇಂದ್ರ ಕೆ ಶೆಟ್ಟಿ ಅವರು ಹಂಚಿಕೊಂಡಿದ್ದಾರೆ.

ಕೋವಿಡ್ ಲಸಿಕೆಗೂ ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಸಾವಿಗೂ ಸಂಬಂಧವಿದೆಯೇ?
ಡಾ. ನರೇಂದ್ರ ಕೆ ಶೆಟ್ಟಿ ಹೇಳುವ ಪ್ರಕಾರ, ಅಧ್ಯಯನದ ಪ್ರಾಥಮಿಕ ಫಲಿತಾಂಶಗಳು ಕೋವಿಡ್- 19 ಲಸಿಕೆ ಮತ್ತು ಯುವಜನರಲ್ಲಿ ಸಂಭವಿಸುತ್ತಿರುವ ಆಕಸ್ಮಿಕ ಮರಣಗಳ ನಡುವೆ ಯಾವುದೇ ನೇರ ಸಂಬಂಧವಿಲ್ಲ ಎಂಬುದನ್ನು ವಿಶ್ಲೇಷಿಸಿದೆ. ಬದಲಾಗಿ, ಯುವಜನರಲ್ಲಿ ಕಾಣಿಸಿಕೊಳ್ಳುವ ಆಕಸ್ಮಿಕ ಹೃದಯಾಘಾತ ಮತ್ತು ಹಠಾತ್ ಆಗಿ ಸಂಭವಿಸುವ ಸಾವು (Sudden Cardiac Death – SCD) ಅನೇಕ ಕಾರಣಗಳಿಂದ ಉಂಟಾಗುತ್ತಿರಬಹುದು ಎಂದು ವಿವರಿಸಿದೆ. ಪಾಶ್ಚಾತ್ಯ ದೇಶಗಳಲ್ಲಿ ನಡೆದ ಹಲವು ಅಧ್ಯಯನಗಳು ಹೃದಯ ಸ್ನಾಯುಕೋಶದ ರೋಗಗಳು (ಕಾರ್ಡಿಯೊಮಯೋಪಥಿಗಳು) ಮತ್ತು ಹೃದಯದ ವಿದ್ಯುದ್ವಿಚಲನ ವ್ಯತ್ಯಯಗಳು (ಅರಿದಮಿಯಾಸ್) ಯುವಜನತೆಯಲ್ಲಿ ಹೆಚ್ಚುತ್ತಿರುವ ಪ್ರಮುಖ ಕಾರಣಗಳೆಂದು ಗುರುತಿಸಿವೆ. ಆದರೆ ಭಾರತೀಯ ಪರಿಸ್ಥಿತಿಯಲ್ಲಿ ಇಂತಹ ಸಮಗ್ರ ಅಧ್ಯಯನಗಳ ಕೊರತೆ ಇತ್ತು. ಈ ಕೊರತೆಯನ್ನು ನೀಗಿಸುವ ಉದ್ದೇಶದಿಂದಲೇ AIIMS– ICMR ಅಧ್ಯಯನವನ್ನು ಕೈಗೆತ್ತಿಕೊಳ್ಳಲಾಯಿತು. ಅಧ್ಯಯನದಲ್ಲಿ ಪ್ರಾಥಮಿಕವಾಗಿ ಕಂಡುಬಂದ ಮಾಹಿತಿಗಳು, ಬದಲಾಯಿಸಲಾಗದ ಕಾರಣಗಳ ಜೊತೆಗೆ ಬದಲಾಯಿಸಬಹುದಾದ ಜೀವನಶೈಲಿ ಅಂಶಗಳು ಯುವಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತವೆ ಎಂಬುದನ್ನು ಸ್ಪಷ್ಟಪಡಿಸುತ್ತವೆ.

ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತವಾಗುವುದಕ್ಕೆ ಕಾರಣವೇನು?
ಧೂಮಪಾನ, ಮದ್ಯಪಾನ, ದೈಹಿಕ ಚಟುವಟಿಕೆಯ ಕೊರತೆ, ಅಸಮರ್ಪಕ ನಿದ್ರೆ ಮತ್ತು ನಿರಂತರ ಮಾನಸಿಕ ಒತ್ತಡವು ಯುವಜನರಲ್ಲಿ ಹೃದಯ ಸಂಬಂಧಿತ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತವೆ. ಮದ್ಯಪಾನ ಮತ್ತು ಧೂಮಪಾನವು ಕೊರೊನರಿ ಆರ್ಟರಿ ರೋಗ, ಹೃದಯಾಘಾತ (ಮೈಕಾರ್ಡಿಯಲ್ ಇನ್ಫಾರ್ಕ್ಷನ್) ಮತ್ತು ಹೃದಯ ಬಡಿತದ ಅಸಮತೋಲನಗಳಿಗೆ ಕಾರಣವಾಗುತ್ತವೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ ದೀರ್ಘಕಾಲದ ಕೆಲಸ, ನಿರ್ದಿಷ್ಟ ಸಮಯವನ್ನು ಕೆಲಸಕ್ಕೆ ಇಡದಿರುವುದು ಮತ್ತು ಕೆಲಸದ ಒತ್ತಡವು ಹೃದಯ ರಕ್ತನಾಳ ಸಂಬಂಧಿತ ಸಂಕೀರ್ಣತೆಗಳನ್ನು ಉಂಟುಮಾಡುತ್ತವೆ. ಮಧ್ಯವಯಸ್ಕರಿಗೆ ಹೋಲಿಸಿದರೆ, ಹೃದಯಾಘಾತಕ್ಕೆ ಒಳಗಾಗುವ ಯುವ ವಯಸ್ಕರು ಹೆಚ್ಚು ಮಾನಸಿಕ ಒತ್ತಡವನ್ನು ಅನುಭವಿಸಿರುವುದು ವರದಿಯಲ್ಲಿ ಬಹಿರಂಗವಾಗಿದ್ದು, ಒತ್ತಡ ಸಣ್ಣ ವಯಸ್ಸಿನಲ್ಲಿಯೇ ಹೃದಯಾಘಾತಕ್ಕೆ ದಾರಿ ಮಾಡಿಕೊಡುವ ಪ್ರಮುಖ ಕಾರಣ ಎಂಬುದು ತಿಳಿದು ಬಂದಿದೆ.

ಲಸಿಕೆಗಳ ಕುರಿತು ಹರಡುತ್ತಿರುವ ತಪ್ಪು ಕಲ್ಪನೆಗಳನ್ನು ನಿವಾರಿಸುವುದು ಮಾತ್ರವಲ್ಲದೆ, ತಡೆಗಟ್ಟಬಹುದಾದ ಅಪಾಯಕಾರಕ ಅಂಶಗಳತ್ತ ಗಮನ ಹರಿಸಬೇಕಾಗಿದೆ. ಅದಕ್ಕಾಗಿಯೇ ಯುವಜನರಲ್ಲಿ ಮುಂಚಿತ ತಪಾಸಣೆ, ಆರೋಗ್ಯಕರ ಜೀವನಶೈಲಿಯ ಅಳವಡಿಕೆ, ಸಕಾರಾತ್ಮಕ ಕೆಲಸದ ವಾತಾವರಣ ನಿರ್ಮಾಣ ಮತ್ತು ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಅಕಾಲಿಕ ಮರಣಗಳನ್ನು ತಡೆಗಟ್ಟುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜೊತೆಗೆ ಭಾರತದಲ್ಲಿ ಯುವ ವಯಸ್ಕರ ಆಕಸ್ಮಿಕ ಮರಣಗಳ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಇನ್ನಷ್ಟು ಸಂಶೋಧನೆಗಳ ಅಗತ್ಯವಿದೆ. ಇಂತಹ ಅಧ್ಯಯನಗಳ ಆಧಾರದ ಮೇಲೆ ರೂಪುಗೊಳ್ಳುವ ಸ್ಪಷ್ಟ ಉತ್ತರ ಯುವಜನರ ಅಮೂಲ್ಯ ಜೀವಗಳನ್ನು ರಕ್ಷಿಸಲು ಸಹಾಯಕವಾಗಬಹುದು.

 

Related Posts

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

KRS ಒಳಹರಿವಿನಲ್ಲಿ ಭಾರೀ ಇಳಿಕೆ: ರೈತರು ಮತ್ತು ಬೆಂಗಳೂರಿಗರಲ್ಲಿ ಹೆಚ್ಚಿದ ಆತಂಕ!

ಜಲಾನಯನ ಪ್ರದೇಶದಲ್ಲಿ ವರುಣನ ಅಬ್ಬರ ಕಡಿಮೆಯಾಗುತ್ತಿದ್ದಂತೆಯೇ, ಮಂಡ್ಯ ಜಿಲ್ಲೆಯ ಜೀವನಾಡಿಯಾದ ಕೆ.ಆರ್.ಎಸ್ (KRS) ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಭಾರೀ ಇಳಿಕೆಯಾಗಿದೆ. ಇದು ಕೇವಲ ಕೃಷಿಯನ್ನೇ ನಂಬಿದ ಅನ್ನದಾತರ ನಿದ್ದೆಗೆಡಿಸಿರುವುದು ಮಾತ್ರವಲ್ಲದೆ, ಕಾವೇರಿ ನೀರನ್ನೇ ಅವಲಂಬಿಸಿರುವ ಸಿಲಿಕಾನ್ ಸಿಟಿ ಬೆಂಗಳೂರಿಗೂ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!