ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು : ಸಚಿವ ಹೆಚ್. ಸಿ. ಮಹದೇವಪ್ಪ

ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊನ್ನೆ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅಕ್ಟೋಬರ್ 03 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಬಾರಿ ದಸರಾ ಆಚರಣೆಗೆ 40 ಕೋಟಿ ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದರು.

ಸ್ತಬ್ಧ ಚಿತ್ರಗಳ ಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರೆಂಟಿಗಳ ಕುರಿತ ಸ್ತಬ್ಧ ಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆ ಯ ಮೇರುಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರ ಕಾರ್ಯಕ್ರಮ ಅರ್ಥ ಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

Related Posts

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!