ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ… : ಸಿಎಂ ಸಿದ್ದರಾಮಯ್ಯ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಿಟ್ ಅರ್ಜಿಯಲ್ಲಿ ಮಧ್ಯಂತರ ಪರಿಹಾರವಾಗಿ ಪ್ರಾಸಿಕ್ಯೂಷನ್ ಗೆ ತಡೆಯಾಜ್ಞೆ ನೀಡಬೇಕೆಂದು ಕೋರಲಾಗಿದೆ. ಈ ರಿಟ್ ಅರ್ಜಿಯ ಬಗ್ಗೆ ಖ್ಯಾತ ವಕೀಲರಾದ ಶ್ರೀ ಅಭಿಷೇಕ್ ಮನು ಸಿಂಗ್ವಿಯವರು ವಾದ ಮಂಡಿಸಲಿದ್ದಾರೆ. ನನ್ನ ಆತ್ಮಸಾಕ್ಷಿ ಸ್ಪಷ್ಟವಾಗಿದ್ದು, ನಾನು ಯಾವ ತಪ್ಪನ್ನೂ ಎಸಗಿಲ್ಲ. ನಾನು ಮಂತ್ರಿಯಾಗಿ 40 ವರ್ಷಗಳು ಕಳೆದಿದ್ದು, ಈ ಅವಧಿಯಲ್ಲಿ ನನ್ನ ರಾಜಕೀಯ ಜೀವನದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲ. ಜನರ ಆಶೀರ್ವಾದದಿಂದ ಅವರ ಸೇವೆಯಲ್ಲಿ ನಿರತನಾಗಿದ್ದೇನೆ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕವಿದ್ದಂತೆ. ನಾನು ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದರು.

ಬಿಜೆಪಿಯವರು ಸಿಎಂ ರಾಜಿನಾಮೆ ಬೇಡಿಕೆಯಿರಿಸಿ ಪ್ರತಿಭಟನೆ ಕೈಗೊಂಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ರಾಜಭವನವನ್ನು ಬಳಸಿಕೊಂಡು ಬಿಜೆಪಿ, ಜೆಡಿಎಸ್ ಹಾಗೂ ಕೇಂದ್ರಸರ್ಕಾರದವರು ನನ್ನ ವಿರುದ್ಧ ಷಡ್ಯಂತ್ರ ಮಾಡಿದ್ದಾರೆ. ದುರುದ್ದೇಶದಿಂದ ನನ್ನ ಮೇಲೆ ಬಸಿ ಬಳಿಯಲು ಇಂತಹ ಕೃತ್ಯಕ್ಕೆ ಕೈಹಾಕಿದ್ದಾರೆ. ಬಿಜೆಪಿಯವರು ದುರುದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದು, ರಾಜಕೀಯವಾಗಿ ಇದನ್ನು ಎದಿರುಸುತ್ತೇವೆ. ಈ ಪಿತೂರಿಯ ವಿರುದ್ಧ ಕಾನೂನು ಹಾಗೂ ರಾಜಕೀಯ ಹೋರಾಟವನ್ನು ಕೈಗೊಳ್ಳುತ್ತೇವೆ. ಇಂತಹ ರಾಜಕೀಯ ಹೋರಾಟಗಳನ್ನು ನಿರಂತರವಾಗಿ ಮಾಡಿಕೊಂಡುಬಂದಿದ್ದು, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇನೆ ಎಂದರು.

ಪ್ರತಿಪಕ್ಷಗಳಿಗೆ ಸಿಎಂ ಅವರಿಂದ ಭಯ ಕಾಡುತ್ತಿದ್ದು, ಅವರನ್ನೇ ಗುರಿಮಾಡಿಕೊಂಡು ಆಪಾದನೆ ಮಾಡುತ್ತಿರುವ ಬಗೆಗಿನ ಪ್ರಶ್ನೆಗೆ ಉತ್ತರಿಸುತ್ತಾ, ನಾನು ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ಸಿದ್ದರಾಮಯ್ಯನನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಮುಗಿಸಬಹುದು ಎಂಬ ಭ್ರಮೆಯಲ್ಲಿ ಪ್ರತಿಪಕ್ಷಗಳಿವೆ ಎಂದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!