ಹೆಣ್ಣುಮಗು ಹುಟ್ಟಿದ್ದಕ್ಕೆ ಬಿಸ್ಕತ್​ನಲ್ಲಿ ವಿಷವಿಟ್ಟ TSR ಯೋಧ!

ಅಗರ್ತಲಾ: ಗಂಡು ಮಗು ಹುಟ್ಟಲಿಲ್ಲ ಅಂತ ಒಂದು ವರ್ಷದ ಹೆಣ್ಣು ಮಗುವಿಗೆ ಯೋಧರೊಬ್ಬರು ಬಿಸ್ಕತ್​ನಲ್ಲಿ ವಿಷ ಇಟ್ಟು ತಿನಿಸಿ ಜೀವ ತೆಗೆದಿದ್ದಾರೆ. ತ್ರಿಪುರಾದ ಖೊವೈ ಜಿಲ್ಲೆಯ ಬೆಹಲಬಾರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಜಿಲ್ಲೆಯ ಬೆಹಲಬಾರಿ ಗ್ರಾಮದ ರಥೀಂದ್ರ ದೆಬ್ಬಾರ್ಮ್ ಜೀವ ತೆಗೆದ ಆರೋಪಿ. ಇವರು ತ್ರಿಪುರಾ ಸ್ಟೇಟ್ ರೈಫಲ್ಸ್ (ಟಿಎಸ್​​ಆರ್​)​ನ ಬೆಟಲಿಯಾನ್​ 10ರಲ್ಲಿ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಗಳ ಜೀವ ತೆಗೆದ ಹಿನ್ನೆಲೆಯಲ್ಲಿ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಕೋರ್ಟ್​ ವಿಚಾರಣೆ ನಡೆಸಿ ಆರೋಪಿಯನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ ಎಂದು ಹೇಳಲಾಗಿದೆ.

ರಥೀಂದ್ರ ದೆಬ್ಬಾರ್ಮ್ ಹಾಗೂ ಮಿತಾಲಿ ದೆಬ್ಬಾರ್ಮ್​ ದಂಪತಿಗೆ ಎರಡು ಹೆಣ್ಣು ಮಕ್ಕಳಿವೆ. ಇದರಲ್ಲಿ 2ನೇ ಮಗು ಸುಹಾನಿ, ತನ್ನ ತಂದೆಯಿಂದಲೇ ಜೀವ ಕಳೆದುಕೊಂಡಿದೆ. ಈ ಬಗ್ಗೆ ಆರೋಪ ಮಾಡಿರುವ ಹೆಂಡತಿ ನನ್ನ ಗಂಡನಿಂದಲೇ ಮಗು ಇಲ್ಲವಾಗಿದೆ ಎಂದು ದುಃಖಿಸಿದ್ದಾಳೆ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ಮಿತಾಲಿ ತನ್ನ ಮಕ್ಕಳೊಂದಿಗೆ ಸಹೋದರಿಯ ಊರಿಗೆ ಹೋಗಿದ್ದಳು. ಈ ವೇಳೆ ಗಂಡ ಕೂಡ ಜೊತೆಗೆ ಬಂದಿದ್ದನು. ಮನೆಯಲ್ಲಿ ಇರುವಾಗ ಬಿಸ್ಕೆತ್​ ಕೊಡಿಸುವುದಾಗಿ ನನ್ನ ಮಗಳು ಸುಹಾನಿ ಹಾಗೂ ಸಹೋದರಿಯ ಮಗನನ್ನು ಕರೆದುಕೊಂಡು ಸಮೀಪದ ಅಂಗಡಿಗೆ ಹೋಗಿದ್ದರು. ಇದಾದ ಮೇಲೆ ಮಗಳು ವಾಂತಿ ಮಾಡಲು ಶುರು ಮಾಡಿದಳು. ಅವಳ ಬಾಯಿಂದ ಮೆಡಿಸೆನ್​ ವಾಸನೆ ಬರುತ್ತಿತ್ತು. ಇದಕ್ಕೆ ಏನಾದರೂ ತಿನ್ನಿಸಿದ್ದೀಯಾ ಎಂದು ಗಂಡನನ್ನ ಕೇಳಿದ್ದೆ. ಅವರು ಏನನ್ನು ಒಪ್ಪಲಿಲ್ಲ. ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಜೀವ ಹೋಗಿದೆ ಅಂತ ವೈದ್ಯರು ಹೇಳಿದರು ಎಂದು ತಾಯಿ ಮಿತಾಲಿ ಹೇಳಿದ್ದಾರೆ.

ಮತ್ತೊಂದು ಹೆಣ್ಣು ಮಗು ಹುಟ್ಟಿದ್ದಕ್ಕೆ ನನ್ನನ್ನು ನಿತ್ಯ ನಿಂದಿಸುತ್ತಿದ್ದರು. ಕೂದಲು ಹಿಡಿದು ಎಳೆದಾಡಿ ಹೊಡೆಯುತ್ತಿದ್ದರು. ಗಂಡು ಮಗು ಹುಟ್ಟಲಿಲ್ಲ ಎನ್ನುತ್ತಿದ್ದರು. ಮಗುನ ಮುಗಿಸಿದ್ದಕ್ಕೆ ಗಂಡನಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆಯಾಗಬೇಕು ಎಂದು ಮಿತಾಲಿ ಆಗ್ರಹವಾಗಿದೆ. ಸದ್ಯ ಪೊಲೀಸರು ಆರೋಪಿಯನ್ನ ವಿಚಾರಣೆ ನಡೆಸುತ್ತಿದ್ದಾರೆ.

Related Posts

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

ಚಾಮರಾಜನಗರ ಎನ್‌*ಕೌಂಟರ್ ಪ್ರಕರಣ: ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ .

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶದಲ್ಲಿ ನಡೆದ ಶೂ*ಟೌಟ್‌ನಲ್ಲಿ ಮೂವರು ಮೃ*ತಪಟ್ಟಿರುವ ಘಟನೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ತೀವ್ರ ಗದ್ದಲ ಉಂಟಾಗಿದೆ. ಈ ಘಟನೆಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!