ಬೆಂಗಳೂರಿನ ಈ ಮಾರ್ಗದಲ್ಲಿಇಂದಿನಿಂದ ಆ.11ರವರೆಗೆ ವಾಹನ ಸಂಚಾರ ನಿರ್ಬಂಧ. ಪರ್ಯಾಯ ಮಾರ್ಗ ಏನು ?

ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್​​ವರೆಗೆ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆ ಆಗಸ್ಟ್ 6 ರಿಂದ 10 ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದೆ. ಹಾಗಾದರೆ ಪರ್ಯಾಯ ಮಾರ್ಗಗಳು ಯಾವವು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು, ಆಗಸ್ಟ್ 06: ವೈಟ್​ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ಜಂಕ್ಟನ್‌ವರೆಗೆ ಬಿಬಿಎಂಪಿ (BBMP) ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಗಿದೆ. ಹೀಗಾಗಿ ಇಂದಿನಿಂದ ಆಗಸ್ಟ್​ 10 ರವರೆಗೆ ರಾತ್ರಿ 11 ಗಂಟೆಯಿಂದ ಭಾನುವಾರ ರಾತ್ರಿ 11 ಗಂಟೆಗೆಯವರೆಗೆ ವಾಹನ ಸಂಚಾರ (Traffic restrictions) ನಿರ್ಬಂಧಿಸಲಾಗಿದೆ. ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಗಿನಂತೆ ಸಂಚಾರ ಮಾರ್ಪಾಡು ಮಾಡಲಾಗಿದೆ. ಬೆಂಗಳೂರು ಸಂಚಾರ ಪೊಲೀಸ್​ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆಗಳು
ಪಣತ್ತೂರು ರೈಲ್ವೆ ಬ್ರಿಡ್ಜ್ ರಸ್ತೆಯಿಂದ ಬಳಗೆರೆ ಟಿ ಜಂಕ್ಷನ್​ವರೆಗೆ.
ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್​

ಪರ್ಯಾಯ ಮಾರ್ಗಗಳು ಹೀಗಿವೆ :
ಪಣತ್ತೂರು ಕಡೆಯಿಂದ ಬಳಗೆರೆ ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆಯಲ್ಲಿ ಚಲಿಸಿ ಪಣತ್ತೂರು ದಿಣ್ಣೆ ಬಳಿ ಎಡ ತಿರುವು ಪಡೆದು ಸಿಲ್ವರ್ ಓಕ್ ರಸ್ತೆಯಿಂದ ಬಳಗೆರೆ, ವಿಬ್‌ಗಯಾ‌ರ್ ರಸ್ತೆ ಮತ್ತು ವರ್ತೂರು ಕಡೆಗೆ ಸಂಚರಿಸಬಹುದಾಗಿದೆ.
ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು

ಬಳಗೆರೆ ಟಿ ಜಂಕ್ಷನ್ ಕಡೆಯಿಂದ ಪಣತ್ತೂರು ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆ, ವಿಬ್‌ಗಯಾರ್ ರಸ್ತೆ ಹಾಗೂ ಮೂಲಕ ಮಾರತ್ತಹಳ್ಳಿ ಬ್ರಿಡ್ಜ್ ಪಣತ್ತೂರು ಕಡೆಗೆ ಸಂಚರಿಸಬಹುದಾಗಿದೆ.
ಕೆಟ್ಟು ನಿಂತ ವಾಹನಗಳು
ಸೋನಿ ವರ್ಲ್ಡ್ ಜಂಕ್ಷನ್ ಬಳಿ ವಾಹನ ಕೆಟ್ಟು ನಿಂತಿರುವುದರಿಂದ ಶ್ರೀನಿವಾಗಿಲು ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ವಾಹನ ಕೆಟ್ಟು ನಿಂತಿರುವುದರಿಂದ ಮಾರುಕಟ್ಟೆ ವೃತ್ತದ ಕಡೆಯಿಂದ ಮೈಸೂರು ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಅದೇ ರೀತಿಯಾಗಿ ಸಿ.ಎಂ.ಟಿ.ಐ ಜುಂಕ್ಷನ್ ಕಡೆಯಿಂದ ನಗರದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಸಂಚಾರ ಸಲಹೆ ನೀಡಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು