ಭಾರತೀಯ ನಾರಿಯ ‘ಸಿಂಧೂರ’ ಮುಟ್ಟಿದವರು ಪುರಾಣದಲ್ಲೂ ಉಳಿದಿಲ್ಲ, ಈಗಲೂ ಉಳಿಯುವುದಿಲ್ಲ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಉಗ್ರರು ಹಿಂದೂಗಳ ಮೇಲೆ ದಾಳಿ ನಡೆಸಿ 26 ಮಂದಿಯನ್ನು ಹತ್ಯೆ ಮಾಡಿದ್ದರು. ಧರ್ಮ ಯಾವುದು ಎಂದು ಕೇಳಿ ಗುಂಡು ಹಾರಿಸಿ ಹಿಂದೂ ಮಹಿಳೆಯರ ಕುಂಕುಮವನ್ನು ಅಳಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ಭಾರತದ ಸೇನೆ ಪಾಕಿಸ್ತಾನದ 9 ಕಡೆ ಉಗ್ರರ ನೆಲೆಗಳ ಮೇಲೆ ವಾಯು ದಾಳಿ ನಡೆಸಿದ್ದುಈ ದಾಳಿಗೆ “ಆಪರೇಷನ್ ಸಿಂಧೂರ್” ಎಂದು ಹೆಸರಿಡಲಾಗಿದೆ. ಇದು ಹಿಂದೂ ಪುರುಷರನ್ನು ಹೊಡೆದು ಅವರ ಹಿಂದೂ ಪುರುಷರನ್ನು ಪತ್ನಿಯರ ಕುಂಕುಮ ಅಳಿಸಿದವರ ಮೇಲೆ ತೀರಿಸಿಕೊಂಡ ಪ್ರತಿಕಾರವಾಗಿದೆ. ಭಾರತದಲ್ಲಿ ಹೆಣ್ಣನ್ನು ದೇವಿ ರೂಪದಲ್ಲಿ ಪೂಜೆ ಮಾಡಲಾಗುತ್ತದೆ. ಅಂತವರ ಮುತ್ತೈದೆ ಭಾಗ್ಯವನ್ನು ಕಿತ್ತುಕೊಂಡಿದ್ದು ಸಾಮಾನ್ಯ ವಿಷಯವಲ್ಲ. ನಮ್ಮ ಇತಿಹಾಸ ಪುಟ ತಿರುವಿ ನೋಡಿದರೂ ಕೂಡ ಹೆಣ್ಣಿನ ಕಣ್ಣೀರಿನ ಮುಂದೆ ಯಾರೂ ಗೆದ್ದಿಲ್ಲ. ಹೆಣ್ಣಿನ ಶಕ್ತಿಯೇ ಅಂತದ್ದು. ಅದರಲ್ಲಿ ಅವರ ಸೌಭಾಗ್ಯವನ್ನು ಅವರ ಮುಂದೆಯೇ ಕಿತ್ತುಕೊಂಡವರನ್ನು ಬಿಟ್ಟಿತೇ?

ಭಾರತೀಯ ನಾರಿಗೆ ಸಿಂಧೂರ ಅಥವಾ ಕುಂಕುಮ ಕೇವಲ ನೆತ್ತಿಯ ಮೇಲೆ ಅಥವಾ ಹಣೆ ಮೇಲಿಡುವ ಬಣ್ಣವಲ್ಲ. ಅದು ಆಕೆಯ ಶಕ್ತಿ. ಮದುವೆಯ ಸಮಯದಲ್ಲಿ ಇಟ್ಟ ಸಿಂಧೂರ ಕೊನೆಯವರೆಗೂ ಅವಳೊಂದಿಗೆ ಇರಬೇಕು ಎಂಬುದು ಪದ್ಧತಿ. ಇದರಿಂದ ಮಹಿಳೆಗೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳು ಕೂಡ ಲಭಿಸುತ್ತದೆ. ಆದರೆ ಇದೆಲ್ಲದರ ಹೊರತಾಗಿ ಸಿಂಧೂರ ಸ್ತ್ರೀ ಶಕ್ತಿಯ ಸಂಕೇತ. ಬೆಂಕಿ, ರಕ್ತ ಮತ್ತು ಶಕ್ತಿಯ ಬಣ್ಣ, ಆಕೆಯನ್ನು ಶಕ್ತಿ ಸ್ವರೂಪಿಯಾಗಿ ಗೌರವಿಸಬೇಕು ಎಂಬುದರ ಸಂಕೇತ. ಅವಳನ್ನು ಕೆಣಕಿದರೆ ತನ್ನ ತಾಯ್ನಾಡನ್ನು ರಕ್ಷಿಸಲು ಬೆಂಕಿಯ ಕಿಡಿಯಾಗಬಹುದು ಅಥವಾ ಮೃದುವಾದ ಹೂವು ಆಗಬಹುದು.

