ತ್ರಿಷಾ, ವಿಜಯ್ ಮುಚ್ಚುಮರೆ ಇಲ್ಲದೇ ತಿರುಗಾಡುತ್ತಿದ್ದಾರೆ!

ಖ್ಯಾತ ದಳಪತಿ ವಿಜಯ್ ಮುಚ್ಚುಮರೆ ಇಲ್ಲದೇ ನಟಿ ತ್ರಿಷಾ ಕೃಷ್ಣನ್ ಜೊತೆ ತಿರುಗಾಡುತ್ತಿದ್ದಾರೆ. ಅವರ ಈ ವರ್ತನೆಯಿಂದ ಅಭಿಮಾನಿಗಳಿಗೆ ಮುಜುಗರ ಆಗಿದೆ. ಆದರೆ ಕೆಲವು ಅಭಿಮಾನಿಗಳು ಬೆಂಬಲಕ್ಕೆ ನಿಂತಿದ್ದಾರೆ. ವಿಜಯ್ ಅವರ ರಾಜಕೀಯ ಭವಿಷ್ಯಕ್ಕೆ ತ್ರಿಷಾ ಜೊತೆಗಿನ ಒಟನಾಟದಿಂದ ತೊಂದರೆ ಆಗುವ ಸಾಧ್ಯತೆ ಇದೆ.

ನಟ ದಳಪತಿ ವಿಜಯ್ ಅವರ ರಾಜಕೀಯ ಜೀವನಕ್ಕಿಂತಲೂ ವೈಯಕ್ತಿಕ ಜೀವನದ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ಅದಕ್ಕೆ ಕಾರಣ ಆಗಿರುವುದು ತ್ರಿಷಾ ಜೊತೆಗಿನ ಒಡನಾಟ. ಈಗಾಗಲೇ ವಿಜಯ್ ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ವಿಜಯ್ ಅವರಿಗೆ ನಟಿಯೊಬ್ಬರ ಜೊತೆ ಅನೈತಿಕ ಸಂಬಂಧ ಇದೆ ಎಂದು ಕೂಡ ಸಂಗೀತಾ ಆರೋಪಿಸಿದ್ದಾರೆ. ಈ ಸಂದರ್ಭದಲ್ಲಿ ತ್ರಿಷಾ ಮತ್ತು ವಿಜಯ್ ಅವರು ಖುಲ್ಲಂ ಖುಲ್ಲಾ ಜೊತೆಯಾಗಿ ತಿರುಗಾಡಿದ್ದಾರೆ. ವಿಡಿಯೋ ವೈರಲ್ ಆಗಿದ್ದು, ಅದನ್ನು ಕಂಡು ಅಭಿಮಾನಿಗಳು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸಿನಿಮಾ ಕಲಾವಿದರು ರಾಜಕೀಯದಲ್ಲಿ ಯಶಸ್ಸು ಕಂಡ ಸಾಕಷ್ಟು ಉದಾಹರಣೆ ತಮಿಳುನಾಡಿನಲ್ಲಿದೆ. ದಳಪತಿ ವಿಜಯ್ ಅವರು ಟಿವಿಕೆ ಪಕ್ಷ ಸ್ಥಾಪಿಸಿಕೊಂಡು ರಾಜಕೀಯಕ್ಕೆ ಇಳಿದಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅವರು ಸ್ಪರ್ಧಿಸಲಿದ್ದಾರೆ. ಅದಕ್ಕಾಗಿ ಅವರು ಎಲ್ಲ ರೀತಿಯಿಂದಲೂ ತಯಾರಿ ಮಾಡಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ತ್ರಿಷಾ ಜೊತೆ ಕಾಣಿಸಿಕೊಂಡಿದ್ದು ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ.

ದಳಪತಿ ವಿಜಯ್ ಅವರ ಹೆಸರು ತ್ರಿಷಾ ಜೊತೆ ತಳುಕು ಹಾಕಿಕೊಂಡಾಗಲೆಲ್ಲ ಅಭಿಮಾನಿಗಳು ರಕ್ಷಣೆಗೆ ಬರುತ್ತಿದ್ದರು. ವಿಜಯ್ ಮತ್ತು ತ್ರಿಷಾ ಕೇವಲ ಸ್ನೇಹಿತರು ಎಂದು ಫ್ಯಾನ್ಸ್ ವಾದ ಮಾಡುತ್ತಿದ್ದರು. ಗಾಸಿಪ್​​ನಿಂದ ವಿಜಯ್ ಅವರ ರಾಜಕೀಯದ ಭವಿಷ್ಯಕ್ಕೆ ತೊಂದರೆ ಆಗದಿರಲಿ ಎಂದು ಅಭಿಮಾನಿಗಳು ಇಷ್ಟೆಲ್ಲ ಮಾಡುತ್ತಿದ್ದರು. ಆದರೆ ವಿಜಯ್ ಅವರು ಅದನ್ನೆಲ್ಲ ಈಗ ಗಾಳಿಗೆ ತೂರಿದ್ದಾರೆ.

ಇನ್ನೂ ಕೆಲವು ಅಭಿಮಾನಿಗಳು ವಿಜಯ್ ನಿರ್ಧಾರವನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಒಂದು ವೇಳೆ ವಿಜಯ್ ಮತ್ತು ತ್ರಿಷಾ ನಡುವೆ ಸಂಬಂಧ ಇರುವುದೇ ಹೌದಾದರೆ ಅದು ಇಂದಿಲ್ಲ ನಾಳೆ ಬಹಿರಂಗ ಆಗಲೇಬೇಕು. ಅದನ್ನು ರಾಜಕೀಯ ವಿರೋಧಿಗಳು ದಾಳವಾಗಿ ಉಪಯೋಗಿಸಿಕೊಳ್ಳುವುದಕ್ಕೂ ಮುನ್ನವೇ ಸ್ವತಃ ವಿಜಯ್ ಅವರು ಈಗ ಬಹಿರಂಗಪಡಿಸಿದ್ದಾರೆ ಎಂಬುದು ಕಟ್ಟಾ ಅಭಿಮಾನಿಗಳ ವಾದ.

ಪತ್ನಿ ಸಂಗೀತಾ ಅವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಈ ಸಂದರ್ಭದಲ್ಲೇ ವಿಜಯ್ ಅವರು ತ್ರಿಷಾ ಜೊತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಈ ರೀತಿ ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅವರಿಬ್ಬರು ತಮ್ಮ ಸಂಬಂಧವನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ ಎಂಬುದು ನೆಟ್ಟಿಗರವಾದ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!