ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು.

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ರೂಪಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕನ್ನಡ ಚಿತ್ರರಂಗಕ್ಕೆ ಸಂಬಂಧಿಸಿದ ವ್ಯಕ್ತಿಯೊಬ್ಬರ ಮನೆಯೊಂದು ಮ್ಯೂಸಿಯಂ ರೂಪ ಪಡೆದುಕೊಳ್ಳುತ್ತಿರುವುದು ಇದೇ ಮೊದಲು. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಕಣಗಾಲ್‌ ಗ್ರಾಮದಲ್ಲಿ ಪುಟ್ಟಣ್ಣ ಕಣಗಾಲ್‌ ಅವರ ನಿವಾಸ ಇದೆ. ಪುಟ್ಟಣ್ಣ ಕಣಗಾಲ್‌ ಅಳಿಯ ಹಾಗೂ ಪತ್ರಕರ್ತ ಸುಂದರೇಶ್‌, ಪುಟ್ಟಣ್ಣ ಹೆಸರು ಉಳಿಸುವಂತಹ ಯಾವುದಾದರೂ ಯೋಜನೆ ರೂಪಿಸಿ ಎಂದು ಸರ್ಕಾರಕ್ಕೆ ಕಳೆದ ನಾಲ್ಕೈದು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದರು. ಜೊತೆಗೆ ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್ನಾರ್‌ ಕೆ ವಿಶ್ವನಾಥ್‌ ನೇತೃತ್ವದಲ್ಲಿ ಸಂಘದ ಸದಸ್ಯರು ಕಣಗಾಲ್‌ ಗ್ರಾಮಕ್ಕೆ ತೆರಳಿ ಭೇಟಿ ಕೊಟ್ಟು ನಂತರ ಸ್ಮಾರಕ ರೂಪಿಸಲು ಮನವಿ ಪತ್ರ ಕೊಟ್ಟಿದ್ದರು.

ಮನವಿಗೆ ಸ್ಪಂದಿಸಿರುವ ರಾಜ್ಯ ಸರ್ಕಾರ ಮಹತ್ವದ ಯೋಜನೆಯೊಂದನ್ನು ಘೋಷಣೆ ಮಾಡಿದೆ.

ಬ್ಯಾನ್ ಆಗಿದ್ದ ಕಾದಂಬರಿಯನ್ನೇ ಸಿನಿಮಾ ಮಾಡಿದ್ದ ಪುಟ್ಟಣ್ಣ ಕಣಗಾಲ್; ನೀವೂ ನೋಡಿರಬಹುದು!
ಪುಟ್ಟಣ್ಣ ಕಣಗಾಲ್‌ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿಸುವ ರಾಜ್ಯ ಸರ್ಕಾರದ ಯೋಜನೆ ಸ್ವಾಗತಾರ್ಹ. ನಮ್ಮ ಸಂಘದಿಂದಲೂ ಮನವಿ ಮಾಡಿಕೊಂಡಿದ್ದೇವೆ. ಹಿರಿಯ ನಿರ್ದೇಶಕನನ್ನು ಗೌರವಿಸುವ ಈ ಯೋಜನೆ ಆದಷ್ಟು ಬೇಗ ಜಾರಿ ಆಗಲಿ.ಕಣಗಾಲ್‌ನಲ್ಲಿ ಪುಟ್ಟಣ್ಣ ಮನೆ ತುಂಬಾ ಶಿಥಿಲಗೊಂಡಿದೆ. ಅದನ್ನು ಯಾವ ರೀತಿ ಮ್ಯೂಸಿಯಂ ಮಾಡುತ್ತಾರೋ, ಯಾವ ರೀತಿ ನಿರ್ವಹಣೆ ಮಾಡುತ್ತಾರೋ ನೋಡಬೇಕು. ಆದರೆ, ಯೋಜನೆ ಒಳ್ಳೆಯದು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!