2025ರ ದಸರಾದಲ್ಲಿ ಕಂಬಳ ಸೇರಿಸಲು: ಡಿಸಿಎಂ ಡಿಕೆ ಶಿವಕುಮಾರ್.

ಮೈಸೂರು : ಈ ಬಾರಿ ದಸರಾದಲ್ಲಿ ಕೆಲ ಬದಲಾವಣೆ ತರಲು ಚಿಂತನೆ ಮಾಡಿದ್ದೇವೆ. ದಸರಾದಲ್ಲಿ ಕಂಬಳ ಸೇರಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಹೊಸ ಆಚರಣೆಗಳನ್ನು ಸೇರಿಸಬೇಕು. ಹಳೆಯ ಪದ್ಧತಿ ಜೊತೆಗೆ ಹೊಸ ಆಚರಣೆಗಳು ದಸರಾ ಮೆರಗನ್ನು ಹೆಚ್ಚು ಮಾಡುತ್ತವೆ. ಈ ಬಗ್ಗೆ ಅಧಿಕಾರಿಗಳ ಚರ್ಚೆ ಮಾಡಿದ್ದೇವೆ. ಈ ಬಾರಿ ದಸರಾದಲ್ಲಿ ಅನೇಕ ಬದಲಾವಣೆ ಆಗುತ್ತದೆ ಎಂದು ತಿಳಿಸಿದರು. ಕಾವೇರಿ ನಮ್ಮ ಜೀವನದಿ. ತಾಯಿಯ ಆರತಿ ಮಾಡಬೇಕು. ಹೀಗಾಗಿ ಕಾವೇರಿ ಆರತಿ ಮಾಡಲು ಮುಂದಾಗಿದ್ದೇವೆ. ವ್ಯವಸಾಯ ಕುಡಿಯಲು ನೀರು ಎಲ್ಲವನ್ನೂ ತಾಯಿ ಕೊಡುತ್ತಿದ್ದಾಳೆ. ರಾಜ್ಯಕ್ಕೆ ಎಲ್ಲರಿಗೂ ಒಳಿತಾಗಲಿ ಎಂದು ಆರತಿ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ರಾಮನಗರ ಹೆಸರು ಬದಲಾವಣೆ ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು
ರಾಮನಗರ ಹೆಸರು ಬದಲಾವಣೆ ವಿಚಾರ ಕುರಿತು ಮಾತನಾಡಿದ ಡಿಕೆ ಶಿವಕುಮಾರ್, ಅದನ್ನು ಹೇಗೆ ಮಾಡಬೇಕು ಅಂತಾ ನನಗೆ ಗೊತ್ತು. ಅದನ್ನು ಮಾಡೇ ಮಾಡುತ್ತೇನೆ ಎಂದು ಸವಾಲೆಸೆದರು. ನಾವೇನು ಹೊರಗಿನಿಂದ ಬಂದವರಲ್ಲ. ನಮ್ಮ ಭೂಮಿ ನಮ್ಮ ನೆಲದ ಬಗ್ಗೆ ನಮಗೆ ಗೊತ್ತು. ಯಾರು ಅಪ್ಪ ಅಮ್ಮನ ಹೆಸರು ಬದಲಾಯಿಸಲ್ಲ. ಅಫಿಡೆವಿಟ್ ಮಾಡಿಸಿಕೊಳ್ಳಬಹುದು ಅಷ್ಟೇ. ಡಿ.ಕೆ.ಶಿವಕುಮಾರ್ ಬಗ್ಗೆ ಭಯನಾ ಅಸೂಯೆನಾ ಪ್ರಶ್ನೆ..? ಏನು ಅಂತ ಗೊತ್ತಿಲ್ಲ ಆದರೆ ನನ್ನ ಮೇಲೆ ಅತಿಯಾದ ಪ್ರೀತಿ ಎಂದು ಟಾಂಗ್ ಕೊಟ್ಟರು.

