ಸಾರಿಗೆ ಮುಷ್ಕರಕ್ಕೆ ಮತ್ತೆ 2 ದಿನ ಬ್ರೇಕ್: ಹೈಕೋರ್ಟ್ ಆದೇಶ, ಎಚ್ಚರಿಕೆ.

ಬೆಂಗಳೂರು : ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಪಿಐಎಲ್ ವಿಚಾರಣೆ ವೇಳೆ ಹೈಕೋರ್ಟ್ ಸಾರಿಗೆ ಸಂಘಟನೆ ಪರ ವಕೀಲರಿಗೆ ತರಾಟೆ ತೆಗೆದುಕೊಂಡಿದೆ.

ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ಹೂಡಿರುವುದನ್ನ ಪ್ರಶ್ನಿಸಿ ಸಲ್ಲಿಸಿಲಾಗಿರುವ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಿಭು ಭಕ್ರು ಅವರಿದ್ದ ಪೀಠ, ಹೈಕೋರ್ಟ್ ಆದೇಶವಿದ್ದರೂ ಮುಷ್ಕರ ನಡೆಸಲಾಗಿದೆ.

ಮುಷ್ಕರ ನಿಂತಿರುವ ಬಗ್ಗೆ ನಾಳೆ ಮಾಹಿತಿ ನೀಡಬೇಕು ಇಲ್ಲವಾದರೇ ನಾಳೇ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಲಾಗುವುದು ಸಾರಿಗೆ ಸಂಘಟನೆ ಪದಾಧಿಕಾರಿಗಳ ಬಂಧನಕ್ಕೆ ಆದೇಶಿಸಲಾಗುವುದು ನಿಮ್ಮ ಸಮಸ್ಯೆ ಇದ್ದರೆ ಸರ್ಕಾರದೊಂದಿಗೆ ಚರ್ಚಿಸಿ ಬಗೆಹರಿಸಿಕೊಳ್ಳಿ ಜನಸಾಮಾನ್ಯರನ್ನ ಒತ್ತಯಾಗಿಸುವುದನ್ನ ಸಹಿಸಲ್ಲ ಎಂದು ಜಂಟಿ ಕ್ರಿಯಾ ಸಮಿತಿ ಪರ ವಕೀಲರಿಗೆ ಎಚ್ಚರಿಕೆ ನೀಡಿತು.

ನ್ಯಾಯಪೀಠದ ತರಾಟೆಗೆಕ್ರಿಯಾ ಸಮಿತಿ ಪರ ವಕೀಲರು ತಬ್ಬಿಬ್ಬಾಗಿ ನಾಳೆ ಮುಷ್ಕರ ನಡೆಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

4 ಸಾರಿಗೆ ನಿಗಮಗಳ ನೌಕರರ ಸಂಘಕ್ಕೆ ನೋಟಿಸ್ ನೀಡಿದ ನ್ಯಾಯಪೀಠವು ಮುಷ್ಕರಕ್ಕೆ ನೀಡಿದ್ದ ತಡೆಯಾಜ್ಞೆಯನ್ನ ಎರಡು ದಿನ ವಿಸ್ತರಣೆ ಮಾಡಿದ್ದು ಮುಷ್ಕರ ಮುಂದುವರೆಸಿದರೆ ಎಸ್ಮಾ ಕಾಯ್ದೆಯಡಿ ಸರ್ಕಾರ ಕ್ರಮ ಕೈಗೊಳ್ಳಬಹುದು ಎಂದು ತಿಳಿಸಿದೆ. ನಂತರ ವಿಚಾರಣೆಯನ್ನ ಆಗಸ್ಟ್ 7ಕ್ಕೆ ಮುಂದೂಡಿಕೆ ಮಾಡಿದೆ.

Related Posts

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ವರ್ಧಿ ರಜತ್ ವಿರುದ್ಧ ಮತ್ತೊಂದು ಎಫ್‌ಐಆರ್‌ದಾಖಲಾಗಿದೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಸತೀಶ್ ಅಲಿಯಾಸ್ ಡಾಗ್ ಸತೀಶ್‌ ಅವರು ದೂರು ನೀಡಿದ್ದು ಚಾಮರಾಜಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಬಿಎನ್‌ಎಸ್‌ ಸೆಕ್ಷನ್‌ 351 ,…

You Missed

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ಬಜೆಟ್​​ನಲ್ಲಿ ಬೆಂಗಳೂರಿಗೆ ಏನು ಸಿಕ್ತು?

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!