ಹೆಣ್ಣುಮಗು ಹುಟ್ಟಿದ್ದಕ್ಕೆ ಬಿಸ್ಕತ್​ನಲ್ಲಿ ವಿಷವಿಟ್ಟ TSR ಯೋಧ!

ಅಗರ್ತಲಾ: ಗಂಡು ಮಗು ಹುಟ್ಟಲಿಲ್ಲ ಅಂತ ಒಂದು ವರ್ಷದ ಹೆಣ್ಣು ಮಗುವಿಗೆ ಯೋಧರೊಬ್ಬರು ಬಿಸ್ಕತ್​ನಲ್ಲಿ ವಿಷ ಇಟ್ಟು ತಿನಿಸಿ ಜೀವ ತೆಗೆದಿದ್ದಾರೆ. ತ್ರಿಪುರಾದ ಖೊವೈ ಜಿಲ್ಲೆಯ ಬೆಹಲಬಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯ ಬೆಹಲಬಾರಿ ಗ್ರಾಮದ ರಥೀಂದ್ರ ದೆಬ್ಬಾರ್ಮ್ ಜೀವ ತೆಗೆದ ಆರೋಪಿ. ಇವರು ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್​​ಆರ್​)​ನ ಬೆಟಲಿಯಾನ್​ 10ರಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಗಳ ಜೀವ ತೆಗೆದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕೋರ್ಟ್​ ವಿಚಾರಣೆ ನಡೆಸಿ ಆರೋಪಿಯನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಹೇಳಲಾಗಿದೆ.

ರಥೀಂದ್ರ ದೆಬ್ಬಾರ್ಮ್ ಹಾಗೂ ಮಿತಾಲಿ ದೆಬ್ಬಾರ್ಮ್​ ದಂಪತಿಗೆ ಎರಡು ಹೆಣ್ಣು ಮಕ್ಕಳಿವೆ. ಇದರಲ್ಲಿ 2ನೇ ಮಗು ಸುಹಾನಿ, ತನ್ನ ತಂದೆಯಿಂದಲೇ ಜೀವ ಕಳೆದುಕೊಂಡಿದೆ. ಈ ಬಗ್ಗೆ ಆರೋಪ ಮಾಡಿರುವ ಹೆಂಡತಿ ನನ್ನ ಗಂಡನಿಂದಲೇ ಮಗು ಇಲ್ಲವಾಗಿದೆ ಎಂದು ದುಃಖಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಮಿತಾಲಿ ತನ್ನ ಮಕ್ಕಳೊಂದಿಗೆ ಸಹೋದರಿಯ ಊರಿಗೆ ಹೋಗಿದ್ದಳು. ಈ ವೇಳೆ ಗಂಡ ಕೂಡ ಜೊತೆಗೆ ಬಂದಿದ್ದನು. ಮನೆಯಲ್ಲಿ ಇರುವಾಗ ಬಿಸ್ಕೆತ್​ ಕೊಡಿಸುವುದಾಗಿ ನನ್ನ ಮಗಳು ಸುಹಾನಿ ಹಾಗೂ ಸಹೋದರಿಯ ಮಗನನ್ನು ಕರೆದುಕೊಂಡು ಸಮೀಪದ ಅಂಗಡಿಗೆ ಹೋಗಿದ್ದರು. ಇದಾದ ಮೇಲೆ ಮಗಳು ವಾಂತಿ ಮಾಡಲು ಶುರು ಮಾಡಿದಳು. ಅವಳ ಬಾಯಿಂದ ಮೆಡಿಸೆನ್​ ವಾಸನೆ ಬರುತ್ತಿತ್ತು. ಇದಕ್ಕೆ ಏನಾದರೂ ತಿನ್ನಿಸಿದ್ದೀಯಾ ಎಂದು ಗಂಡನನ್ನ ಕೇಳಿದ್ದೆ. ಅವರು ಏನನ್ನು ಒಪ್ಪಲಿಲ್ಲ. ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಜೀವ ಹೋಗಿದೆ ಅಂತ ವೈದ್ಯರು ಹೇಳಿದರು ಎಂದು ತಾಯಿ ಮಿತಾಲಿ ಹೇಳಿದ್ದಾರೆ.

ಮತ್ತೊಂದು ಹೆಣ್ಣು ಮಗು ಹುಟ್ಟಿದ್ದಕ್ಕೆ ನನ್ನನ್ನು ನಿತ್ಯ ನಿಂದಿಸುತ್ತಿದ್ದರು. ಕೂದಲು ಹಿಡಿದು ಎಳೆದಾಡಿ ಹೊಡೆಯುತ್ತಿದ್ದರು. ಗಂಡು ಮಗು ಹುಟ್ಟಲಿಲ್ಲ ಎನ್ನುತ್ತಿದ್ದರು. ಮಗುನ ಮುಗಿಸಿದ್ದಕ್ಕೆ ಗಂಡನಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆಯಾಗಬೇಕು ಎಂದು ಮಿತಾಲಿ ಆಗ್ರಹವಾಗಿದೆ. ಸದ್ಯ ಪೊಲೀಸರು ಆರೋಪಿಯನ್ನ ವಿಚಾರಣೆ ನಡೆಸುತ್ತಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!