ಕೆಆರ್ಎಸ್ ಹಿನ್ನೀರಿನಲ್ಲಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಜಲಸ*ಮಾಧಿ

ಮೈಸೂರು : ಪ್ರವಾಸ ಕ್ಕೆಂದು ಬಂದಿದ್ದ ನರ್ಸಿಂಗ್ ಕಾಲೇಜಿನ ಮೂವರು ವಿದ್ಯಾರ್ಥಿಗಳು ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಮಧ್ಯಾಹ್ನ ನಡೆದಿದೆ.
ಮಂಡ್ಯದ ಸರ್ಕಾರಿ ವೈದ್ಯಕೀಯ ಕಾಲೇಜಿನ (ಮಿಮ್ಸ್) ನರ್ಸಿಂಗ್ ವಿದ್ಯಾರ್ಥಿಗಳಾದ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಅನವಾಲು ಗ್ರಾಮದ ಪ್ರಶಾಂತ್ (21), ಚಾಮ ರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಸಂತೇಮರಹಳ್ಳಿಯ ಸಿದ್ದೇಶ್(22), ಕೊಪ್ಪಳ ಜಿಲ್ಲೆಯ ಕೃಷ್ಣ(21) ಹಿನ್ನೀರಿನಲ್ಲಿ ಮುಳುಗಿ ಮೃತಪಟ್ಟ ನರ್ಸಿಂಗ್ ವಿದ್ಯಾರ್ಥಿಗಳು.
ತುಂಬಿ ತುಳುಕುತ್ತಿರುವ ಕೆಆರ್ಎಸ್ ಜಲಾ ಶಯದ ಹಿನ್ನೀರಿನ ಪ್ರದೇಶಗಳು ಪ್ರವಾಸಿತಾಣವಾಗಿ ಮಾರ್ಪಟ್ಟಿದ್ದು, ಪ್ರತಿ ದಿನ ನೂರಾರು ಮಂದಿ ಪ್ರವಾಸಿಗರು ಹಿನ್ನೀರಿನ ಪ್ರದೇಶಕ್ಕೆ ಬಂದು ವಿಹರಿಸಿ ವಾಪಸ್ಸಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನರ್ಸಿಂಗ್ ಕಾಲೇಜಿನ 6 ವಿದ್ಯಾರ್ಥಿಗಳು 3 ಬೈಕ್ ಗಳಲ್ಲಿ ಭಾನುವಾರ ಬೆಳಗ್ಗೆ ವಿದ್ಯಾರ್ಥಿನಿಲಯ ದಿಂದ ಮೈಸೂರು ತಾಲೂಕಿನ ಮೀನಾಕ್ಷಿಪುರದ ಕೆಆರ್ಎಸ್ ಹಿನ್ನೀರಿನ ಪ್ರದೇಶಕ್ಕೆ ಪಿಕ್ನಿಕ್ ಬಂದಿದ್ದರು. ಮಧ್ಯಾಹ್ನ 2 ಗಂಟೆ ಸುಮಾರಿನಲ್ಲಿ ಐವರು ವಿದ್ಯಾರ್ಥಿಗಳು ಈಜಲು ಮುಂದಾಗಿ ದ್ದರೆ, ಓರ್ವ ವಿದ್ಯಾರ್ಥಿ ದಡದಲ್ಲಿಯೇ ನಿಂತಿದ್ದ ಎನ್ನಲಾಗಿದೆ. ಕೆಲ ಸಮಯದ ನಂತರ ಈಜುತ್ತಿದ್ದ ಐವರು ವಿದ್ಯಾರ್ಥಿ ಗಳು ನೀರಿನ ಸೆಳೆತಕ್ಕೆ ಒಳಗಾಗಿದ್ದಾರೆ. ನೀರಿನಲ್ಲಿ ಮುಳುಗುತ್ತಿದ್ದ ಇಬ್ಬರನ್ನು ದಡದಲ್ಲಿ ನಿಂತಿದ್ದ ರಕ್ಷಿಸಿದ್ದಾನೆ.
ಸ್ಥಳೀಯರು ಮತ್ತು ಇನ್ನಿತರ ಪ್ರವಾಸಿಗರು ನೆರವಿಗೆ ಬರುವ ವೇಳೆಗೆ ಮೂವರೂ ಹಿನ್ನೀರಿನಲ್ಲಿ ಸಂಪೂರ್ಣವಾಗಿ ಮುಳುಗಿದ್ದರು. ಇದರಿಂದ ಅವರನ್ನು ಸ್ಥಳೀಯರಿಗೆ ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಹಿನ್ನೀರಿನಲ್ಲಿ ಮೂವರು ವಿದ್ಯಾರ್ಥಿಗಳು ಮುಳುಗಿರುವ ವಿಷಯ ತಿಳಿಯುತ್ತಿದ್ದಂತೆ ಇಲವಾಲ ಠಾಣೆಯ ಸಬ್ ಇನ್ಸ್ಪೆಕ್ಟರ್ ಮಹೇಂದ್ರ ಸಿಬ್ಬಂದಿಗಳೊಂದಿಗೆ ಆಗಮಿಸಿ ಪರಿಶೀಲಿಸಿದರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ನುರಿತ ಈಜುಗಾರರನ್ನು ಕರೆಸಿ ಸತತ 2 ಗಂಟೆ ಕಾರ್ಯಾಚರಣೆ ನಡೆಸಿದ ಬಳಿಕ ಸಂಜೆ 4 ಗಂಟೆಗೆ ಮೂವರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾ ಯಿತು.
ನಂತರ ಮಹಜರ್ ನಡೆಸಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜಿನ ಶವಾಗಾರಕ್ಕೆ ದೇಹಗಳನ್ನು ಸ್ಥಳಾಂತರಿಸ ಲಾಯಿತು. ಮೃತಪಟ್ಟ ವರು ವಿದ್ಯಾರ್ಥಿ ಗಳ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಸಂಜೆ ವೇಳೆಗೆ ಪಿರಿಯಾ ಪಟ್ಟಣದ ಪ್ರಶಾಂತ್ ಹಾಗೂ ಸಂತೇಮರ ಹಳ್ಳಿಯ ಸಿದ್ದೇಶ್ ಪೋಷಕರು ಶವಾ ಗಾರದ ಬಳಿ ಆಗಮಿಸಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಅವರ ಗೋಳಾಟ ಹೇಳತೀರದ್ದಾಗಿದೆ. ಬೆಳಗ್ಗೆ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸು ದಾರರಿಗೆ ದೇಹವನ್ನು ಒಪ್ಪಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಇಲವಾಲ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ತನಿಖೆ ಕೈಗೊಂಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!