ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಅಮೆರಿಕ!

ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿ ದಾಳಿಯಿಂದ ಇರಾನ್‌ನ IRIS Dena ಯುದ್ಧನೌಕೆ ಮುಳುಗಿದ ಘಟನೆ ಜಾಗತಿಕ ಮಟ್ಟದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾರತದಿಂದ ಮರಳುತ್ತಿದ್ದ ಈ ಯುದ್ಧನೌಕೆಯ ಮೇಲೆ ನಡೆದ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 87ಕ್ಕೆ ಏರಿಕೆಯಾಗಿದೆ ಎಂದು ವರದಿಗಳು ತಿಳಿಸಿವೆ. ದಾಳಿಯನ್ನು ಅಮೆರಿಕ ಅಧಿಕೃತವಾಗಿ ಒಪ್ಪಿಕೊಂಡಿರುವುದು ಇರಾನ್-ಅಮೆರಿಕ ಸಂಘರ್ಷ ಮತ್ತಷ್ಟು ಉಲ್ಬಣಗೊಂಡಿದ್ದರ ಸಂಕೇತವಾಗಿದೆ.

ಹಿಂದೂ ಮಹಾಸಾಗರದಲ್ಲಿ ಅಮೆರಿಕದ ಜಲಾಂತರ್ಗಾಮಿಯು ಇರಾನ್ ಯುದ್ಧನೌಕೆಯನ್ನು ಮುಳುಗಿಸಿದ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಕನಿಷ್ಠ 87 ಕ್ಕೆ ಏರಿಕೆಯಾಗಿದೆ ಎಂದು ಎಎಫ್‌ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಐಆರ್​ಐಎಸ್ ದೇನಾ  ಎಂಬ ಯುದ್ಧನೌಕೆ ಕೆಲವೇ ವಾರಗಳ ಹಿಂದೆ ಭಾರತದಲ್ಲಿ ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿ ಇರಾನ್​ಗೆ ಮರಳುತ್ತಿತ್ತು. ಯುದ್ಧನೌಕೆಯನ್ನು ಹೊಡೆದುರುಳಿಸಿದ್ದು ತಾನೇ ಎಂದು ಈಗಾಗಲೇ ಅಮೆರಿಕ ದೃಢಪಡಿಸಿದೆ. ಐಆರ್​ಐಎಸ್ ದೇನಾ 2024 ರಲ್ಲಿ ಭಾರತಕ್ಕೆ ಬಂದಿದ್ದು, ನೌಕಾ ಸಮರಾಭ್ಯಾಸದಲ್ಲಿ ಭಾಗವಹಿಸಿತ್ತು.ಮೃತರ ಸಂಖ್ಯೆಯನ್ನು ಅಮೆರಿಕ ದೃಢಪಡಿಸದಿದ್ದರೂ, ರಕ್ಷಣಾ ಸಚಿವ ಪೀಟ್ ಹೆಗ್ಸೆತ್, ಜಲಾಂತರ್ಗಾಮಿ ದಾಳಿಯನ್ನು ದೃಢಪಡಿಸಿದ್ದಾರೆ. ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕದ ಜಾಗತಿಕ ವ್ಯಾಪ್ತಿಗೆ ಇದು ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ಅಂತರರಾಷ್ಟ್ರೀಯ ಜಲ ಪ್ರದೇಶದಲ್ಲಿ ಸುರಕ್ಷಿತವಾಗಿದೆ ಎಂದು ಭಾವಿಸಿದ ಇರಾನಿನ ಯುದ್ಧನೌಕೆಯನ್ನು ಅಮೆರಿಕದ ಜಲಾಂತರ್ಗಾಮಿ ನೌಕೆ ಮುಳುಗಿಸಿದೆ ಎಂದು ಹೆಗ್ಸೆತ್ ತಿಳಿಸಿದ್ದಾರೆ.

 

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದುರ್ಬುದ್ಧಿಯಿಂದಾಗಿ ಅಮೆರಿಕದ 500 ಯೋಧರು ಹತರಾಗಿದ್ದಾರೆ ಎಂದು ಇರಾನ್‌ ನ್ಯಾಷನಲ್‌ ಸೆಕ್ಯೂರಿಟಿ ಕೌನ್ಸಿಲ್‌ ಕಾರ್ಯದರ್ಶಿ ಅಲಿ ಪೋಸ್ಟ್‌ ಮಾಡಿದ್ದಾರೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಸೇರಿ ಟ್ರಂಪ್‌ ಇರಾನ್‌ ಮೇಲೆ ದಾಳಿ ನಡೆಸಿದರು. ಇರಾನ್‌ ನಡೆಸಿದ ಪ್ರತಿದಾಳಿಯಲ್ಲಿ ಅಮೆರಿಕದ 500 ಯೋಧರು ಸಾವಿಗೀಡಾಗಿದ್ದಾರೆ. ಇದೇನು ಟ್ರಂಪ್‌ ಅವರ ಅಮೆರಿಕ ಫಸ್ಟ್‌ ನೀತಿನಾ ಅಥವಾ ಇಸ್ರೇಲ್‌ ಫಸ್ಟ್‌ ನೀತಿಯಾ ಎಂದು ಅಲಿ ಪ್ರಶ್ನಿಸಿದ್ದಾರೆ. ಅಲ್ಲದೆ, ಈ ಬಗ್ಗೆ ಅಮೆರಿಕದ ಜನತೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಅ*ತ್ಯಾಚಾ*ರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ: ರೇಖಾ ಶ್ರೀನಿವಾಸ್

ಮೈಸೂರು: ಅ*ತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿದ ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್. ಪಶ್ಚಿಮ ಬಂಗಾಳದ ಬಾರುಪುರ್ ಮತ್ತುರಾಜಸ್ಥಾನದ ಶ್ರೀ ಗಂಗಾ ನಗರದಲ್ಲಿ ಅ*ಪ್ರಾಪ್ತ ಮೇಲೆ ನಡೆದ ಅ*ತ್ಯಾಚಾ*ರ ಘಟನೆಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿವೆ. ಪ್ರಪಂಚವನ್ನೇ ಅರಿಯದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!