ಟೌನ್ ಶಿಪ್ ಪಿತಾಮಹ ದೇವೇಗೌಡರು ಹಾಗೂ ಹೆಚ್.ಡಿ ಕುಮಾರಸ್ವಾಮಿ
ಬಿಡದಿ ಟೌನ್ ಶಿಪ್ ಗೆ ರೈತರ ಭೂಮಿ ಕೈ ಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಕುಮಾರಸ್ವಾಮಿ ಕಾಲದಲ್ಲೇ 7 ಟೌನ್ ಶಿಪ್ ಮಾಡಬೇಕು ಅಂತ ತೀರ್ಮಾನ ಆಗಿದ್ದು. ಅದಕ್ಕಾಗಿ 300 ಕೋಟಿ ಹಣ ಕೊಟ್ಟಿದ್ದರು. ಟೌನ್ ಶಿಪ್ ಪ್ಲಾನ್ ಅವರ ಕಾಲದಲ್ಲೇ ಆಗಿದ್ದು. ನಾನು ಡಿನೋಟಿಫಿಕೇಷನ್ ಮಾಡಲು ಹೋಗಲ್ಲ. ಈ ಹಿಂದೆ ನನ್ನ ಮೇಲೆ ಏನೆಲ್ಲಾ ಹೇಳಿದ್ರು ಅದೆಲ್ಲ ಇತಿಹಾಸ. ಟೌನ್ ಶಿಪ್ ಪಿತಾಮಹ ದೇವೇಗೌಡ ಹಾಗೂ ಕುಮಾರಸ್ವಾಮಿ. ಯಾರು ಏನೇ ಹೇಳಿದರೂ ಗ್ರೇಟರ್ ಬೆಂಗಳೂರು ಮಾಡಿಯೇ ಮಾಡುತ್ತೇವೆ. ಬೆಂಗಳೂರಿಗಿಂತ ಚೆನ್ನಾಗಿ 10 ಸಾವಿರ ಎಕರೆಯಲ್ಲಿ ಉತ್ತಮ ಸಿಟಿ ಮಾಡುತ್ತೇವೆ. ಇದು ಮಾಡೆಲ್ ಸಿಟಿ ಆಗತ್ತೆ ರೈತರು ಜಮೀನಿನ ಬದಲಾಗಿ ದುಡ್ಡು ತೆಗೆದುಕೊಳ್ಳಬಹುದು. ಇಲ್ಲದಿದ್ದರೆ ಅಭಿವೃದ್ದಿ ಪಡಿಸಿದ ಲ್ಯಾಂಡ್ ತೆಗೆದುಕೊಳ್ಳಬಹುದು. ಎರಡು ಬಾರಿ ಕುಮಾರಸ್ವಾಮಿ ಸಿಎಂ ಆದರೂ ಯಾಕೆ ರೈತರ ಭೂಮಿ ಸ್ವಾಧೀನದಿಂದ ಕೈ ಬಿಡಲಿಲ್ಲ. ಈ ಬಗ್ಗೆ ದೇವೇಗೌಡರೇ ಹೇಳಲಿ. ಇದರಲ್ಲಿ ರಾಜಕೀಯ ಬೇಡ ಇದೆಲ್ಲ ನಿಮ್ಮ ಮಗನೆ ಮಾಡಿದ್ದು. ನಿಮ್ಮ ಕಾಲದಲ್ಲೇ ಆಗಿದ್ದು ಎಂದು ಹೆಚ್ ಡಿ ದೇವೇಗೌಡರಿಗೆ ಟಾಂಗ್ ಕೊಟ್ಟರು.

Related Posts

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ ತತ್ತರಿಸಿರುವ ಸಾಮಾನ್ಯ ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್ ನೀಡಿವೆ. ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ಬಿಸಿ ಇದೀಗ ನೇರವಾಗಿ ಭಾರತೀಯರ ಜೇಬಿಗೆ ತಟ್ಟಿದೆ. ನವದೆಹಲಿ: ಹಣದುಬ್ಬರ ಹಾಗೂ ಬೆಲೆ ಏರಿಕೆಯಿಂದ…

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

(ಕೆಎಂಶಿ)-ಉನ್ನತ ‘ಶಿಕ್ಷಣ ವಲಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿ ಸಲು, ರಾಜ್ಯದ ಎಲ್ಲ ಸರ್ಕಾರಿ, ಖಾಸಗಿ ಮತ್ತು ಡೀಮ್ಸ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಯಲು ರೋಹಿತ್ ವೇಮುಲ ಕಾಯಿದೆ ಜಾರಿಗೆ ತರಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ…

You Missed

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಜನತೆಗೆ ತೈಲ ಕಂಪನಿಗಳು ಮತ್ತೊಂದು ಬಿಗ್ ಶಾಕ್!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ಸ್ಟೂಡೆಂಟ್ ಎಲೆಕ್ಷನ್ ಗೆ ಅಸ್ತು ಎಂದ ಸಿಎಂ!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ರಾಧಿಕಾ ಪಂಡಿತ್ ಜೊತೆ ಹೊಸ ಲುಕ್‌ನಲ್ಲಿ ‘ರಾಕಿಂಗ್’ ಸ್ಟಾರ್!

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!