ಪಹಲ್ಗಾಮ್‌ನತ್ತ ಮತ್ತೆ ಮುಖ ಮಾಡಿದ ಪ್ರವಾಸಿಗರು!

ಕಾಶ್ಮೀರ: ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ಏ.22ರಂದು ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾ*ಳಿ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಕಾಶ್ಮೀರದಲ್ಲಿ ಎಲ್ಲವೂ ಶಾಂತವಾಗಿದೆ, ಪ್ರವಾಸಿಗರು ಯಾವುದೇ ಭಯವಿಲ್ಲದೆ ಭೂಮಿ ಮೇಲಿನ ಸ್ವರ್ಗಕ್ಕೆ ಭೇಟಿ ನೀಡಬಹುದು ಎಂದು ಲೆಕ್ಕಾಚಾರ ಹಾಕಿಕೊಳ್ಳುತ್ತಿದ್ದ ಮಧ್ಯೆ ಈ ದುರ್ಘಟನೆ ಸಂಭವಿಸಿದೆ. ಈ ಭೀಕರ ದುರಂತದ ಬಳಿಕ ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯಮ, ಆರ್ಥಿಕ ಚಟುವಟಿಕೆ ಮೇಲೆ ಗಂಭೀರ ಪರಿಣಾಮ ಉಂಟು ಮಾಡುವ ಅಪಾಯವಿದೆ ಎಂದೇ ವಿಶ್ಲೇಷಿಸಲಾಗುತ್ತಿತ್ತು. ಆದರೀಗ ಪ್ರವಾಸೋದ್ಯಮ ತಜ್ಞರು ಲೆಕ್ಕಾಚಾರ ಉಲ್ಟಾ ಆಯಿತಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ.

ದೇಶದ ಜನತೆ ದಾ*ಳಿಯಲ್ಲಿ ಮೃತಪಟ್ಟವರಿಗೆ ನಮನ ಸಲ್ಲಿಸುತ್ತಿದ್ದರೆ, ಒಂದಷ್ಟು ಜನರು ಮತ್ತೆ ಕಾಶ್ಮೀರ ಪ್ರವಾಸ ಆರಂಭಿಸಿದ್ದಾರೆ. ಇದು ಕಾಶ್ಮೀರದಲ್ಲಿ ಕಳೆದೊಂದು ವಾರದಿಂದ ಸೃಷ್ಟಿಯಾಗಿದ್ದ ಬಿಗುವಿನ ವಾತಾವರಣ ಶಾಂತವಾಯ್ತಾ? ಪ್ರಶ್ನೆ ಹುಟ್ಟು ಹಾಕಿದೆ. ಪಹಲ್ಗಾಮ್ನಲ್ಲಿ ಸಂಭವಿಸಿದ ಭಯೋ* ತ್ಪಾದಕ ದಾ*ಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ 26 ಪ್ರವಾಸಿಗರು ಸಾ*ವನ್ನಪ್ಪಿದ್ದರು. ಈ ಘಟನೆ ಬಳಿಕ ಕಾಶ್ಮೀರದ ಪ್ರವಾಸೋದ್ಯಮ ಚಟುವಟಿಕೆ ಕೆಲಕಾಲ ಬಿಕೋ ಎನ್ನುತ್ತದೆ ಎಂದೇ ಅಂದಾಜಿಸಲಾಗಿತ್ತು. ಇದಕ್ಕೆ ಪೂರಕವಾಗಿ ಕಾಶ್ಮೀರ ಪ್ರವಾಸ ಬುಕ್ ಮಾಡಿದ್ದವರು ರದ್ದು ಮಾಡುತ್ತಿದ್ದರು. ಈ ಎಲ್ಲ ಬೆಳವಣಿಗೆಗಳ ನಡುವೆ ಪ್ರವಾಸಿಗರು ಮತ್ತೆ ಪಹಲ್ಗಾಮ್ಗೆ ಬರಲು ಪ್ರಾರಂಭಿಸಿದ್ದಾರೆ.

