ಈ ಬಾರಿ ಅದ್ದೂರಿಯಾಗಿ ವಿಜೃಂಭಣೆಯಿಂದ ನಾಡಹಬ್ಬ ದಸರಾ ಆಚರಣೆ ಮಾಡಲಾಗುವುದು : ಸಚಿವ ಹೆಚ್. ಸಿ. ಮಹದೇವಪ್ಪ

ಈ ಬಾರಿ ರಾಜ್ಯದಲ್ಲಿ ಉತ್ತಮವಾಗಿ ಮಳೆಯಾಗಿದ್ದು, ರಾಜ್ಯದ ಜನರು ಖುಷಿಯಿಂದ ಇದ್ದಾರೆ. ಆದ್ದರಿಂದ ವಿಶ್ವವಿಖ್ಯಾತ ನಾಡ ಹಬ್ಬ ದಸರಾ ವನ್ನು ಈ ಬಾರಿ ಅದ್ದೂರಿಯಾಗಿ ಆಚರಣೆ ಮಾಡಲಾಗುವುದು ಸಮಾಜ ಕಲ್ಯಾಣ ಇಲಾಖೆಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ ಮಹದೇವಪ್ಪ ಅವರು ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ದಸರಾ ಆಚರಣೆ ಕುರಿತ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮೊನ್ನೆ ಮಾನ್ಯ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಹೈ ಪವರ್ ಕಮಿಟಿ ಸಭೆ ನಡೆಯಿತು. ಈ ಸಭೆಯಲ್ಲಿ ದಸರಾ ಆಚರಣೆಗೆ ಅನುದಾನ, ಅನುದಾನ ಬಳಕೆಗೆ 4ಜಿ ವಿನಾಯಿತಿ ನೀಡುವ ಬಗ್ಗೆ ಹಾಗೂ ದಸರಾ ಉದ್ಘಾಟಕರ ಆಯ್ಕೆ ಬಗ್ಗೆ ಚರ್ಚಿಸಲಾಗಿದೆ. ದಸರಾ ಆಚರಣೆಗೆ ಹೆಚ್ಚಿನ ಪ್ರಾಯೋಜಕತ್ವ ಪಡೆಯಲು ಅಧಿಕಾರಿಗಳು ಮುಂದಾಗಬೇಕು. ಅಕ್ಟೋಬರ್ 03 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15 ರಿಂದ 9.45 ಗಂಟೆಯೊಳಗೆ ದಸರಾ ಉದ್ಘಾಟನೆ ಮಾಡಲಾಗುವುದು ಎಂದರು.

ಈ ಬಾರಿ ದಸರಾ ಆಚರಣೆಗೆ 40 ಕೋಟಿ ವರೆಗೂ ಅನುದಾನ ಬಳಕೆಗೆ ಅವಕಾಶ ಕಲ್ಪಿಸಲು ಮುಖ್ಯಮಂತ್ರಿಗಳು ಅನುಮತಿ ನೀಡಿದ್ದಾರೆ. ಮೈಸೂರು ನಗರದ ಎಲ್ಲಾ ರಸ್ತೆಗಳನ್ನು ಪರಿಶೀಲಿಸಿ ಗುಂಡಿ ಮುಚ್ಚಿ, ಮರು ಡಾಂಬರೀಕರಣ ಮಾಡಲಾಗುವುದು ಎಂದರು.

ದಸರಾ ಆಚರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು. ಆಹಾರ ಮೇಳವನ್ನು ಸ್ಕೌಟ್ ಮತ್ತು ಗೈಡ್ಸ್ ಮೈದಾನ ಹಾಗೂ ಲಲಿತ ಮಹಲ್ ಪ್ಯಾಲೇಸ್ ಆವರಣದಲ್ಲಿ ಆಯೋಜಿಸಬೇಕು ಎಂದರು.

ಸ್ತಬ್ಧ ಚಿತ್ರಗಳ ಲ್ಲಿ ಕರ್ನಾಟಕ ಸರ್ಕಾರದ 5 ಗ್ಯಾರೆಂಟಿಗಳ ಕುರಿತ ಸ್ತಬ್ಧ ಚಿತ್ರಗಳು ಇರಬೇಕು. ಜೊತೆಗೆ ಸರ್ಕಾರದ ಒಂದು ವರ್ಷದ ಸಾಧನೆ ಕುರಿತ ಸ್ತಬ್ಧ ಚಿತ್ರ ಇರಬೇಕು. ದೀಪಾಲಂಕಾರ 21 ದಿನಗಳ ಕಾಲ ಇರಬೇಕು. ದೀಪಾಲಂಕಾರ ದಸರಾ ಆಚರಣೆ ಯ ಮೇರುಗನ್ನು ಹೆಚ್ಚಿಸುತ್ತದೆ. ದೀಪಾಲಂಕಾರವನ್ನು ದಸರಾ ಮಹೋತ್ಸವದಲ್ಲಿ ಪ್ರಮುಖ ವೃತ್ತಗಳಲ್ಲಿ ಮಾಡುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಂಭ್ರಮ ಹಾಗೂ ಯುವ ದಸರಾ ಕಾರ್ಯಕ್ರಮಗಳಿಗೆ ಕಳೆದ ಎರಡು ವರ್ಷಗಳಲ್ಲಿನ ಕಾರ್ಯಕ್ರಮಗಳು ಹಾಗೂ ಕಲಾವಿದರೂ ಪುನರಾವರ್ತನೆಯಾಗದಂತೆ ವಿಭಿನ್ನ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಚಿವರು ತಿಳಿಸಿದರು.

ಚಿಣ್ಣರ ದಸರಾ, ಮಹಿಳಾ ದಸರಾ ಹಾಗೂ ರೈತ ದಸರ ಕಾರ್ಯಕ್ರಮ ಅರ್ಥ ಪೂರ್ಣವಾಗಿ ನಡೆಸಬೇಕು. ಸ್ವತಂತ್ರ ದೇಶಾಭಿಮಾನದ ಸಂದೇಶಗಳನ್ನು ಸಾರುವ ಕಾರ್ಯಕ್ರಮಗಳನ್ನು ಆಯೋಜನೆ ಮಾಡಬೇಕು. ವೈವಿಧ್ಯತೆಯಲ್ಲಿ ಏಕತೆಯನ್ನು ಸಾರುವ ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು