ಬೆಂಗಳೂರಿನ ಈ ಮಾರ್ಗದಲ್ಲಿಇಂದಿನಿಂದ ಆ.11ರವರೆಗೆ ವಾಹನ ಸಂಚಾರ ನಿರ್ಬಂಧ. ಪರ್ಯಾಯ ಮಾರ್ಗ ಏನು ?

ಬೆಂಗಳೂರು ಸಂಚಾರ ಸಲಹೆ: ಬೆಂಗಳೂರಿನ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್​​ವರೆಗೆ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ಹಿನ್ನಲೆ ಆಗಸ್ಟ್ 6 ರಿಂದ 10 ರವರೆಗೆ ಸಂಚಾರ ನಿರ್ಬಂಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸ್​ ಟ್ವೀಟ್​ ಮಾಡಿದೆ. ಹಾಗಾದರೆ ಪರ್ಯಾಯ ಮಾರ್ಗಗಳು ಯಾವವು ಎಂಬ ಮಾಹಿತಿ ಇಲ್ಲಿದೆ.

ಬೆಂಗಳೂರು, ಆಗಸ್ಟ್ 06: ವೈಟ್​ಫೀಲ್ಡ್ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ಟಿ ಜಂಕ್ಷನ್‌ನಿಂದ ಪಣತ್ತೂರು ರೈಲ್ವೆ ಬ್ರಿಡ್ಜ್ ಜಂಕ್ಟನ್‌ವರೆಗೆ ಬಿಬಿಎಂಪಿ (BBMP) ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ಕೈಗೊಳ್ಳಗಿದೆ. ಹೀಗಾಗಿ ಇಂದಿನಿಂದ ಆಗಸ್ಟ್​ 10 ರವರೆಗೆ ರಾತ್ರಿ 11 ಗಂಟೆಯಿಂದ ಭಾನುವಾರ ರಾತ್ರಿ 11 ಗಂಟೆಗೆಯವರೆಗೆ ವಾಹನ ಸಂಚಾರ (Traffic restrictions) ನಿರ್ಬಂಧಿಸಲಾಗಿದೆ. ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಗಿನಂತೆ ಸಂಚಾರ ಮಾರ್ಪಾಡು ಮಾಡಲಾಗಿದೆ. ಬೆಂಗಳೂರು ಸಂಚಾರ ಪೊಲೀಸ್​ ಸಾರ್ವಜನಿಕರು ಸಹಕರಿಸುವಂತೆ ಕೋರಿದೆ.

ವಾಹನ ಸಂಚಾರ ನಿರ್ಬಂಧಿಸಿರುವ ರಸ್ತೆಗಳು
ಪಣತ್ತೂರು ರೈಲ್ವೆ ಬ್ರಿಡ್ಜ್ ರಸ್ತೆಯಿಂದ ಬಳಗೆರೆ ಟಿ ಜಂಕ್ಷನ್​ವರೆಗೆ.
ಬೆಂಗಳೂರು ಸಂಚಾರ ಪೊಲೀಸ್ ಟ್ವೀಟ್​

ಪರ್ಯಾಯ ಮಾರ್ಗಗಳು ಹೀಗಿವೆ :
ಪಣತ್ತೂರು ಕಡೆಯಿಂದ ಬಳಗೆರೆ ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆಯಲ್ಲಿ ಚಲಿಸಿ ಪಣತ್ತೂರು ದಿಣ್ಣೆ ಬಳಿ ಎಡ ತಿರುವು ಪಡೆದು ಸಿಲ್ವರ್ ಓಕ್ ರಸ್ತೆಯಿಂದ ಬಳಗೆರೆ, ವಿಬ್‌ಗಯಾ‌ರ್ ರಸ್ತೆ ಮತ್ತು ವರ್ತೂರು ಕಡೆಗೆ ಸಂಚರಿಸಬಹುದಾಗಿದೆ.
ಇದನ್ನೂ ಓದಿ: ಪ್ರಯಾಣಿಕರ ಗಮನಕ್ಕೆ: ಸ್ವಾತಂತ್ರ್ಯ ದಿನಾಚರಣೆ, ಗಣೇಶ ಚತುರ್ಥಿ ನಿಮಿತ್ತ ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ವಿಶೇಷ ರೈಲು

ಬಳಗೆರೆ ಟಿ ಜಂಕ್ಷನ್ ಕಡೆಯಿಂದ ಪಣತ್ತೂರು ಕಡೆಗೆ ಹೋಗುವ ವಾಹನ ಸವಾರರು ಪಣತ್ತೂರು ದಿಣ್ಣೆ ರಸ್ತೆ, ವಿಬ್‌ಗಯಾರ್ ರಸ್ತೆ ಹಾಗೂ ಮೂಲಕ ಮಾರತ್ತಹಳ್ಳಿ ಬ್ರಿಡ್ಜ್ ಪಣತ್ತೂರು ಕಡೆಗೆ ಸಂಚರಿಸಬಹುದಾಗಿದೆ.
ಕೆಟ್ಟು ನಿಂತ ವಾಹನಗಳು
ಸೋನಿ ವರ್ಲ್ಡ್ ಜಂಕ್ಷನ್ ಬಳಿ ವಾಹನ ಕೆಟ್ಟು ನಿಂತಿರುವುದರಿಂದ ಶ್ರೀನಿವಾಗಿಲು ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ವಾಹನ ಕೆಟ್ಟು ನಿಂತಿರುವುದರಿಂದ ಮಾರುಕಟ್ಟೆ ವೃತ್ತದ ಕಡೆಯಿಂದ ಮೈಸೂರು ರಸ್ತೆ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ. ಅದೇ ರೀತಿಯಾಗಿ ಸಿ.ಎಂ.ಟಿ.ಐ ಜುಂಕ್ಷನ್ ಕಡೆಯಿಂದ ನಗರದ ಕಡೆಗೆ ನಿಧಾನಗತಿಯ ಸಂಚಾರವಿರುತ್ತದೆ ಎಂದು ಬೆಂಗಳೂರು ಸಂಚಾರ ಪೊಲೀಸ್​ ಸಂಚಾರ ಸಲಹೆ ನೀಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!