ವಾರಾಂತ್ಯದ ರಜಾ ದಿನವನ್ನು ಕಳೆಯಲು ಒಂದಷ್ಟು ಸಂಖ್ಯೆಯ ಪ್ರವಾಸಿಗರು ಏ.26, 27ರಂದು ಪಹಲ್ಗಾಮ್ ವ್ಯಾಪ್ತಿಗೆ ಆಗಮಿಸಿದ್ದರು. ಪ್ರವಾಸಿಗರು ಲಿದರ್ ನದಿ ದಡದಲ್ಲಿರುವ ಸೆಲ್ಫಿ ಪಾಯಿಂಟ್ನಲ್ಲಿ ಫೋಟೋಗಳನ್ನು ತೆಗೆಯುತ್ತಿದ್ದರು. ಯಾವುದೇ ನಿರ್ಬಂಧಗಳಿಲ್ಲದ ಕಾರಣ ಪ್ರವಾಸಿಗರು ತಮ್ಮ ರಜಾ ದಿನಗಳನ್ನು ಕಳೆಯಲು ನಿರ್ಧರಿಸಿದರು. ಸದ್ಯ ಪ್ರವಾಸಿಗರನ್ನು ಮತ್ತೆ ತನ್ನತ್ತ ಸೆಳೆಯಲು ಕಾಶ್ಮೀರ ಹೋಟೆಲ್ ಮಾಲೀಕರು ರಿಯಾಯಿತಿಗಳನ್ನು ನೀಡುತ್ತಿದ್ದಾರೆ. ಕೆಲವು ಊಟದ ಸ್ಥಳಗಳಲ್ಲಿ ಒಂದು ಊಟದೊಂದಿಗೆ ಇನ್ನೊಂದು ಊಟವನ್ನು ಉಚಿತವಾಗಿ ನೀಡಲಾಗುತ್ತಿದೆ. ಪಹಲ್ಗಾಮ್ನಲ್ಲಿ ಪ್ರವಾಸಿಗರು ಮತ್ತೆ ಕಾಣಿಸಿಕೊಂಡಿದ್ದಾರೆ. ಭಯಾನಕ ಘಟನೆ ನಡೆದರೂ ಪ್ರವಾಸಿಗರು ಹಿಂಜರಿಯದೆ ಬರುತ್ತಿದ್ದಾರೆ. ಏಪ್ರಿಲ್ 22 ರಂದು ಭಯೋ*ತ್ಪಾದಕ ದಾ*ಳಿ ಘಟನೆ ನಂತರ ಎರಡ್ಮೂರು ದಿನ ಪಹಲ್ಗಾಮ್ ಸ್ತಬ್ಧವಾಗಿತ್ತು. ಆದರೆ ಶನಿವಾರ ಪ್ರವಾಸಿಗರು ಮರಳಿ ಬಂದಿದ್ದಾರೆ.

ಈ ಬಗ್ಗೆ ಕೋಲ್ಕೊತ್ತಾದ ಜಾಯ್ದೀಪ್ ಘೋಷ್ ದಸ್ತಿದಾರ್ ಎಂಬುವವರು ಮಾತನಾಡಿ, ‘ಬೈಸರನ್ ಹುಲ್ಲುಗಾವಲು ಪ್ರವಾಸಿಗರಿಗೆ ಮುಕ್ತವಾಗಿಲ್ಲ. ನಾವು ಪಹಲ್ಗಾಮ್ನ ಇತರ ಸ್ಥಳಗಳಿಗೆ ಭೇಟಿ ನೀಡಿದ್ದೇವೆ. ನಾವು ಶುಕ್ರವಾರ ಕಾಶ್ಮೀರಕ್ಕೆ ಬಂದೆವು. ಇಲ್ಲಿ ಎಲ್ಲವೂ ಸಾಮಾನ್ಯವಾಗಿದೆ. ಅಂಗಡಿಗಳು ಮುಚ್ಚಿದ್ದರೂ, ಸ್ಥಳೀಯರು ಮತ್ತು ಭದ್ರತಾ ಸಿಬ್ಬಂದಿ ಸಹಾಯ ಮಾಡುತ್ತಿದ್ದಾರೆ. ಬೈಸರನ್ ಹುಲ್ಲುಗಾವಲು ಮಾತ್ರ ಪ್ರವೇಶಕ್ಕೆ ಲಭ್ಯವಿಲ್ಲ. ಉಳಿದಂತೆ ಎಲ್ಲಾ ಸ್ಥಳಗಳಿಗೂ ಭೇಟಿ ನೀಡಿದ್ದೇವೆʼ ಎಂದು ಹೇಳಿದರು.

ಬಿಹಾರದ ಶಿಕ್ಷಕ ಮೃತ್ಯುಂಜಯ್ ಪಾಂಡೆ ಎಂಬ ಪ್ರವಾಸಿಗರು ತಮ್ಮ ಅನುಭವ ಹಂಚಿಕೊಂಡು, ‘ಏಪ್ರಿಲ್ 24-26 ರವರೆಗೆ ಕಾಶ್ಮೀರ ಪ್ರವಾಸ್ ಬುಕ್ ಮಾಡಿದ್ದೆ. ಆದರೆ ದಾಳಿಯ ನಂತರ ರದ್ದು ಮಾಡಿದೆ. ಪಹಲ್ಗಾಮ್ಗೆ ಭೇಟಿ ನೀಡಲು ಯಾವುದೇ ನಿರ್ಬಂಧಗಳಿಲ್ಲ ಎಂದು ತಿಳಿಯಿತು. ಹೀಗಾಗಿ ಕಾತರತೆ ತಡೆಯಲು ಸಾಧ್ಯವಾಗದೆ ಶನಿವಾರ ಬೆಳಿಗ್ಗೆ ಬಂದೆವು. ಸಂಜೆಯ ವೇಳೆಗೆ ಹಿಂತಿರುಗುತ್ತೇವೆʼ ಎಂದು ತಿಳಿಸಿದ್ದಾರೆ.

ಸಾಮಾನ್ಯವಾಗಿ 3,000-5,000 ಪ್ರವಾಸಿಗರು ಪ್ರತಿದಿನ ಭೇಟಿ ನೀಡುತ್ತಿದ್ದ ಪ್ರವಾಸಿ ತಾಣಗಳು ಖಾಲಿ ಹೊಡೆಯುತ್ತಿದ್ದ, ಕೆಲವೇ ಕೆಲವು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಸೂಕ್ಷ್ಮ ಪ್ರವಾಸಿ ತಾಣಗಳಲ್ಲಿ ಕೇವಲ ಭದ್ರತಾ ಪಡೆಗಳು ಮತ್ತು ಸ್ಥಳೀಯ ನಿವಾಸಿಗಳು ಮಾತ್ರ ಇದ್ದಾರೆ. ಅಗತ್ಯ ವಸ್ತುಗಳನ್ನು ಮಾರಾಟ ಮಾಡುವ ಅಂಗಡಿಗಳನ್ನು ಹೊರತುಪಡಿಸಿ, ಹೆಚ್ಚಿನ ಅಂಗಡಿಗಳು ಮುಚ್ಚಲ್ಪಟ್ಟಿವೆ. ಒಟ್ಟಾರೆಯಾಗಿ, ಪಹಲ್ಗಾಮ್ನಲ್ಲಿ ಪರಿಸ್ಥಿತಿ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಪ್ರವಾಸಿಗರು ಮತ್ತೆ ಭೇಟಿ ನೀಡಲು ಪ್ರಾರಂಭಿಸಿದ್ದಾರೆ. ಸ್ಥಳೀಯರು ಪ್ರವಾಸಿಗರಿಗೆ ಸಹಾಯ ಮಾಡುತ್ತಿದ್ದಾರೆ. ಆದರೂ, ಕೆಲವು ಪ್ರದೇಶಗಳಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸಲಾಗಿದೆ ಎಂದು ವರದಿಯಾಗಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!