ಮತ್ತೆರಡು ಹುಲಿ ಮರಿಗಳು ಅಸಹಜವಾಗಿ ಸಾವು! ಕಾವೇರಿ ವನ್ಯಜೀವಿಧಾಮದಲ್ಲಿ ಘಟನೆ.

ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆರಡು ಹುಲಿ ಮರಿಗಳು ಅಸಹಜವಾಗಿ ಪ್ರಾಣ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟಿ ಗಸ್ತಿನ ಕಿರುಬನಕಲ್ಲು ಎಂಬ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳ ಕಳೇಬರ ಪತ್ತೆಯಾಗಿವೆ. ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆರಡು ಹುಲಿ ಮರಿಗಳು ಅಸಹಜವಾಗಿ ಪ್ರಾಣ ಕಳೆದುಕೊಂಡ ಪ್ರಕರಣ ಬೆಳಕಿಗೆ ಬಂದಿದೆ. ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಹನೂರು ವಲಯದ ಶಾಗ್ಯ ಶಾಖೆಯ ಹೊಳೆಮುರಿದಟ್ಟಿ ಗಸ್ತಿನ ಕಿರುಬನಕಲ್ಲು ಎಂಬ ಅರಣ್ಯ ಪ್ರದೇಶದಲ್ಲಿ ಎರಡು ಹುಲಿ ಮರಿಗಳ ಕಳೇಬರ ಪತ್ತೆಯಾಗಿವೆ.

ಅರಣ್ಯ ರಕ್ಷಣಾ ಸಿಬ್ಬಂದಿ ನಿನ್ನೆ ಗಸ್ತು ತಿರುಗುವಾಗ ಒಂದು ಹುಲಿ ಮರಿಯ ಕಳೇಬರ ಪತ್ತೆ ಆಗಿದೆ. ಕೂಡಲೇ ಎಚ್ಚೆತ್ತುಕೊಂಡ ಸಿಬ್ಬಂದಿ ಆ ಪ್ರದೇಶದ ಸುತ್ತಮುತ್ತ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಹುಲಿ ಮರಿಯು ಮೃತಪಟ್ಟ ಸಮೀಪ ಇರುವ ಕಲ್ಲು ಬಂಡೆಯ ಗುಹೆಯೊಳಗೆ ಮತ್ತೊಂದು ಹುಲಿ ಮರಿಯು ಮೃತಪಟ್ಟಿರೋದು ಪತ್ತೆಯಾಗಿದೆ.

NTCA ಸದಸ್ಯರನ್ನೊಳಗೊಂಡ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಮೃತ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷಾ ಪ್ರಕ್ರಿಯೆಯಲ್ಲಿ ಸದರಿ ಎರಡೂ ಹುಲಿ ಮರಿಗಳು ಸುಮಾರು 8 ರಿಂದ 10 ದಿನಗಳ ಮರಿಗಳಾಗಿರೋದು ಗೊತ್ತಾಗಿದೆ.

ತನಿಖೆ ನಡೀತಿದೆ :
ಮೃತ ಹುಲಿ ಮರಿಗಳು ತಾಯಿ ಹುಲಿಯಿಂದ ಬೇರ್ಪಟ್ಟು ಹಸಿವಿನಿಂದ ನಿತ್ರಾಣಗೊಂಡು ಮೃತಪಟ್ಟಿರುತ್ತದೆ ಎಂದು ಪಶು ವೈದ್ಯರು ಸ್ಥಳದಲ್ಲಿಯೇ ಅಭಿಪ್ರಾಯ ವ್ಯಕ್ತಪಡಿಸಿರುತ್ತಾರೆ. ಹಾಗೂ ಮೃತ ಹುಲಿ ಮರಿಗಳ ಸಾವಿನ ನಿಖರ ಮಾಹಿತಿಗಾಗಿ ಮೃತ ಹುಲಿ ಮರಿಗಳ ದೇಹದಿಂದ ಕೆಲವು ಮಾದರಿ ತುಣುಕುಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿರುತ್ತದೆ. ಮರಣೋತ್ತರ ಪರೀಕ್ಷೆಯ ನಂತರ, ಎನ್.ಟಿ.ಸಿ.ಎ ಸದಸ್ಯರನ್ನೊಳಗೊಂಡ ತಂಡದವರ ಸಮ್ಮುಖದಲ್ಲಿ ಹುಲಿ ಮರಿಗಳ ಮೃತ ದೇಹವನ್ನು ಬೆಂಕಿಯಿಂದ ಸುಡಲಾಗಿರುತ್ತದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!