ಹೆಣ್ಣುಮಗು ಹುಟ್ಟಿದ್ದಕ್ಕೆ ಬಿಸ್ಕತ್​ನಲ್ಲಿ ವಿಷವಿಟ್ಟ TSR ಯೋಧ!

ಅಗರ್ತಲಾ: ಗಂಡು ಮಗು ಹುಟ್ಟಲಿಲ್ಲ ಅಂತ ಒಂದು ವರ್ಷದ ಹೆಣ್ಣು ಮಗುವಿಗೆ ಯೋಧರೊಬ್ಬರು ಬಿಸ್ಕತ್​ನಲ್ಲಿ ವಿಷ ಇಟ್ಟು ತಿನಿಸಿ ಜೀವ ತೆಗೆದಿದ್ದಾರೆ. ತ್ರಿಪುರಾದ ಖೊವೈ ಜಿಲ್ಲೆಯ ಬೆಹಲಬಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯ ಬೆಹಲಬಾರಿ ಗ್ರಾಮದ ರಥೀಂದ್ರ ದೆಬ್ಬಾರ್ಮ್ ಜೀವ ತೆಗೆದ ಆರೋಪಿ. ಇವರು ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್​​ಆರ್​)​ನ ಬೆಟಲಿಯಾನ್​ 10ರಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಗಳ ಜೀವ ತೆಗೆದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕೋರ್ಟ್​ ವಿಚಾರಣೆ ನಡೆಸಿ ಆರೋಪಿಯನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಹೇಳಲಾಗಿದೆ.

ರಥೀಂದ್ರ ದೆಬ್ಬಾರ್ಮ್ ಹಾಗೂ ಮಿತಾಲಿ ದೆಬ್ಬಾರ್ಮ್​ ದಂಪತಿಗೆ ಎರಡು ಹೆಣ್ಣು ಮಕ್ಕಳಿವೆ. ಇದರಲ್ಲಿ 2ನೇ ಮಗು ಸುಹಾನಿ, ತನ್ನ ತಂದೆಯಿಂದಲೇ ಜೀವ ಕಳೆದುಕೊಂಡಿದೆ. ಈ ಬಗ್ಗೆ ಆರೋಪ ಮಾಡಿರುವ ಹೆಂಡತಿ ನನ್ನ ಗಂಡನಿಂದಲೇ ಮಗು ಇಲ್ಲವಾಗಿದೆ ಎಂದು ದುಃಖಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಮಿತಾಲಿ ತನ್ನ ಮಕ್ಕಳೊಂದಿಗೆ ಸಹೋದರಿಯ ಊರಿಗೆ ಹೋಗಿದ್ದಳು. ಈ ವೇಳೆ ಗಂಡ ಕೂಡ ಜೊತೆಗೆ ಬಂದಿದ್ದನು. ಮನೆಯಲ್ಲಿ ಇರುವಾಗ ಬಿಸ್ಕೆತ್​ ಕೊಡಿಸುವುದಾಗಿ ನನ್ನ ಮಗಳು ಸುಹಾನಿ ಹಾಗೂ ಸಹೋದರಿಯ ಮಗನನ್ನು ಕರೆದುಕೊಂಡು ಸಮೀಪದ ಅಂಗಡಿಗೆ ಹೋಗಿದ್ದರು. ಇದಾದ ಮೇಲೆ ಮಗಳು ವಾಂತಿ ಮಾಡಲು ಶುರು ಮಾಡಿದಳು. ಅವಳ ಬಾಯಿಂದ ಮೆಡಿಸೆನ್​ ವಾಸನೆ ಬರುತ್ತಿತ್ತು. ಇದಕ್ಕೆ ಏನಾದರೂ ತಿನ್ನಿಸಿದ್ದೀಯಾ ಎಂದು ಗಂಡನನ್ನ ಕೇಳಿದ್ದೆ. ಅವರು ಏನನ್ನು ಒಪ್ಪಲಿಲ್ಲ. ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಜೀವ ಹೋಗಿದೆ ಅಂತ ವೈದ್ಯರು ಹೇಳಿದರು ಎಂದು ತಾಯಿ ಮಿತಾಲಿ ಹೇಳಿದ್ದಾರೆ.

ಮತ್ತೊಂದು ಹೆಣ್ಣು ಮಗು ಹುಟ್ಟಿದ್ದಕ್ಕೆ ನನ್ನನ್ನು ನಿತ್ಯ ನಿಂದಿಸುತ್ತಿದ್ದರು. ಕೂದಲು ಹಿಡಿದು ಎಳೆದಾಡಿ ಹೊಡೆಯುತ್ತಿದ್ದರು. ಗಂಡು ಮಗು ಹುಟ್ಟಲಿಲ್ಲ ಎನ್ನುತ್ತಿದ್ದರು. ಮಗುನ ಮುಗಿಸಿದ್ದಕ್ಕೆ ಗಂಡನಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆಯಾಗಬೇಕು ಎಂದು ಮಿತಾಲಿ ಆಗ್ರಹವಾಗಿದೆ. ಸದ್ಯ ಪೊಲೀಸರು ಆರೋಪಿಯನ್ನ ವಿಚಾರಣೆ ನಡೆಸುತ್ತಿದ್ದಾರೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!