ಪುರಾಣ ಮತ್ತು ಸಿಂಧೂರದ ಐತಿಹಾಸ ಈಗಿನದಲ್ಲ
ಇನ್ನು, ನಮ್ಮ ಹಿಂದೂ ಪುರಾಣಗಳಲ್ಲಿ, ಸಿಂಧೂರವು ಅಗಾಧವಾದ ಸಂಕೇತಗಳನ್ನು ಹೊಂದಿದೆ. ದಂತಕಥೆಗಳ ಪ್ರಕಾರ, ಶಿವನ ಪತ್ನಿ ಪಾರ್ವತಿ, ಕೃಷ್ಣನ ಪತ್ನಿ ರುಕ್ಮಿಣಿ, ರಾಮನ ಪತ್ನಿ ಸೀತೆ ಹೀಗೆ ಮುತ್ತೈದೆಯರು ತಮ್ಮ ಹಣೆಯ ಮೇಲೆ ಯಾವಾಗಲೂ ಸಿಂಧೂರವಿಡುತ್ತಿದ್ದರು ಎಂಬ ನಂಬಿಕೆ ಇದೆ. ಈ ಕ್ರಮ ಗಂಡನ ಆಯುಷ್ಯ, ಆರೋಗ್ಯವನ್ನು ಹೆಚ್ಚಿಸುವುದರ ಸಂಕೇತವಾಗಿದೆ. ಇದರಿಂದ ದೀರ್ಘ ಮತ್ತು ಆನಂದದಾಯಕ ವೈವಾಹಿಕ ಜೀವನ ಸಿಗುತ್ತದೆ. ಜೊತೆಗೆ ದಂಪತಿಗಳಿಗೆ ಅದೃಷ್ಟ ಮತ್ತು ಸಮೃದ್ಧಿಯನ್ನು ತರುತ್ತದೆ ಮತ್ತು ದುಷ್ಟ ಶಕ್ತಿಗಳಿಂದ ನಮ್ಮನ್ನು ರಕ್ಷಿಸುತ್ತದೆ ಎಂಬುದರ ಪ್ರತೀಕವಾಗಿದೆ.
ಸೀತೆಯನ್ನು ಅಪಹರಿಸಿದ ರಾವಣನಿಗೆ, ದ್ರೌಪದಿಯ ಸೀರೆ ಎಳೆದ ದುಶ್ಯಾಸನಿಗೆ ಕ್ಷಣಿಕ ಜಯ ಸಿಕ್ಕರೂ ಸಹ ಊಹೆಗೂ ನಿಲುಕದ ಸೋಲು ಪ್ರಾಪ್ತವಾಗಿತ್ತು. ಇದೇ ರೀತಿ ಕಲಿಯುಗದಲ್ಲಿಯೂ ಹೆಣ್ಣಿಗೆ ಅನ್ಯಾಯವಾಗಿದೆ. ಹಿಂದೆ ಹೆಣ್ಣಿಗೆ ಅವಮಾನ ಮಾಡಿಯೇ ಉಳಿದಿಲ್ಲ ಎಂದ ಮೇಲೆ ಹೆಣ್ಣಿನ ಸೌಭಾಗ್ಯವನ್ನೇ ಕಿತ್ತುಕೊಂದವರು ಉಳಿದಾರೆಯೇ?…

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!