ಅಮೃತ ಸರೋವರದಲ್ಲಿ ಮತ್ತೆ ಗಗನಕ್ಕೇರಲಿದೆ ತ್ರಿವರ್ಣ !

ಮೈಸೂರು : ದೇಶವೇ ಸಂಭ್ರಮಿಸುವ ಸ್ವಾತಂತ್ರ್ಯ ಮಹೋತ್ಸವಕ್ಕೆ ನಾನಾ ರೀತಿಯ ತಯಾರಿಗಳು ನಡೆದಿರುವಂತೆ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲೆಯ 85 ಅಮೃತ ಸರೋವರ ಕೆರೆಗಳಲ್ಲಿ ಧ್ವಜಾರೋಹಣಕ್ಕೆ ಜಿಲ್ಲಾ ಪಂಚಾಯಿತಿ ಸಿದ್ದತೆ ನಡೆಸಿದೆ.

ಆ.15ರ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅಭಿವೃದ್ಧಿಪಡಿಸಿರುವ 85 ಅಮೃತ ಸರೋವರ ಸ್ಥಳಗಳಲ್ಲಿ ಧ್ವಜಾರೋಹಣ ಮಾಡುವ ಮೂಲಕ ಜಲಸಂರಕ್ಷಣೆಗಾಗಿ “ಒಂದು ಸರೋವರ, ಒಂದು ಸಂಕಲ್ಪʼ ಎಂಬ ಸಂದೇಶ ಸಾರಲು ಹೊರಟಿದೆ.
ಆ.15 ರಂದು ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಅಂತರ್ಜಲ ಉಳಿಸುವ ಅಭಿಯಾನದಡಿಯಲ್ಲಿ 85 ಅಮೃತ ಸರೋವರ ಕೆರೆಗಳಲ್ಲಿ ತ್ರಿವರ್ಣ ದ್ವಜ ಹಾರಲಿದೆ. ಅಮೃತ ಸರೋವರದ ಅಂಗಳದಲ್ಲಿ ಸ್ವಾತಂತ್ರ್ಯ ಹೋರಾಟಗಾರರು ಅಥವಾ ಕುಟುಂಬ ಸದಸ್ಯರು, ಸ್ವಾತಂತ್ರ್ಯೋತ್ತರ ಹುತಾತ್ಮರ ಕುಟುಂಬ ಸದಸ್ಯರು ಅಥವಾ ಸ್ಥಳೀಯ ಪದ್ಮ ಪ್ರಶಸ್ತಿ ಪುರಸ್ಕೃತರು ಅಥವಾ ಸ್ಥಳೀಯ ಹಿರಿಯ ನಾಗರೀಕರಿಂದ ತಿರಂಗ ಧ್ವಜಾರೋಹಣ ನೆರವೇರಿಸಲಾಗುವುದು.

ವಿವಿಧ ಕಾರ್ಯಕ್ರಮಗಳು: ಮಹಿಳೆಯರಿಗೆ ರಂಗೋಲಿ ಸ್ಪರ್ಧೆ, ಜಲಸಂರಕ್ಷಣೆ/ಹವಾಮಾನ ಬದಲಾವಣೆಯ ಕುರಿತು ಪ್ರಬಂಧ ಬರವಣಿಗೆ/ಕವನ ಸ್ಪರ್ಧೆ, ಪರಿಸರ ಸಂರಕ್ಷಣೆಯ ಕುರಿತ ನಾಟಕಗಳು ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳಿಂದ ಸ್ವಚ್ಛತಾ ಅಭಿಯಾನಗಳು, ಸಸಿ ನೆಡುವುದು, ಚಿತ್ರಕಲೆ ಸ್ಪರ್ಧೆಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರು/ಪದ್ಮ ಪ್ರಶಸ್ತಿ ಪುರಸ್ಕೃತರೊಂದಿಗೆ ಕಥೆ ಹೇಳುವ ಚಟುವಟಿಕೆಗಳನ್ನು ಆಯೋಜಿಸುವುದು.

ಹೆಚ್.ಡಿ.ಕೋಟೆಯಲ್ಲಿ 16, ಹುಣಸೂರು 16, ಮೈಸೂರು 15, ನಂಜನಗೂಡು 5, ಪಿರಿಯಾಪಟ್ಟಣ 4, ಸಾಲಿಗ್ರಾಮ 6, ಸರಗೂರು 8 ಮತ್ತು ತಿ.ನರಸೀಪುರ 15 ಸೇರಿ ಒಟ್ಟು 85 ಅಮೃತ ಸರೋವರ ಕೆರೆಗಳ ದಂಡೆಯಲ್ಲಿ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಲಿದೆ.

ಸರ್ಕಾರದ ನಿರ್ದೇಶನದ ಮೇರೆಗೆ ಮೈಸೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮ-ನರೇಗಾದಡಿ ಅಭಿವೃದ್ಧಿಗೊಂಡಿರುವ ಕೆರೆಗಳ ಕುರಿತು ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿ ಸ್ವಾತಂತ್ರ್ಯೋತ್ಸವವನ್ನು ಜಿಲ್ಲೆಯ 85 ಕೆರೆಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಸಿದ್ಧತೆ ನಡೆಸಲಾಗಿದೆ. ಈ ಕಾರ್ಯಕ್ರಮದ ಮೂಲಕ ಜಲಸಂರಕ್ಷಣೆಯ ಮಹತ್ವ ಸಾರಲಿದೆ.
– ಎಸ್.ಯುಕೇಶ್ ಕುಮಾರ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಪಂ, ಮೈಸೂರು

ಜಲಮೂಲಗಳ ರಕ್ಷಣೆಗೆ ನಾವು ಪಣ ತೊಡುವ ನಿಟ್ಟಿನಲ್ಲಿ ಮ-ನರೇಗಾ ಯೋಜನೆಯಡಿ ಜಿಲ್ಲೆಯ 85 ಕೆರೆಗಳಲ್ಲೂ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರು, ಸ್ವಾತಂತ್ರ್ಯ ಹೋರಾಟಗಾರರು, ಸಮಾಜ ಸೇವಕರು ಹಾಗೂ ಗಣ್ಯರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!