ಉಪ್ಪಾರ ಸಮುದಾಯದ ವಿದ್ಯಾರ್ಥಿಗಳಿಗೆ ಸ್ಪೂರ್ತಿಸೆಲೆಯಾಗಿದ್ದ, ಜನರ ನೆಚ್ಚಿನ ಪ್ರಸೂತಿ ವೈದ್ಯರಾಗಿ ಜನಮನ್ನಣೆ ಗಳಿಸಿದ್ದ ಡಾ. ಗೌತಮಿ ಅಪಘಾತದಲ್ಲಿ ನಿಧನರಾಗಿದ್ದು ಸಮುದಾಯಕ್ಕೆ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಠ, ದುಃಖ ಉಂಟಾಗಿದೆ.
ಮೈಸೂರು ಕೆ.ಆರ್.ಆಸ್ಪತ್ರೆ ಮತ್ತು ಮಂಡ್ಯ ಆಸ್ಪತ್ರೆಯಲ್ಲಿ ಪ್ರಸೂತಿ ವೈದ್ಯರಾಗಿ ಉತ್ತಮ ಕಾರ್ಯ ನಿರ್ವಹಣೆಯಿಂದ ಜನಪ್ರಿಯರಾಗಿದ್ದ ಮೈಸೂರಿನ ಮೇಟಗಳ್ಳಿ ಶ್ರೀಮತಿ ಮಂಜುಳಾ ಮತ್ತು ನಾಗರಾಜು ದಂಪತಿ ಪುತ್ರಿ ಡಾ.ಗೌತಮಿ ಅವರು 5 ವರ್ಷದ ವೈದ್ಯಕೀಯ ಸೇವೆ ಬಳಿಕ ಆಂದ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿ ಎಂಎಸ್ ಮುಗಿಸಿ ಒಂದು ತಿಂಗಳ ತರಬೇತಿ ಹಂತದಲ್ಲಿದ್ದರು.
ಕೆಲವೇ ದಿನಗಳಲ್ಲಿ ಎಂಡಿ ಮಾಡಲು ವಿದೇಶಕ್ಕೆ ತೆರಳುವವರಿದ್ದರು.ಆದರೆ, ದಿನಾಂಕ 5-5-2026 ಮಂಗಳವಾರ ರಾತ್ರಿ ಸ್ಕೂಟರ್ ನಿಂದ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ನಿಧನರಾಗಿದ್ದಾರೆ. ಡಾ.ಗೌತಮಿ ಅವರ ನಿಧನ ಆರೋಗ್ಯ ಕ್ಷೇತ್ರಕ್ಕೆ, ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಶಾಂತಿ ಕರುಣಿಸಿ, ದುಃಖ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತದೆ.




